Homeಮುಖಪುಟಸೇನಾ V/s ಕಂಗನಾ ವಿವಾದ: ದೂರ ಉಳಿಯಲು ಕಾಂಗ್ರೆಸ್ ಯತ್ನ

ಸೇನಾ V/s ಕಂಗನಾ ವಿವಾದ: ದೂರ ಉಳಿಯಲು ಕಾಂಗ್ರೆಸ್ ಯತ್ನ

ಎಐಸಿಸಿಯ ಮೂವರು ವಕ್ತಾರರು ವಿವಾದದಿಂದ ದೂರವಿರಲು ಪಕ್ಷವು ತತ್ವಬದ್ಧವಾದ ನಿಲುವನ್ನು ತೆಗೆದುಕೊಂಡಿದೆ ಎಂದು ದಿ ಪ್ರಿಂಟ್‌ಗೆ ತಿಳಿಸಿದ್ದಾರೆ.

- Advertisement -
- Advertisement -

ಮಹಾರಾಷ್ಟ್ರದ ಆಡಳಿತ ಪಕ್ಷ ಶಿವಸೇನೆ ಮತ್ತು ಬಾಲಿವುಡ್ ನಟಿ ಕಂಗನಾ ರಾಣಾವತ್ ನಡುವಿನ ಜಟಾಪಟಿಯಿಂದ ದೂರ ಉಳಿಯಲು ಕೇಂದ್ರ ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಎಐಸಿಸಿಯ ಮೂವರು ವಕ್ತಾರರು ವಿವಾದದಿಂದ ದೂರವಿರಲು ಪಕ್ಷವು ತತ್ವಬದ್ಧವಾದ ನಿಲುವನ್ನು ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.

“ಹೌದು, ಇದು ಹೆಚ್ಚು ರಾಜಕೀಯಗೊಳಿಸಿದ ವಿಷಯವಾಗಿದೆ. ಬಿಜೆಪಿ ಬಯಸುವುದು ಕೂಡ ಇದನ್ನೇ. ಕೋವಿಡ್ ಮತ್ತು ಆರ್ಥಿಕತೆಯಂತಹ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸದಂತೆ ಅವರು ಇಡೀ ರಾಜಕೀಯವನ್ನು ವಿವಾದಕ್ಕೆ ಎಳೆಯಲು ಬಯಸುತ್ತಾರೆ ” ಆದ್ದರಿಂದ, ಇದರಿಂದ ದೂರವಿರಲು ಮತ್ತು ಅವರ ಬಲೆಗೆ ಬೀಳದಂತೆ ನಾವು ತತ್ವಬದ್ಧವಾದ ನಿರ್ಧಾರ ತೆಗೆದುಕೊಂಡಿದ್ದೇವೆ ಎಐಸಿಸಿ ಮಾಧ್ಯಮ ವಿಭಾಗದ ಮುಖಂಡರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ನಟಿ ಕಂಗನಾ ಮುಂಬೈ ಕಚೇರಿ ನೆಲಸಮಕ್ಕೆ ಮುಂದಾದ ಬಿಎಂಸಿ!: ಹೈಕೋರ್ಟ್‌ ತಡೆಯಾಜ್ಞೆ

ನಟಿ ಕಂಗನಾ ರಾಣಾವತ್ ಬಾಲಿವುಡ್‌ನಲ್ಲಿ ಡ್ರಗ್ ಮಾಫಿಯಾ ಆದೆ ಎಂಬ ಆರೋಪ ಮತ್ತು ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನ ಬಗ್ಗೆ ಮುಂಬೈ ಪೊಲೀಸರಿಗೆ ಸಂಬಂಧಿಸಿದಂತೆ ಟ್ವೀಟ್‌ಗಳನ್ನು ಮಾಡುವ ಮೂಲಕ ವಿವಾದವನ್ನು ಆರಂಭಿಸಿದ್ದರು. ನಾನು ಮುಂಬೈ ಪೊಲೀಸರಿಗೆ ಹೆದರುತ್ತಿದೆ. ಮುಂಬೈ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಂತೆ ಕಾಣುತ್ತಿದೆ ಎಂಬಂತ ಹೇಳಿಕೆಗಳು ಶಿವಸೇನೆಯನ್ನು ಹೆಚ್ಚು ಕೆಣಕಿದ್ದವು.

ಮಹಾರಾಷ್ಟ್ರದ ಜನರು, ಬಾಲಿವುಡ್ ನಟಿ-ನಟಿಯರು, ಸರ್ಕಾರದ ಸಚಿವರು ಆಕೆಯ ಹೇಳಿಕೆಗಳ ಬಗ್ಗೆ ಅಸಮಾಧಾನ, ಆಕ್ರೋಶ ಹೊರಹಾಕಿದ್ದರು. ನಂತರ ಬುಧವಾರ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮುಂಬೈ ಪ್ರದೇಶದಲ್ಲಿನ ರನೌತ್ ಕಚೇರಿಯ ಭಾಗವನ್ನು ಧ್ವಂಸಗೊಳಿಸಿತು. ಸದ್ಯ ಬಿಜೆಪಿ ಆಕೆಯ ಹೇಳಿಕೆ ವಿರೋಧಿಸುತ್ತಲೇ ರಾಣಾವತ್‌ಗೆ ಬೆಂಬಲ, ರಕ್ಷಣೆ ಕೊಡಲು ಆರಂಭಿಸಿದೆ.

ಶಿವಸೇನಾ ಪ್ರಸ್ತುತ ಕಾಂಗ್ರೆಸ್ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಯೊಂದಿಗೆ ಪಾಲುದಾರರಾಗಿ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ನಡೆಸುತ್ತಿದೆ.

ಇದನ್ನೂ ಓದಿ: ಇದು ಕೆ.ಎಲ್.‌ ಅಶೋಕ್‌ರವರ ವೈಯಕ್ತಿಕ ಸಮಸ್ಯೆ ಅಲ್ಲ. ಸುಮ್ಮನಿದ್ದರೆ ನಾಳೆ ಎಲ್ಲರಿಗೂ ಹೀಗಾಗುವುದರಲ್ಲಿ ಸಂಶಯವಿಲ್ಲ.

ಕಾಂಗ್ರೆಸ್ ನಾಯಕರಲ್ಲಿ ಪರಸ್ಪರ ಭಿನ್ನಾಭಿಪ್ರಾಯ!

ಕೇಂದ್ರದ ಕಾಂಗ್ರೆಸ್ ನಾಯಕರು ಈ ವಿವಾದದಿಂದ ದೂರವೂಳಿಯಲು ನಿರ್ಧರಿಸಿದ್ದರೇ ಇತ್ತ ಮಹಾರಾಷ್ಟ್ರದ ಕಾಂಗ್ರೆಸ್ ನಾಯಕರಲ್ಲಿ ಪರಸ್ಪರ ಭಿನ್ನಾಭಿಪ್ರಾಯಗಳು ಕಂಡು ಬರುತ್ತಿವೆ.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಅವರು ನಟಿ ರಾಣಾವತ್ ವಿವಾದದ ಮೇಲೆ ಕೇಂದ್ರೀಕರಿಸುವುದಕ್ಕಿಂತ  ಆಡಳಿತದಲ್ಲಿ ಕೋವಿಡ್ -19, ಆರ್ಥಿಕತೆ, ಚೀನಾದೊಂದಿಗಿನ ನಿಲುವು ಮುಂತಾದ ತುಂಬಾ ಮುಖ್ಯವಾದ ವಿಷಯಗಳಿವೆ ಎಂದು ತಿಳಿಸಿದ್ದಾರೆ.

“ಇದು ಕ್ರಿಮಿನಲ್ ಪ್ರಕರಣವಾಗಿದ್ದು, ಏಜೆನ್ಸಿಗಳು ತಮ್ಮ ಕೆಲಸವನ್ನು ಮಾಡಲಿ. ಕ್ರಿಮಿನಲ್ ಏಜೆನ್ಸಿಗಳಿಗೆ ಮಾಧ್ಯಮ ಅಥವಾ ಯಾವುದೇ ರಾಜಕೀಯ ಮುಖಂಡರ ಸಹಾಯ ಅಗತ್ಯವಿಲ್ಲ ”ಎಂದು ಚವಾಣ್ ಹೇಳಿದರು.

ಮಾಜಿ ಕೇಂದ್ರ ಸಚಿವ ಮಿಲಿಂದ್ ದಿವೋರಾ ಕೂಡ ರಾಜಕೀಯ ಬಿಟ್ಟು ಮುಖ್ಯವಾದ ವಿಷಯಗಳ ಬಗ್ಗೆ ಗಮನ ಹರಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.

 

ಮುಂಬೈನ ಮಾಜಿ ಕಾಂಗ್ರೆಸ್ ಮುಖ್ಯಸ್ಥ ನಿರುಪಮ್ ಅವರು ಬಿಎಂಸಿಯ ಈ ಕ್ರಮವನ್ನು “ಪ್ರತೀಕಾರದ ಕ್ರಮ” ಎಂದು ಬಣ್ಣಿಸಿದ್ದಾರೆ. ಹೈಕೋರ್ಟ್ ಈ ಕ್ರಮವನ್ನು ತಪ್ಪೆಂದು ಪರಿಗಣಿಸಿ ತಕ್ಷಣ ಅದನ್ನು ತಡೆಹಿಡಿದಿದೆ. ಇಡೀ ಕ್ರಮವು ಪ್ರತೀಕಾರದಿಂದ ಕೂಡಿದೆ. ಆದರೆ ಸೇಡು ರಾಜಕೀಯದ ರಾಜಕಾರಣ ಬಹಳ ಚಿಕ್ಕದು ಎಂದು ಟ್ವೀಟ್ ಮಾಡಿದ್ದಾರೆ.

ಆದರೆ, ಮಹಾರಾಷ್ಟ್ರ ಕಾಂಗ್ರೆಸ್ ವಕ್ತಾರ ಸಚಿನ್ ಸಾವಂತ್, ರಾಣಾವತ್ ಮಾಡಿದ ಆರೋಪಗಳಿಗೆ ಮಾತ್ರ ಪಕ್ಷ ಉತ್ತರಿಸುತ್ತದೆ ಎಂದರು. ನಾವು ಆಡಳಿತದತ್ತ ಗಮನ ಹರಿಸುತ್ತಿದ್ದೇವೆ. ಆದರೆ ಕಂಗನಾ ಮುಂಬೈಯನ್ನು ಪಿಒಕೆಗೆ ಸಮಾನ ಎಂದು ಕರೆಯುವಾಗ, ನಾವು ಮಾತನಾಡಬೇಕಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ದೇಶದ್ರೋಹ ಎನ್ನಲಾಗುವುದಿಲ್ಲ: ಯುಎಪಿಎ ಅಡಿ ಬಂಧಿತರಾಗಿದ್ದ ಕೇರಳದ ಯುವಕರಿಗೆ ಜಾಮೀನು

“ಘಟನೆ ನಡೆದ ಸಮಯವನ್ನು ಪ್ರಶ್ನಿಸಬಹುದು, ಆದರೆ ಅದರ ಕಾನೂನುಬದ್ಧತೆಯಲ್ಲ. ಅದು ಅಕ್ರಮ ಕಟ್ಟಡವಾಗಿದ್ದರೇ, ಅದನ್ನು ಕೆಡವಬೇಕಿದೆ,” ಎಂದರು. ಜೊತೆಗೆ ಮೋದಿ ಸರ್ಕಾರವು ಇಡಿ ಮತ್ತು ಸಿಬಿಐ ದುರುಪಯೋಗಕ್ಕೆ ಹೆಸರುವಾಸಿಯಾಗಿದೆ, ಆದರೆ ಆಗ ಯಾರೂ ಏನನ್ನೂ ಹೇಳುವುದಿಲ್ಲ” ಎಂದು ಕಿಡಿಕಾರಿದ್ದಾರೆ.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಕೂಡ ಬಿಎಂಸಿಯ ಕ್ರಮ ತೆಗೆದುಕೊಳ್ಳುವುದನ್ನು ನಿಲ್ಲಿಸಬಹುದ್ದಿತ್ತು. ಮುಂಬೈನಲ್ಲಿ ಅಕ್ರಮ ನಿರ್ಮಾಣವು ಹೊಸತೇನಲ್ಲ. ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿ, ಬಿಎಂಸಿಯ ಕ್ರಮವು ಜನರಿಗೆ ಅದರ ಬಗ್ಗೆ ಅನುಮಾನಗಳನ್ನು ಮೂಡಿಸಲು ಅವಕಾಶ ನೀಡುತ್ತದೆ ಎಂದರು. ಅದು “ಕಾನೂನುಬಾಹಿರ ಕಟ್ಟಡ ಇದೆಯೇ ಎಂದು ನನಗೆ ಗೊತ್ತಿಲ್ಲ. ನಾನು ಅದರ ಬಗ್ಗೆ ಸುದ್ದಿಯಲ್ಲಿ ಮಾತ್ರ ಓದಿದ್ದೇನೆ. ನಿಖರವಾದ ಮಾಹಿತಿಯಿಲ್ಲದೆ ಈ ಕುರಿತು ಪ್ರತಿಕ್ರಿಯಿಸುವುದು ನನಗೆ ಸೂಕ್ತವಲ್ಲ. ಬಿಎಂಸಿಗೆ ತನ್ನದೇ ಆದ ನಿಯಮಗಳಿವೆ ಮತ್ತು ಅವುಗಳಿಂದ ಕಾರ್ಯ ನಿರ್ವಹಿಸಿರಬಹುದು ಎಂದೂ ತಿಳಿಸಿದ್ದಾರೆ.

ಒಟ್ಟಾರೆ ನಟಿ ಕಂಗನಾ ಮುಂಬೈನಲ್ಲಿ ಹಚ್ಚಿರುವ ಕಿಚ್ಚು ಬಾಲಿವುಡ್ ಅಂಗಳ ಬಿಟ್ಟು ರಾಜಕೀಯ ಪಕ್ಷಗಳ ಜಟಾಪಟಿಗೆ, ಮೌನಕ್ಕೆ ಕಾರಣವಾಗಿದೆ. ಯಾವಾಗ ಬಿಜೆಪಿ ಕಂಗನಾ ರಾಣಾವತ್ ಬೆಂಬಲಕ್ಕೆ ನಿಂತು ಆಕೆಗೆ ವೈ-ಪ್ಲಸ್ ಭದ್ರತೆ ನೀಡಿತೋ ಆಗಿನಿಂದ ಟ್ವಿಟ್ಟರ್‌ನಲ್ಲಿ ಬಾಲಿವುಡ್ ಮಂದಿ ಕೂಡ ಈ ಬಗ್ಗೆ ವಿರೋಧವಾಗಿ ಟ್ವೀಟ್ ಮಾಡುವುದು ಬಿಟ್ಟಿದ್ದಾರೆ.


ಇದನ್ನೂ ಓದಿ: ಆತ್ಮಹತ್ಯೆ ತಡೆ ದಿನ: ತಮ್ಮವರ ಬಗೆಗಿನ ಕೊಂಚ ಕಾಳಜಿಯೂ ಸಹ ಆತ್ಮಹತ್ಯೆ ತಡೆಯಬಹುದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...