Homeಮುಖಪುಟದ್ವೇಷಬಿತ್ತುವ ಟಿವಿ ಚಾನೆಲ್‌ಗಳನ್ನು ಬಂದ್‌ ಮಾಡಿ: ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ

ದ್ವೇಷಬಿತ್ತುವ ಟಿವಿ ಚಾನೆಲ್‌ಗಳನ್ನು ಬಂದ್‌ ಮಾಡಿ: ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ

- Advertisement -
- Advertisement -

“ಪೂರ್ವಗ್ರಹಪೀಡಿತ, ದುರಹಂಕಾರವಿರುವ ಕನ್ನಡ ನ್ಯೂಸ್‌ ಚಾನೆಲ್‌ಗಳ ಬಂದ್‌ ಮಾಡಿ” ಎಂಬ ಘೋಷಣೆಯೊಂದಿಗೆ ಕೊರೊನಾ ವಿರುದ್ಧ ಸಮರ, ನಾಡಿನ ಹಿತಕ್ಕಾಗಿ, ದ್ವೇಷ ಪ್ರಚಾರ ವಿರೋಧಿಸಿ ಏಪ್ರಿಲ್ 12ರ ಭಾನುವಾರ ರಾತ್ರಿ 8ರಿಂದ 10 ಗಂಟೆಯವರೆಗೆ ಕನ್ನಡ ಟಿವಿ ನ್ಯೂಸ್‌ ಚಾನೆಲ್‌ ವೀಕ್ಷಣೆ ಬಂದ್‌ ಮಾಡೋಣ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕರೆ ನೀಡಲಾಗಿದೆ.

ದುಷ್ಟದನಿಗಳ ವಿರುದ್ಧ ಜನದನಿ ಎಂಬ ಹೆಸರಿನಡಿಯಲ್ಲಿ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದ್ದು #LockdownKannadaNewsChannels ಎಂಬ ಹ್ಯಾಸ್‌ಟ್ಯಾಗ್‌ ನೀಡಲಾಗಿದೆ. ಪಬ್ಲಿಕ್‌ ಟಿವಿಯ ಎಚ್‌.ಆರ್‌ ರಂಗನಾಥ್, ದಿಗ್ವಿಜಯ ಚಾನೆಲ್‌ನ ವಿಜಯ ಸಂಕೇಶ್ವರ ಮತ್ತು ಸುವರ್ಣ ಟಿವಿಯ ಅಜಿತ್‌ ಹನುಮಕ್ಕರ್‌ ರವರ ಫೋಟೊ ಹಾಕಿ ಟಿವಿ ಬಂದ್‌ ಮಾಡಿ ಎನ್ನಲಾಗಿದೆ.

ಸಾಮರಸ್ಯ ಮತ್ತು ಸಹಬಾಳ್ವೆಗಾಗಿ ದನಿಗೂಡಿಸೋಣ. ದಯವಿಟ್ಟು ಈ ಮಾಹಿತಿ ಹಂಚಿ, ಇತರರನ್ನೂ ಜೊತೆಗೂಡಿಸಿ. ಕನ್ನಡ ನಾಡಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಈ ಕಾರ್ಯಕ್ರಮಕ್ಕೆ ಚಾಲನೆ ನೀಡೋಣ ಎಂದು ಕರೆ ನೀಡಲಾಗಿದೆ.

ಈ ಕುರಿತು ಇನ್ನು ಕೆಲವರು ಕೋಮುವಾದಿಗಳನ್ನು ಸೋಲಿಸಬೇಕಾದರೆ ಒಂದೆರೆಡು ಗಂಟೆಯಲ್ಲ, ಸಂಪೂರ್ಣವಾಗಿ ಈ ಚಾನೆಲ್‌ಗಳನ್ನು ಬಂದ್‌ ಮಾಡಬೇಕು. ನಮಗೆ ನ್ಯೂಸ್‌ ಬೇಕಾದರೆ ಸಾಮಾಜಿಕ ಜಾಲತಾಣದಲ್ಲಿ ಸಿಗುತ್ತದೆ. ನಾನು ಈಗಾಗಲೇ ಈ ಕೆಲಸ ಮಾಡಿದ್ದೇನೆ ಮುಂದಿನ ಸರದಿ ನಿಮ್ಮದು ಎಂದು ಅಶ್ರಫ್‌ ಎಂ ಸಾಲೆತ್ತುರ್‌ರವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಇದು ಸ್ವಾಗತಾರ್ಹ. ಆದರೆ ಇದಿಷ್ಟೇ ಸಾಲದು. ಇವರು ಕೊಡುತ್ತಿರುವ ಸುದ್ದಿಗಳನ್ನು ವಿಮರ್ಶೆ ಮಾಡುವ ಸಾಮರ್ಥ್ಯ ಇಲ್ಲದ ಅನೇಕ ಜನಸಾಮಾನ್ಯರು, ಇವರು ತೊರಿಸುತ್ತಿರುವುದೇ ಸತ್ಯ ಎಂದು ತಿಳಿದು ಕೋಮು ವಿಶಕ್ಕೆ ಬಲಿಯಾಗುತ್ತಿದ್ದಾರೆ. ಸುಳ್ಳು ಸುದ್ದಿಗಳನ್ನು ಮತ್ತು ಕೊಮುವಿಶವನ್ನು ಬಿತ್ತುತ್ತಿರುವ ಇವರ ವಿರುದ್ಧ ಪೊಲೀಸ್ ಟಾಣೆಯಲ್ಲಿ ದೂರು ದಾಕಲಾಗುವಂತಾಗಬೇಕು.

  2. ಟಿವಿಯ ವರದಿಗಾರು ತಮ್ಮ ಹೊಟ್ಟೆಪಾಡಿಗಾಗಿ ಮತ್ತು ಅಸ್ತಿತ್ವಕ್ಕಾಗಿ ಈ ರೀತಿಯ ಅತಿರೇಕಗಳನ್ನು ಮಾಡುತ್ತಾರೆ…ಹಿಡಿಯಬೇಕಾಗಿರುವುದು ಮಾಲೀಕರನ್ನು…ಚಾನೆಲ್ ಬಂದ್ ಮಾಡಿದರೇ ಮಾಧ್ಯಮ ಸ್ವಾತಂತ್ರ್ಯದ ಕತೆ ಏನು…ಇದಕ್ಕೆಲ್ಲಾ IBF(Indian Broadcasting Foundation) ಬಳಿ ಪರಿಹಾರವಿಲ್ಲವೇ?

  3. ಜನತೆಯ ಹಸಿವಿನ ನರಳಾಟ.
    ಚಾನಲ್ಸ್ ಗಳಿಗೆ ಹಬ್ಬದುಟ.
    ಸರಕಾರದ ಚೆಲ್ಲಾಟ.
    ಕೊಮುವಾದಿಗಳ ಆಟವೆ ಆಟ.
    ಕೊರೊನ ವೈರಸ್‌ ಹುಡುಕಾಟ.
    ಸಾವು-ನೊವಿನ ಸಂಖ್ಯೆ ಏಣಿಯಾಟ.
    ಭಾರತದ ಬಡವರ ಗೊಳಾಟ.
    ಏನಿದು…..ಅಬ್ಬಾಬ್ಬ…ಮೊದಿ ಮೊಡಿಯಾಟ….
    ಜಗವೆಲ್ಲ….ಸಂಕಟ….ಸಂಕಟ….MG.

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...