Homeಕರ್ನಾಟಕಬಿಜೆಪಿ ಭ್ರಷ್ಟಾಚಾರಕ್ಕೆ ಬೇಸತ್ತು ಆಮ್‌ ಆದ್ಮಿ ಪಕ್ಷ ಸೇರಿದ ವಿರಾಜಪೇಟೆ ಮಾಜಿ ಶಾಸಕ ಎಚ್. ಡಿ.ಬಸವರಾಜು

ಬಿಜೆಪಿ ಭ್ರಷ್ಟಾಚಾರಕ್ಕೆ ಬೇಸತ್ತು ಆಮ್‌ ಆದ್ಮಿ ಪಕ್ಷ ಸೇರಿದ ವಿರಾಜಪೇಟೆ ಮಾಜಿ ಶಾಸಕ ಎಚ್. ಡಿ.ಬಸವರಾಜು

- Advertisement -
- Advertisement -

ಸ್ವಪಕ್ಷದಲ್ಲಿನ ಭ್ರಷ್ಟಾಚಾರ ಮತ್ತು ಗುಂಪುಗಾರಿಯಿಂದ ಬೇಸತ್ತು ವಿರಾಜ ಪೇಟೆ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಹೆಚ್.ಡಿ.ಬಸವರಾಜು ಇಂದು ಆಮ್ ಆದ್ಮಿ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ಪಕ್ಷ ಭ್ರಷ್ಟರ ಕೂಪವಾಗಿದೆ. ಪಕ್ಷದಲ್ಲಿ ಗುಂಪುಗಾರಿಕೆ, ಸ್ವಜನಪಕ್ಷಪಾತದಿಂದ ಹಿಂದುಳಿದ ಸಮುದಾಯಗಳ ನಾಯಕರನ್ನು ವ್ಯವಸ್ಥಿತವಾಗಿ ತುಳಿಯುವ ಕೆಲಸ ನಡೆಯುತ್ತಿದೆ. ಹೀಗಾಗಿ ಬಿಜೆಪಿ ತೊರೆದು ಆಮ್ ಆದ್ಮಿ ಪಕ್ಷವನ್ನು ಸೇರಿರುವುದಾಗಿ ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಬಿಜೆಪಿಯ ದುರಾಡಳಿತ, ವಿರೋಧ ಪಕ್ಷಗಳ ಅಸಮರ್ಥತೆಯಿಂದ ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.ಲಸಿಕೆ ಸೇರಿದಂತೆ ಕೊರಾನಾ ವಿರುದ್ಧ ಹೋರಾಡುವ ಬದಲು ಬಿಎಸ್‌.ಯಡಿಯೂರಪ್ಪನವರ ಸರ್ಕಾರದ ನಾಯಕರು ಮುಖ್ಯಮಂತ್ರಿ ಕುರ್ಚಿ ಹಿಡಿದು ಎಳೆದಾಡುತ್ತಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್‌ ಕಥೆ ಕೂಡ ಇದೇ. ಜನರು ಗೆಲ್ಲಿಸಿ ಆಯ್ಕೆ ಮಾಡಿ ಕಳುಹಿಸಿದ ಜನಪ್ರತಿನಿಧಿಗಳು, ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಗಳು ಅಧಿಕಾರದ ಅಮಲಿನಲ್ಲಿ ತೇಲುತ್ತಿದ್ದಾರೆ ಎಂದು ಅವರು ರಾಜ್ಯ ಹಾಗೂ ಕೇಂದ್ರದಲ್ಲಿನ ಬಿಜೆಪಿ ಸರ್ಕಾರವನ್ನು ಟೀಕಿಸಿದರು.

ಅರವಿಂದ್‌ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್‌ ಆದ್ಮಿ ಪಾರ್ಟಿ ದೆಹಲಿಯಲ್ಲಿ ಆರಂಭದ ದಿನದಿಂದಲೂ ಪ್ರಾಮಾಣಿಕತೆಯೊಂದಿಗೆ ಯಾವುದೇ ರಾಜಿ ಮಾಡಿಕೊಳ್ಳದೇ ಮುನ್ನಡೆಯುತ್ತಿದೆ. ಕಳಂಕರಹಿತ ಹಾಗೂ ಪಾರದರ್ಶಕ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡು ಸಾಮಾನ್ಯ ಜನರ ಧ್ವನಿಯಾಗಿ ದೆಹಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಆಮ್ ಆದ್ಮಿ ಪಕ್ಷದ ಸಿದ್ದಾಂತ ಮತ್ತು ಉದ್ಧೇಶಗಳಿಗನುಗುಣವಾಗಿ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಮುಂದಾಗುತ್ತೇನೆ ಎಂದು ಅವರು ಇದೇ ಸಂದರ್ಭದಲ್ಲಿ ತಮ್ಮ ಮುಂದಿನ ರಾಜಕೀಯ ನಡೆಯನ್ನು ತೆರೆದಿಟ್ಟರು.

ಇದನ್ನೂ ಓದಿ: ಕಾರ್ಕಳ: ಬಿಜೆಪಿ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್‌‌ ಕಾರ್ಯಕರ್ತನಿಗೆ ಇನ್ಸ್‌ಪೆಕ್ಟರ್‌‌‌ನಿಂದ ಹಲ್ಲೆ ಆರೋಪ

ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್‌ ಹಾಗೂ ಕರ್ನಾಟಕ ಅಹಿಂದ ಪರಿಷತ್‌ನ ಅಧ್ಯಕ್ಷರಾಗಿ ಎಚ್‌.ಡಿ.ಬಸವರಾಜು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಹಿಂದ ವರ್ಗದ, ವಿಶೇಷವಾಗಿ ಪರಿಶಿಷ್ಟ ಪಂಗಡದ ಹಿರಿಯ ನಾಯಕರಾಗಿರುವ ಡಿ.ಬಸವರಾಜು AAP ಸೇರಿರುವುದರಿಂದ ಪಕ್ಷಕ್ಕೆ ಆನೆಬಲ ಬಂದಂತಾಗಿದೆ. ಅವರನ್ನು ಆಮ್‌ ಆದ್ಮಿ ಪಾರ್ಟಿಯು ತುಂಬು ಹೃದಯದಿಂದ ಬರಮಾಡಿಕೊಳ್ಳುತ್ತಿದೆ ಎಂದು ಪಕ್ಷದ ರಾಜ್ಯ ಸಂಚಾಲಕ ಪ್ರಥ್ವಿ ರೆಡ್ಡಿ ಹರ್ಷ ವ್ಯಕ್ತಪಡಿಸಿದರು. ದೇಶಾದ್ಯಂತ ಅನೇಕ ಸಾಧಕರು, ಗಣ್ಯ ವ್ಯಕ್ತಿಗಳು ಹಾಗೂ ವಿವಿಧ ಪಕ್ಷಗಳು ಮುಖಂಡರು ನಮ್ಮ ಪಕ್ಷವನ್ನು ಸೇರಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನಮಗೆ ಬೆಂಬಲ ವ್ಯಕ್ತವಾಗಲಿದ್ದು, ಕರ್ನಾಟಕದ ಅನೇಕ ಶಾಸಕರು, ಮಾಜಿ ಶಾಸಕರು ಎಎಪಿಯನ್ನು ಸೇರಲಿದ್ದಾರೆ ಎಂದು ಪ್ರಥ್ವಿ ರೆಡ್ಡಿ ಇದೇ ಸಂದರ್ಭದಲ್ಲಿ ಹೇಳಿದರು.

ಆಮ್‌ ಆದ್ಮಿ ಪಕ್ಷದ ಕರ್ನಾಟಕ ಉಸ್ತುವಾರಿ ರೋಮಿ ಭಾಟಿ ಮಾತನಾಡಿ ಬಿ ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಭೃಷ್ಟಾಚಾರದಲ್ಲಿ ಮುಳುಗಿದೆ. ಕೊರೊನಾ ಸಂತ್ರಸ್ತರ ನೋವಿಗೆ ಸ್ಪಂದಿಸದ ಬಿಜೆಪಿಯ ದುರಾಡಳಿತದಿಂದ ದೇಶದ ಜನರು ಬೇಸತ್ತಿದ್ದಾರೆ. ಬದಲಾವಣೆ ಬಯಸಿರುವ ಜನತೆ ಮುಂದಿನ ಚುನಾವಣೆಗಳಲ್ಲಿ ಅರವಿಂದ್‌ ಕೇಜ್ರಿವಾಲ್ ನೇತೃತ್ವದ ಆಮ್‌ ಆದ್ಮಿ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಎಚ್‌.ಡಿ.ಬಸವರಾಜು 1994ರಲ್ಲಿ ಮತ್ತು 2004ರಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.  2003ರಿಂದ 2005ರ ತನಕ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆರ್ಥಿಕ ಹಾಗೂ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ, 2005ರಿಂದ 2007ರವರೆಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾವಲು ಹಾಗೂ ನಿರ್ವಹಣೆ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ರೋಮಿ ಭಾಟಿ, ಪೃಥ್ವಿ ರೆಡ್ಡಿ, ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್‌ ದಾಸರಿ, ಬೆಂಗಳೂರು ಘಟಕದ ಉಪಾಧ್ಯಕ್ಷ ಬಿಟಿ ನಾಗಣ್ಣ, ಪಕ್ಷದ ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಲಕ್ಷಿಕಾಂತ್ ಕಾಂತ್ ರಾವ್ ಹಾಗೂ ಮಾಧ್ಯಮ ಸಂಚಾಲಕ ಜಗದೀಶ್ ಸದಂ ಸೇರಿದಂತೆ ಇನ್ನೂ ಅನೇಕ ಆಮ್‌ ಆದ್ಮಿ ಪಕ್ಷದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...