Homeಮುಖಪುಟಸಂದೇಶಖಾಲಿ ಹಿಂಸಾಚಾರ ಪ್ರಕರಣ; ತಪ್ಪಿತಸ್ಥರನ್ನು ಬಂಧಿಸಲಾಗುವುದು ಎಂದ ಮಮತಾ ಬ್ಯಾನರ್ಜಿ

ಸಂದೇಶಖಾಲಿ ಹಿಂಸಾಚಾರ ಪ್ರಕರಣ; ತಪ್ಪಿತಸ್ಥರನ್ನು ಬಂಧಿಸಲಾಗುವುದು ಎಂದ ಮಮತಾ ಬ್ಯಾನರ್ಜಿ

- Advertisement -
- Advertisement -

ಸಂದೇಶಖಾಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಕಾರಣರಾದವರನ್ನು ಬಂಧಿಸಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಭತವಸೆ ನೀಡಿದ್ದಾರೆ. ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸಂದೇಶಖಾಲಿಗೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದ ನಂತರ ಅವರು ಈ ವಿಷಯದ ಬಗ್ಗೆ ಮೌನ ಮುರಿದಿದ್ದಾರೆ.

ರಾಜ್ಯಪಾಲರನ್ನು ತರಾಟೆಗೆ ತೆಗೆದುಕೊಂಡ ಬ್ಯಾನರ್ಜಿ, ‘ಯಾರು ಬೇಕಾದರೂ ಸಂದೇಶಖಾಲಿಗೆ ಹೋಗಬಹುದು. ಅದರಲ್ಲಿ ನಮಗೆ ಯಾವುದೇ ಸಮಸ್ಯೆಗಳಿಲ್ಲ. ನಾವು ಈಗಾಗಲೇ ರಾಜ್ಯ ಮಹಿಳಾ ಆಯೋಗದ ತಂಡವನ್ನು ಸಂದೇಶಖಾಲಿಗೆ ಕಳುಹಿಸಿದ್ದೇವೆ ಮತ್ತು ಹಲವು ಆರೋಪಿಗಳನ್ನು ಬಂಧಿಸಿದ್ದೇವೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಮತ್ತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ; ಈ ಹಿಂಸಾಚಾರದಲ್ಲಿ ಭಾಗಿಯಾದವರೆಲ್ಲರನ್ನೂ ಬಂಧಿಸಲಾಗುವುದು’ ಎಂದರು.

ಹೌರಾ ಜಿಲ್ಲೆಯ ದುಮುರ್ಜಾಲಾ ಕ್ರೀಡಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬ್ಯಾನರ್ಜಿ, ‘ಅಮಾನತುಗೊಂಡಿರುವ ತೃಣಮೂಲ ಕಾಂಗ್ರೆಸ್ ನಾಯಕ ಉತ್ತಮ್ ಸರ್ದಾರ್, ತಲೆಮರೆಸಿಕೊಂಡಿರುವ ಟಿಎಂಸಿ ನಾಯಕ ಶಹಜಹಾನ್ ಶೇಖ್ ಅವರ ಆಪ್ತ ಸಹಾಯಕರನ್ನು, ಹಲವು ವರ್ಷಗಳಿಂದ ಈ ಪ್ರದೇಶದಲ್ಲಿ ತೊಂದರೆ ಸೃಷ್ಟಿಸಿದ್ದಾರೆ ಎಂಬ ದೂರಿನ ಮೇರೆಗೆ ಭಾನುವಾರ ಸಂದೇಶಖಾಲಿಯಲ್ಲಿ ಬಂಧಿಸಲಾಗಿದೆ. ಕಳೆದ ತಿಂಗಳು ಉತ್ತರ 24 ಪರಗಣ ಜಿಲ್ಲೆಯ ಸಂದೇಶಖಾಲಿಯಲ್ಲಿರುವ ಅವರ ಮನೆ ಮೇಲೆ ದಾಳಿ ಮಾಡಲು ಬಂದಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆ ಗುಂಪೊಂದು ದಾಳಿ ಮಾಡಿದ ನಂತರ ಶೇಖ್ ತಲೆಮರೆಸಿಕೊಂಡಿದ್ದಾನೆ’ ಎಂದರು.

ಸಂದೇಶಖಾಲಿಯಲ್ಲಿ ಜನರಿಗೆ ಪ್ರಚೋದನಕಾರಿ ಸಂದೇಶಗಳನ್ನು ರವಾನಿಸಿದ ಆರೋಪದ ಮೇಲೆ ಬಸಿರ್ಹತ್ ಲೋಕಸಭಾ ಕ್ಷೇತ್ರದ ಬಿಜೆಪಿ ವೀಕ್ಷಕ ವಿಕಾಸ್ ಸಿಂಗ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಸಂದೇಶಖಾಲಿ ಸಿಪಿಎಂನ ಮಾಜಿ ಶಾಸಕ ನಿರಪಾದ ಸರ್ದಾರ್ ಅವರನ್ನು ಬಂಧಿಸಲಾಗಿದೆ.

ಇದೇ ವೇಳೆ ರಾಜ್ಯಪಾಲ ಬೋಸ್ ಸಂದೇಶಖಾಲಿಯಲ್ಲಿ ಗ್ರಾಮಸ್ಥರೊಂದಿಗೆ ಸಂವಾದ ನಡೆಸಿದರು. ಸಂದೇಶಖಾಲಿಯಲ್ಲಿನ ಪರಿಸ್ಥಿತಿಯ ಕುರಿತು ರಾಜ್ಯ ಸರ್ಕಾರದಿಂದ ಸಮಗ್ರ ವರದಿಯನ್ನು ಅವರು ಈಗಾಗಲೇ ಕೇಳಿದ್ದಾರೆ.

‘ಸಂದೇಶಖಾಲಿಯ ಘಟನೆಗಳ ಆಘಾತಕಾರಿ ಮತ್ತು ಛಿದ್ರಗೊಳಿಸುವ ಕಥೆಗಳನ್ನು ನಾನು ಕೇಳಿದಾಗ, ನಾನು ನನ್ನ ಕೇರಳ ಭೇಟಿಯನ್ನು ಮೊಟಕುಗೊಳಿಸಿದೆ. ನಾನು ಸಂದೇಸ್‌ಖಾಲಿಗೆ ಹೋಗುತ್ತಿದ್ದೇನೆ ಮತ್ತು ಸಂದೇಶ್‌ಖಾಲಿಯ ಗಲ್ಲಿಗಳಿಂದ ನಿಜವಾದ ಸಂದೇಶ ಏನೆಂಬುದನ್ನು ನಾನೇ ನೋಡಲು ಬಯಸುತ್ತೇನೆ’ ಎಂದು ಕಲ್ಕತ್ತಾದ ವಿಮಾನ ನಿಲ್ದಾಣಕ್ಕೆ ಬಂದ ನಂತರ ಬೋಸ್ ಹೇಳಿದರು.

ಸಂದೇಶಖಾಲಿಯ ತೊಂದರೆಗೀಡಾದ ಬೀದಿಗಳಿಗೆ ಭೇಟಿ ನೀಡಿ, ತಲೆಮರೆಸಿಕೊಂಡಿರುವ ತೃಣಮೂಲ ಕಾಂಗ್ರೆಸ್ ನಾಯಕ ಶಾಜಹಾನ್ ಶೇಖ್ ಮತ್ತು ಅವರ ಸಹಚರರಿಂದ ಲೈಂಗಿಕ ಕಿರುಕುಳ ಮತ್ತು ಚಿತ್ರಹಿಂಸೆ ಅನುಭವಿಸಿದ್ದಾರೆ ಎನ್ನಲಾದ ಮಹಿಳೆಯರೊಂದಿಗೆ ಮಾತನಾಡಿದರು. ‘ನನ್ನ ಕೈಗಳ ಮೇಲೆ ರಾಖಿಗಳನ್ನು ಕಟ್ಟಿದ, ಹಿಂಸೆಗೊಳಗಾದ ಮಹಿಳೆಯರಿಗೆ ನ್ಯಾಯ ಪಡೆಯಲು ಎಲ್ಲ ಸಹಾಯ ನೀಡುವುದಾಗಿ’ ರಾಜ್ಯಪಾಲರು ಭರವಸೆ ನೀಡಿದರು.

‘ನಾನು ಕಂಡದ್ದು ಘೋರ, ಆಘಾತಕಾರಿ, ನನ್ನ ಇಂದ್ರಿಯಗಳನ್ನು ಛಿದ್ರಗೊಳಿಸಿತು. ನಾನು ಎಂದಿಗೂ ನೋಡಬಾರದಂತಹದನ್ನು ನೋಡಿದೆ. ನಾನು ಎಂದಿಗೂ ಕೇಳಬಾರದಂತಹ ಅನೇಕ ವಿಷಯಗಳನ್ನು ನಾನು ಕೇಳಿದ್ದೇನೆ. ಕವಿಗುರು ರವೀಂದ್ರನಾಥ ಟ್ಯಾಗೋರ್ ಅವರ ಭೂಮಿಯಲ್ಲಿ ಇದು ಸಂಭವಿಸಬಹುದೆಂದು ನಾನು ನಂಬಲು ಸಾಧ್ಯವಿಲ್ಲ’ ಎಂದು ಬೋಸ್ ಸುದ್ದಿಗಾರರಿಗೆ ತಿಳಿಸಿದರು.

‘ಸಂವಿಧಾನದ ನಿಬಂಧನೆಗಳ ಅಡಿಯಲ್ಲಿ, ದೇಶದ ಕಾನೂನುಗಳ ಪ್ರಕಾರ ಮತ್ತು ಅವರ ಅಧಿಕಾರದೊಳಗೆ ಏನಿದೆಯೋ ಆ ಪ್ರಕಾರವಾಗಿ ಹೋರಾಟ ಮಾಡಲಾಗುವುದು. ಚಿಂತಿಸಬೇಡಿ.. ನಿಮಗೆ ಖಂಡಿತ ನ್ಯಾಯ ಸಿಗುತ್ತದೆ. ಎಂದು ಬೋಸ್ ಸ್ಥಳೀಯ ಮಹಿಳೆಯರಿಗೆ ಹೇಳಿದ್ದಾರೆ.

ಇದನ್ನೂ ಓದಿ; ಪ.ಬಂಗಾಳ: ಸದನದಲ್ಲಿ ಹೈಡ್ರಾಮ ಮಾಡಿದ 6 ಮಂದಿ ಬಿಜೆಪಿ ಶಾಸಕರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...