Homeಚಳವಳಿಭಯೋತ್ಪಾದಕರು ನಮ್ಮ ಸೈನಿಕರನ್ನು ಕೊಲ್ಲುತ್ತಿದ್ದಾರೆ, ಆದರೆ ಸರ್ಕಾರ ರೈತರನ್ನು ಭಯೋತ್ಪಾಕರಂತೆ ನೋಡುತ್ತಿದೆ: ಶಿವಸೇನೆ ಕಿಡಿ

ಭಯೋತ್ಪಾದಕರು ನಮ್ಮ ಸೈನಿಕರನ್ನು ಕೊಲ್ಲುತ್ತಿದ್ದಾರೆ, ಆದರೆ ಸರ್ಕಾರ ರೈತರನ್ನು ಭಯೋತ್ಪಾಕರಂತೆ ನೋಡುತ್ತಿದೆ: ಶಿವಸೇನೆ ಕಿಡಿ

ಉತ್ತರ ಭಾರತದಲ್ಲಿ ಕೊರೆಯುವ ಚಳಿಯಿದ್ದರೂ ಕೇಂದ್ರ ಸರ್ಕಾರ ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಜಲ ಫಿರಂಗಿಗಳನ್ನು ಬಳಸಿರುವುದು ಕ್ರೂರ. - ಸಾಮ್ನಾ

- Advertisement -
- Advertisement -

ದೇಶದ ಗಡಿಯಲ್ಲಿ ಭಯೋತ್ಪಾದಕರು ನಮ್ಮ ಸೈನಿಕರನ್ನು ಕೊಲ್ಲುತ್ತಿದ್ದಾರೆ, ಆದರೆ ಸರ್ಕಾರ ದೆಹಲಿ ಗಡಿಯಲ್ಲಿನ ಪ್ರತಿಭಟನಾನಿರತ ರೈತರನ್ನು ಭಯೋತ್ಪಾಕರಂತೆ ನೋಡುತ್ತಿದೆ ಎಂದು ಶಿವಸೇನೆ ಕಿಡಿಕಾರಿದೆ.

ಶಿವಸೇನೆ ತನ್ನ ಮುಖವಾಣಿ ‘ಸಾಮ್ನಾ’ದ ಸಂಪಾದಕೀಯದಲ್ಲಿ, ತನ್ನ ಮಾಜಿ ಮಿತ್ರಪಕ್ಷ ಬಿಜೆಪಿ ಮೇಲೆ ದಾಳಿ ಮಾಡಿದೆ. ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಭಯೋತ್ಪಾದಕರು ಎಂದು ಕರೆದಿರುವ ಕೇಂದ್ರದ ನಡೆಯನ್ನು ಟೀಕಿಸಿರುವ ಶಿವಸೇನೆ, ಉತ್ತರ ಭಾರತದಲ್ಲಿ ಕೊರೆಯುವ ಚಳಿಯಿದ್ದರೂ ಕೇಂದ್ರ ಸರ್ಕಾರ ಪ್ರತಿಭಟನೆಯನ್ನು ಹತ್ತಿಕ್ಕಲು ಜಲ ಫಿರಂಗಿಗಳನ್ನು ಬಳಸಿರುವುದು “ಕ್ರೂರ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

“ಗುಜರಾತ್‌ನ ಸರ್ದಾರ್ ಪಟೇಲ್ ಅವರ ದೈತ್ಯ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ನಿರ್ಮಿಸಿದ್ದಾರೆ. ಬ್ರಿಟೀಷರ ವಿರುದ್ದ ಅನೇಕ ರೈತ ಆಂದೋಲನಗಳಿಗೆ ಕಾರಣರಾಗಿರುವ ದೇಶದ ಮೊದಲ ಗೃಹ ಸಚಿವರ ಪ್ರತಿಮೆಯು ಕೇಂದ್ರ ಸರ್ಕಾರ ರೈತರನ್ನು ಹತ್ತಿಕ್ಕುತ್ತಿರುವ ರೀತಿ ನೋಡಿ ಅಳುತ್ತಿರಬೇಕು” ಎಂದು ಹೇಳಿದೆ.

ಇದನ್ನೂ ಓದಿ: ಸುಪ್ರೀಂ ಹೊರಗೆ ಪ್ರತಿಭಟನೆ: ರೈತರ ಹೋರಾಟಕ್ಕೆ ಸಾಥ್ ನೀಡಿದ ದೆಹಲಿ ವಕೀಲರು!

ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಅನ್ನು ಗಡಿಗಳಿಗೆ ಕಳುಹಿಸಬೇಕು

ವಿರೋಧ ಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ಪ್ರತಿಪಕ್ಷಗಳನ್ನು ಗುರಿಯಾಗಿಸಲು ಕೇಂದ್ರದ ತನಿಖಾ ಏಜೆನ್ಸಿಗಳನ್ನು ಬಳಸಲಾಗಿದೆ ಎಂದಿರುವ ಸಾಮ್ನಾ ಸಂಪಾದಕೀಯವು, “ಸರ್ಕಾರವು ವಿರೋಧವನ್ನು ತಡೆಯಲು ಸಿಬಿಐ ಮತ್ತು ಇಡಿಯನ್ನು ಬಳಸುತ್ತದೆ. ಆದ್ದರಿಂದ ಈ ಏಜೆನ್ಸಿಗಳಿಗೆ ಶೌರ್ಯವನ್ನು ಸಾಬೀತುಪಡಿಸುವ ಅವಕಾಶ ನೀಡಬೇಕು. ಈ ಸಮಯದಲ್ಲಿ, ಇಡಿ ಮತ್ತು ಸಿಬಿಐ ಅನ್ನು ಗಡಿಗಳಿಗೆ ಕಳುಹಿಸಬೇಕು. ಬೇರೆ ಆಯ್ಕೆಗಳಿಲ್ಲ…” ಎಂದು ಬರೆದಿದೆ.

ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ತನಿಖೆ ನಡೆಸುತ್ತಿರುವ ತಮ್ಮ ಪಕ್ಷದ ಶಾಸಕ ಪ್ರತಾಪ್ ಸರ್ನಾಯಕ್ ಅವರನ್ನು ಕೇಂದ್ರ ಸರ್ಕಾರ ಗುರಿಯಾಗಿಸಿಕೊಂಡಿದೆ ಎಂದು ಶಿವಸೇನೆ ಆರೋಪಿಸಿದೆ.

“ಬಿಜೆಪಿ ದೇಶದ ವಾತಾವರಣವನ್ನು ಹಾಳು ಮಾಡುತ್ತಿರುವುದು ಮಾತ್ರವಲ್ಲದೆ, ನಿರಂಕುಶಾಧಿಕಾರವನ್ನು ಆಹ್ವಾನಿಸುತ್ತಿದೆ. ಖಾಲಿಸ್ತಾನ್ ವಿಷಯವು ಮುಗಿದಿದೆ, ಅದಕ್ಕಾಗಿ ಇಂದಿರಾ ಗಾಂಧಿ ಮತ್ತು ಜನರಲ್ ಅರುಣ್ ಕುಮಾರ್ ವೈದ್ಯ ತಮ್ಮ ಪ್ರಾಣವನ್ನೇ ಅರ್ಪಿಸಿದ್ದಾರೆ. ಆದರೆ ಬಿಜೆಪಿ ಆ ವಿಷಯವನ್ನು ಮತ್ತೆ ಮುನ್ನಲೆಗೆ ತಂದು ಪಂಜಾಬ್‌ನಲ್ಲಿ ರಾಜಕೀಯ ಮಾಡಲು ಬಯಸಿದೆ. ಇದು ಕಿಡಿಯನ್ನು ಹೊತ್ತಿಸಿದರೆ ಅದು ದೇಶಕ್ಕೆ ಹಾನಿಕಾರಕವಾಗಿದೆ” ಎಂದು ಶಿವಸೇನೆ ಹೇಳಿದೆ.

ಇದನ್ನೂ ಓದಿ: ಪ್ರತಿಭಟನಾ ನಿರತ ರೈತರಿಗೆ ಆಹಾರ-ನೀರು ಒದಗಿಸಿದ ಆಪ್: ಹೋರಾಟಕ್ಕೆ ಬೆಂಬಲ

ಕಳೆದ ವಾರ ಹರಿಯಾಣ ಮುಖ್ಯಮಂತ್ರಿ ಮನೋಹರಲಾಲ್ ಖಟ್ಟರ್ ಮತ್ತು ಇತರ ಬಿಜೆಪಿ ನಾಯಕರು, ಹೋರಾಟಗಾರರು ಸಿಖ್ ಪ್ರತ್ಯೇಕತಾವಾದಿ ಚಳವಳಿಯ ಘೋಷಣೆಗಳನ್ನು ಕೂಗಿದ್ದಾರೆ ಎಂದು ಆರೋಪಿಸಿ ರೈತರ ಪ್ರತಿಭಟನೆಯನ್ನು “ಖಾಲಿಸ್ತಾನ್” ತಿರುವು ನೀಡಲು ಪ್ರಯತ್ನಿಸಿದ್ದರು.

ಸುಧಾರಣೆಗಳನ್ನು ತರಲಾಗುವುದು ಎಂದು ಕೇಂದ್ರ ಸರ್ಕಾರ ಹೇಳುವ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ದೇಶಾದ್ಯಂತದ ರೈತರು ದೆಹಲಿಯ ಸುತ್ತಲೂ ಜಮಾಯಿಸಿದ್ದಾರೆ. ಪ್ರತಿಭಟನಾ ನಿರತ ರೈತರು ಈ ಕಾನೂನುಗಳು ತಮ್ಮ ಕನಿಷ್ಠ ಬೆಂಬಲ ಬೆಲೆಯನ್ನು ಕಿತ್ತುಕೊಳ್ಳುತ್ತವೆ ಮತ್ತು ಕಾರ್ಪೊರೇಟ್‌ಗಳಿಗೆ ಬೆಲೆಗಳನ್ನು ನಿಯಂತ್ರಿಸಲು ಅನುವು ಮಾಡಿಕೊಡುತ್ತದೆ ಎಂದು ಆರೋಪಿಸಿದ್ದಾರೆ.

ಈ ನಡುವೆ ದೆಹಲಿಗೆ ಬರುವ ಎಲ್ಲಾ ಹೆದ್ದಾರಿಗಳನ್ನು ನಿರ್ಬಂಧಿಸುವುದಾಗಿ ಮತ್ತು ಕಾನೂನುಗಳನ್ನು ರದ್ದುಗೊಳಿಸಲು ಸರ್ಕಾರ ಒಪ್ಪದ ಹೊರತು ಪ್ರತಿಭಟನೆ ಮುಂದುವರಿಯುವುದಾಗಿ ರೈತರು ಸರ್ಕಾರಕ್ಕೆ ಬೆದರಿಕೆ ಹಾಕಿದ್ದಾರೆ. ಆದರೆ ನಿನ್ನೆ ಪ್ರಧಾನಿ ಮೋದಿ ತಮ್ಮ “ಮನ್‌ ಕಿ ಬಾತ್‌” ರೇಡಿಯೋ ಕಾರ್ಯಕ್ರಮದಲ್ಲಿ ಕೃಷಿ ಕಾಯ್ದೆಗಳನ್ನು ಮತ್ತೇ ಸಮರ್ಥನೆ ಮಾಡಿದ್ದಾರೆ.

ಇದನ್ನೂ ಓದಿ: ಆಜ್‌‌ತಕ್ ವರದಿಗಾರರನ್ನು ’ಗೋದಿ ಮೀಡಿಯಾ’ ಎಂದು ಕರೆದು ಸ್ವಾಗತಿಸಿದ ಚಳವಳಿ ನಿರತ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...