Homeಕರ್ನಾಟಕಬಿಜೆಪಿ ಭ್ರಷ್ಟಾಚಾರಕ್ಕೆ ಬೇಸತ್ತು ಆಮ್‌ ಆದ್ಮಿ ಪಕ್ಷ ಸೇರಿದ ವಿರಾಜಪೇಟೆ ಮಾಜಿ ಶಾಸಕ ಎಚ್. ಡಿ.ಬಸವರಾಜು

ಬಿಜೆಪಿ ಭ್ರಷ್ಟಾಚಾರಕ್ಕೆ ಬೇಸತ್ತು ಆಮ್‌ ಆದ್ಮಿ ಪಕ್ಷ ಸೇರಿದ ವಿರಾಜಪೇಟೆ ಮಾಜಿ ಶಾಸಕ ಎಚ್. ಡಿ.ಬಸವರಾಜು

- Advertisement -
- Advertisement -

ಸ್ವಪಕ್ಷದಲ್ಲಿನ ಭ್ರಷ್ಟಾಚಾರ ಮತ್ತು ಗುಂಪುಗಾರಿಯಿಂದ ಬೇಸತ್ತು ವಿರಾಜ ಪೇಟೆ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಹೆಚ್.ಡಿ.ಬಸವರಾಜು ಇಂದು ಆಮ್ ಆದ್ಮಿ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ಪಕ್ಷ ಭ್ರಷ್ಟರ ಕೂಪವಾಗಿದೆ. ಪಕ್ಷದಲ್ಲಿ ಗುಂಪುಗಾರಿಕೆ, ಸ್ವಜನಪಕ್ಷಪಾತದಿಂದ ಹಿಂದುಳಿದ ಸಮುದಾಯಗಳ ನಾಯಕರನ್ನು ವ್ಯವಸ್ಥಿತವಾಗಿ ತುಳಿಯುವ ಕೆಲಸ ನಡೆಯುತ್ತಿದೆ. ಹೀಗಾಗಿ ಬಿಜೆಪಿ ತೊರೆದು ಆಮ್ ಆದ್ಮಿ ಪಕ್ಷವನ್ನು ಸೇರಿರುವುದಾಗಿ ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಬಿಜೆಪಿಯ ದುರಾಡಳಿತ, ವಿರೋಧ ಪಕ್ಷಗಳ ಅಸಮರ್ಥತೆಯಿಂದ ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.ಲಸಿಕೆ ಸೇರಿದಂತೆ ಕೊರಾನಾ ವಿರುದ್ಧ ಹೋರಾಡುವ ಬದಲು ಬಿಎಸ್‌.ಯಡಿಯೂರಪ್ಪನವರ ಸರ್ಕಾರದ ನಾಯಕರು ಮುಖ್ಯಮಂತ್ರಿ ಕುರ್ಚಿ ಹಿಡಿದು ಎಳೆದಾಡುತ್ತಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್‌ ಕಥೆ ಕೂಡ ಇದೇ. ಜನರು ಗೆಲ್ಲಿಸಿ ಆಯ್ಕೆ ಮಾಡಿ ಕಳುಹಿಸಿದ ಜನಪ್ರತಿನಿಧಿಗಳು, ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಗಳು ಅಧಿಕಾರದ ಅಮಲಿನಲ್ಲಿ ತೇಲುತ್ತಿದ್ದಾರೆ ಎಂದು ಅವರು ರಾಜ್ಯ ಹಾಗೂ ಕೇಂದ್ರದಲ್ಲಿನ ಬಿಜೆಪಿ ಸರ್ಕಾರವನ್ನು ಟೀಕಿಸಿದರು.

ಅರವಿಂದ್‌ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್‌ ಆದ್ಮಿ ಪಾರ್ಟಿ ದೆಹಲಿಯಲ್ಲಿ ಆರಂಭದ ದಿನದಿಂದಲೂ ಪ್ರಾಮಾಣಿಕತೆಯೊಂದಿಗೆ ಯಾವುದೇ ರಾಜಿ ಮಾಡಿಕೊಳ್ಳದೇ ಮುನ್ನಡೆಯುತ್ತಿದೆ. ಕಳಂಕರಹಿತ ಹಾಗೂ ಪಾರದರ್ಶಕ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡು ಸಾಮಾನ್ಯ ಜನರ ಧ್ವನಿಯಾಗಿ ದೆಹಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಆಮ್ ಆದ್ಮಿ ಪಕ್ಷದ ಸಿದ್ದಾಂತ ಮತ್ತು ಉದ್ಧೇಶಗಳಿಗನುಗುಣವಾಗಿ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಮುಂದಾಗುತ್ತೇನೆ ಎಂದು ಅವರು ಇದೇ ಸಂದರ್ಭದಲ್ಲಿ ತಮ್ಮ ಮುಂದಿನ ರಾಜಕೀಯ ನಡೆಯನ್ನು ತೆರೆದಿಟ್ಟರು.

ಇದನ್ನೂ ಓದಿ: ಕಾರ್ಕಳ: ಬಿಜೆಪಿ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್‌‌ ಕಾರ್ಯಕರ್ತನಿಗೆ ಇನ್ಸ್‌ಪೆಕ್ಟರ್‌‌‌ನಿಂದ ಹಲ್ಲೆ ಆರೋಪ

ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್‌ ಹಾಗೂ ಕರ್ನಾಟಕ ಅಹಿಂದ ಪರಿಷತ್‌ನ ಅಧ್ಯಕ್ಷರಾಗಿ ಎಚ್‌.ಡಿ.ಬಸವರಾಜು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಹಿಂದ ವರ್ಗದ, ವಿಶೇಷವಾಗಿ ಪರಿಶಿಷ್ಟ ಪಂಗಡದ ಹಿರಿಯ ನಾಯಕರಾಗಿರುವ ಡಿ.ಬಸವರಾಜು AAP ಸೇರಿರುವುದರಿಂದ ಪಕ್ಷಕ್ಕೆ ಆನೆಬಲ ಬಂದಂತಾಗಿದೆ. ಅವರನ್ನು ಆಮ್‌ ಆದ್ಮಿ ಪಾರ್ಟಿಯು ತುಂಬು ಹೃದಯದಿಂದ ಬರಮಾಡಿಕೊಳ್ಳುತ್ತಿದೆ ಎಂದು ಪಕ್ಷದ ರಾಜ್ಯ ಸಂಚಾಲಕ ಪ್ರಥ್ವಿ ರೆಡ್ಡಿ ಹರ್ಷ ವ್ಯಕ್ತಪಡಿಸಿದರು. ದೇಶಾದ್ಯಂತ ಅನೇಕ ಸಾಧಕರು, ಗಣ್ಯ ವ್ಯಕ್ತಿಗಳು ಹಾಗೂ ವಿವಿಧ ಪಕ್ಷಗಳು ಮುಖಂಡರು ನಮ್ಮ ಪಕ್ಷವನ್ನು ಸೇರಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನಮಗೆ ಬೆಂಬಲ ವ್ಯಕ್ತವಾಗಲಿದ್ದು, ಕರ್ನಾಟಕದ ಅನೇಕ ಶಾಸಕರು, ಮಾಜಿ ಶಾಸಕರು ಎಎಪಿಯನ್ನು ಸೇರಲಿದ್ದಾರೆ ಎಂದು ಪ್ರಥ್ವಿ ರೆಡ್ಡಿ ಇದೇ ಸಂದರ್ಭದಲ್ಲಿ ಹೇಳಿದರು.

ಆಮ್‌ ಆದ್ಮಿ ಪಕ್ಷದ ಕರ್ನಾಟಕ ಉಸ್ತುವಾರಿ ರೋಮಿ ಭಾಟಿ ಮಾತನಾಡಿ ಬಿ ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಭೃಷ್ಟಾಚಾರದಲ್ಲಿ ಮುಳುಗಿದೆ. ಕೊರೊನಾ ಸಂತ್ರಸ್ತರ ನೋವಿಗೆ ಸ್ಪಂದಿಸದ ಬಿಜೆಪಿಯ ದುರಾಡಳಿತದಿಂದ ದೇಶದ ಜನರು ಬೇಸತ್ತಿದ್ದಾರೆ. ಬದಲಾವಣೆ ಬಯಸಿರುವ ಜನತೆ ಮುಂದಿನ ಚುನಾವಣೆಗಳಲ್ಲಿ ಅರವಿಂದ್‌ ಕೇಜ್ರಿವಾಲ್ ನೇತೃತ್ವದ ಆಮ್‌ ಆದ್ಮಿ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಎಚ್‌.ಡಿ.ಬಸವರಾಜು 1994ರಲ್ಲಿ ಮತ್ತು 2004ರಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.  2003ರಿಂದ 2005ರ ತನಕ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆರ್ಥಿಕ ಹಾಗೂ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ, 2005ರಿಂದ 2007ರವರೆಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾವಲು ಹಾಗೂ ನಿರ್ವಹಣೆ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ರೋಮಿ ಭಾಟಿ, ಪೃಥ್ವಿ ರೆಡ್ಡಿ, ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್‌ ದಾಸರಿ, ಬೆಂಗಳೂರು ಘಟಕದ ಉಪಾಧ್ಯಕ್ಷ ಬಿಟಿ ನಾಗಣ್ಣ, ಪಕ್ಷದ ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಲಕ್ಷಿಕಾಂತ್ ಕಾಂತ್ ರಾವ್ ಹಾಗೂ ಮಾಧ್ಯಮ ಸಂಚಾಲಕ ಜಗದೀಶ್ ಸದಂ ಸೇರಿದಂತೆ ಇನ್ನೂ ಅನೇಕ ಆಮ್‌ ಆದ್ಮಿ ಪಕ್ಷದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...