Homeಬಹುಜನ ಭಾರತಸುಪ್ರೀಂಕೋರ್ಟಿಗೆ ಪತ್ರ ಬರೆದು ಬಿಸಿಮುಟ್ಟಿಸಿದ ಹಿರಿಯ ನ್ಯಾಯವಾದಿಗಳು!

ಸುಪ್ರೀಂಕೋರ್ಟಿಗೆ ಪತ್ರ ಬರೆದು ಬಿಸಿಮುಟ್ಟಿಸಿದ ಹಿರಿಯ ನ್ಯಾಯವಾದಿಗಳು!

- Advertisement -
- Advertisement -

ಆತ್ಮನಿರ್ಭರ ಭಾರತದ ಹೃದಯ ಹಿಂಡುವ ಚಿತ್ರಗಳು ನಾಗರಿಕ ಸಮಾಜದ ಮುಖಕ್ಕೆ ರಾಚುತ್ತಿವೆ. ಭಕ್ತಭಾರತದ ಆತ್ಮಸಾಕ್ಷಿ ಕಡೆಯುಸಿರು ಎಳೆದು ವರ್ಷಗಳೇ ಉರುಳಿವೆ. ದಿನಗಟ್ಟಲೆ ಟ್ರೇನಿನಲ್ಲಿ ಅನ್ನ ನೀರಿಲ್ಲದೆ ಪ್ರಯಾಣ ಮಾಡಿ ಸತ್ತ ತನ್ನ ತಾಯಿಯ ಹೊದಿಕೆಯನ್ನು ಹಿಡಿದೆಳೆದು ಎಚ್ಚರಿಸಲು ಅಮಾಯಕ ಹಸುಳೆ ಪ್ರಯತ್ನಿಸುವ ದೃಶ್ಯಾವಳಿ ಭಕ್ತ ಭಾರತದ ಕಲ್ಲು ಮನಸ್ಸನ್ನು ಕರಗಿಸಲಾರದು. ಅರ್ಥಾತ್ ದೇಶ- ಸಮಾಜ ತೀವ್ರ ಅಪಾಯಕರ ಸ್ಥಿತಿಯಲ್ಲಿವೆ. ಮನಸ್ಸಾಕ್ಷಿಗಳಿಗೆ ಲಕ್ವ ಹೊಡೆದಿದೆ. ಹನ್ನೊಂದರ ಪ್ರಾಯದ ಎಳೆಯ ತನ್ನ ಕುರುಡು ತಾಯಿ ಮತ್ತು ಕುಂಟ ತಂದೆಯನ್ನು ತ್ರಿಚಕ್ರ ಸೈಕಲ್‍ನಲ್ಲಿ ಕೂರಿಸಿ ವಾರಣಾಸಿಯಿಂದ ಬಿಹಾರಕ್ಕೆ ಒಯ್ಯುವ ದೃಶ್ಯವಾಗಲಿ, ಹೆದ್ದಾರಿಯಲ್ಲಿ ಹಸಿದ ವ್ಯಕ್ತಿಯೊಬ್ಬ ವಾಹನಗಳ ಚಕ್ರಗಳಡಿ ಸಿಕ್ಕಿ ನಜ್ಜುಗುಜ್ಜಾಗಿದ್ದ ನಾಯಿಯ ಕಳೇಬರದಿಂದ ಮಾಂಸವನ್ನು ಕಿತ್ತು ತಿನ್ನುವ ನೋಟವಾಗಲಿ, ನಡೆ ನಡೆದು ಎಳೆಯ ಮಕ್ಕಳ ಅಂಗಾಲುಗಳು ಬೊಕ್ಕೆಗಳಾಗಿ ಕಂಗೆಟ್ಟು ಕಣ್ಣುಗಳಲ್ಲಿ ನೀರು ತುಂಬಿಕೊಂಡ ನೋವಾಗಲೀ ಭಕ್ತ ಭಾರತದ ಕಣ್ಣಿಗೆ ಕಾಣುವುದೇ ಇಲ್ಲ. ತನ್ನ ವಿಶ್ವರೂಪವನ್ನು ಕಾಣಲು ಶ್ರೀಕೃಷ್ಣನು ಅರ್ಜುನನಿಗೆ ವಿಶೇಷ ದೃಷ್ಟಿಯನ್ನು ಪ್ರಸಾದಿಸಿದಂತೆ ಭಕ್ತ ಭಾರತಕ್ಕೂ ವಿಶೇಷ ಕಣ್ಣುಗಳನ್ನೂ, ಚಲಿಸುವ ಮನಸ್ಸನ್ನೂ ನೀಡಬೇಕಿದೆ. ಆ ಕಾಲ ಬರುವುದೆಂದೋ ಸದ್ಯಕ್ಕೆ ತಿಳಿಯದು.

ಈ ನಡುವೆ ವಿಶೇಷವೊಂದು ಜರುಗಿದೆ. ವಲಸೆ ಕಾರ್ಮಿಕ ಕೋಟಿಯ ಕಷ್ಟ ಪರಂಪರೆಯನ್ನು ಕಡೆಗಣಿಸಿದ್ದ ಸುಪ್ರೀಮ್ ಕೋರ್ಟಿಗೆ ಬಿಸಿ ಮುಟ್ಟಿಸುವ ಪತ್ರವೊಂದನ್ನು ದೇಶದ ಹಿರಿಯ ನ್ಯಾಯವಾದಿಗಳು ಬರೆದಿದ್ದಾರೆ. ಅದನ್ನೊಮ್ಮೆ ಓದಿಕೊಳ್ಳೋಣ.

ಪ್ರಿಯ ನ್ಯಾಯಮೂರ್ತಿಗಳೇ,

ಭಾರತೀಯ ನಾಗರಿಕರಾಗಿ ಮತ್ತು ಹಿರಿಯ ನ್ಯಾಯವಾದಿಗಳಾಗಿ ಅತೀವ ವ್ಯಥೆ ಮತ್ತು ದಿಗಿಲಿನಿಂದ ನಿಮಗೆ ಈ ಪತ್ರ ಬರೆಯುತ್ತಿದ್ದೇವೆ.

ಈ ದೇಶದ ನಾಗರಿಕರ ಅದರಲ್ಲೂ ವಿಶೇಷವಾಗಿ ಬಡತನದ ರೇಖೆಯ ಮತ್ತು ಅದರ ಕೆಳಗೆ ಕನಿಷ್ಠ ಕೂಲಿ ಪಡೆದು ಹೊಟ್ಟೆ ಹೊರೆಯುವ ಮತ್ತು ಹೀಗೆ ಹೊಟ್ಟೆ ಹೊರೆಯುವುದೂ ಕಷ್ಟಕರವಾಗಿ ಪರಿಣಮಿಸಿರುವ ಅಸಂಖ್ಯಾತ ಜನಸಮೂಹಗಳ ಮೂಲಭೂತ ಹಕ್ಕುಗಳ ರಕ್ಷಣೆಯಲ್ಲಿ ಸುಪ್ರೀಂಕೋರ್ಟಿನ ಸಾಂವಿಧಾನಿಕ ಪಾತ್ರ ಅತ್ಯಂತ ಪ್ರಮುಖ.

ಸರ್ಕಾರಿ ಆದೇಶದ ಮೇರೆಗೆ ಕಳೆದ ಮಾರ್ಚ್ 24ರಿಂದ ಇಡೀ ದೇಶ ಮತ್ತು ಅದರ ಆರ್ಥಿಕ ವ್ಯವಸ್ಥೆಗೆ ಬೀಗ ಬಿದ್ದಿರುವ ಇಂದಿನ ಬಿಕ್ಕಟ್ಟಿನ ಸ್ಥಿತಿಯಲ್ಲಿ ಸುಪ್ರೀಂಕೋರ್ಟ್ ಪಾತ್ರ ಮತ್ತು ಕರ್ತವ್ಯ ಅಪಾರ ಪ್ರಾಮುಖ್ಯತೆ ಗಳಿಸಿಕೊಳ್ಳುತ್ತದೆ. ದೇಶದ ಶೇ.75ಕ್ಕೂ ಹೆಚ್ಚು ಶ್ರಮಜೀವಿಗಳು ಅಸಂಘಟಿತ ವಲಯದಲ್ಲಿರುವವರು. ಆರ್ಥಿಕ ಚಟುವಟಿಕೆಯ ಸ್ಥಗಿತವು ಅವರ ಹೊಟ್ಟೆಪಾಡುಗಳ ಮೇಲೆ ತಕ್ಷಣದ ಪರಿಣಾಮ ಬೀರುತ್ತದೆ.

ಕೋಟಿಗಳ ಸಂಖ್ಯೆಗಳಲ್ಲಿರುವ ಈ ಶ್ರಮಿಕ ವರ್ಗ ಮುಖ್ಯವಾಗಿ ವಲಸೆ ಕಾರ್ಮಿಕ ಸ್ವರೂಪದ್ದು. ಮಾರ್ಚ್ 24ರಂದು ಲಾಕ್‍ಡೌನ್ ಘೋಷಿಸಿದಾಗ ಇವರ ಪಡಿಪಾಟಲನ್ನು ಲೆಕ್ಕಕ್ಕೇ ಇಟ್ಟುಕೊಳ್ಳಲಿಲ್ಲ. ಕೇವಲ ನಾಲ್ಕು ತಾಸುಗಳ ಕಾಲಾವಧಿಯಲ್ಲಿ ಲಾಕ್‍ಡೌನ್ ಸಾರಲಾಯಿತು. ಈ ಕೋಟ್ಯಂತರ ಕಾರ್ಮಿಕರಿಗೆ ತಮ್ಮ ಊರುಗಳಿಗೆ ತೆರಳುವ ಅವಕಾಶವನ್ನೇ ನೀಡಲಿಲ್ಲ. ಬೇರೆ ದಾರಿಯೇ ಇಲ್ಲದೆ ಹಸಿವು ಹತಾಶೆಗಳಿಂದ ನಡೆಯತೊಡಗಿದ ಇವರನ್ನು ಸರ್ಕಾರಗಳು ತಡೆಯುವ ಪ್ರಯತ್ನ ಮಾಡಿದವು.

ಕಳೆದ ಮಾರ್ಚ್ ತಿಂಗಳಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್ ವಿಫಲವಾದ ಕಾರಣ ಲಕ್ಷೋಪಲಕ್ಷ ಕಾರ್ಮಿಕರು ತಮ್ಮ ಸಣ್ಣಪುಟ್ಟ ಇಕ್ಕಟ್ಟಿನ ಖೋಲಿಗಳಲ್ಲೋ, ರಸ್ತೆಬದಿಯ ಕಾಲುದಾರಿಗಳಲ್ಲೋ ಉದ್ಯೋಗವಿಲ್ಲದೆ, ಒಪ್ಪೊತ್ತಿನ ಊಟಕ್ಕೂ ದಾರಿಯಲ್ಲದೆ ದಿನ ದೂಡುವಂತಾಯಿತು. ಆಗ ಕೋವಿಡ್ ಕೇಸುಗಳ ಸಂಖ್ಯೆ ಕೆಲವೇ ನೂರರಷ್ಟಿತ್ತು. ಅವರನ್ನು ಮರಳಲು ಬಿಡದೆ ಕಟ್ಟಿ ಹಾಕಿದ ಈ ಬಲಾತ್ಕಾರವು ಈ ಬಡಪಾಯಿಗಳನ್ನು ಕೋವಿಡ್ ಮಹಾಮಾರಿಯ ಸೋಂಕಿನ ಅಪಾಯಕ್ಕೆ ನೇರವಾಗಿ ನೂಕಿದಂತಾಗಿತ್ತು.

ಸರ್ಕಾರದ ಹೇಳಿಕೆಯು ವಾಸ್ತವ ಸ್ಥಿತಿಗತಿಗಳಿಗೆ ವ್ಯತಿರಿಕ್ತವಾಗಿತ್ತು. ಶೇ.90ರಷ್ಟು ವಲಸೆ ಕೆಲಸಗಾರರಿಗೆ ಸರ್ಕಾರಿ ಪಡಿತರ ಸಿಗಲಿಲ್ಲವೆಂದೂ, ಆಹಾರದ ತೀವ್ರ ಕೊರತೆಗೆ ತುತ್ತಾಗಿದ್ದಾರೆಂದೂ ಹಲವು ವರದಿಗಳು ಹೇಳಿದವು.

ಮಾರ್ಚ್ ತಿಂಗಳಿನಲ್ಲಿ ಸುಪ್ರೀಂಕೋರ್ಟು ಮಧ್ಯಪ್ರವೇಶಿಸಲು ವಿಫಲವಾದ ನಂತರ ಲಕ್ಷೋಪಲಕ್ಷ ಕಾರ್ಮಿಕರ ಮಹಾವಲಸೆ ಮೊದಲಾಯಿತು. ಆ ಹೊತ್ತಿಗೆ ಕೋವಿಡ್ ಸೋಂಕಿತರ ಸಂಖ್ಯೆ 50 ಸಾವಿರ ದಾಟಿತ್ತು. ಈ ಕಾರ್ಮಿಕರೂ ಸೋಂಕಿಗೆ ತುತ್ತಾದರು. ಈ ಹಂತದಲ್ಲೂ ಇವರ ಸಂಚಾರವನ್ನು ಸರ್ಕಾರ ಪ್ರತಿಬಂಧಿಸಿತ್ತು. ನಡೆದು ಹೋಗುವ ಬಡಪಾಯಿಗಳನ್ನೂ ತಡೆದು ಥಳಿಸಿದವು ಪೊಲೀಸರ ಲಾಠಿಗಳು. ಬೀದಿಗೆ ಬಿದ್ದಿದ್ದವರನ್ನು ಬಗೆ ಬಗೆಯಾಗಿ ಅವಮಾನಿಸಲಾಯಿತು. ತರುವಾಯ ಬಸ್ಸುಗಳು ಮತ್ತು ಟ್ರೇನುಗಳಲ್ಲಿ ಅವರ ಸಂಚಾರಕ್ಕೆ ಅನುಮತಿ ನೀಡಲಾಯಿತು. ವೈದ್ಯಕೀಯ ಪ್ರಮಾಣಪತ್ರ ತರಬೇಕೆಂಬ ಅಸಾಧ್ಯ ಷರತ್ತನ್ನು ಈ ಬಡಪಾಯಿಗಳಿಗೆ ವಿಧಿಸಲಾಯಿತು. ರಸ್ತೆ ಮಾರ್ಗವಾಗಿ ಸಾಗಾಟದ ಏರ್ಪಾಡು ಮಾಡಿದಾಗಲೂ ಅವರವರ ರಾಜ್ಯಗಳ ಸರಹದ್ದುಗಳಲ್ಲೇ ಅವರನ್ನು ಇಳಿಸಲಾಯಿತು. ರಾಜ್ಯ ಸರ್ಕಾರಗಳು ಇವರನ್ನು ಬರಮಾಡಿಕೊಳ್ಳಲು ತಯಾರಿರಲಿಲ್ಲ. ಈ ಬಡಪಾಯಿಗಳ ಹಕ್ಕುಗಳಿಗೆ ಅರ್ಥವೇ ಇಲ್ಲವಾಯಿತು.

ಲಾಕ್‍ಡೌನ್- 2ರಲ್ಲೂ ಈ ಲಕ್ಷ ಲಕ್ಷ ನಿರ್ಗತಿಕರ ಇರವನ್ನೇ ಗುರುತಿಸಲಿಲ್ಲ ಕೇಂದ್ರ ಸರ್ಕಾರ. ಇನ್ನು ಅವರ ಬವಣೆಯನ್ನು ನಿವಾರಿಸುವುದು ದೂರವೇ ಉಳಿಯಿತು.

ವಲಸೆ ಕಾರ್ಮಿಕರ ಕಣ್ಣೀರು ಒರೆಸುವ ಅವಕಾಶವನ್ನು 2020ರ ಮೇ 15ರಂದು ಇನ್ನೊಮ್ಮೆ ಕಳೆದುಕೊಂಡಿತು. ಹೆದ್ದಾರಿಗಳು, ರೈಲುದಾರಿಗಳಲ್ಲಿ ಸಾವಿರಾರು ಕಿ.ಮೀ. ಉದ್ದಕ್ಕೆ ದುಃಖ ಹಸಿವು ವ್ಯಥೆ ವಿಷಾದ ಹಾಗೂ ತಬ್ಬಲಿ ಭಾವಗಳ ನದಿಗಳಂತೆ ಹರಿಯತೊಡಗಿದ್ದರು ವಲಸೆ ಕಾರ್ಮಿಕರು. ಅವರನ್ನು ಗುರುತಿಸಿ ಅನ್ನ- ನೀರು-ನೆರಳು ಹಾಗೂ ಉಚಿತ ಪಯಣವನ್ನು ಏರ್ಪಡಿಸುವಂತೆ ದೇಶದ ಎಲ್ಲ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಬೇಕೆಂಬ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿತು. ಅರ್ಜಿಯ ಗುಣಗಳನ್ನು ಪರಿಗಣಿಸಲೂ ಇಲ್ಲ.

ಸರ್ಕಾರದ ಪರವಾಗಿ ಮಂಡಿಸಲಾಗುವ ಹೇಳಿಕೆಗಳಿಗೆ ನ್ಯಾಯಾಲಯ ನೀಡುತ್ತಿರುವ ಸಾಂಸ್ಥಿಕ ಗೌರವ- ಮಾನ್ಯತೆ-ಮನ್ನಣೆ ಮತ್ತು ಈ ಅಗಾಧ ಮಾನವೀಯ ಬಿಕ್ಕಟ್ಟಿನ ಕುರಿತು ನ್ಯಾಯಾಲಯ ತೋರಿರುವ ನಿರ್ಲಕ್ಷ್ಯವನ್ನು ತಕ್ಷಣವೇ ಸರಿಪಡಿಸಬೇಕು. ಇಲ್ಲದೆ ಹೋದರೆ ಲಕ್ಷೋಪಲಕ್ಷ ಹಸಿದ ನಿರ್ಗತಿಕ ವಲಸಿಗರ ಸಂಬಂಧ ತಾನು ವಹಿಸಬೇಕಿರುವ ಸಾಂವಿಧಾನಿಕ ಪಾತ್ರ ಮತ್ತು ಕರ್ತವ್ಯಗಳಿಂದ ನ್ಯಾಯಾಲಯ ಕೈ ತೊಳೆದುಕೊಂಡಂತೆಯೇ ಸರಿ.

ವಿಶೇಷವಾಗಿ ಕೋವಿಡ್-19 ಮಹಾಮಾರಿಯ ಪ್ರಸಕ್ತ ಸನ್ನಿವೇಶದಲ್ಲಿ ಭಾರತೀಯ ಜನತಂತ್ರದ ಉಳಿವು ಮತ್ತು ಕಾನೂನಿನ ಪಾರಮ್ಯವು ಸುಪ್ರೀಂಕೋರ್ಟನ್ನೇ ಅವಲಂಬಿಸಿದೆ. ಪ್ರಭುತ್ವದ ಕ್ರಿಯೆಯ ನಾಗರಿಕರ ಮೂಲಭೂತ ಹಕ್ಕುಗಳನ್ನು ಆಪೋಶನ ತೆಗೆದುಕೊಳ್ಳದಂತೆ ಕಾವಲು ನಿಲ್ಲುವ ತನ್ನ ಸಾಂವಿಧಾನಿಕ ಕರ್ತವ್ಯವನ್ನು ಅದು ಸಕ್ರಿಯವಾಗಿ ನಿಭಾಯಿಸಬೇಕಿದೆ.

ಇಂದಿಗೂ ಈ ಹೊತ್ತಿಗೂ ವಲಸೆ ಕಾರ್ಮಿಕರ ಸಂಕಟ ಮುಂದುವರೆದಿದೆ. ಲಕ್ಷಾಂತರ ಜನ ರೇಲ್ವೆ ನಿಲ್ದಾಣಗಳು ಮತ್ತು ರಾಜ್ಯಗಳ ಸರಹದ್ದುಗಳಲ್ಲಿ ಸಿಕ್ಕಿಬಿದ್ದಿದ್ದಾರೆ. ಇವರಿಗೆ ಅನ್ನ ನೀರು ನೆರಳು ಹಾಗೂ ಪ್ರಯಾಣ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡುವಂತೆ ನಾವು ಸುಪ್ರೀಂಕೋರ್ಟನ್ನು ಆಗ್ರಹಪಡಿಸುತ್ತೇವೆ. ಅನ್ಯಾಯ ಎಲ್ಲಿಯೇ ಜರುಗಿದರೂ ಅದು ನ್ಯಾಯಕ್ಕೆ ಎಲ್ಲೆಡೆಯೂ ಗಂಡಾಂತರವೇ ಎಂಬ ಮಾರ್ಟಿನ್ ಲೂಥರ್ ಕಿಂಗ್ ಜ್ಯೂನಿಯರ್ ಅವರ ಮಾತನ್ನು ಇಲ್ಲಿ ನೆನಪಿಸಬಯಸುತ್ತೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...