Homeಮುಖಪುಟದ್ವೇಷಬಿತ್ತುವ ಟಿವಿ ಚಾನೆಲ್‌ಗಳನ್ನು ಬಂದ್‌ ಮಾಡಿ: ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ

ದ್ವೇಷಬಿತ್ತುವ ಟಿವಿ ಚಾನೆಲ್‌ಗಳನ್ನು ಬಂದ್‌ ಮಾಡಿ: ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ

- Advertisement -
- Advertisement -

“ಪೂರ್ವಗ್ರಹಪೀಡಿತ, ದುರಹಂಕಾರವಿರುವ ಕನ್ನಡ ನ್ಯೂಸ್‌ ಚಾನೆಲ್‌ಗಳ ಬಂದ್‌ ಮಾಡಿ” ಎಂಬ ಘೋಷಣೆಯೊಂದಿಗೆ ಕೊರೊನಾ ವಿರುದ್ಧ ಸಮರ, ನಾಡಿನ ಹಿತಕ್ಕಾಗಿ, ದ್ವೇಷ ಪ್ರಚಾರ ವಿರೋಧಿಸಿ ಏಪ್ರಿಲ್ 12ರ ಭಾನುವಾರ ರಾತ್ರಿ 8ರಿಂದ 10 ಗಂಟೆಯವರೆಗೆ ಕನ್ನಡ ಟಿವಿ ನ್ಯೂಸ್‌ ಚಾನೆಲ್‌ ವೀಕ್ಷಣೆ ಬಂದ್‌ ಮಾಡೋಣ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕರೆ ನೀಡಲಾಗಿದೆ.

ದುಷ್ಟದನಿಗಳ ವಿರುದ್ಧ ಜನದನಿ ಎಂಬ ಹೆಸರಿನಡಿಯಲ್ಲಿ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದ್ದು #LockdownKannadaNewsChannels ಎಂಬ ಹ್ಯಾಸ್‌ಟ್ಯಾಗ್‌ ನೀಡಲಾಗಿದೆ. ಪಬ್ಲಿಕ್‌ ಟಿವಿಯ ಎಚ್‌.ಆರ್‌ ರಂಗನಾಥ್, ದಿಗ್ವಿಜಯ ಚಾನೆಲ್‌ನ ವಿಜಯ ಸಂಕೇಶ್ವರ ಮತ್ತು ಸುವರ್ಣ ಟಿವಿಯ ಅಜಿತ್‌ ಹನುಮಕ್ಕರ್‌ ರವರ ಫೋಟೊ ಹಾಕಿ ಟಿವಿ ಬಂದ್‌ ಮಾಡಿ ಎನ್ನಲಾಗಿದೆ.

ಸಾಮರಸ್ಯ ಮತ್ತು ಸಹಬಾಳ್ವೆಗಾಗಿ ದನಿಗೂಡಿಸೋಣ. ದಯವಿಟ್ಟು ಈ ಮಾಹಿತಿ ಹಂಚಿ, ಇತರರನ್ನೂ ಜೊತೆಗೂಡಿಸಿ. ಕನ್ನಡ ನಾಡಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಈ ಕಾರ್ಯಕ್ರಮಕ್ಕೆ ಚಾಲನೆ ನೀಡೋಣ ಎಂದು ಕರೆ ನೀಡಲಾಗಿದೆ.

ಈ ಕುರಿತು ಇನ್ನು ಕೆಲವರು ಕೋಮುವಾದಿಗಳನ್ನು ಸೋಲಿಸಬೇಕಾದರೆ ಒಂದೆರೆಡು ಗಂಟೆಯಲ್ಲ, ಸಂಪೂರ್ಣವಾಗಿ ಈ ಚಾನೆಲ್‌ಗಳನ್ನು ಬಂದ್‌ ಮಾಡಬೇಕು. ನಮಗೆ ನ್ಯೂಸ್‌ ಬೇಕಾದರೆ ಸಾಮಾಜಿಕ ಜಾಲತಾಣದಲ್ಲಿ ಸಿಗುತ್ತದೆ. ನಾನು ಈಗಾಗಲೇ ಈ ಕೆಲಸ ಮಾಡಿದ್ದೇನೆ ಮುಂದಿನ ಸರದಿ ನಿಮ್ಮದು ಎಂದು ಅಶ್ರಫ್‌ ಎಂ ಸಾಲೆತ್ತುರ್‌ರವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಇದು ಸ್ವಾಗತಾರ್ಹ. ಆದರೆ ಇದಿಷ್ಟೇ ಸಾಲದು. ಇವರು ಕೊಡುತ್ತಿರುವ ಸುದ್ದಿಗಳನ್ನು ವಿಮರ್ಶೆ ಮಾಡುವ ಸಾಮರ್ಥ್ಯ ಇಲ್ಲದ ಅನೇಕ ಜನಸಾಮಾನ್ಯರು, ಇವರು ತೊರಿಸುತ್ತಿರುವುದೇ ಸತ್ಯ ಎಂದು ತಿಳಿದು ಕೋಮು ವಿಶಕ್ಕೆ ಬಲಿಯಾಗುತ್ತಿದ್ದಾರೆ. ಸುಳ್ಳು ಸುದ್ದಿಗಳನ್ನು ಮತ್ತು ಕೊಮುವಿಶವನ್ನು ಬಿತ್ತುತ್ತಿರುವ ಇವರ ವಿರುದ್ಧ ಪೊಲೀಸ್ ಟಾಣೆಯಲ್ಲಿ ದೂರು ದಾಕಲಾಗುವಂತಾಗಬೇಕು.

  2. ಟಿವಿಯ ವರದಿಗಾರು ತಮ್ಮ ಹೊಟ್ಟೆಪಾಡಿಗಾಗಿ ಮತ್ತು ಅಸ್ತಿತ್ವಕ್ಕಾಗಿ ಈ ರೀತಿಯ ಅತಿರೇಕಗಳನ್ನು ಮಾಡುತ್ತಾರೆ…ಹಿಡಿಯಬೇಕಾಗಿರುವುದು ಮಾಲೀಕರನ್ನು…ಚಾನೆಲ್ ಬಂದ್ ಮಾಡಿದರೇ ಮಾಧ್ಯಮ ಸ್ವಾತಂತ್ರ್ಯದ ಕತೆ ಏನು…ಇದಕ್ಕೆಲ್ಲಾ IBF(Indian Broadcasting Foundation) ಬಳಿ ಪರಿಹಾರವಿಲ್ಲವೇ?

  3. ಜನತೆಯ ಹಸಿವಿನ ನರಳಾಟ.
    ಚಾನಲ್ಸ್ ಗಳಿಗೆ ಹಬ್ಬದುಟ.
    ಸರಕಾರದ ಚೆಲ್ಲಾಟ.
    ಕೊಮುವಾದಿಗಳ ಆಟವೆ ಆಟ.
    ಕೊರೊನ ವೈರಸ್‌ ಹುಡುಕಾಟ.
    ಸಾವು-ನೊವಿನ ಸಂಖ್ಯೆ ಏಣಿಯಾಟ.
    ಭಾರತದ ಬಡವರ ಗೊಳಾಟ.
    ಏನಿದು…..ಅಬ್ಬಾಬ್ಬ…ಮೊದಿ ಮೊಡಿಯಾಟ….
    ಜಗವೆಲ್ಲ….ಸಂಕಟ….ಸಂಕಟ….MG.

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...