Homeಮುಖಪುಟದ್ವೇಷಬಿತ್ತುವ ಟಿವಿ ಚಾನೆಲ್‌ಗಳನ್ನು ಬಂದ್‌ ಮಾಡಿ: ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ

ದ್ವೇಷಬಿತ್ತುವ ಟಿವಿ ಚಾನೆಲ್‌ಗಳನ್ನು ಬಂದ್‌ ಮಾಡಿ: ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ

- Advertisement -
- Advertisement -

“ಪೂರ್ವಗ್ರಹಪೀಡಿತ, ದುರಹಂಕಾರವಿರುವ ಕನ್ನಡ ನ್ಯೂಸ್‌ ಚಾನೆಲ್‌ಗಳ ಬಂದ್‌ ಮಾಡಿ” ಎಂಬ ಘೋಷಣೆಯೊಂದಿಗೆ ಕೊರೊನಾ ವಿರುದ್ಧ ಸಮರ, ನಾಡಿನ ಹಿತಕ್ಕಾಗಿ, ದ್ವೇಷ ಪ್ರಚಾರ ವಿರೋಧಿಸಿ ಏಪ್ರಿಲ್ 12ರ ಭಾನುವಾರ ರಾತ್ರಿ 8ರಿಂದ 10 ಗಂಟೆಯವರೆಗೆ ಕನ್ನಡ ಟಿವಿ ನ್ಯೂಸ್‌ ಚಾನೆಲ್‌ ವೀಕ್ಷಣೆ ಬಂದ್‌ ಮಾಡೋಣ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕರೆ ನೀಡಲಾಗಿದೆ.

ದುಷ್ಟದನಿಗಳ ವಿರುದ್ಧ ಜನದನಿ ಎಂಬ ಹೆಸರಿನಡಿಯಲ್ಲಿ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದ್ದು #LockdownKannadaNewsChannels ಎಂಬ ಹ್ಯಾಸ್‌ಟ್ಯಾಗ್‌ ನೀಡಲಾಗಿದೆ. ಪಬ್ಲಿಕ್‌ ಟಿವಿಯ ಎಚ್‌.ಆರ್‌ ರಂಗನಾಥ್, ದಿಗ್ವಿಜಯ ಚಾನೆಲ್‌ನ ವಿಜಯ ಸಂಕೇಶ್ವರ ಮತ್ತು ಸುವರ್ಣ ಟಿವಿಯ ಅಜಿತ್‌ ಹನುಮಕ್ಕರ್‌ ರವರ ಫೋಟೊ ಹಾಕಿ ಟಿವಿ ಬಂದ್‌ ಮಾಡಿ ಎನ್ನಲಾಗಿದೆ.

ಸಾಮರಸ್ಯ ಮತ್ತು ಸಹಬಾಳ್ವೆಗಾಗಿ ದನಿಗೂಡಿಸೋಣ. ದಯವಿಟ್ಟು ಈ ಮಾಹಿತಿ ಹಂಚಿ, ಇತರರನ್ನೂ ಜೊತೆಗೂಡಿಸಿ. ಕನ್ನಡ ನಾಡಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಈ ಕಾರ್ಯಕ್ರಮಕ್ಕೆ ಚಾಲನೆ ನೀಡೋಣ ಎಂದು ಕರೆ ನೀಡಲಾಗಿದೆ.

ಈ ಕುರಿತು ಇನ್ನು ಕೆಲವರು ಕೋಮುವಾದಿಗಳನ್ನು ಸೋಲಿಸಬೇಕಾದರೆ ಒಂದೆರೆಡು ಗಂಟೆಯಲ್ಲ, ಸಂಪೂರ್ಣವಾಗಿ ಈ ಚಾನೆಲ್‌ಗಳನ್ನು ಬಂದ್‌ ಮಾಡಬೇಕು. ನಮಗೆ ನ್ಯೂಸ್‌ ಬೇಕಾದರೆ ಸಾಮಾಜಿಕ ಜಾಲತಾಣದಲ್ಲಿ ಸಿಗುತ್ತದೆ. ನಾನು ಈಗಾಗಲೇ ಈ ಕೆಲಸ ಮಾಡಿದ್ದೇನೆ ಮುಂದಿನ ಸರದಿ ನಿಮ್ಮದು ಎಂದು ಅಶ್ರಫ್‌ ಎಂ ಸಾಲೆತ್ತುರ್‌ರವರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

  1. ಇದು ಸ್ವಾಗತಾರ್ಹ. ಆದರೆ ಇದಿಷ್ಟೇ ಸಾಲದು. ಇವರು ಕೊಡುತ್ತಿರುವ ಸುದ್ದಿಗಳನ್ನು ವಿಮರ್ಶೆ ಮಾಡುವ ಸಾಮರ್ಥ್ಯ ಇಲ್ಲದ ಅನೇಕ ಜನಸಾಮಾನ್ಯರು, ಇವರು ತೊರಿಸುತ್ತಿರುವುದೇ ಸತ್ಯ ಎಂದು ತಿಳಿದು ಕೋಮು ವಿಶಕ್ಕೆ ಬಲಿಯಾಗುತ್ತಿದ್ದಾರೆ. ಸುಳ್ಳು ಸುದ್ದಿಗಳನ್ನು ಮತ್ತು ಕೊಮುವಿಶವನ್ನು ಬಿತ್ತುತ್ತಿರುವ ಇವರ ವಿರುದ್ಧ ಪೊಲೀಸ್ ಟಾಣೆಯಲ್ಲಿ ದೂರು ದಾಕಲಾಗುವಂತಾಗಬೇಕು.

  2. ಟಿವಿಯ ವರದಿಗಾರು ತಮ್ಮ ಹೊಟ್ಟೆಪಾಡಿಗಾಗಿ ಮತ್ತು ಅಸ್ತಿತ್ವಕ್ಕಾಗಿ ಈ ರೀತಿಯ ಅತಿರೇಕಗಳನ್ನು ಮಾಡುತ್ತಾರೆ…ಹಿಡಿಯಬೇಕಾಗಿರುವುದು ಮಾಲೀಕರನ್ನು…ಚಾನೆಲ್ ಬಂದ್ ಮಾಡಿದರೇ ಮಾಧ್ಯಮ ಸ್ವಾತಂತ್ರ್ಯದ ಕತೆ ಏನು…ಇದಕ್ಕೆಲ್ಲಾ IBF(Indian Broadcasting Foundation) ಬಳಿ ಪರಿಹಾರವಿಲ್ಲವೇ?

  3. ಜನತೆಯ ಹಸಿವಿನ ನರಳಾಟ.
    ಚಾನಲ್ಸ್ ಗಳಿಗೆ ಹಬ್ಬದುಟ.
    ಸರಕಾರದ ಚೆಲ್ಲಾಟ.
    ಕೊಮುವಾದಿಗಳ ಆಟವೆ ಆಟ.
    ಕೊರೊನ ವೈರಸ್‌ ಹುಡುಕಾಟ.
    ಸಾವು-ನೊವಿನ ಸಂಖ್ಯೆ ಏಣಿಯಾಟ.
    ಭಾರತದ ಬಡವರ ಗೊಳಾಟ.
    ಏನಿದು…..ಅಬ್ಬಾಬ್ಬ…ಮೊದಿ ಮೊಡಿಯಾಟ….
    ಜಗವೆಲ್ಲ….ಸಂಕಟ….ಸಂಕಟ….MG.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...