Homeಮುಖಪುಟದ್ವೇಷಬಿತ್ತುವ ಟಿವಿ ಚಾನೆಲ್‌ಗಳನ್ನು ಬಂದ್‌ ಮಾಡಿ: ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ

ದ್ವೇಷಬಿತ್ತುವ ಟಿವಿ ಚಾನೆಲ್‌ಗಳನ್ನು ಬಂದ್‌ ಮಾಡಿ: ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ

- Advertisement -
- Advertisement -

“ಪೂರ್ವಗ್ರಹಪೀಡಿತ, ದುರಹಂಕಾರವಿರುವ ಕನ್ನಡ ನ್ಯೂಸ್‌ ಚಾನೆಲ್‌ಗಳ ಬಂದ್‌ ಮಾಡಿ” ಎಂಬ ಘೋಷಣೆಯೊಂದಿಗೆ ಕೊರೊನಾ ವಿರುದ್ಧ ಸಮರ, ನಾಡಿನ ಹಿತಕ್ಕಾಗಿ, ದ್ವೇಷ ಪ್ರಚಾರ ವಿರೋಧಿಸಿ ಏಪ್ರಿಲ್ 12ರ ಭಾನುವಾರ ರಾತ್ರಿ 8ರಿಂದ 10 ಗಂಟೆಯವರೆಗೆ ಕನ್ನಡ ಟಿವಿ ನ್ಯೂಸ್‌ ಚಾನೆಲ್‌ ವೀಕ್ಷಣೆ ಬಂದ್‌ ಮಾಡೋಣ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕರೆ ನೀಡಲಾಗಿದೆ.

ದುಷ್ಟದನಿಗಳ ವಿರುದ್ಧ ಜನದನಿ ಎಂಬ ಹೆಸರಿನಡಿಯಲ್ಲಿ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದ್ದು #LockdownKannadaNewsChannels ಎಂಬ ಹ್ಯಾಸ್‌ಟ್ಯಾಗ್‌ ನೀಡಲಾಗಿದೆ. ಪಬ್ಲಿಕ್‌ ಟಿವಿಯ ಎಚ್‌.ಆರ್‌ ರಂಗನಾಥ್, ದಿಗ್ವಿಜಯ ಚಾನೆಲ್‌ನ ವಿಜಯ ಸಂಕೇಶ್ವರ ಮತ್ತು ಸುವರ್ಣ ಟಿವಿಯ ಅಜಿತ್‌ ಹನುಮಕ್ಕರ್‌ ರವರ ಫೋಟೊ ಹಾಕಿ ಟಿವಿ ಬಂದ್‌ ಮಾಡಿ ಎನ್ನಲಾಗಿದೆ.

ಸಾಮರಸ್ಯ ಮತ್ತು ಸಹಬಾಳ್ವೆಗಾಗಿ ದನಿಗೂಡಿಸೋಣ. ದಯವಿಟ್ಟು ಈ ಮಾಹಿತಿ ಹಂಚಿ, ಇತರರನ್ನೂ ಜೊತೆಗೂಡಿಸಿ. ಕನ್ನಡ ನಾಡಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಈ ಕಾರ್ಯಕ್ರಮಕ್ಕೆ ಚಾಲನೆ ನೀಡೋಣ ಎಂದು ಕರೆ ನೀಡಲಾಗಿದೆ.

ಈ ಕುರಿತು ಇನ್ನು ಕೆಲವರು ಕೋಮುವಾದಿಗಳನ್ನು ಸೋಲಿಸಬೇಕಾದರೆ ಒಂದೆರೆಡು ಗಂಟೆಯಲ್ಲ, ಸಂಪೂರ್ಣವಾಗಿ ಈ ಚಾನೆಲ್‌ಗಳನ್ನು ಬಂದ್‌ ಮಾಡಬೇಕು. ನಮಗೆ ನ್ಯೂಸ್‌ ಬೇಕಾದರೆ ಸಾಮಾಜಿಕ ಜಾಲತಾಣದಲ್ಲಿ ಸಿಗುತ್ತದೆ. ನಾನು ಈಗಾಗಲೇ ಈ ಕೆಲಸ ಮಾಡಿದ್ದೇನೆ ಮುಂದಿನ ಸರದಿ ನಿಮ್ಮದು ಎಂದು ಅಶ್ರಫ್‌ ಎಂ ಸಾಲೆತ್ತುರ್‌ರವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಇದು ಸ್ವಾಗತಾರ್ಹ. ಆದರೆ ಇದಿಷ್ಟೇ ಸಾಲದು. ಇವರು ಕೊಡುತ್ತಿರುವ ಸುದ್ದಿಗಳನ್ನು ವಿಮರ್ಶೆ ಮಾಡುವ ಸಾಮರ್ಥ್ಯ ಇಲ್ಲದ ಅನೇಕ ಜನಸಾಮಾನ್ಯರು, ಇವರು ತೊರಿಸುತ್ತಿರುವುದೇ ಸತ್ಯ ಎಂದು ತಿಳಿದು ಕೋಮು ವಿಶಕ್ಕೆ ಬಲಿಯಾಗುತ್ತಿದ್ದಾರೆ. ಸುಳ್ಳು ಸುದ್ದಿಗಳನ್ನು ಮತ್ತು ಕೊಮುವಿಶವನ್ನು ಬಿತ್ತುತ್ತಿರುವ ಇವರ ವಿರುದ್ಧ ಪೊಲೀಸ್ ಟಾಣೆಯಲ್ಲಿ ದೂರು ದಾಕಲಾಗುವಂತಾಗಬೇಕು.

  2. ಟಿವಿಯ ವರದಿಗಾರು ತಮ್ಮ ಹೊಟ್ಟೆಪಾಡಿಗಾಗಿ ಮತ್ತು ಅಸ್ತಿತ್ವಕ್ಕಾಗಿ ಈ ರೀತಿಯ ಅತಿರೇಕಗಳನ್ನು ಮಾಡುತ್ತಾರೆ…ಹಿಡಿಯಬೇಕಾಗಿರುವುದು ಮಾಲೀಕರನ್ನು…ಚಾನೆಲ್ ಬಂದ್ ಮಾಡಿದರೇ ಮಾಧ್ಯಮ ಸ್ವಾತಂತ್ರ್ಯದ ಕತೆ ಏನು…ಇದಕ್ಕೆಲ್ಲಾ IBF(Indian Broadcasting Foundation) ಬಳಿ ಪರಿಹಾರವಿಲ್ಲವೇ?

  3. ಜನತೆಯ ಹಸಿವಿನ ನರಳಾಟ.
    ಚಾನಲ್ಸ್ ಗಳಿಗೆ ಹಬ್ಬದುಟ.
    ಸರಕಾರದ ಚೆಲ್ಲಾಟ.
    ಕೊಮುವಾದಿಗಳ ಆಟವೆ ಆಟ.
    ಕೊರೊನ ವೈರಸ್‌ ಹುಡುಕಾಟ.
    ಸಾವು-ನೊವಿನ ಸಂಖ್ಯೆ ಏಣಿಯಾಟ.
    ಭಾರತದ ಬಡವರ ಗೊಳಾಟ.
    ಏನಿದು…..ಅಬ್ಬಾಬ್ಬ…ಮೊದಿ ಮೊಡಿಯಾಟ….
    ಜಗವೆಲ್ಲ….ಸಂಕಟ….ಸಂಕಟ….MG.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...