Homeಮುಖಪುಟಸಂದೇಶಖಾಲಿ ಹಿಂಸಾಚಾರ ಪ್ರಕರಣ; ತಪ್ಪಿತಸ್ಥರನ್ನು ಬಂಧಿಸಲಾಗುವುದು ಎಂದ ಮಮತಾ ಬ್ಯಾನರ್ಜಿ

ಸಂದೇಶಖಾಲಿ ಹಿಂಸಾಚಾರ ಪ್ರಕರಣ; ತಪ್ಪಿತಸ್ಥರನ್ನು ಬಂಧಿಸಲಾಗುವುದು ಎಂದ ಮಮತಾ ಬ್ಯಾನರ್ಜಿ

- Advertisement -
- Advertisement -

ಸಂದೇಶಖಾಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಕಾರಣರಾದವರನ್ನು ಬಂಧಿಸಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಭತವಸೆ ನೀಡಿದ್ದಾರೆ. ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸಂದೇಶಖಾಲಿಗೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದ ನಂತರ ಅವರು ಈ ವಿಷಯದ ಬಗ್ಗೆ ಮೌನ ಮುರಿದಿದ್ದಾರೆ.

ರಾಜ್ಯಪಾಲರನ್ನು ತರಾಟೆಗೆ ತೆಗೆದುಕೊಂಡ ಬ್ಯಾನರ್ಜಿ, ‘ಯಾರು ಬೇಕಾದರೂ ಸಂದೇಶಖಾಲಿಗೆ ಹೋಗಬಹುದು. ಅದರಲ್ಲಿ ನಮಗೆ ಯಾವುದೇ ಸಮಸ್ಯೆಗಳಿಲ್ಲ. ನಾವು ಈಗಾಗಲೇ ರಾಜ್ಯ ಮಹಿಳಾ ಆಯೋಗದ ತಂಡವನ್ನು ಸಂದೇಶಖಾಲಿಗೆ ಕಳುಹಿಸಿದ್ದೇವೆ ಮತ್ತು ಹಲವು ಆರೋಪಿಗಳನ್ನು ಬಂಧಿಸಿದ್ದೇವೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಮತ್ತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ; ಈ ಹಿಂಸಾಚಾರದಲ್ಲಿ ಭಾಗಿಯಾದವರೆಲ್ಲರನ್ನೂ ಬಂಧಿಸಲಾಗುವುದು’ ಎಂದರು.

ಹೌರಾ ಜಿಲ್ಲೆಯ ದುಮುರ್ಜಾಲಾ ಕ್ರೀಡಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬ್ಯಾನರ್ಜಿ, ‘ಅಮಾನತುಗೊಂಡಿರುವ ತೃಣಮೂಲ ಕಾಂಗ್ರೆಸ್ ನಾಯಕ ಉತ್ತಮ್ ಸರ್ದಾರ್, ತಲೆಮರೆಸಿಕೊಂಡಿರುವ ಟಿಎಂಸಿ ನಾಯಕ ಶಹಜಹಾನ್ ಶೇಖ್ ಅವರ ಆಪ್ತ ಸಹಾಯಕರನ್ನು, ಹಲವು ವರ್ಷಗಳಿಂದ ಈ ಪ್ರದೇಶದಲ್ಲಿ ತೊಂದರೆ ಸೃಷ್ಟಿಸಿದ್ದಾರೆ ಎಂಬ ದೂರಿನ ಮೇರೆಗೆ ಭಾನುವಾರ ಸಂದೇಶಖಾಲಿಯಲ್ಲಿ ಬಂಧಿಸಲಾಗಿದೆ. ಕಳೆದ ತಿಂಗಳು ಉತ್ತರ 24 ಪರಗಣ ಜಿಲ್ಲೆಯ ಸಂದೇಶಖಾಲಿಯಲ್ಲಿರುವ ಅವರ ಮನೆ ಮೇಲೆ ದಾಳಿ ಮಾಡಲು ಬಂದಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆ ಗುಂಪೊಂದು ದಾಳಿ ಮಾಡಿದ ನಂತರ ಶೇಖ್ ತಲೆಮರೆಸಿಕೊಂಡಿದ್ದಾನೆ’ ಎಂದರು.

ಸಂದೇಶಖಾಲಿಯಲ್ಲಿ ಜನರಿಗೆ ಪ್ರಚೋದನಕಾರಿ ಸಂದೇಶಗಳನ್ನು ರವಾನಿಸಿದ ಆರೋಪದ ಮೇಲೆ ಬಸಿರ್ಹತ್ ಲೋಕಸಭಾ ಕ್ಷೇತ್ರದ ಬಿಜೆಪಿ ವೀಕ್ಷಕ ವಿಕಾಸ್ ಸಿಂಗ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಸಂದೇಶಖಾಲಿ ಸಿಪಿಎಂನ ಮಾಜಿ ಶಾಸಕ ನಿರಪಾದ ಸರ್ದಾರ್ ಅವರನ್ನು ಬಂಧಿಸಲಾಗಿದೆ.

ಇದೇ ವೇಳೆ ರಾಜ್ಯಪಾಲ ಬೋಸ್ ಸಂದೇಶಖಾಲಿಯಲ್ಲಿ ಗ್ರಾಮಸ್ಥರೊಂದಿಗೆ ಸಂವಾದ ನಡೆಸಿದರು. ಸಂದೇಶಖಾಲಿಯಲ್ಲಿನ ಪರಿಸ್ಥಿತಿಯ ಕುರಿತು ರಾಜ್ಯ ಸರ್ಕಾರದಿಂದ ಸಮಗ್ರ ವರದಿಯನ್ನು ಅವರು ಈಗಾಗಲೇ ಕೇಳಿದ್ದಾರೆ.

‘ಸಂದೇಶಖಾಲಿಯ ಘಟನೆಗಳ ಆಘಾತಕಾರಿ ಮತ್ತು ಛಿದ್ರಗೊಳಿಸುವ ಕಥೆಗಳನ್ನು ನಾನು ಕೇಳಿದಾಗ, ನಾನು ನನ್ನ ಕೇರಳ ಭೇಟಿಯನ್ನು ಮೊಟಕುಗೊಳಿಸಿದೆ. ನಾನು ಸಂದೇಸ್‌ಖಾಲಿಗೆ ಹೋಗುತ್ತಿದ್ದೇನೆ ಮತ್ತು ಸಂದೇಶ್‌ಖಾಲಿಯ ಗಲ್ಲಿಗಳಿಂದ ನಿಜವಾದ ಸಂದೇಶ ಏನೆಂಬುದನ್ನು ನಾನೇ ನೋಡಲು ಬಯಸುತ್ತೇನೆ’ ಎಂದು ಕಲ್ಕತ್ತಾದ ವಿಮಾನ ನಿಲ್ದಾಣಕ್ಕೆ ಬಂದ ನಂತರ ಬೋಸ್ ಹೇಳಿದರು.

ಸಂದೇಶಖಾಲಿಯ ತೊಂದರೆಗೀಡಾದ ಬೀದಿಗಳಿಗೆ ಭೇಟಿ ನೀಡಿ, ತಲೆಮರೆಸಿಕೊಂಡಿರುವ ತೃಣಮೂಲ ಕಾಂಗ್ರೆಸ್ ನಾಯಕ ಶಾಜಹಾನ್ ಶೇಖ್ ಮತ್ತು ಅವರ ಸಹಚರರಿಂದ ಲೈಂಗಿಕ ಕಿರುಕುಳ ಮತ್ತು ಚಿತ್ರಹಿಂಸೆ ಅನುಭವಿಸಿದ್ದಾರೆ ಎನ್ನಲಾದ ಮಹಿಳೆಯರೊಂದಿಗೆ ಮಾತನಾಡಿದರು. ‘ನನ್ನ ಕೈಗಳ ಮೇಲೆ ರಾಖಿಗಳನ್ನು ಕಟ್ಟಿದ, ಹಿಂಸೆಗೊಳಗಾದ ಮಹಿಳೆಯರಿಗೆ ನ್ಯಾಯ ಪಡೆಯಲು ಎಲ್ಲ ಸಹಾಯ ನೀಡುವುದಾಗಿ’ ರಾಜ್ಯಪಾಲರು ಭರವಸೆ ನೀಡಿದರು.

‘ನಾನು ಕಂಡದ್ದು ಘೋರ, ಆಘಾತಕಾರಿ, ನನ್ನ ಇಂದ್ರಿಯಗಳನ್ನು ಛಿದ್ರಗೊಳಿಸಿತು. ನಾನು ಎಂದಿಗೂ ನೋಡಬಾರದಂತಹದನ್ನು ನೋಡಿದೆ. ನಾನು ಎಂದಿಗೂ ಕೇಳಬಾರದಂತಹ ಅನೇಕ ವಿಷಯಗಳನ್ನು ನಾನು ಕೇಳಿದ್ದೇನೆ. ಕವಿಗುರು ರವೀಂದ್ರನಾಥ ಟ್ಯಾಗೋರ್ ಅವರ ಭೂಮಿಯಲ್ಲಿ ಇದು ಸಂಭವಿಸಬಹುದೆಂದು ನಾನು ನಂಬಲು ಸಾಧ್ಯವಿಲ್ಲ’ ಎಂದು ಬೋಸ್ ಸುದ್ದಿಗಾರರಿಗೆ ತಿಳಿಸಿದರು.

‘ಸಂವಿಧಾನದ ನಿಬಂಧನೆಗಳ ಅಡಿಯಲ್ಲಿ, ದೇಶದ ಕಾನೂನುಗಳ ಪ್ರಕಾರ ಮತ್ತು ಅವರ ಅಧಿಕಾರದೊಳಗೆ ಏನಿದೆಯೋ ಆ ಪ್ರಕಾರವಾಗಿ ಹೋರಾಟ ಮಾಡಲಾಗುವುದು. ಚಿಂತಿಸಬೇಡಿ.. ನಿಮಗೆ ಖಂಡಿತ ನ್ಯಾಯ ಸಿಗುತ್ತದೆ. ಎಂದು ಬೋಸ್ ಸ್ಥಳೀಯ ಮಹಿಳೆಯರಿಗೆ ಹೇಳಿದ್ದಾರೆ.

ಇದನ್ನೂ ಓದಿ; ಪ.ಬಂಗಾಳ: ಸದನದಲ್ಲಿ ಹೈಡ್ರಾಮ ಮಾಡಿದ 6 ಮಂದಿ ಬಿಜೆಪಿ ಶಾಸಕರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...