Homeಚಳವಳಿಭಯೋತ್ಪಾದಕರು ನಮ್ಮ ಸೈನಿಕರನ್ನು ಕೊಲ್ಲುತ್ತಿದ್ದಾರೆ, ಆದರೆ ಸರ್ಕಾರ ರೈತರನ್ನು ಭಯೋತ್ಪಾಕರಂತೆ ನೋಡುತ್ತಿದೆ: ಶಿವಸೇನೆ ಕಿಡಿ

ಭಯೋತ್ಪಾದಕರು ನಮ್ಮ ಸೈನಿಕರನ್ನು ಕೊಲ್ಲುತ್ತಿದ್ದಾರೆ, ಆದರೆ ಸರ್ಕಾರ ರೈತರನ್ನು ಭಯೋತ್ಪಾಕರಂತೆ ನೋಡುತ್ತಿದೆ: ಶಿವಸೇನೆ ಕಿಡಿ

ಉತ್ತರ ಭಾರತದಲ್ಲಿ ಕೊರೆಯುವ ಚಳಿಯಿದ್ದರೂ ಕೇಂದ್ರ ಸರ್ಕಾರ ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಜಲ ಫಿರಂಗಿಗಳನ್ನು ಬಳಸಿರುವುದು ಕ್ರೂರ. - ಸಾಮ್ನಾ

- Advertisement -
- Advertisement -

ದೇಶದ ಗಡಿಯಲ್ಲಿ ಭಯೋತ್ಪಾದಕರು ನಮ್ಮ ಸೈನಿಕರನ್ನು ಕೊಲ್ಲುತ್ತಿದ್ದಾರೆ, ಆದರೆ ಸರ್ಕಾರ ದೆಹಲಿ ಗಡಿಯಲ್ಲಿನ ಪ್ರತಿಭಟನಾನಿರತ ರೈತರನ್ನು ಭಯೋತ್ಪಾಕರಂತೆ ನೋಡುತ್ತಿದೆ ಎಂದು ಶಿವಸೇನೆ ಕಿಡಿಕಾರಿದೆ.

ಶಿವಸೇನೆ ತನ್ನ ಮುಖವಾಣಿ ‘ಸಾಮ್ನಾ’ದ ಸಂಪಾದಕೀಯದಲ್ಲಿ, ತನ್ನ ಮಾಜಿ ಮಿತ್ರಪಕ್ಷ ಬಿಜೆಪಿ ಮೇಲೆ ದಾಳಿ ಮಾಡಿದೆ. ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಭಯೋತ್ಪಾದಕರು ಎಂದು ಕರೆದಿರುವ ಕೇಂದ್ರದ ನಡೆಯನ್ನು ಟೀಕಿಸಿರುವ ಶಿವಸೇನೆ, ಉತ್ತರ ಭಾರತದಲ್ಲಿ ಕೊರೆಯುವ ಚಳಿಯಿದ್ದರೂ ಕೇಂದ್ರ ಸರ್ಕಾರ ಪ್ರತಿಭಟನೆಯನ್ನು ಹತ್ತಿಕ್ಕಲು ಜಲ ಫಿರಂಗಿಗಳನ್ನು ಬಳಸಿರುವುದು “ಕ್ರೂರ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

“ಗುಜರಾತ್‌ನ ಸರ್ದಾರ್ ಪಟೇಲ್ ಅವರ ದೈತ್ಯ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ನಿರ್ಮಿಸಿದ್ದಾರೆ. ಬ್ರಿಟೀಷರ ವಿರುದ್ದ ಅನೇಕ ರೈತ ಆಂದೋಲನಗಳಿಗೆ ಕಾರಣರಾಗಿರುವ ದೇಶದ ಮೊದಲ ಗೃಹ ಸಚಿವರ ಪ್ರತಿಮೆಯು ಕೇಂದ್ರ ಸರ್ಕಾರ ರೈತರನ್ನು ಹತ್ತಿಕ್ಕುತ್ತಿರುವ ರೀತಿ ನೋಡಿ ಅಳುತ್ತಿರಬೇಕು” ಎಂದು ಹೇಳಿದೆ.

ಇದನ್ನೂ ಓದಿ: ಸುಪ್ರೀಂ ಹೊರಗೆ ಪ್ರತಿಭಟನೆ: ರೈತರ ಹೋರಾಟಕ್ಕೆ ಸಾಥ್ ನೀಡಿದ ದೆಹಲಿ ವಕೀಲರು!

ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಅನ್ನು ಗಡಿಗಳಿಗೆ ಕಳುಹಿಸಬೇಕು

ವಿರೋಧ ಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ಪ್ರತಿಪಕ್ಷಗಳನ್ನು ಗುರಿಯಾಗಿಸಲು ಕೇಂದ್ರದ ತನಿಖಾ ಏಜೆನ್ಸಿಗಳನ್ನು ಬಳಸಲಾಗಿದೆ ಎಂದಿರುವ ಸಾಮ್ನಾ ಸಂಪಾದಕೀಯವು, “ಸರ್ಕಾರವು ವಿರೋಧವನ್ನು ತಡೆಯಲು ಸಿಬಿಐ ಮತ್ತು ಇಡಿಯನ್ನು ಬಳಸುತ್ತದೆ. ಆದ್ದರಿಂದ ಈ ಏಜೆನ್ಸಿಗಳಿಗೆ ಶೌರ್ಯವನ್ನು ಸಾಬೀತುಪಡಿಸುವ ಅವಕಾಶ ನೀಡಬೇಕು. ಈ ಸಮಯದಲ್ಲಿ, ಇಡಿ ಮತ್ತು ಸಿಬಿಐ ಅನ್ನು ಗಡಿಗಳಿಗೆ ಕಳುಹಿಸಬೇಕು. ಬೇರೆ ಆಯ್ಕೆಗಳಿಲ್ಲ…” ಎಂದು ಬರೆದಿದೆ.

ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ತನಿಖೆ ನಡೆಸುತ್ತಿರುವ ತಮ್ಮ ಪಕ್ಷದ ಶಾಸಕ ಪ್ರತಾಪ್ ಸರ್ನಾಯಕ್ ಅವರನ್ನು ಕೇಂದ್ರ ಸರ್ಕಾರ ಗುರಿಯಾಗಿಸಿಕೊಂಡಿದೆ ಎಂದು ಶಿವಸೇನೆ ಆರೋಪಿಸಿದೆ.

“ಬಿಜೆಪಿ ದೇಶದ ವಾತಾವರಣವನ್ನು ಹಾಳು ಮಾಡುತ್ತಿರುವುದು ಮಾತ್ರವಲ್ಲದೆ, ನಿರಂಕುಶಾಧಿಕಾರವನ್ನು ಆಹ್ವಾನಿಸುತ್ತಿದೆ. ಖಾಲಿಸ್ತಾನ್ ವಿಷಯವು ಮುಗಿದಿದೆ, ಅದಕ್ಕಾಗಿ ಇಂದಿರಾ ಗಾಂಧಿ ಮತ್ತು ಜನರಲ್ ಅರುಣ್ ಕುಮಾರ್ ವೈದ್ಯ ತಮ್ಮ ಪ್ರಾಣವನ್ನೇ ಅರ್ಪಿಸಿದ್ದಾರೆ. ಆದರೆ ಬಿಜೆಪಿ ಆ ವಿಷಯವನ್ನು ಮತ್ತೆ ಮುನ್ನಲೆಗೆ ತಂದು ಪಂಜಾಬ್‌ನಲ್ಲಿ ರಾಜಕೀಯ ಮಾಡಲು ಬಯಸಿದೆ. ಇದು ಕಿಡಿಯನ್ನು ಹೊತ್ತಿಸಿದರೆ ಅದು ದೇಶಕ್ಕೆ ಹಾನಿಕಾರಕವಾಗಿದೆ” ಎಂದು ಶಿವಸೇನೆ ಹೇಳಿದೆ.

ಇದನ್ನೂ ಓದಿ: ಪ್ರತಿಭಟನಾ ನಿರತ ರೈತರಿಗೆ ಆಹಾರ-ನೀರು ಒದಗಿಸಿದ ಆಪ್: ಹೋರಾಟಕ್ಕೆ ಬೆಂಬಲ

ಕಳೆದ ವಾರ ಹರಿಯಾಣ ಮುಖ್ಯಮಂತ್ರಿ ಮನೋಹರಲಾಲ್ ಖಟ್ಟರ್ ಮತ್ತು ಇತರ ಬಿಜೆಪಿ ನಾಯಕರು, ಹೋರಾಟಗಾರರು ಸಿಖ್ ಪ್ರತ್ಯೇಕತಾವಾದಿ ಚಳವಳಿಯ ಘೋಷಣೆಗಳನ್ನು ಕೂಗಿದ್ದಾರೆ ಎಂದು ಆರೋಪಿಸಿ ರೈತರ ಪ್ರತಿಭಟನೆಯನ್ನು “ಖಾಲಿಸ್ತಾನ್” ತಿರುವು ನೀಡಲು ಪ್ರಯತ್ನಿಸಿದ್ದರು.

ಸುಧಾರಣೆಗಳನ್ನು ತರಲಾಗುವುದು ಎಂದು ಕೇಂದ್ರ ಸರ್ಕಾರ ಹೇಳುವ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ದೇಶಾದ್ಯಂತದ ರೈತರು ದೆಹಲಿಯ ಸುತ್ತಲೂ ಜಮಾಯಿಸಿದ್ದಾರೆ. ಪ್ರತಿಭಟನಾ ನಿರತ ರೈತರು ಈ ಕಾನೂನುಗಳು ತಮ್ಮ ಕನಿಷ್ಠ ಬೆಂಬಲ ಬೆಲೆಯನ್ನು ಕಿತ್ತುಕೊಳ್ಳುತ್ತವೆ ಮತ್ತು ಕಾರ್ಪೊರೇಟ್‌ಗಳಿಗೆ ಬೆಲೆಗಳನ್ನು ನಿಯಂತ್ರಿಸಲು ಅನುವು ಮಾಡಿಕೊಡುತ್ತದೆ ಎಂದು ಆರೋಪಿಸಿದ್ದಾರೆ.

ಈ ನಡುವೆ ದೆಹಲಿಗೆ ಬರುವ ಎಲ್ಲಾ ಹೆದ್ದಾರಿಗಳನ್ನು ನಿರ್ಬಂಧಿಸುವುದಾಗಿ ಮತ್ತು ಕಾನೂನುಗಳನ್ನು ರದ್ದುಗೊಳಿಸಲು ಸರ್ಕಾರ ಒಪ್ಪದ ಹೊರತು ಪ್ರತಿಭಟನೆ ಮುಂದುವರಿಯುವುದಾಗಿ ರೈತರು ಸರ್ಕಾರಕ್ಕೆ ಬೆದರಿಕೆ ಹಾಕಿದ್ದಾರೆ. ಆದರೆ ನಿನ್ನೆ ಪ್ರಧಾನಿ ಮೋದಿ ತಮ್ಮ “ಮನ್‌ ಕಿ ಬಾತ್‌” ರೇಡಿಯೋ ಕಾರ್ಯಕ್ರಮದಲ್ಲಿ ಕೃಷಿ ಕಾಯ್ದೆಗಳನ್ನು ಮತ್ತೇ ಸಮರ್ಥನೆ ಮಾಡಿದ್ದಾರೆ.

ಇದನ್ನೂ ಓದಿ: ಆಜ್‌‌ತಕ್ ವರದಿಗಾರರನ್ನು ’ಗೋದಿ ಮೀಡಿಯಾ’ ಎಂದು ಕರೆದು ಸ್ವಾಗತಿಸಿದ ಚಳವಳಿ ನಿರತ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...