Homeಮುಖಪುಟದ್ವೇಷಬಿತ್ತುವ ಟಿವಿ ಚಾನೆಲ್‌ಗಳನ್ನು ಬಂದ್‌ ಮಾಡಿ: ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ

ದ್ವೇಷಬಿತ್ತುವ ಟಿವಿ ಚಾನೆಲ್‌ಗಳನ್ನು ಬಂದ್‌ ಮಾಡಿ: ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ

- Advertisement -
- Advertisement -

“ಪೂರ್ವಗ್ರಹಪೀಡಿತ, ದುರಹಂಕಾರವಿರುವ ಕನ್ನಡ ನ್ಯೂಸ್‌ ಚಾನೆಲ್‌ಗಳ ಬಂದ್‌ ಮಾಡಿ” ಎಂಬ ಘೋಷಣೆಯೊಂದಿಗೆ ಕೊರೊನಾ ವಿರುದ್ಧ ಸಮರ, ನಾಡಿನ ಹಿತಕ್ಕಾಗಿ, ದ್ವೇಷ ಪ್ರಚಾರ ವಿರೋಧಿಸಿ ಏಪ್ರಿಲ್ 12ರ ಭಾನುವಾರ ರಾತ್ರಿ 8ರಿಂದ 10 ಗಂಟೆಯವರೆಗೆ ಕನ್ನಡ ಟಿವಿ ನ್ಯೂಸ್‌ ಚಾನೆಲ್‌ ವೀಕ್ಷಣೆ ಬಂದ್‌ ಮಾಡೋಣ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕರೆ ನೀಡಲಾಗಿದೆ.

ದುಷ್ಟದನಿಗಳ ವಿರುದ್ಧ ಜನದನಿ ಎಂಬ ಹೆಸರಿನಡಿಯಲ್ಲಿ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದ್ದು #LockdownKannadaNewsChannels ಎಂಬ ಹ್ಯಾಸ್‌ಟ್ಯಾಗ್‌ ನೀಡಲಾಗಿದೆ. ಪಬ್ಲಿಕ್‌ ಟಿವಿಯ ಎಚ್‌.ಆರ್‌ ರಂಗನಾಥ್, ದಿಗ್ವಿಜಯ ಚಾನೆಲ್‌ನ ವಿಜಯ ಸಂಕೇಶ್ವರ ಮತ್ತು ಸುವರ್ಣ ಟಿವಿಯ ಅಜಿತ್‌ ಹನುಮಕ್ಕರ್‌ ರವರ ಫೋಟೊ ಹಾಕಿ ಟಿವಿ ಬಂದ್‌ ಮಾಡಿ ಎನ್ನಲಾಗಿದೆ.

ಸಾಮರಸ್ಯ ಮತ್ತು ಸಹಬಾಳ್ವೆಗಾಗಿ ದನಿಗೂಡಿಸೋಣ. ದಯವಿಟ್ಟು ಈ ಮಾಹಿತಿ ಹಂಚಿ, ಇತರರನ್ನೂ ಜೊತೆಗೂಡಿಸಿ. ಕನ್ನಡ ನಾಡಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಈ ಕಾರ್ಯಕ್ರಮಕ್ಕೆ ಚಾಲನೆ ನೀಡೋಣ ಎಂದು ಕರೆ ನೀಡಲಾಗಿದೆ.

ಈ ಕುರಿತು ಇನ್ನು ಕೆಲವರು ಕೋಮುವಾದಿಗಳನ್ನು ಸೋಲಿಸಬೇಕಾದರೆ ಒಂದೆರೆಡು ಗಂಟೆಯಲ್ಲ, ಸಂಪೂರ್ಣವಾಗಿ ಈ ಚಾನೆಲ್‌ಗಳನ್ನು ಬಂದ್‌ ಮಾಡಬೇಕು. ನಮಗೆ ನ್ಯೂಸ್‌ ಬೇಕಾದರೆ ಸಾಮಾಜಿಕ ಜಾಲತಾಣದಲ್ಲಿ ಸಿಗುತ್ತದೆ. ನಾನು ಈಗಾಗಲೇ ಈ ಕೆಲಸ ಮಾಡಿದ್ದೇನೆ ಮುಂದಿನ ಸರದಿ ನಿಮ್ಮದು ಎಂದು ಅಶ್ರಫ್‌ ಎಂ ಸಾಲೆತ್ತುರ್‌ರವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಇದು ಸ್ವಾಗತಾರ್ಹ. ಆದರೆ ಇದಿಷ್ಟೇ ಸಾಲದು. ಇವರು ಕೊಡುತ್ತಿರುವ ಸುದ್ದಿಗಳನ್ನು ವಿಮರ್ಶೆ ಮಾಡುವ ಸಾಮರ್ಥ್ಯ ಇಲ್ಲದ ಅನೇಕ ಜನಸಾಮಾನ್ಯರು, ಇವರು ತೊರಿಸುತ್ತಿರುವುದೇ ಸತ್ಯ ಎಂದು ತಿಳಿದು ಕೋಮು ವಿಶಕ್ಕೆ ಬಲಿಯಾಗುತ್ತಿದ್ದಾರೆ. ಸುಳ್ಳು ಸುದ್ದಿಗಳನ್ನು ಮತ್ತು ಕೊಮುವಿಶವನ್ನು ಬಿತ್ತುತ್ತಿರುವ ಇವರ ವಿರುದ್ಧ ಪೊಲೀಸ್ ಟಾಣೆಯಲ್ಲಿ ದೂರು ದಾಕಲಾಗುವಂತಾಗಬೇಕು.

  2. ಟಿವಿಯ ವರದಿಗಾರು ತಮ್ಮ ಹೊಟ್ಟೆಪಾಡಿಗಾಗಿ ಮತ್ತು ಅಸ್ತಿತ್ವಕ್ಕಾಗಿ ಈ ರೀತಿಯ ಅತಿರೇಕಗಳನ್ನು ಮಾಡುತ್ತಾರೆ…ಹಿಡಿಯಬೇಕಾಗಿರುವುದು ಮಾಲೀಕರನ್ನು…ಚಾನೆಲ್ ಬಂದ್ ಮಾಡಿದರೇ ಮಾಧ್ಯಮ ಸ್ವಾತಂತ್ರ್ಯದ ಕತೆ ಏನು…ಇದಕ್ಕೆಲ್ಲಾ IBF(Indian Broadcasting Foundation) ಬಳಿ ಪರಿಹಾರವಿಲ್ಲವೇ?

  3. ಜನತೆಯ ಹಸಿವಿನ ನರಳಾಟ.
    ಚಾನಲ್ಸ್ ಗಳಿಗೆ ಹಬ್ಬದುಟ.
    ಸರಕಾರದ ಚೆಲ್ಲಾಟ.
    ಕೊಮುವಾದಿಗಳ ಆಟವೆ ಆಟ.
    ಕೊರೊನ ವೈರಸ್‌ ಹುಡುಕಾಟ.
    ಸಾವು-ನೊವಿನ ಸಂಖ್ಯೆ ಏಣಿಯಾಟ.
    ಭಾರತದ ಬಡವರ ಗೊಳಾಟ.
    ಏನಿದು…..ಅಬ್ಬಾಬ್ಬ…ಮೊದಿ ಮೊಡಿಯಾಟ….
    ಜಗವೆಲ್ಲ….ಸಂಕಟ….ಸಂಕಟ….MG.

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...