Homeಮುಖಪುಟಮೆಜೆಸ್ಟಿಕ್‌ಗೆ ಕಾಂಗ್ರೆಸ್‌ ಮುಖಂಡರ ದಂಡು: ಸಿದ್ದು, ಡಿಕೆಶಿಯಿಂದ ಕಾರ್ಮಿಕರ ಜೊತೆ ಮಾತುಕತೆ

ಮೆಜೆಸ್ಟಿಕ್‌ಗೆ ಕಾಂಗ್ರೆಸ್‌ ಮುಖಂಡರ ದಂಡು: ಸಿದ್ದು, ಡಿಕೆಶಿಯಿಂದ ಕಾರ್ಮಿಕರ ಜೊತೆ ಮಾತುಕತೆ

- Advertisement -
- Advertisement -

ವಲಸೆ ಕಾರ್ಮಿಕರು ಬೆಂಗಳೂರಿನಿಂದ ತಮ್ಮ ಊರುಗಳಿಗೆ ತಲುಪಲು ಇನ್ನು ಹರಸಾಹಸ ಪಡುತ್ತಿದ್ದಾರೆ. ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಕಾಂಗ್ರೆಸ್‌ ಒಂದು ಕೋಟಿ ರೂ ನೆರವು ನೀಡಿದೆ. ಅದರ ಬೆನ್ನಿಗೆ ರಾಜ್ಯ ಸರ್ಕಾರ ಮೂರು ದಿನಗಳ ಕಾಲ ಉಚಿತ ಪ್ರಯಾಣ ಎಂದು ಘೋಷಿಸಿದೆ. ಆದರೆ ಸಾಕಷ್ಟು ಸಂಖ್ಯೆಯಲ್ಲಿ ಬಸ್‌ಗಳಿಲ್ಲ ಎಂಬ ಆರೋಪ ಕೇಳಿಬಂದಿದೆ.

ಈ ಕುರಿತು ಕಾರ್ಮಿಕರ ಕಷ್ಟ ಕೇಳಲು ಇಂದು ಕಾಂಗ್ರೆಸ್‌ ಪಕ್ಷದ ನಾಯಕರ ದಂಡೇ ಬೆಂಗಳೂರಿನ ಮೆಜೆಸ್ಟಿಕ್‌ಗೆ ಆಗಮಿಸಿತ್ತು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌, ಮಾಜಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಹಿರಿಯ ಮುಖಂಡ ಹೆಚ್‌.ಕೆ ಪಾಟೀಲ್, ವಿ.ಎಸ್‌ ಉಗ್ರಪ್ಪ‌ ಉಪಸ್ಥಿತರಿದ್ದು ಕಾರ್ಮಿಕರನ್ನು ಮಾತನಾಡಿಸಿದರು.

ಸಿದ್ದರಾಮಯ್ಯನವರು ಕೆಲ ಕಾರ್ಮಿಕರನ್ನು ಮಾತನಾಡಿಸಿ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದರು. ಜೊತೆಗೆ ಕೊರೊನಾ ಮುಗಿದ ನಂತರ ಕೆಲಸಕ್ಕೆ ವಾಪಸ್‌ ಬೆಂಗಳೂರಿಗೆ ಬರುತ್ತೀರಾ ಎಂದು ಕೇಳಿದರು.

“ವಲಸೆ ಕಾರ್ಮಿಕರು ಬಹಳ ವರ್ಷದಿಂದ ಇಲ್ಲಿ ಕೆಲಸ ಮಾಡಿದ್ದು ಅವರಿಗೆ ಊಟು ವಸತಿಯ ಕೊರತೆಯುಂಟಾಗಿದೆ. ನಾವು ಅವರಿಗೆ ಊಟದ ಕಿಟ್‌ಗಳನ್ನು ನೀಡಿ, ಆರೋಗ್ಯ ತಪಾಸಣೆ ನಡೆಸಿ ಉಚಿತವಾಗಿ ಅವರ ಊರುಗಳಿಗೆ ಕಳಿಸಿಕೊಡಬೇಕೆಂದು ಒತ್ತಾಯಿಸಿದ್ದೇವು. ಆದರೆ ಸರ್ಕಾರ ಎರಡುಪಟ್ಟು ಬಸ್‌ ದರ ತೆಗೆದುಕೊಳ್ಳುತ್ತಿತ್ತು. ಇದಕ್ಕೆ ಹಣದ ಕೊರತೆಯಿದೆ ಎಂದು ಸರ್ಕಾರ ಹೇಳಿತ್ತು. ಅದಕ್ಕೆ ನಾವು ನಮ್ಮ ಪಕ್ಷದಿಂದ ಕಾರ್ಮಿಕರ ಬಸ್‌ ಚಾರ್ಜ್‌ ನಾವೇ ಕೊಡಲು ತೀರ್ಮಾನಿಸಿದೆವು. ಅದಕ್ಕಾಗಿ ಒಂದು ಕೋಟಿ ರೂ ನೆರವು ಕೊಟ್ಟಿದ್ದೇವೆ. ನಂತರ ಸರ್ಕಾರಕ್ಕೆ ಜ್ಞಾನೋದಯವಾಗಿ ಉಚಿತ ಎಂದಿದ್ದಾರೆ. ಆದರೂ ಬಹಳಷ್ಟು ಊರುಗಳಿಗೆ ಇನ್ನು ಬಸ್‌ ಬಿಟ್ಟಿಲ್ಲ. ಬೆಳಗಾಂ, ಹಾವೇರಿ ಜನ ಕಾಯುತ್ತಿದ್ದಾರೆ. ಖಾಸಗಿ ಬಸ್‌ ವ್ಯವಸ್ಥೆ ಮಾಡಿಯಾದರೂ ಸರಿ ಅವರನ್ನು ಊರಿಗೆ ಕಳಿಸಬೇಕಿದೆ” ಎಂದು ಸಿದ್ದರಾಮಯ್ಯ ತಿಳಿಸಿದರು.

ಡಿ.ಕೆ ಶಿವಕುಮಾರ್‌ ಮಾತನಾಡಿ, ಈ ಸರ್ಕಾರಕ್ಕೆ ಕಣ್ಣು ಕಿವಿ ಏನೂ ಇಲ್ಲ. ನಾನು ನಿನ್ನೆಯೇ ಹೇಳಿದಂತೆ ಭಿಕ್ಷೆ ಬೇಡಿದರೂ ಸರಿಯೇ ಕಾರ್ಮಿಕರ ಬಸ್‌ ಹಣ ನಾವು ಕೊಡುತ್ತೇವೆ ಎಂದಿದ್ದೆ. ಅದೇ ರೀತಿ ಇಂದು ಒಂದು ಕೋಟಿ ಕೊಡಲು ಬಂದಿದ್ದೇವೆ. ಎಲ್ಲಾ ರಾಜ್ಯಗಳಲ್ಲಿ ಉಚಿತವಾಗಿ ಕಾರ್ಮಿಕರನ್ನು ಕಳಿಸಿಕೊಡುತ್ತಿದ್ದಾರೆ. ಆದರೆ ನಮ್ಮ ರಾಜ್ಯದ 25 ಎಂಪಿಗಳು ಮನೆಯಲ್ಲಿ ಕೂತಿದ್ದಾರೆ ಎಂದರು.

ನಾವು ಒಂದಷ್ಟು ಊಟದ ಪ್ಯಾಕೆಟ್‌ಗಳನ್ನು ಕಾರ್ಮಿಕರಿಗೆ ಒದಗಿಸಿದ್ದೇವೆ. ಇಲ್ಲಿನ ಪರಿಸ್ಥಿತಿ ಮತ್ತು ವ್ಯವಸ್ಥೆ ಹೇಗಿದೆ ಎಂದು ಪರೀಶಿಲಿಸಲು ಬಂದಿದ್ದೇವೆ. ಆದರೆ ಸರ್ಕಾರ ಇನ್ನೂ ಸಮರ್ಪಕ ವ್ಯವಸ್ಥೆ ಮಾಡಿಲ್ಲ. ಜನ ಸಂಕಷ್ಟದಲ್ಲಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳು ಮತ್ತು ಅಧಿಕಾರಿಗಳ ಜೊತೆ ಮಾತನಾಡುತ್ತೇವೆ ಎಂದರು. ಅಲ್ಲದೇ ಕಾರ್ಮಿಕರು ಕೊರೊನಾ ಮುಗಿದ ನಂತರ ಬೆಂಗಳೂರಿಗೆ ವಾಪಸ್‌ ಬರಬೇಕೆಂದು ಮನವಿ ಮಾಡಿದರು. ಬಸ್‌ ಗಳು ಸಾಲುತ್ತಿಲ್ಲ ಎಂಬ ಪ್ರಶ್ನೆಗೆ ಖಾಸಗಿಯವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿ. ನಾವು ಕೂಡ ಹಣ ಕೊಡುತ್ತೇವೆ ಎಂದರು.


ಇದನ್ನೂ ಓದಿ: ಕಾರ್ಮಿಕರ ಪ್ರಯಾಣ: ಕಾಂಗ್ರೆಸ್‌ನಿಂದ 1 ಕೋಟಿ ರೂ ನೆರವು ಘೋಷಿಸಿದ ಬೆನ್ನಲ್ಲೇ ಉಚಿತ ಪ್ರಯಾಣ ಘೋಷಿಸಿದ ಸಿಎಂ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...