Homeಮುಖಪುಟಸಂದೇಶಖಾಲಿ ಹಿಂಸಾಚಾರ ಪ್ರಕರಣ; ತಪ್ಪಿತಸ್ಥರನ್ನು ಬಂಧಿಸಲಾಗುವುದು ಎಂದ ಮಮತಾ ಬ್ಯಾನರ್ಜಿ

ಸಂದೇಶಖಾಲಿ ಹಿಂಸಾಚಾರ ಪ್ರಕರಣ; ತಪ್ಪಿತಸ್ಥರನ್ನು ಬಂಧಿಸಲಾಗುವುದು ಎಂದ ಮಮತಾ ಬ್ಯಾನರ್ಜಿ

- Advertisement -
- Advertisement -

ಸಂದೇಶಖಾಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಕಾರಣರಾದವರನ್ನು ಬಂಧಿಸಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಭತವಸೆ ನೀಡಿದ್ದಾರೆ. ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸಂದೇಶಖಾಲಿಗೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದ ನಂತರ ಅವರು ಈ ವಿಷಯದ ಬಗ್ಗೆ ಮೌನ ಮುರಿದಿದ್ದಾರೆ.

ರಾಜ್ಯಪಾಲರನ್ನು ತರಾಟೆಗೆ ತೆಗೆದುಕೊಂಡ ಬ್ಯಾನರ್ಜಿ, ‘ಯಾರು ಬೇಕಾದರೂ ಸಂದೇಶಖಾಲಿಗೆ ಹೋಗಬಹುದು. ಅದರಲ್ಲಿ ನಮಗೆ ಯಾವುದೇ ಸಮಸ್ಯೆಗಳಿಲ್ಲ. ನಾವು ಈಗಾಗಲೇ ರಾಜ್ಯ ಮಹಿಳಾ ಆಯೋಗದ ತಂಡವನ್ನು ಸಂದೇಶಖಾಲಿಗೆ ಕಳುಹಿಸಿದ್ದೇವೆ ಮತ್ತು ಹಲವು ಆರೋಪಿಗಳನ್ನು ಬಂಧಿಸಿದ್ದೇವೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಮತ್ತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ; ಈ ಹಿಂಸಾಚಾರದಲ್ಲಿ ಭಾಗಿಯಾದವರೆಲ್ಲರನ್ನೂ ಬಂಧಿಸಲಾಗುವುದು’ ಎಂದರು.

ಹೌರಾ ಜಿಲ್ಲೆಯ ದುಮುರ್ಜಾಲಾ ಕ್ರೀಡಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬ್ಯಾನರ್ಜಿ, ‘ಅಮಾನತುಗೊಂಡಿರುವ ತೃಣಮೂಲ ಕಾಂಗ್ರೆಸ್ ನಾಯಕ ಉತ್ತಮ್ ಸರ್ದಾರ್, ತಲೆಮರೆಸಿಕೊಂಡಿರುವ ಟಿಎಂಸಿ ನಾಯಕ ಶಹಜಹಾನ್ ಶೇಖ್ ಅವರ ಆಪ್ತ ಸಹಾಯಕರನ್ನು, ಹಲವು ವರ್ಷಗಳಿಂದ ಈ ಪ್ರದೇಶದಲ್ಲಿ ತೊಂದರೆ ಸೃಷ್ಟಿಸಿದ್ದಾರೆ ಎಂಬ ದೂರಿನ ಮೇರೆಗೆ ಭಾನುವಾರ ಸಂದೇಶಖಾಲಿಯಲ್ಲಿ ಬಂಧಿಸಲಾಗಿದೆ. ಕಳೆದ ತಿಂಗಳು ಉತ್ತರ 24 ಪರಗಣ ಜಿಲ್ಲೆಯ ಸಂದೇಶಖಾಲಿಯಲ್ಲಿರುವ ಅವರ ಮನೆ ಮೇಲೆ ದಾಳಿ ಮಾಡಲು ಬಂದಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆ ಗುಂಪೊಂದು ದಾಳಿ ಮಾಡಿದ ನಂತರ ಶೇಖ್ ತಲೆಮರೆಸಿಕೊಂಡಿದ್ದಾನೆ’ ಎಂದರು.

ಸಂದೇಶಖಾಲಿಯಲ್ಲಿ ಜನರಿಗೆ ಪ್ರಚೋದನಕಾರಿ ಸಂದೇಶಗಳನ್ನು ರವಾನಿಸಿದ ಆರೋಪದ ಮೇಲೆ ಬಸಿರ್ಹತ್ ಲೋಕಸಭಾ ಕ್ಷೇತ್ರದ ಬಿಜೆಪಿ ವೀಕ್ಷಕ ವಿಕಾಸ್ ಸಿಂಗ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಸಂದೇಶಖಾಲಿ ಸಿಪಿಎಂನ ಮಾಜಿ ಶಾಸಕ ನಿರಪಾದ ಸರ್ದಾರ್ ಅವರನ್ನು ಬಂಧಿಸಲಾಗಿದೆ.

ಇದೇ ವೇಳೆ ರಾಜ್ಯಪಾಲ ಬೋಸ್ ಸಂದೇಶಖಾಲಿಯಲ್ಲಿ ಗ್ರಾಮಸ್ಥರೊಂದಿಗೆ ಸಂವಾದ ನಡೆಸಿದರು. ಸಂದೇಶಖಾಲಿಯಲ್ಲಿನ ಪರಿಸ್ಥಿತಿಯ ಕುರಿತು ರಾಜ್ಯ ಸರ್ಕಾರದಿಂದ ಸಮಗ್ರ ವರದಿಯನ್ನು ಅವರು ಈಗಾಗಲೇ ಕೇಳಿದ್ದಾರೆ.

‘ಸಂದೇಶಖಾಲಿಯ ಘಟನೆಗಳ ಆಘಾತಕಾರಿ ಮತ್ತು ಛಿದ್ರಗೊಳಿಸುವ ಕಥೆಗಳನ್ನು ನಾನು ಕೇಳಿದಾಗ, ನಾನು ನನ್ನ ಕೇರಳ ಭೇಟಿಯನ್ನು ಮೊಟಕುಗೊಳಿಸಿದೆ. ನಾನು ಸಂದೇಸ್‌ಖಾಲಿಗೆ ಹೋಗುತ್ತಿದ್ದೇನೆ ಮತ್ತು ಸಂದೇಶ್‌ಖಾಲಿಯ ಗಲ್ಲಿಗಳಿಂದ ನಿಜವಾದ ಸಂದೇಶ ಏನೆಂಬುದನ್ನು ನಾನೇ ನೋಡಲು ಬಯಸುತ್ತೇನೆ’ ಎಂದು ಕಲ್ಕತ್ತಾದ ವಿಮಾನ ನಿಲ್ದಾಣಕ್ಕೆ ಬಂದ ನಂತರ ಬೋಸ್ ಹೇಳಿದರು.

ಸಂದೇಶಖಾಲಿಯ ತೊಂದರೆಗೀಡಾದ ಬೀದಿಗಳಿಗೆ ಭೇಟಿ ನೀಡಿ, ತಲೆಮರೆಸಿಕೊಂಡಿರುವ ತೃಣಮೂಲ ಕಾಂಗ್ರೆಸ್ ನಾಯಕ ಶಾಜಹಾನ್ ಶೇಖ್ ಮತ್ತು ಅವರ ಸಹಚರರಿಂದ ಲೈಂಗಿಕ ಕಿರುಕುಳ ಮತ್ತು ಚಿತ್ರಹಿಂಸೆ ಅನುಭವಿಸಿದ್ದಾರೆ ಎನ್ನಲಾದ ಮಹಿಳೆಯರೊಂದಿಗೆ ಮಾತನಾಡಿದರು. ‘ನನ್ನ ಕೈಗಳ ಮೇಲೆ ರಾಖಿಗಳನ್ನು ಕಟ್ಟಿದ, ಹಿಂಸೆಗೊಳಗಾದ ಮಹಿಳೆಯರಿಗೆ ನ್ಯಾಯ ಪಡೆಯಲು ಎಲ್ಲ ಸಹಾಯ ನೀಡುವುದಾಗಿ’ ರಾಜ್ಯಪಾಲರು ಭರವಸೆ ನೀಡಿದರು.

‘ನಾನು ಕಂಡದ್ದು ಘೋರ, ಆಘಾತಕಾರಿ, ನನ್ನ ಇಂದ್ರಿಯಗಳನ್ನು ಛಿದ್ರಗೊಳಿಸಿತು. ನಾನು ಎಂದಿಗೂ ನೋಡಬಾರದಂತಹದನ್ನು ನೋಡಿದೆ. ನಾನು ಎಂದಿಗೂ ಕೇಳಬಾರದಂತಹ ಅನೇಕ ವಿಷಯಗಳನ್ನು ನಾನು ಕೇಳಿದ್ದೇನೆ. ಕವಿಗುರು ರವೀಂದ್ರನಾಥ ಟ್ಯಾಗೋರ್ ಅವರ ಭೂಮಿಯಲ್ಲಿ ಇದು ಸಂಭವಿಸಬಹುದೆಂದು ನಾನು ನಂಬಲು ಸಾಧ್ಯವಿಲ್ಲ’ ಎಂದು ಬೋಸ್ ಸುದ್ದಿಗಾರರಿಗೆ ತಿಳಿಸಿದರು.

‘ಸಂವಿಧಾನದ ನಿಬಂಧನೆಗಳ ಅಡಿಯಲ್ಲಿ, ದೇಶದ ಕಾನೂನುಗಳ ಪ್ರಕಾರ ಮತ್ತು ಅವರ ಅಧಿಕಾರದೊಳಗೆ ಏನಿದೆಯೋ ಆ ಪ್ರಕಾರವಾಗಿ ಹೋರಾಟ ಮಾಡಲಾಗುವುದು. ಚಿಂತಿಸಬೇಡಿ.. ನಿಮಗೆ ಖಂಡಿತ ನ್ಯಾಯ ಸಿಗುತ್ತದೆ. ಎಂದು ಬೋಸ್ ಸ್ಥಳೀಯ ಮಹಿಳೆಯರಿಗೆ ಹೇಳಿದ್ದಾರೆ.

ಇದನ್ನೂ ಓದಿ; ಪ.ಬಂಗಾಳ: ಸದನದಲ್ಲಿ ಹೈಡ್ರಾಮ ಮಾಡಿದ 6 ಮಂದಿ ಬಿಜೆಪಿ ಶಾಸಕರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...