Homeಮುಖಪುಟಮೆಜೆಸ್ಟಿಕ್‌ಗೆ ಕಾಂಗ್ರೆಸ್‌ ಮುಖಂಡರ ದಂಡು: ಸಿದ್ದು, ಡಿಕೆಶಿಯಿಂದ ಕಾರ್ಮಿಕರ ಜೊತೆ ಮಾತುಕತೆ

ಮೆಜೆಸ್ಟಿಕ್‌ಗೆ ಕಾಂಗ್ರೆಸ್‌ ಮುಖಂಡರ ದಂಡು: ಸಿದ್ದು, ಡಿಕೆಶಿಯಿಂದ ಕಾರ್ಮಿಕರ ಜೊತೆ ಮಾತುಕತೆ

- Advertisement -
- Advertisement -

ವಲಸೆ ಕಾರ್ಮಿಕರು ಬೆಂಗಳೂರಿನಿಂದ ತಮ್ಮ ಊರುಗಳಿಗೆ ತಲುಪಲು ಇನ್ನು ಹರಸಾಹಸ ಪಡುತ್ತಿದ್ದಾರೆ. ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಕಾಂಗ್ರೆಸ್‌ ಒಂದು ಕೋಟಿ ರೂ ನೆರವು ನೀಡಿದೆ. ಅದರ ಬೆನ್ನಿಗೆ ರಾಜ್ಯ ಸರ್ಕಾರ ಮೂರು ದಿನಗಳ ಕಾಲ ಉಚಿತ ಪ್ರಯಾಣ ಎಂದು ಘೋಷಿಸಿದೆ. ಆದರೆ ಸಾಕಷ್ಟು ಸಂಖ್ಯೆಯಲ್ಲಿ ಬಸ್‌ಗಳಿಲ್ಲ ಎಂಬ ಆರೋಪ ಕೇಳಿಬಂದಿದೆ.

ಈ ಕುರಿತು ಕಾರ್ಮಿಕರ ಕಷ್ಟ ಕೇಳಲು ಇಂದು ಕಾಂಗ್ರೆಸ್‌ ಪಕ್ಷದ ನಾಯಕರ ದಂಡೇ ಬೆಂಗಳೂರಿನ ಮೆಜೆಸ್ಟಿಕ್‌ಗೆ ಆಗಮಿಸಿತ್ತು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌, ಮಾಜಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಹಿರಿಯ ಮುಖಂಡ ಹೆಚ್‌.ಕೆ ಪಾಟೀಲ್, ವಿ.ಎಸ್‌ ಉಗ್ರಪ್ಪ‌ ಉಪಸ್ಥಿತರಿದ್ದು ಕಾರ್ಮಿಕರನ್ನು ಮಾತನಾಡಿಸಿದರು.

ಸಿದ್ದರಾಮಯ್ಯನವರು ಕೆಲ ಕಾರ್ಮಿಕರನ್ನು ಮಾತನಾಡಿಸಿ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದರು. ಜೊತೆಗೆ ಕೊರೊನಾ ಮುಗಿದ ನಂತರ ಕೆಲಸಕ್ಕೆ ವಾಪಸ್‌ ಬೆಂಗಳೂರಿಗೆ ಬರುತ್ತೀರಾ ಎಂದು ಕೇಳಿದರು.

“ವಲಸೆ ಕಾರ್ಮಿಕರು ಬಹಳ ವರ್ಷದಿಂದ ಇಲ್ಲಿ ಕೆಲಸ ಮಾಡಿದ್ದು ಅವರಿಗೆ ಊಟು ವಸತಿಯ ಕೊರತೆಯುಂಟಾಗಿದೆ. ನಾವು ಅವರಿಗೆ ಊಟದ ಕಿಟ್‌ಗಳನ್ನು ನೀಡಿ, ಆರೋಗ್ಯ ತಪಾಸಣೆ ನಡೆಸಿ ಉಚಿತವಾಗಿ ಅವರ ಊರುಗಳಿಗೆ ಕಳಿಸಿಕೊಡಬೇಕೆಂದು ಒತ್ತಾಯಿಸಿದ್ದೇವು. ಆದರೆ ಸರ್ಕಾರ ಎರಡುಪಟ್ಟು ಬಸ್‌ ದರ ತೆಗೆದುಕೊಳ್ಳುತ್ತಿತ್ತು. ಇದಕ್ಕೆ ಹಣದ ಕೊರತೆಯಿದೆ ಎಂದು ಸರ್ಕಾರ ಹೇಳಿತ್ತು. ಅದಕ್ಕೆ ನಾವು ನಮ್ಮ ಪಕ್ಷದಿಂದ ಕಾರ್ಮಿಕರ ಬಸ್‌ ಚಾರ್ಜ್‌ ನಾವೇ ಕೊಡಲು ತೀರ್ಮಾನಿಸಿದೆವು. ಅದಕ್ಕಾಗಿ ಒಂದು ಕೋಟಿ ರೂ ನೆರವು ಕೊಟ್ಟಿದ್ದೇವೆ. ನಂತರ ಸರ್ಕಾರಕ್ಕೆ ಜ್ಞಾನೋದಯವಾಗಿ ಉಚಿತ ಎಂದಿದ್ದಾರೆ. ಆದರೂ ಬಹಳಷ್ಟು ಊರುಗಳಿಗೆ ಇನ್ನು ಬಸ್‌ ಬಿಟ್ಟಿಲ್ಲ. ಬೆಳಗಾಂ, ಹಾವೇರಿ ಜನ ಕಾಯುತ್ತಿದ್ದಾರೆ. ಖಾಸಗಿ ಬಸ್‌ ವ್ಯವಸ್ಥೆ ಮಾಡಿಯಾದರೂ ಸರಿ ಅವರನ್ನು ಊರಿಗೆ ಕಳಿಸಬೇಕಿದೆ” ಎಂದು ಸಿದ್ದರಾಮಯ್ಯ ತಿಳಿಸಿದರು.

ಡಿ.ಕೆ ಶಿವಕುಮಾರ್‌ ಮಾತನಾಡಿ, ಈ ಸರ್ಕಾರಕ್ಕೆ ಕಣ್ಣು ಕಿವಿ ಏನೂ ಇಲ್ಲ. ನಾನು ನಿನ್ನೆಯೇ ಹೇಳಿದಂತೆ ಭಿಕ್ಷೆ ಬೇಡಿದರೂ ಸರಿಯೇ ಕಾರ್ಮಿಕರ ಬಸ್‌ ಹಣ ನಾವು ಕೊಡುತ್ತೇವೆ ಎಂದಿದ್ದೆ. ಅದೇ ರೀತಿ ಇಂದು ಒಂದು ಕೋಟಿ ಕೊಡಲು ಬಂದಿದ್ದೇವೆ. ಎಲ್ಲಾ ರಾಜ್ಯಗಳಲ್ಲಿ ಉಚಿತವಾಗಿ ಕಾರ್ಮಿಕರನ್ನು ಕಳಿಸಿಕೊಡುತ್ತಿದ್ದಾರೆ. ಆದರೆ ನಮ್ಮ ರಾಜ್ಯದ 25 ಎಂಪಿಗಳು ಮನೆಯಲ್ಲಿ ಕೂತಿದ್ದಾರೆ ಎಂದರು.

ನಾವು ಒಂದಷ್ಟು ಊಟದ ಪ್ಯಾಕೆಟ್‌ಗಳನ್ನು ಕಾರ್ಮಿಕರಿಗೆ ಒದಗಿಸಿದ್ದೇವೆ. ಇಲ್ಲಿನ ಪರಿಸ್ಥಿತಿ ಮತ್ತು ವ್ಯವಸ್ಥೆ ಹೇಗಿದೆ ಎಂದು ಪರೀಶಿಲಿಸಲು ಬಂದಿದ್ದೇವೆ. ಆದರೆ ಸರ್ಕಾರ ಇನ್ನೂ ಸಮರ್ಪಕ ವ್ಯವಸ್ಥೆ ಮಾಡಿಲ್ಲ. ಜನ ಸಂಕಷ್ಟದಲ್ಲಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳು ಮತ್ತು ಅಧಿಕಾರಿಗಳ ಜೊತೆ ಮಾತನಾಡುತ್ತೇವೆ ಎಂದರು. ಅಲ್ಲದೇ ಕಾರ್ಮಿಕರು ಕೊರೊನಾ ಮುಗಿದ ನಂತರ ಬೆಂಗಳೂರಿಗೆ ವಾಪಸ್‌ ಬರಬೇಕೆಂದು ಮನವಿ ಮಾಡಿದರು. ಬಸ್‌ ಗಳು ಸಾಲುತ್ತಿಲ್ಲ ಎಂಬ ಪ್ರಶ್ನೆಗೆ ಖಾಸಗಿಯವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿ. ನಾವು ಕೂಡ ಹಣ ಕೊಡುತ್ತೇವೆ ಎಂದರು.


ಇದನ್ನೂ ಓದಿ: ಕಾರ್ಮಿಕರ ಪ್ರಯಾಣ: ಕಾಂಗ್ರೆಸ್‌ನಿಂದ 1 ಕೋಟಿ ರೂ ನೆರವು ಘೋಷಿಸಿದ ಬೆನ್ನಲ್ಲೇ ಉಚಿತ ಪ್ರಯಾಣ ಘೋಷಿಸಿದ ಸಿಎಂ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...