Homeಮುಖಪುಟದ್ವೇಷಬಿತ್ತುವ ಟಿವಿ ಚಾನೆಲ್‌ಗಳನ್ನು ಬಂದ್‌ ಮಾಡಿ: ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ

ದ್ವೇಷಬಿತ್ತುವ ಟಿವಿ ಚಾನೆಲ್‌ಗಳನ್ನು ಬಂದ್‌ ಮಾಡಿ: ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ

- Advertisement -
- Advertisement -

“ಪೂರ್ವಗ್ರಹಪೀಡಿತ, ದುರಹಂಕಾರವಿರುವ ಕನ್ನಡ ನ್ಯೂಸ್‌ ಚಾನೆಲ್‌ಗಳ ಬಂದ್‌ ಮಾಡಿ” ಎಂಬ ಘೋಷಣೆಯೊಂದಿಗೆ ಕೊರೊನಾ ವಿರುದ್ಧ ಸಮರ, ನಾಡಿನ ಹಿತಕ್ಕಾಗಿ, ದ್ವೇಷ ಪ್ರಚಾರ ವಿರೋಧಿಸಿ ಏಪ್ರಿಲ್ 12ರ ಭಾನುವಾರ ರಾತ್ರಿ 8ರಿಂದ 10 ಗಂಟೆಯವರೆಗೆ ಕನ್ನಡ ಟಿವಿ ನ್ಯೂಸ್‌ ಚಾನೆಲ್‌ ವೀಕ್ಷಣೆ ಬಂದ್‌ ಮಾಡೋಣ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕರೆ ನೀಡಲಾಗಿದೆ.

ದುಷ್ಟದನಿಗಳ ವಿರುದ್ಧ ಜನದನಿ ಎಂಬ ಹೆಸರಿನಡಿಯಲ್ಲಿ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದ್ದು #LockdownKannadaNewsChannels ಎಂಬ ಹ್ಯಾಸ್‌ಟ್ಯಾಗ್‌ ನೀಡಲಾಗಿದೆ. ಪಬ್ಲಿಕ್‌ ಟಿವಿಯ ಎಚ್‌.ಆರ್‌ ರಂಗನಾಥ್, ದಿಗ್ವಿಜಯ ಚಾನೆಲ್‌ನ ವಿಜಯ ಸಂಕೇಶ್ವರ ಮತ್ತು ಸುವರ್ಣ ಟಿವಿಯ ಅಜಿತ್‌ ಹನುಮಕ್ಕರ್‌ ರವರ ಫೋಟೊ ಹಾಕಿ ಟಿವಿ ಬಂದ್‌ ಮಾಡಿ ಎನ್ನಲಾಗಿದೆ.

ಸಾಮರಸ್ಯ ಮತ್ತು ಸಹಬಾಳ್ವೆಗಾಗಿ ದನಿಗೂಡಿಸೋಣ. ದಯವಿಟ್ಟು ಈ ಮಾಹಿತಿ ಹಂಚಿ, ಇತರರನ್ನೂ ಜೊತೆಗೂಡಿಸಿ. ಕನ್ನಡ ನಾಡಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಈ ಕಾರ್ಯಕ್ರಮಕ್ಕೆ ಚಾಲನೆ ನೀಡೋಣ ಎಂದು ಕರೆ ನೀಡಲಾಗಿದೆ.

ಈ ಕುರಿತು ಇನ್ನು ಕೆಲವರು ಕೋಮುವಾದಿಗಳನ್ನು ಸೋಲಿಸಬೇಕಾದರೆ ಒಂದೆರೆಡು ಗಂಟೆಯಲ್ಲ, ಸಂಪೂರ್ಣವಾಗಿ ಈ ಚಾನೆಲ್‌ಗಳನ್ನು ಬಂದ್‌ ಮಾಡಬೇಕು. ನಮಗೆ ನ್ಯೂಸ್‌ ಬೇಕಾದರೆ ಸಾಮಾಜಿಕ ಜಾಲತಾಣದಲ್ಲಿ ಸಿಗುತ್ತದೆ. ನಾನು ಈಗಾಗಲೇ ಈ ಕೆಲಸ ಮಾಡಿದ್ದೇನೆ ಮುಂದಿನ ಸರದಿ ನಿಮ್ಮದು ಎಂದು ಅಶ್ರಫ್‌ ಎಂ ಸಾಲೆತ್ತುರ್‌ರವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಇದು ಸ್ವಾಗತಾರ್ಹ. ಆದರೆ ಇದಿಷ್ಟೇ ಸಾಲದು. ಇವರು ಕೊಡುತ್ತಿರುವ ಸುದ್ದಿಗಳನ್ನು ವಿಮರ್ಶೆ ಮಾಡುವ ಸಾಮರ್ಥ್ಯ ಇಲ್ಲದ ಅನೇಕ ಜನಸಾಮಾನ್ಯರು, ಇವರು ತೊರಿಸುತ್ತಿರುವುದೇ ಸತ್ಯ ಎಂದು ತಿಳಿದು ಕೋಮು ವಿಶಕ್ಕೆ ಬಲಿಯಾಗುತ್ತಿದ್ದಾರೆ. ಸುಳ್ಳು ಸುದ್ದಿಗಳನ್ನು ಮತ್ತು ಕೊಮುವಿಶವನ್ನು ಬಿತ್ತುತ್ತಿರುವ ಇವರ ವಿರುದ್ಧ ಪೊಲೀಸ್ ಟಾಣೆಯಲ್ಲಿ ದೂರು ದಾಕಲಾಗುವಂತಾಗಬೇಕು.

  2. ಟಿವಿಯ ವರದಿಗಾರು ತಮ್ಮ ಹೊಟ್ಟೆಪಾಡಿಗಾಗಿ ಮತ್ತು ಅಸ್ತಿತ್ವಕ್ಕಾಗಿ ಈ ರೀತಿಯ ಅತಿರೇಕಗಳನ್ನು ಮಾಡುತ್ತಾರೆ…ಹಿಡಿಯಬೇಕಾಗಿರುವುದು ಮಾಲೀಕರನ್ನು…ಚಾನೆಲ್ ಬಂದ್ ಮಾಡಿದರೇ ಮಾಧ್ಯಮ ಸ್ವಾತಂತ್ರ್ಯದ ಕತೆ ಏನು…ಇದಕ್ಕೆಲ್ಲಾ IBF(Indian Broadcasting Foundation) ಬಳಿ ಪರಿಹಾರವಿಲ್ಲವೇ?

  3. ಜನತೆಯ ಹಸಿವಿನ ನರಳಾಟ.
    ಚಾನಲ್ಸ್ ಗಳಿಗೆ ಹಬ್ಬದುಟ.
    ಸರಕಾರದ ಚೆಲ್ಲಾಟ.
    ಕೊಮುವಾದಿಗಳ ಆಟವೆ ಆಟ.
    ಕೊರೊನ ವೈರಸ್‌ ಹುಡುಕಾಟ.
    ಸಾವು-ನೊವಿನ ಸಂಖ್ಯೆ ಏಣಿಯಾಟ.
    ಭಾರತದ ಬಡವರ ಗೊಳಾಟ.
    ಏನಿದು…..ಅಬ್ಬಾಬ್ಬ…ಮೊದಿ ಮೊಡಿಯಾಟ….
    ಜಗವೆಲ್ಲ….ಸಂಕಟ….ಸಂಕಟ….MG.

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...