Homeರಾಷ್ಟ್ರೀಯಉಪ ಕುಲಪತಿಗಳ ರಾಜೀನಾಮೆ ಕೇಳಿ ಪತ್ರ ಕಳುಹಿಸಿರುವುದು ಸರಿಯಲ್ಲ: ಕೇರಳ ಹೈಕೋರ್ಟ್

ಉಪ ಕುಲಪತಿಗಳ ರಾಜೀನಾಮೆ ಕೇಳಿ ಪತ್ರ ಕಳುಹಿಸಿರುವುದು ಸರಿಯಲ್ಲ: ಕೇರಳ ಹೈಕೋರ್ಟ್

- Advertisement -
- Advertisement -

ತಮ್ಮ ಸ್ಥಾನಗಳಿಗೆ ಕೂಡಲೆ ರಾಜಿನಾಮೆ ನೀಡುವಂತೆ ಕೇರಳದ ಒಂಬತ್ತು ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳಿಗೆ ರಾಜ್ಯಪಾಲ ಆರಿಫ್ ಮೊಹಮ್ಮದ್‌ ಖಾನ್‌ ನೀಡಿದ್ದ ನಿರ್ದೇಶನಕ್ಕೆ ಹಿನ್ನಡೆಯಾಗಿದೆ. ಸೋಮವಾರ ನಡೆದ ವಿಶೇಷ ವಿಚಾರಣೆಯಲ್ಲಿ ಕೇರಳ ಹೈಕೋರ್ಟ್‌‌ ರಾ‌ಜ್ಯಪಾಲರು ಅಂತಿಮ ಆದೇಶ ನೀಡುವವರೆಗೆ ಉಪ ಕುಲಪತಿಗಳು ತಮ್ಮ ಸ್ಥಾನದಲ್ಲಿ ಮುಂದುವರೆಯಬಹುದು ಎಂದು ಎಂದು ಆದೇಶ ನೀಡಿದೆ.

“ಸೂಕ್ತ ತನಿಖೆಯ ನಂತರವೇ ಉಪ ಕುಲಪತಿಗಳನ್ನು ವಜಾ ಮಾಡಬಹುದು. ರಾಜೀನಾಮೆ ಕೇಳಿ ಪತ್ರ ಬರೆದಿದ್ದು ಸರಿಯಲ್ಲ. ಉಪ ಕುಲಪತಿಗಳ ವಿರುದ್ಧ ಕಾನೂನು ಪ್ರಕಾರ ಮಾತ್ರ ಕ್ರಮ ಕೈಗೊಳ್ಳಬೇಕು ಮತ್ತು ರಾಜ್ಯಪಾಲರು ಕಾರ್ಯವಿಧಾನಗಳನ್ನು ಪೂರ್ಣಗೊಳಿಸಬೇಕು ಎಂದು ನ್ಯಾಯಾಲಯ ಇಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ನಡುವೆ ರಾಜ್ಯದ ವಿಶ್ವವಿದ್ಯಾನಿಲಯಗಳಲ್ಲಿನ ಉಪ ಕುಲಪತಿಗಳ ನೇಮಕಾತಿಗಳು ಪ್ರಾಥಮಿಕವಾಗಿ ಕಾನೂನುಬಾಹಿರವಲ್ಲವೇ ಎಂದು ಹೈಕೋರ್ಟ್ ಕೇಳಿದೆ. ನೇಮಕ ಮಾಡುವ ಅಧಿಕಾರ ರಾಜ್ಯಪಾಲರದ್ದಾಗಿದ್ದು, ಅವರು ಏಕೆ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಕೇಳಿದೆ.

ಇದನ್ನೂ ಓದಿ: ವಿವಿಗಳ ನೇಮಕಾತಿಗೆ ಅಂಟಿದ ಗುರು-ಶಿಷ್ಯ ಬಾಂಧವ್ಯದ ’ಕಳಂಕ’

“ತಾಂತ್ರಿಕ ವಿಶ್ವವಿದ್ಯಾಲಯದ ಉಪ ಕುಲಪತಿ ನೇಮಕ ಅಸಿಂಧು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ತೀರ್ಪು ಅನ್ವಯವಾಗುವುದಾದರೆ ಉಪ ಕುಲಪತಿಗಳಿಗೆ ಅಕ್ಟೋಬರ್ 24ರವರೆಗೆ ಕಾಲಾವಕಾಶ ನೀಡಿದ ರಾಜ್ಯಪಾಲರು ಗೌರವಾನ್ವಿತರು” ಎಂದೂ ಹೈಕೋರ್ಟ್ ಹೇಳಿದೆ. ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವಂತೆ ರಾಜ್ಯಪಾಲರು ನೀಡಿರುವ ನೋಟಿಸ್ ವಿರುದ್ಧ ಉಪ ಕುಲಪತಿಗಳು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ಮಧ್ಯೆ, ರಾಜ್ಯಪಾಲರು ಕಾನೂನಿನ ಪ್ರಕಾರ ಮಾತ್ರವೆ ಕ್ರಮ ಕೈಗೊಳ್ಳಬಹುದೆ ಹೊರತು ವಜಾಗೊಳಿಸಲು ಸಾಧ್ಯವಿಲ್ಲ ಎಂದು ಉಪ ಕುಲಪತಿಗಳು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಪ್ರಸ್ತುತ ಅಸಾಧಾರಣ ಪರಿಸ್ಥಿತಿಯನ್ನು ಪರಿಗಣಿಸಿರುವ ಹೈಕೋರ್ಟ್‌ ರಜೆಯ ದಿನವೂ ವಿಶೇಷ ವಿಚಾರಣೆ ನಡೆಸಿದೆ. ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ಅವರ ಪೀಠವು ಉಪ ಕುಲಪತಿಗಳು ಸಲ್ಲಿಸಿದ ಅರ್ಜಿಗಳ ವಿಚಾರಣೆಯನ್ನು ಸಂಜೆ ನಾಲ್ಕು ಗಂಟೆಗೆ ಪ್ರಾರಂಭಿಸಿತ್ತು.

ತಾಂತ್ರಿಕ ವಿಶ್ವವಿದ್ಯಾಲಯದ ಉಪ ಕುಲಪತಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್‌ನ ಆದೇಶವನ್ನು ಉಲ್ಲೇಖಿಸಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ರಾಜ್ಯದ ಎಲ್ಲಾ ಒಂಬತ್ತು ವಿಶ್ವವಿದ್ಯಾಲಯಗಳ ಉಪಕುಲಪತಿಗಳಿಗೆ ರಾಜೀನಾಮೆ ನೀಡುವಂತೆ ಕಳೆದ ದಿನ ಸೂಚಿಸಿದ್ದರು.

ಇದನ್ನೂ ಓದಿ: ಕುವೆಂಪು ವಿವಿ ಪಠ್ಯದಲ್ಲಿ ಚಕ್ರತೀರ್ಥ ಪಾಠ: ಲೇಖಕರ ನಿಜ ನಾಮವೇ ನಾಪತ್ತೆ; ಆಕ್ಷೇಪ

ಇಂದು ಬೆಳಗ್ಗೆ 11.30ರೊಳಗೆ ರಾಜೀನಾಮೆ ನೀಡಬೇಕು ಎಂದು ರಾಜ್ಯಪಾಲರು ಆಗ್ರಹಿಸಿದ್ದರು. ಆದರೆ ಉಪ ಕುಲಪತಿಗಳು ಯಾರೂ ರಾಜೀನಾಮೆ ನೀಡಬಾರದು ಎಂದು ಸರ್ಕಾರ ಸೂಚನೆ ನೀಡಿದೆ. ಈ ನಡುವೆ ಉಪ ಕುಲಪತಿಗಳಿಗೆ ರಾಜೀನಾಮೆ ನೀಡುವಂತೆ ರಾಜ್ಯಪಾಲರು ನೀಡಿದ್ದ ಗಡುವು ಮುಗಿದಿದ್ದು, ಯಾರೂ ಈ ವರೆಗೆ ರಾಜೀನಾಮೆ ನೀಡಿಲ್ಲ.

ಕೇರಳದ ಇತಿಹಾಸದಲ್ಲಿ ರಾಜಭವನವು ಒಂದು ಅಸಾಮಾನ್ಯ ಹೆಜ್ಜೆಗೆ ಪ್ರವೇಶಿಸಿದೆ. ಯುಜಿಸಿ ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ತಾಂತ್ರಿಕ ವಿಶ್ವವಿದ್ಯಾಲಯದ ವಿಸಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್ ಆದೇಶವನ್ನು ಆಧರಿಸಿ ರಾಜ್ಯಪಾಲರು ಈ ಅಸಾಮಾನ್ಯ ಕ್ರಮವನ್ನು ಕೈಗೊಂಡಿದ್ದರು.

ಕೇರಳ ವಿಶ್ವವಿದ್ಯಾಲಯ, ಮಹಾತ್ಮ ಗಾಂಧಿ ವಿಶ್ವವಿದ್ಯಾಲಯ, ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ, ಕಣ್ಣೂರು ವಿಶ್ವವಿದ್ಯಾಲಯ, ಎಪಿಜೆ ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯ, ಶ್ರೀ ಶಂಕರಾಚಾರ್ಯ ಸಂಸ್ಕೃತ ವಿಶ್ವವಿದ್ಯಾಲಯ, ಕ್ಯಾಲಿಕಟ್ ವಿಶ್ವವಿದ್ಯಾಲಯ ಮತ್ತು ತುಂಚತ್ತ್‌‌ ಎಳುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ ಉಪ ಕುಲಪತಿಗಳಿಗೆ ತಮ್ಮ ಸ್ಥಾನಗಳನ್ನು ತೊರೆಯುವಂತೆ ರಾಜ್ಯಪಾಲರು ಕೇಳಿದ್ದರು.

ಇದನ್ನೂ ಓದಿ: ಹಿಜಾಬ್‌ಗೆ ಅವಕಾಶವಿಲ್ಲದೆ ಮಂಗಳೂರು ವಿವಿಯ ಶೇ.16ರಷ್ಟು ಮುಸ್ಲಿಂ ವಿದ್ಯಾರ್ಥಿನಿಯರು ಡ್ರಾಪ್‌ಔಟ್

ರಾಜ್ಯಪಾಲರ ಆದೇಶವನ್ನು ತೀವ್ರವಾಗಿ ವಿರೋಧಿಸಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಜ್ಯಪಾಲರು ರಾಜ್ಯದ ವಿಶ್ವವಿದ್ಯಾನಿಲಯಗಳನ್ನು ‘ನಾಶಮಾಡುವ’ ಉದ್ದೇಶದಿಂದ ಯುದ್ಧ ನಡೆಸುತ್ತಿದ್ದು, ಸಂಘ ಪರಿವಾರದ ನಾಯಕನಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಈ ಕ್ರಮವು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರದ ಅಧಿಕಾರ ಮತ್ತು ಶೈಕ್ಷಣಿಕವಾಗಿ ಸ್ವತಂತ್ರವಾಗಿರಬೇಕಾದ ವಿಶ್ವವಿದ್ಯಾಲಯಗಳ ಮೇಲಿನ ಅತಿಕ್ರಮಣವಾಗಿದೆ” ಎಂದು ಮುಖ್ಯಮಂತ್ರಿ ಆಕ್ರೋಶ ವ್ಯಕ್ತಪಡಿಸಿದ್ದರು.

ಕೇರಳ ಸರ್ಕಾರವು ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಉಪಕುಲಪತಿಗಳನ್ನು ತಮ್ಮದೇ ನಿರ್ಧಾರದ ಮೇಲೆ ನೇಮಕ ಮಾಡಿತ್ತು. ರಾಜ್ಯಪಾಲರ ತೀರ್ಮಾನದ ವಿರುದ್ಧ ಆಡಳಿತರೂಢ ಎಡ ಡೆಮಾಕ್ರಟಿಕ್ ಫ್ರಂಟ್ ಮುಂದಿನ ತಿಂಗಳು ರಾಜ್ಯ ವಿಶ್ವವಿದ್ಯಾಲಯಗಳಲ್ಲಿ ಭಾರಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಆಡಳಿತರೂಢ ಸಿಪಿಐಎಂ ಪಕ್ಷವೂ ಕೇರಳ ಸರ್ಕಾರವನ್ನು ಬೆಂಬಲಿಸಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ “ಇಂತಹ ನಿರ್ದೇಶನವನ್ನು ನೀಡಲು ರಾಜ್ಯಪಾಲರಿಗೆ ಯಾವುದೇ ಅಧಿಕಾರವಿಲ್ಲ. ಇದು ಅನಿಯಂತ್ರಿತವಾಗಿದ್ದು, ಕಾನೂನು ಬಾಹಿರ ಮತ್ತು ರಾಜಕೀಯ ಪ್ರೇರಿತವಾಗಿದೆ. ಅವರು ಕೇರಳದ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ನಿಯಂತ್ರಿಸಲು ಮತ್ತು ನಾಶಮಾಡಲು ಬಯಸುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇರಳ ಕೇಂದ್ರಿಯ ವಿವಿ ಕನ್ನಡ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ತಮ್ಮ ಶಿಷ್ಯರನ್ನೇ ಆಯ್ಕೆ ಮಾಡಿದ ಸಂದರ್ಶಕರು: ಆರೋಪ

“ಆರೆಸ್ಸೆಸ್ಸ್‌‌ ಕಾರ್ಯಕರ್ತರನ್ನು ನೇಮಿಸಿ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ನಿಯಂತ್ರಿಸಲು ಅವರು ಬಯಸಿದ್ದು, ಈ ಮೂಲಕ ಶಿಕ್ಷಣ ಸಂಸ್ಥೆಗಳಲ್ಲಿ ಹಿಂದುತ್ವ ಸಿದ್ಧಾಂತವನ್ನು ಪ್ರಚಾರ ಮಾಡಲು ಹೊರಟಿದ್ದಾರೆ. ಸಂವಿಧಾನವು ಅಂತಹ ಯಾವುದೇ ಆದೇಶವನ್ನು ನೀಡಲು ರಾಜ್ಯಪಾಲರಿಗೆ ಅನುಮತಿ ನೀಡದ ಕಾರಣ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಲಾಗುತ್ತದೆ” ಅವರು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

0
ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಪ್ರಯೋಗಿಸುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನು ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ ಶ್ರೀರಾಮ್...