Homeಮುಖಪುಟಸಂದೇಶಖಾಲಿ ಹಿಂಸಾಚಾರ ಪ್ರಕರಣ; ತಪ್ಪಿತಸ್ಥರನ್ನು ಬಂಧಿಸಲಾಗುವುದು ಎಂದ ಮಮತಾ ಬ್ಯಾನರ್ಜಿ

ಸಂದೇಶಖಾಲಿ ಹಿಂಸಾಚಾರ ಪ್ರಕರಣ; ತಪ್ಪಿತಸ್ಥರನ್ನು ಬಂಧಿಸಲಾಗುವುದು ಎಂದ ಮಮತಾ ಬ್ಯಾನರ್ಜಿ

- Advertisement -
- Advertisement -

ಸಂದೇಶಖಾಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಕಾರಣರಾದವರನ್ನು ಬಂಧಿಸಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಭತವಸೆ ನೀಡಿದ್ದಾರೆ. ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸಂದೇಶಖಾಲಿಗೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದ ನಂತರ ಅವರು ಈ ವಿಷಯದ ಬಗ್ಗೆ ಮೌನ ಮುರಿದಿದ್ದಾರೆ.

ರಾಜ್ಯಪಾಲರನ್ನು ತರಾಟೆಗೆ ತೆಗೆದುಕೊಂಡ ಬ್ಯಾನರ್ಜಿ, ‘ಯಾರು ಬೇಕಾದರೂ ಸಂದೇಶಖಾಲಿಗೆ ಹೋಗಬಹುದು. ಅದರಲ್ಲಿ ನಮಗೆ ಯಾವುದೇ ಸಮಸ್ಯೆಗಳಿಲ್ಲ. ನಾವು ಈಗಾಗಲೇ ರಾಜ್ಯ ಮಹಿಳಾ ಆಯೋಗದ ತಂಡವನ್ನು ಸಂದೇಶಖಾಲಿಗೆ ಕಳುಹಿಸಿದ್ದೇವೆ ಮತ್ತು ಹಲವು ಆರೋಪಿಗಳನ್ನು ಬಂಧಿಸಿದ್ದೇವೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಮತ್ತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ; ಈ ಹಿಂಸಾಚಾರದಲ್ಲಿ ಭಾಗಿಯಾದವರೆಲ್ಲರನ್ನೂ ಬಂಧಿಸಲಾಗುವುದು’ ಎಂದರು.

ಹೌರಾ ಜಿಲ್ಲೆಯ ದುಮುರ್ಜಾಲಾ ಕ್ರೀಡಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬ್ಯಾನರ್ಜಿ, ‘ಅಮಾನತುಗೊಂಡಿರುವ ತೃಣಮೂಲ ಕಾಂಗ್ರೆಸ್ ನಾಯಕ ಉತ್ತಮ್ ಸರ್ದಾರ್, ತಲೆಮರೆಸಿಕೊಂಡಿರುವ ಟಿಎಂಸಿ ನಾಯಕ ಶಹಜಹಾನ್ ಶೇಖ್ ಅವರ ಆಪ್ತ ಸಹಾಯಕರನ್ನು, ಹಲವು ವರ್ಷಗಳಿಂದ ಈ ಪ್ರದೇಶದಲ್ಲಿ ತೊಂದರೆ ಸೃಷ್ಟಿಸಿದ್ದಾರೆ ಎಂಬ ದೂರಿನ ಮೇರೆಗೆ ಭಾನುವಾರ ಸಂದೇಶಖಾಲಿಯಲ್ಲಿ ಬಂಧಿಸಲಾಗಿದೆ. ಕಳೆದ ತಿಂಗಳು ಉತ್ತರ 24 ಪರಗಣ ಜಿಲ್ಲೆಯ ಸಂದೇಶಖಾಲಿಯಲ್ಲಿರುವ ಅವರ ಮನೆ ಮೇಲೆ ದಾಳಿ ಮಾಡಲು ಬಂದಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆ ಗುಂಪೊಂದು ದಾಳಿ ಮಾಡಿದ ನಂತರ ಶೇಖ್ ತಲೆಮರೆಸಿಕೊಂಡಿದ್ದಾನೆ’ ಎಂದರು.

ಸಂದೇಶಖಾಲಿಯಲ್ಲಿ ಜನರಿಗೆ ಪ್ರಚೋದನಕಾರಿ ಸಂದೇಶಗಳನ್ನು ರವಾನಿಸಿದ ಆರೋಪದ ಮೇಲೆ ಬಸಿರ್ಹತ್ ಲೋಕಸಭಾ ಕ್ಷೇತ್ರದ ಬಿಜೆಪಿ ವೀಕ್ಷಕ ವಿಕಾಸ್ ಸಿಂಗ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಸಂದೇಶಖಾಲಿ ಸಿಪಿಎಂನ ಮಾಜಿ ಶಾಸಕ ನಿರಪಾದ ಸರ್ದಾರ್ ಅವರನ್ನು ಬಂಧಿಸಲಾಗಿದೆ.

ಇದೇ ವೇಳೆ ರಾಜ್ಯಪಾಲ ಬೋಸ್ ಸಂದೇಶಖಾಲಿಯಲ್ಲಿ ಗ್ರಾಮಸ್ಥರೊಂದಿಗೆ ಸಂವಾದ ನಡೆಸಿದರು. ಸಂದೇಶಖಾಲಿಯಲ್ಲಿನ ಪರಿಸ್ಥಿತಿಯ ಕುರಿತು ರಾಜ್ಯ ಸರ್ಕಾರದಿಂದ ಸಮಗ್ರ ವರದಿಯನ್ನು ಅವರು ಈಗಾಗಲೇ ಕೇಳಿದ್ದಾರೆ.

‘ಸಂದೇಶಖಾಲಿಯ ಘಟನೆಗಳ ಆಘಾತಕಾರಿ ಮತ್ತು ಛಿದ್ರಗೊಳಿಸುವ ಕಥೆಗಳನ್ನು ನಾನು ಕೇಳಿದಾಗ, ನಾನು ನನ್ನ ಕೇರಳ ಭೇಟಿಯನ್ನು ಮೊಟಕುಗೊಳಿಸಿದೆ. ನಾನು ಸಂದೇಸ್‌ಖಾಲಿಗೆ ಹೋಗುತ್ತಿದ್ದೇನೆ ಮತ್ತು ಸಂದೇಶ್‌ಖಾಲಿಯ ಗಲ್ಲಿಗಳಿಂದ ನಿಜವಾದ ಸಂದೇಶ ಏನೆಂಬುದನ್ನು ನಾನೇ ನೋಡಲು ಬಯಸುತ್ತೇನೆ’ ಎಂದು ಕಲ್ಕತ್ತಾದ ವಿಮಾನ ನಿಲ್ದಾಣಕ್ಕೆ ಬಂದ ನಂತರ ಬೋಸ್ ಹೇಳಿದರು.

ಸಂದೇಶಖಾಲಿಯ ತೊಂದರೆಗೀಡಾದ ಬೀದಿಗಳಿಗೆ ಭೇಟಿ ನೀಡಿ, ತಲೆಮರೆಸಿಕೊಂಡಿರುವ ತೃಣಮೂಲ ಕಾಂಗ್ರೆಸ್ ನಾಯಕ ಶಾಜಹಾನ್ ಶೇಖ್ ಮತ್ತು ಅವರ ಸಹಚರರಿಂದ ಲೈಂಗಿಕ ಕಿರುಕುಳ ಮತ್ತು ಚಿತ್ರಹಿಂಸೆ ಅನುಭವಿಸಿದ್ದಾರೆ ಎನ್ನಲಾದ ಮಹಿಳೆಯರೊಂದಿಗೆ ಮಾತನಾಡಿದರು. ‘ನನ್ನ ಕೈಗಳ ಮೇಲೆ ರಾಖಿಗಳನ್ನು ಕಟ್ಟಿದ, ಹಿಂಸೆಗೊಳಗಾದ ಮಹಿಳೆಯರಿಗೆ ನ್ಯಾಯ ಪಡೆಯಲು ಎಲ್ಲ ಸಹಾಯ ನೀಡುವುದಾಗಿ’ ರಾಜ್ಯಪಾಲರು ಭರವಸೆ ನೀಡಿದರು.

‘ನಾನು ಕಂಡದ್ದು ಘೋರ, ಆಘಾತಕಾರಿ, ನನ್ನ ಇಂದ್ರಿಯಗಳನ್ನು ಛಿದ್ರಗೊಳಿಸಿತು. ನಾನು ಎಂದಿಗೂ ನೋಡಬಾರದಂತಹದನ್ನು ನೋಡಿದೆ. ನಾನು ಎಂದಿಗೂ ಕೇಳಬಾರದಂತಹ ಅನೇಕ ವಿಷಯಗಳನ್ನು ನಾನು ಕೇಳಿದ್ದೇನೆ. ಕವಿಗುರು ರವೀಂದ್ರನಾಥ ಟ್ಯಾಗೋರ್ ಅವರ ಭೂಮಿಯಲ್ಲಿ ಇದು ಸಂಭವಿಸಬಹುದೆಂದು ನಾನು ನಂಬಲು ಸಾಧ್ಯವಿಲ್ಲ’ ಎಂದು ಬೋಸ್ ಸುದ್ದಿಗಾರರಿಗೆ ತಿಳಿಸಿದರು.

‘ಸಂವಿಧಾನದ ನಿಬಂಧನೆಗಳ ಅಡಿಯಲ್ಲಿ, ದೇಶದ ಕಾನೂನುಗಳ ಪ್ರಕಾರ ಮತ್ತು ಅವರ ಅಧಿಕಾರದೊಳಗೆ ಏನಿದೆಯೋ ಆ ಪ್ರಕಾರವಾಗಿ ಹೋರಾಟ ಮಾಡಲಾಗುವುದು. ಚಿಂತಿಸಬೇಡಿ.. ನಿಮಗೆ ಖಂಡಿತ ನ್ಯಾಯ ಸಿಗುತ್ತದೆ. ಎಂದು ಬೋಸ್ ಸ್ಥಳೀಯ ಮಹಿಳೆಯರಿಗೆ ಹೇಳಿದ್ದಾರೆ.

ಇದನ್ನೂ ಓದಿ; ಪ.ಬಂಗಾಳ: ಸದನದಲ್ಲಿ ಹೈಡ್ರಾಮ ಮಾಡಿದ 6 ಮಂದಿ ಬಿಜೆಪಿ ಶಾಸಕರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...