Homeಮುಖಪುಟದ್ವೇಷಬಿತ್ತುವ ಟಿವಿ ಚಾನೆಲ್‌ಗಳನ್ನು ಬಂದ್‌ ಮಾಡಿ: ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ

ದ್ವೇಷಬಿತ್ತುವ ಟಿವಿ ಚಾನೆಲ್‌ಗಳನ್ನು ಬಂದ್‌ ಮಾಡಿ: ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ

- Advertisement -
- Advertisement -

“ಪೂರ್ವಗ್ರಹಪೀಡಿತ, ದುರಹಂಕಾರವಿರುವ ಕನ್ನಡ ನ್ಯೂಸ್‌ ಚಾನೆಲ್‌ಗಳ ಬಂದ್‌ ಮಾಡಿ” ಎಂಬ ಘೋಷಣೆಯೊಂದಿಗೆ ಕೊರೊನಾ ವಿರುದ್ಧ ಸಮರ, ನಾಡಿನ ಹಿತಕ್ಕಾಗಿ, ದ್ವೇಷ ಪ್ರಚಾರ ವಿರೋಧಿಸಿ ಏಪ್ರಿಲ್ 12ರ ಭಾನುವಾರ ರಾತ್ರಿ 8ರಿಂದ 10 ಗಂಟೆಯವರೆಗೆ ಕನ್ನಡ ಟಿವಿ ನ್ಯೂಸ್‌ ಚಾನೆಲ್‌ ವೀಕ್ಷಣೆ ಬಂದ್‌ ಮಾಡೋಣ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕರೆ ನೀಡಲಾಗಿದೆ.

ದುಷ್ಟದನಿಗಳ ವಿರುದ್ಧ ಜನದನಿ ಎಂಬ ಹೆಸರಿನಡಿಯಲ್ಲಿ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದ್ದು #LockdownKannadaNewsChannels ಎಂಬ ಹ್ಯಾಸ್‌ಟ್ಯಾಗ್‌ ನೀಡಲಾಗಿದೆ. ಪಬ್ಲಿಕ್‌ ಟಿವಿಯ ಎಚ್‌.ಆರ್‌ ರಂಗನಾಥ್, ದಿಗ್ವಿಜಯ ಚಾನೆಲ್‌ನ ವಿಜಯ ಸಂಕೇಶ್ವರ ಮತ್ತು ಸುವರ್ಣ ಟಿವಿಯ ಅಜಿತ್‌ ಹನುಮಕ್ಕರ್‌ ರವರ ಫೋಟೊ ಹಾಕಿ ಟಿವಿ ಬಂದ್‌ ಮಾಡಿ ಎನ್ನಲಾಗಿದೆ.

ಸಾಮರಸ್ಯ ಮತ್ತು ಸಹಬಾಳ್ವೆಗಾಗಿ ದನಿಗೂಡಿಸೋಣ. ದಯವಿಟ್ಟು ಈ ಮಾಹಿತಿ ಹಂಚಿ, ಇತರರನ್ನೂ ಜೊತೆಗೂಡಿಸಿ. ಕನ್ನಡ ನಾಡಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಈ ಕಾರ್ಯಕ್ರಮಕ್ಕೆ ಚಾಲನೆ ನೀಡೋಣ ಎಂದು ಕರೆ ನೀಡಲಾಗಿದೆ.

ಈ ಕುರಿತು ಇನ್ನು ಕೆಲವರು ಕೋಮುವಾದಿಗಳನ್ನು ಸೋಲಿಸಬೇಕಾದರೆ ಒಂದೆರೆಡು ಗಂಟೆಯಲ್ಲ, ಸಂಪೂರ್ಣವಾಗಿ ಈ ಚಾನೆಲ್‌ಗಳನ್ನು ಬಂದ್‌ ಮಾಡಬೇಕು. ನಮಗೆ ನ್ಯೂಸ್‌ ಬೇಕಾದರೆ ಸಾಮಾಜಿಕ ಜಾಲತಾಣದಲ್ಲಿ ಸಿಗುತ್ತದೆ. ನಾನು ಈಗಾಗಲೇ ಈ ಕೆಲಸ ಮಾಡಿದ್ದೇನೆ ಮುಂದಿನ ಸರದಿ ನಿಮ್ಮದು ಎಂದು ಅಶ್ರಫ್‌ ಎಂ ಸಾಲೆತ್ತುರ್‌ರವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಇದು ಸ್ವಾಗತಾರ್ಹ. ಆದರೆ ಇದಿಷ್ಟೇ ಸಾಲದು. ಇವರು ಕೊಡುತ್ತಿರುವ ಸುದ್ದಿಗಳನ್ನು ವಿಮರ್ಶೆ ಮಾಡುವ ಸಾಮರ್ಥ್ಯ ಇಲ್ಲದ ಅನೇಕ ಜನಸಾಮಾನ್ಯರು, ಇವರು ತೊರಿಸುತ್ತಿರುವುದೇ ಸತ್ಯ ಎಂದು ತಿಳಿದು ಕೋಮು ವಿಶಕ್ಕೆ ಬಲಿಯಾಗುತ್ತಿದ್ದಾರೆ. ಸುಳ್ಳು ಸುದ್ದಿಗಳನ್ನು ಮತ್ತು ಕೊಮುವಿಶವನ್ನು ಬಿತ್ತುತ್ತಿರುವ ಇವರ ವಿರುದ್ಧ ಪೊಲೀಸ್ ಟಾಣೆಯಲ್ಲಿ ದೂರು ದಾಕಲಾಗುವಂತಾಗಬೇಕು.

  2. ಟಿವಿಯ ವರದಿಗಾರು ತಮ್ಮ ಹೊಟ್ಟೆಪಾಡಿಗಾಗಿ ಮತ್ತು ಅಸ್ತಿತ್ವಕ್ಕಾಗಿ ಈ ರೀತಿಯ ಅತಿರೇಕಗಳನ್ನು ಮಾಡುತ್ತಾರೆ…ಹಿಡಿಯಬೇಕಾಗಿರುವುದು ಮಾಲೀಕರನ್ನು…ಚಾನೆಲ್ ಬಂದ್ ಮಾಡಿದರೇ ಮಾಧ್ಯಮ ಸ್ವಾತಂತ್ರ್ಯದ ಕತೆ ಏನು…ಇದಕ್ಕೆಲ್ಲಾ IBF(Indian Broadcasting Foundation) ಬಳಿ ಪರಿಹಾರವಿಲ್ಲವೇ?

  3. ಜನತೆಯ ಹಸಿವಿನ ನರಳಾಟ.
    ಚಾನಲ್ಸ್ ಗಳಿಗೆ ಹಬ್ಬದುಟ.
    ಸರಕಾರದ ಚೆಲ್ಲಾಟ.
    ಕೊಮುವಾದಿಗಳ ಆಟವೆ ಆಟ.
    ಕೊರೊನ ವೈರಸ್‌ ಹುಡುಕಾಟ.
    ಸಾವು-ನೊವಿನ ಸಂಖ್ಯೆ ಏಣಿಯಾಟ.
    ಭಾರತದ ಬಡವರ ಗೊಳಾಟ.
    ಏನಿದು…..ಅಬ್ಬಾಬ್ಬ…ಮೊದಿ ಮೊಡಿಯಾಟ….
    ಜಗವೆಲ್ಲ….ಸಂಕಟ….ಸಂಕಟ….MG.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...