Homeಕರ್ನಾಟಕಬಿಜೆಪಿ ಭ್ರಷ್ಟಾಚಾರಕ್ಕೆ ಬೇಸತ್ತು ಆಮ್‌ ಆದ್ಮಿ ಪಕ್ಷ ಸೇರಿದ ವಿರಾಜಪೇಟೆ ಮಾಜಿ ಶಾಸಕ ಎಚ್. ಡಿ.ಬಸವರಾಜು

ಬಿಜೆಪಿ ಭ್ರಷ್ಟಾಚಾರಕ್ಕೆ ಬೇಸತ್ತು ಆಮ್‌ ಆದ್ಮಿ ಪಕ್ಷ ಸೇರಿದ ವಿರಾಜಪೇಟೆ ಮಾಜಿ ಶಾಸಕ ಎಚ್. ಡಿ.ಬಸವರಾಜು

- Advertisement -
- Advertisement -

ಸ್ವಪಕ್ಷದಲ್ಲಿನ ಭ್ರಷ್ಟಾಚಾರ ಮತ್ತು ಗುಂಪುಗಾರಿಯಿಂದ ಬೇಸತ್ತು ವಿರಾಜ ಪೇಟೆ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಹೆಚ್.ಡಿ.ಬಸವರಾಜು ಇಂದು ಆಮ್ ಆದ್ಮಿ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ಪಕ್ಷ ಭ್ರಷ್ಟರ ಕೂಪವಾಗಿದೆ. ಪಕ್ಷದಲ್ಲಿ ಗುಂಪುಗಾರಿಕೆ, ಸ್ವಜನಪಕ್ಷಪಾತದಿಂದ ಹಿಂದುಳಿದ ಸಮುದಾಯಗಳ ನಾಯಕರನ್ನು ವ್ಯವಸ್ಥಿತವಾಗಿ ತುಳಿಯುವ ಕೆಲಸ ನಡೆಯುತ್ತಿದೆ. ಹೀಗಾಗಿ ಬಿಜೆಪಿ ತೊರೆದು ಆಮ್ ಆದ್ಮಿ ಪಕ್ಷವನ್ನು ಸೇರಿರುವುದಾಗಿ ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಬಿಜೆಪಿಯ ದುರಾಡಳಿತ, ವಿರೋಧ ಪಕ್ಷಗಳ ಅಸಮರ್ಥತೆಯಿಂದ ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.ಲಸಿಕೆ ಸೇರಿದಂತೆ ಕೊರಾನಾ ವಿರುದ್ಧ ಹೋರಾಡುವ ಬದಲು ಬಿಎಸ್‌.ಯಡಿಯೂರಪ್ಪನವರ ಸರ್ಕಾರದ ನಾಯಕರು ಮುಖ್ಯಮಂತ್ರಿ ಕುರ್ಚಿ ಹಿಡಿದು ಎಳೆದಾಡುತ್ತಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್‌ ಕಥೆ ಕೂಡ ಇದೇ. ಜನರು ಗೆಲ್ಲಿಸಿ ಆಯ್ಕೆ ಮಾಡಿ ಕಳುಹಿಸಿದ ಜನಪ್ರತಿನಿಧಿಗಳು, ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಗಳು ಅಧಿಕಾರದ ಅಮಲಿನಲ್ಲಿ ತೇಲುತ್ತಿದ್ದಾರೆ ಎಂದು ಅವರು ರಾಜ್ಯ ಹಾಗೂ ಕೇಂದ್ರದಲ್ಲಿನ ಬಿಜೆಪಿ ಸರ್ಕಾರವನ್ನು ಟೀಕಿಸಿದರು.

ಅರವಿಂದ್‌ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್‌ ಆದ್ಮಿ ಪಾರ್ಟಿ ದೆಹಲಿಯಲ್ಲಿ ಆರಂಭದ ದಿನದಿಂದಲೂ ಪ್ರಾಮಾಣಿಕತೆಯೊಂದಿಗೆ ಯಾವುದೇ ರಾಜಿ ಮಾಡಿಕೊಳ್ಳದೇ ಮುನ್ನಡೆಯುತ್ತಿದೆ. ಕಳಂಕರಹಿತ ಹಾಗೂ ಪಾರದರ್ಶಕ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡು ಸಾಮಾನ್ಯ ಜನರ ಧ್ವನಿಯಾಗಿ ದೆಹಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಆಮ್ ಆದ್ಮಿ ಪಕ್ಷದ ಸಿದ್ದಾಂತ ಮತ್ತು ಉದ್ಧೇಶಗಳಿಗನುಗುಣವಾಗಿ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಮುಂದಾಗುತ್ತೇನೆ ಎಂದು ಅವರು ಇದೇ ಸಂದರ್ಭದಲ್ಲಿ ತಮ್ಮ ಮುಂದಿನ ರಾಜಕೀಯ ನಡೆಯನ್ನು ತೆರೆದಿಟ್ಟರು.

ಇದನ್ನೂ ಓದಿ: ಕಾರ್ಕಳ: ಬಿಜೆಪಿ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್‌‌ ಕಾರ್ಯಕರ್ತನಿಗೆ ಇನ್ಸ್‌ಪೆಕ್ಟರ್‌‌‌ನಿಂದ ಹಲ್ಲೆ ಆರೋಪ

ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್‌ ಹಾಗೂ ಕರ್ನಾಟಕ ಅಹಿಂದ ಪರಿಷತ್‌ನ ಅಧ್ಯಕ್ಷರಾಗಿ ಎಚ್‌.ಡಿ.ಬಸವರಾಜು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಹಿಂದ ವರ್ಗದ, ವಿಶೇಷವಾಗಿ ಪರಿಶಿಷ್ಟ ಪಂಗಡದ ಹಿರಿಯ ನಾಯಕರಾಗಿರುವ ಡಿ.ಬಸವರಾಜು AAP ಸೇರಿರುವುದರಿಂದ ಪಕ್ಷಕ್ಕೆ ಆನೆಬಲ ಬಂದಂತಾಗಿದೆ. ಅವರನ್ನು ಆಮ್‌ ಆದ್ಮಿ ಪಾರ್ಟಿಯು ತುಂಬು ಹೃದಯದಿಂದ ಬರಮಾಡಿಕೊಳ್ಳುತ್ತಿದೆ ಎಂದು ಪಕ್ಷದ ರಾಜ್ಯ ಸಂಚಾಲಕ ಪ್ರಥ್ವಿ ರೆಡ್ಡಿ ಹರ್ಷ ವ್ಯಕ್ತಪಡಿಸಿದರು. ದೇಶಾದ್ಯಂತ ಅನೇಕ ಸಾಧಕರು, ಗಣ್ಯ ವ್ಯಕ್ತಿಗಳು ಹಾಗೂ ವಿವಿಧ ಪಕ್ಷಗಳು ಮುಖಂಡರು ನಮ್ಮ ಪಕ್ಷವನ್ನು ಸೇರಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನಮಗೆ ಬೆಂಬಲ ವ್ಯಕ್ತವಾಗಲಿದ್ದು, ಕರ್ನಾಟಕದ ಅನೇಕ ಶಾಸಕರು, ಮಾಜಿ ಶಾಸಕರು ಎಎಪಿಯನ್ನು ಸೇರಲಿದ್ದಾರೆ ಎಂದು ಪ್ರಥ್ವಿ ರೆಡ್ಡಿ ಇದೇ ಸಂದರ್ಭದಲ್ಲಿ ಹೇಳಿದರು.

ಆಮ್‌ ಆದ್ಮಿ ಪಕ್ಷದ ಕರ್ನಾಟಕ ಉಸ್ತುವಾರಿ ರೋಮಿ ಭಾಟಿ ಮಾತನಾಡಿ ಬಿ ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಭೃಷ್ಟಾಚಾರದಲ್ಲಿ ಮುಳುಗಿದೆ. ಕೊರೊನಾ ಸಂತ್ರಸ್ತರ ನೋವಿಗೆ ಸ್ಪಂದಿಸದ ಬಿಜೆಪಿಯ ದುರಾಡಳಿತದಿಂದ ದೇಶದ ಜನರು ಬೇಸತ್ತಿದ್ದಾರೆ. ಬದಲಾವಣೆ ಬಯಸಿರುವ ಜನತೆ ಮುಂದಿನ ಚುನಾವಣೆಗಳಲ್ಲಿ ಅರವಿಂದ್‌ ಕೇಜ್ರಿವಾಲ್ ನೇತೃತ್ವದ ಆಮ್‌ ಆದ್ಮಿ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಎಚ್‌.ಡಿ.ಬಸವರಾಜು 1994ರಲ್ಲಿ ಮತ್ತು 2004ರಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.  2003ರಿಂದ 2005ರ ತನಕ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆರ್ಥಿಕ ಹಾಗೂ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ, 2005ರಿಂದ 2007ರವರೆಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾವಲು ಹಾಗೂ ನಿರ್ವಹಣೆ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ರೋಮಿ ಭಾಟಿ, ಪೃಥ್ವಿ ರೆಡ್ಡಿ, ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್‌ ದಾಸರಿ, ಬೆಂಗಳೂರು ಘಟಕದ ಉಪಾಧ್ಯಕ್ಷ ಬಿಟಿ ನಾಗಣ್ಣ, ಪಕ್ಷದ ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಲಕ್ಷಿಕಾಂತ್ ಕಾಂತ್ ರಾವ್ ಹಾಗೂ ಮಾಧ್ಯಮ ಸಂಚಾಲಕ ಜಗದೀಶ್ ಸದಂ ಸೇರಿದಂತೆ ಇನ್ನೂ ಅನೇಕ ಆಮ್‌ ಆದ್ಮಿ ಪಕ್ಷದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...