Homeಮುಖಪುಟಮೆಜೆಸ್ಟಿಕ್‌ಗೆ ಕಾಂಗ್ರೆಸ್‌ ಮುಖಂಡರ ದಂಡು: ಸಿದ್ದು, ಡಿಕೆಶಿಯಿಂದ ಕಾರ್ಮಿಕರ ಜೊತೆ ಮಾತುಕತೆ

ಮೆಜೆಸ್ಟಿಕ್‌ಗೆ ಕಾಂಗ್ರೆಸ್‌ ಮುಖಂಡರ ದಂಡು: ಸಿದ್ದು, ಡಿಕೆಶಿಯಿಂದ ಕಾರ್ಮಿಕರ ಜೊತೆ ಮಾತುಕತೆ

- Advertisement -
- Advertisement -

ವಲಸೆ ಕಾರ್ಮಿಕರು ಬೆಂಗಳೂರಿನಿಂದ ತಮ್ಮ ಊರುಗಳಿಗೆ ತಲುಪಲು ಇನ್ನು ಹರಸಾಹಸ ಪಡುತ್ತಿದ್ದಾರೆ. ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಕಾಂಗ್ರೆಸ್‌ ಒಂದು ಕೋಟಿ ರೂ ನೆರವು ನೀಡಿದೆ. ಅದರ ಬೆನ್ನಿಗೆ ರಾಜ್ಯ ಸರ್ಕಾರ ಮೂರು ದಿನಗಳ ಕಾಲ ಉಚಿತ ಪ್ರಯಾಣ ಎಂದು ಘೋಷಿಸಿದೆ. ಆದರೆ ಸಾಕಷ್ಟು ಸಂಖ್ಯೆಯಲ್ಲಿ ಬಸ್‌ಗಳಿಲ್ಲ ಎಂಬ ಆರೋಪ ಕೇಳಿಬಂದಿದೆ.

ಈ ಕುರಿತು ಕಾರ್ಮಿಕರ ಕಷ್ಟ ಕೇಳಲು ಇಂದು ಕಾಂಗ್ರೆಸ್‌ ಪಕ್ಷದ ನಾಯಕರ ದಂಡೇ ಬೆಂಗಳೂರಿನ ಮೆಜೆಸ್ಟಿಕ್‌ಗೆ ಆಗಮಿಸಿತ್ತು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌, ಮಾಜಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಹಿರಿಯ ಮುಖಂಡ ಹೆಚ್‌.ಕೆ ಪಾಟೀಲ್, ವಿ.ಎಸ್‌ ಉಗ್ರಪ್ಪ‌ ಉಪಸ್ಥಿತರಿದ್ದು ಕಾರ್ಮಿಕರನ್ನು ಮಾತನಾಡಿಸಿದರು.

ಸಿದ್ದರಾಮಯ್ಯನವರು ಕೆಲ ಕಾರ್ಮಿಕರನ್ನು ಮಾತನಾಡಿಸಿ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದರು. ಜೊತೆಗೆ ಕೊರೊನಾ ಮುಗಿದ ನಂತರ ಕೆಲಸಕ್ಕೆ ವಾಪಸ್‌ ಬೆಂಗಳೂರಿಗೆ ಬರುತ್ತೀರಾ ಎಂದು ಕೇಳಿದರು.

“ವಲಸೆ ಕಾರ್ಮಿಕರು ಬಹಳ ವರ್ಷದಿಂದ ಇಲ್ಲಿ ಕೆಲಸ ಮಾಡಿದ್ದು ಅವರಿಗೆ ಊಟು ವಸತಿಯ ಕೊರತೆಯುಂಟಾಗಿದೆ. ನಾವು ಅವರಿಗೆ ಊಟದ ಕಿಟ್‌ಗಳನ್ನು ನೀಡಿ, ಆರೋಗ್ಯ ತಪಾಸಣೆ ನಡೆಸಿ ಉಚಿತವಾಗಿ ಅವರ ಊರುಗಳಿಗೆ ಕಳಿಸಿಕೊಡಬೇಕೆಂದು ಒತ್ತಾಯಿಸಿದ್ದೇವು. ಆದರೆ ಸರ್ಕಾರ ಎರಡುಪಟ್ಟು ಬಸ್‌ ದರ ತೆಗೆದುಕೊಳ್ಳುತ್ತಿತ್ತು. ಇದಕ್ಕೆ ಹಣದ ಕೊರತೆಯಿದೆ ಎಂದು ಸರ್ಕಾರ ಹೇಳಿತ್ತು. ಅದಕ್ಕೆ ನಾವು ನಮ್ಮ ಪಕ್ಷದಿಂದ ಕಾರ್ಮಿಕರ ಬಸ್‌ ಚಾರ್ಜ್‌ ನಾವೇ ಕೊಡಲು ತೀರ್ಮಾನಿಸಿದೆವು. ಅದಕ್ಕಾಗಿ ಒಂದು ಕೋಟಿ ರೂ ನೆರವು ಕೊಟ್ಟಿದ್ದೇವೆ. ನಂತರ ಸರ್ಕಾರಕ್ಕೆ ಜ್ಞಾನೋದಯವಾಗಿ ಉಚಿತ ಎಂದಿದ್ದಾರೆ. ಆದರೂ ಬಹಳಷ್ಟು ಊರುಗಳಿಗೆ ಇನ್ನು ಬಸ್‌ ಬಿಟ್ಟಿಲ್ಲ. ಬೆಳಗಾಂ, ಹಾವೇರಿ ಜನ ಕಾಯುತ್ತಿದ್ದಾರೆ. ಖಾಸಗಿ ಬಸ್‌ ವ್ಯವಸ್ಥೆ ಮಾಡಿಯಾದರೂ ಸರಿ ಅವರನ್ನು ಊರಿಗೆ ಕಳಿಸಬೇಕಿದೆ” ಎಂದು ಸಿದ್ದರಾಮಯ್ಯ ತಿಳಿಸಿದರು.

ಡಿ.ಕೆ ಶಿವಕುಮಾರ್‌ ಮಾತನಾಡಿ, ಈ ಸರ್ಕಾರಕ್ಕೆ ಕಣ್ಣು ಕಿವಿ ಏನೂ ಇಲ್ಲ. ನಾನು ನಿನ್ನೆಯೇ ಹೇಳಿದಂತೆ ಭಿಕ್ಷೆ ಬೇಡಿದರೂ ಸರಿಯೇ ಕಾರ್ಮಿಕರ ಬಸ್‌ ಹಣ ನಾವು ಕೊಡುತ್ತೇವೆ ಎಂದಿದ್ದೆ. ಅದೇ ರೀತಿ ಇಂದು ಒಂದು ಕೋಟಿ ಕೊಡಲು ಬಂದಿದ್ದೇವೆ. ಎಲ್ಲಾ ರಾಜ್ಯಗಳಲ್ಲಿ ಉಚಿತವಾಗಿ ಕಾರ್ಮಿಕರನ್ನು ಕಳಿಸಿಕೊಡುತ್ತಿದ್ದಾರೆ. ಆದರೆ ನಮ್ಮ ರಾಜ್ಯದ 25 ಎಂಪಿಗಳು ಮನೆಯಲ್ಲಿ ಕೂತಿದ್ದಾರೆ ಎಂದರು.

ನಾವು ಒಂದಷ್ಟು ಊಟದ ಪ್ಯಾಕೆಟ್‌ಗಳನ್ನು ಕಾರ್ಮಿಕರಿಗೆ ಒದಗಿಸಿದ್ದೇವೆ. ಇಲ್ಲಿನ ಪರಿಸ್ಥಿತಿ ಮತ್ತು ವ್ಯವಸ್ಥೆ ಹೇಗಿದೆ ಎಂದು ಪರೀಶಿಲಿಸಲು ಬಂದಿದ್ದೇವೆ. ಆದರೆ ಸರ್ಕಾರ ಇನ್ನೂ ಸಮರ್ಪಕ ವ್ಯವಸ್ಥೆ ಮಾಡಿಲ್ಲ. ಜನ ಸಂಕಷ್ಟದಲ್ಲಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳು ಮತ್ತು ಅಧಿಕಾರಿಗಳ ಜೊತೆ ಮಾತನಾಡುತ್ತೇವೆ ಎಂದರು. ಅಲ್ಲದೇ ಕಾರ್ಮಿಕರು ಕೊರೊನಾ ಮುಗಿದ ನಂತರ ಬೆಂಗಳೂರಿಗೆ ವಾಪಸ್‌ ಬರಬೇಕೆಂದು ಮನವಿ ಮಾಡಿದರು. ಬಸ್‌ ಗಳು ಸಾಲುತ್ತಿಲ್ಲ ಎಂಬ ಪ್ರಶ್ನೆಗೆ ಖಾಸಗಿಯವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿ. ನಾವು ಕೂಡ ಹಣ ಕೊಡುತ್ತೇವೆ ಎಂದರು.


ಇದನ್ನೂ ಓದಿ: ಕಾರ್ಮಿಕರ ಪ್ರಯಾಣ: ಕಾಂಗ್ರೆಸ್‌ನಿಂದ 1 ಕೋಟಿ ರೂ ನೆರವು ಘೋಷಿಸಿದ ಬೆನ್ನಲ್ಲೇ ಉಚಿತ ಪ್ರಯಾಣ ಘೋಷಿಸಿದ ಸಿಎಂ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...