Homeಮುಖಪುಟಮೆಜೆಸ್ಟಿಕ್‌ಗೆ ಕಾಂಗ್ರೆಸ್‌ ಮುಖಂಡರ ದಂಡು: ಸಿದ್ದು, ಡಿಕೆಶಿಯಿಂದ ಕಾರ್ಮಿಕರ ಜೊತೆ ಮಾತುಕತೆ

ಮೆಜೆಸ್ಟಿಕ್‌ಗೆ ಕಾಂಗ್ರೆಸ್‌ ಮುಖಂಡರ ದಂಡು: ಸಿದ್ದು, ಡಿಕೆಶಿಯಿಂದ ಕಾರ್ಮಿಕರ ಜೊತೆ ಮಾತುಕತೆ

- Advertisement -
- Advertisement -

ವಲಸೆ ಕಾರ್ಮಿಕರು ಬೆಂಗಳೂರಿನಿಂದ ತಮ್ಮ ಊರುಗಳಿಗೆ ತಲುಪಲು ಇನ್ನು ಹರಸಾಹಸ ಪಡುತ್ತಿದ್ದಾರೆ. ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಕಾಂಗ್ರೆಸ್‌ ಒಂದು ಕೋಟಿ ರೂ ನೆರವು ನೀಡಿದೆ. ಅದರ ಬೆನ್ನಿಗೆ ರಾಜ್ಯ ಸರ್ಕಾರ ಮೂರು ದಿನಗಳ ಕಾಲ ಉಚಿತ ಪ್ರಯಾಣ ಎಂದು ಘೋಷಿಸಿದೆ. ಆದರೆ ಸಾಕಷ್ಟು ಸಂಖ್ಯೆಯಲ್ಲಿ ಬಸ್‌ಗಳಿಲ್ಲ ಎಂಬ ಆರೋಪ ಕೇಳಿಬಂದಿದೆ.

ಈ ಕುರಿತು ಕಾರ್ಮಿಕರ ಕಷ್ಟ ಕೇಳಲು ಇಂದು ಕಾಂಗ್ರೆಸ್‌ ಪಕ್ಷದ ನಾಯಕರ ದಂಡೇ ಬೆಂಗಳೂರಿನ ಮೆಜೆಸ್ಟಿಕ್‌ಗೆ ಆಗಮಿಸಿತ್ತು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌, ಮಾಜಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಹಿರಿಯ ಮುಖಂಡ ಹೆಚ್‌.ಕೆ ಪಾಟೀಲ್, ವಿ.ಎಸ್‌ ಉಗ್ರಪ್ಪ‌ ಉಪಸ್ಥಿತರಿದ್ದು ಕಾರ್ಮಿಕರನ್ನು ಮಾತನಾಡಿಸಿದರು.

ಸಿದ್ದರಾಮಯ್ಯನವರು ಕೆಲ ಕಾರ್ಮಿಕರನ್ನು ಮಾತನಾಡಿಸಿ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದರು. ಜೊತೆಗೆ ಕೊರೊನಾ ಮುಗಿದ ನಂತರ ಕೆಲಸಕ್ಕೆ ವಾಪಸ್‌ ಬೆಂಗಳೂರಿಗೆ ಬರುತ್ತೀರಾ ಎಂದು ಕೇಳಿದರು.

“ವಲಸೆ ಕಾರ್ಮಿಕರು ಬಹಳ ವರ್ಷದಿಂದ ಇಲ್ಲಿ ಕೆಲಸ ಮಾಡಿದ್ದು ಅವರಿಗೆ ಊಟು ವಸತಿಯ ಕೊರತೆಯುಂಟಾಗಿದೆ. ನಾವು ಅವರಿಗೆ ಊಟದ ಕಿಟ್‌ಗಳನ್ನು ನೀಡಿ, ಆರೋಗ್ಯ ತಪಾಸಣೆ ನಡೆಸಿ ಉಚಿತವಾಗಿ ಅವರ ಊರುಗಳಿಗೆ ಕಳಿಸಿಕೊಡಬೇಕೆಂದು ಒತ್ತಾಯಿಸಿದ್ದೇವು. ಆದರೆ ಸರ್ಕಾರ ಎರಡುಪಟ್ಟು ಬಸ್‌ ದರ ತೆಗೆದುಕೊಳ್ಳುತ್ತಿತ್ತು. ಇದಕ್ಕೆ ಹಣದ ಕೊರತೆಯಿದೆ ಎಂದು ಸರ್ಕಾರ ಹೇಳಿತ್ತು. ಅದಕ್ಕೆ ನಾವು ನಮ್ಮ ಪಕ್ಷದಿಂದ ಕಾರ್ಮಿಕರ ಬಸ್‌ ಚಾರ್ಜ್‌ ನಾವೇ ಕೊಡಲು ತೀರ್ಮಾನಿಸಿದೆವು. ಅದಕ್ಕಾಗಿ ಒಂದು ಕೋಟಿ ರೂ ನೆರವು ಕೊಟ್ಟಿದ್ದೇವೆ. ನಂತರ ಸರ್ಕಾರಕ್ಕೆ ಜ್ಞಾನೋದಯವಾಗಿ ಉಚಿತ ಎಂದಿದ್ದಾರೆ. ಆದರೂ ಬಹಳಷ್ಟು ಊರುಗಳಿಗೆ ಇನ್ನು ಬಸ್‌ ಬಿಟ್ಟಿಲ್ಲ. ಬೆಳಗಾಂ, ಹಾವೇರಿ ಜನ ಕಾಯುತ್ತಿದ್ದಾರೆ. ಖಾಸಗಿ ಬಸ್‌ ವ್ಯವಸ್ಥೆ ಮಾಡಿಯಾದರೂ ಸರಿ ಅವರನ್ನು ಊರಿಗೆ ಕಳಿಸಬೇಕಿದೆ” ಎಂದು ಸಿದ್ದರಾಮಯ್ಯ ತಿಳಿಸಿದರು.

ಡಿ.ಕೆ ಶಿವಕುಮಾರ್‌ ಮಾತನಾಡಿ, ಈ ಸರ್ಕಾರಕ್ಕೆ ಕಣ್ಣು ಕಿವಿ ಏನೂ ಇಲ್ಲ. ನಾನು ನಿನ್ನೆಯೇ ಹೇಳಿದಂತೆ ಭಿಕ್ಷೆ ಬೇಡಿದರೂ ಸರಿಯೇ ಕಾರ್ಮಿಕರ ಬಸ್‌ ಹಣ ನಾವು ಕೊಡುತ್ತೇವೆ ಎಂದಿದ್ದೆ. ಅದೇ ರೀತಿ ಇಂದು ಒಂದು ಕೋಟಿ ಕೊಡಲು ಬಂದಿದ್ದೇವೆ. ಎಲ್ಲಾ ರಾಜ್ಯಗಳಲ್ಲಿ ಉಚಿತವಾಗಿ ಕಾರ್ಮಿಕರನ್ನು ಕಳಿಸಿಕೊಡುತ್ತಿದ್ದಾರೆ. ಆದರೆ ನಮ್ಮ ರಾಜ್ಯದ 25 ಎಂಪಿಗಳು ಮನೆಯಲ್ಲಿ ಕೂತಿದ್ದಾರೆ ಎಂದರು.

ನಾವು ಒಂದಷ್ಟು ಊಟದ ಪ್ಯಾಕೆಟ್‌ಗಳನ್ನು ಕಾರ್ಮಿಕರಿಗೆ ಒದಗಿಸಿದ್ದೇವೆ. ಇಲ್ಲಿನ ಪರಿಸ್ಥಿತಿ ಮತ್ತು ವ್ಯವಸ್ಥೆ ಹೇಗಿದೆ ಎಂದು ಪರೀಶಿಲಿಸಲು ಬಂದಿದ್ದೇವೆ. ಆದರೆ ಸರ್ಕಾರ ಇನ್ನೂ ಸಮರ್ಪಕ ವ್ಯವಸ್ಥೆ ಮಾಡಿಲ್ಲ. ಜನ ಸಂಕಷ್ಟದಲ್ಲಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳು ಮತ್ತು ಅಧಿಕಾರಿಗಳ ಜೊತೆ ಮಾತನಾಡುತ್ತೇವೆ ಎಂದರು. ಅಲ್ಲದೇ ಕಾರ್ಮಿಕರು ಕೊರೊನಾ ಮುಗಿದ ನಂತರ ಬೆಂಗಳೂರಿಗೆ ವಾಪಸ್‌ ಬರಬೇಕೆಂದು ಮನವಿ ಮಾಡಿದರು. ಬಸ್‌ ಗಳು ಸಾಲುತ್ತಿಲ್ಲ ಎಂಬ ಪ್ರಶ್ನೆಗೆ ಖಾಸಗಿಯವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿ. ನಾವು ಕೂಡ ಹಣ ಕೊಡುತ್ತೇವೆ ಎಂದರು.


ಇದನ್ನೂ ಓದಿ: ಕಾರ್ಮಿಕರ ಪ್ರಯಾಣ: ಕಾಂಗ್ರೆಸ್‌ನಿಂದ 1 ಕೋಟಿ ರೂ ನೆರವು ಘೋಷಿಸಿದ ಬೆನ್ನಲ್ಲೇ ಉಚಿತ ಪ್ರಯಾಣ ಘೋಷಿಸಿದ ಸಿಎಂ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...