Homeಕರ್ನಾಟಕಬಿಜೆಪಿ ಭ್ರಷ್ಟಾಚಾರಕ್ಕೆ ಬೇಸತ್ತು ಆಮ್‌ ಆದ್ಮಿ ಪಕ್ಷ ಸೇರಿದ ವಿರಾಜಪೇಟೆ ಮಾಜಿ ಶಾಸಕ ಎಚ್. ಡಿ.ಬಸವರಾಜು

ಬಿಜೆಪಿ ಭ್ರಷ್ಟಾಚಾರಕ್ಕೆ ಬೇಸತ್ತು ಆಮ್‌ ಆದ್ಮಿ ಪಕ್ಷ ಸೇರಿದ ವಿರಾಜಪೇಟೆ ಮಾಜಿ ಶಾಸಕ ಎಚ್. ಡಿ.ಬಸವರಾಜು

- Advertisement -
- Advertisement -

ಸ್ವಪಕ್ಷದಲ್ಲಿನ ಭ್ರಷ್ಟಾಚಾರ ಮತ್ತು ಗುಂಪುಗಾರಿಯಿಂದ ಬೇಸತ್ತು ವಿರಾಜ ಪೇಟೆ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಹೆಚ್.ಡಿ.ಬಸವರಾಜು ಇಂದು ಆಮ್ ಆದ್ಮಿ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ಪಕ್ಷ ಭ್ರಷ್ಟರ ಕೂಪವಾಗಿದೆ. ಪಕ್ಷದಲ್ಲಿ ಗುಂಪುಗಾರಿಕೆ, ಸ್ವಜನಪಕ್ಷಪಾತದಿಂದ ಹಿಂದುಳಿದ ಸಮುದಾಯಗಳ ನಾಯಕರನ್ನು ವ್ಯವಸ್ಥಿತವಾಗಿ ತುಳಿಯುವ ಕೆಲಸ ನಡೆಯುತ್ತಿದೆ. ಹೀಗಾಗಿ ಬಿಜೆಪಿ ತೊರೆದು ಆಮ್ ಆದ್ಮಿ ಪಕ್ಷವನ್ನು ಸೇರಿರುವುದಾಗಿ ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಬಿಜೆಪಿಯ ದುರಾಡಳಿತ, ವಿರೋಧ ಪಕ್ಷಗಳ ಅಸಮರ್ಥತೆಯಿಂದ ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.ಲಸಿಕೆ ಸೇರಿದಂತೆ ಕೊರಾನಾ ವಿರುದ್ಧ ಹೋರಾಡುವ ಬದಲು ಬಿಎಸ್‌.ಯಡಿಯೂರಪ್ಪನವರ ಸರ್ಕಾರದ ನಾಯಕರು ಮುಖ್ಯಮಂತ್ರಿ ಕುರ್ಚಿ ಹಿಡಿದು ಎಳೆದಾಡುತ್ತಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್‌ ಕಥೆ ಕೂಡ ಇದೇ. ಜನರು ಗೆಲ್ಲಿಸಿ ಆಯ್ಕೆ ಮಾಡಿ ಕಳುಹಿಸಿದ ಜನಪ್ರತಿನಿಧಿಗಳು, ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಗಳು ಅಧಿಕಾರದ ಅಮಲಿನಲ್ಲಿ ತೇಲುತ್ತಿದ್ದಾರೆ ಎಂದು ಅವರು ರಾಜ್ಯ ಹಾಗೂ ಕೇಂದ್ರದಲ್ಲಿನ ಬಿಜೆಪಿ ಸರ್ಕಾರವನ್ನು ಟೀಕಿಸಿದರು.

ಅರವಿಂದ್‌ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್‌ ಆದ್ಮಿ ಪಾರ್ಟಿ ದೆಹಲಿಯಲ್ಲಿ ಆರಂಭದ ದಿನದಿಂದಲೂ ಪ್ರಾಮಾಣಿಕತೆಯೊಂದಿಗೆ ಯಾವುದೇ ರಾಜಿ ಮಾಡಿಕೊಳ್ಳದೇ ಮುನ್ನಡೆಯುತ್ತಿದೆ. ಕಳಂಕರಹಿತ ಹಾಗೂ ಪಾರದರ್ಶಕ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡು ಸಾಮಾನ್ಯ ಜನರ ಧ್ವನಿಯಾಗಿ ದೆಹಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಆಮ್ ಆದ್ಮಿ ಪಕ್ಷದ ಸಿದ್ದಾಂತ ಮತ್ತು ಉದ್ಧೇಶಗಳಿಗನುಗುಣವಾಗಿ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಮುಂದಾಗುತ್ತೇನೆ ಎಂದು ಅವರು ಇದೇ ಸಂದರ್ಭದಲ್ಲಿ ತಮ್ಮ ಮುಂದಿನ ರಾಜಕೀಯ ನಡೆಯನ್ನು ತೆರೆದಿಟ್ಟರು.

ಇದನ್ನೂ ಓದಿ: ಕಾರ್ಕಳ: ಬಿಜೆಪಿ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್‌‌ ಕಾರ್ಯಕರ್ತನಿಗೆ ಇನ್ಸ್‌ಪೆಕ್ಟರ್‌‌‌ನಿಂದ ಹಲ್ಲೆ ಆರೋಪ

ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್‌ ಹಾಗೂ ಕರ್ನಾಟಕ ಅಹಿಂದ ಪರಿಷತ್‌ನ ಅಧ್ಯಕ್ಷರಾಗಿ ಎಚ್‌.ಡಿ.ಬಸವರಾಜು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಹಿಂದ ವರ್ಗದ, ವಿಶೇಷವಾಗಿ ಪರಿಶಿಷ್ಟ ಪಂಗಡದ ಹಿರಿಯ ನಾಯಕರಾಗಿರುವ ಡಿ.ಬಸವರಾಜು AAP ಸೇರಿರುವುದರಿಂದ ಪಕ್ಷಕ್ಕೆ ಆನೆಬಲ ಬಂದಂತಾಗಿದೆ. ಅವರನ್ನು ಆಮ್‌ ಆದ್ಮಿ ಪಾರ್ಟಿಯು ತುಂಬು ಹೃದಯದಿಂದ ಬರಮಾಡಿಕೊಳ್ಳುತ್ತಿದೆ ಎಂದು ಪಕ್ಷದ ರಾಜ್ಯ ಸಂಚಾಲಕ ಪ್ರಥ್ವಿ ರೆಡ್ಡಿ ಹರ್ಷ ವ್ಯಕ್ತಪಡಿಸಿದರು. ದೇಶಾದ್ಯಂತ ಅನೇಕ ಸಾಧಕರು, ಗಣ್ಯ ವ್ಯಕ್ತಿಗಳು ಹಾಗೂ ವಿವಿಧ ಪಕ್ಷಗಳು ಮುಖಂಡರು ನಮ್ಮ ಪಕ್ಷವನ್ನು ಸೇರಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನಮಗೆ ಬೆಂಬಲ ವ್ಯಕ್ತವಾಗಲಿದ್ದು, ಕರ್ನಾಟಕದ ಅನೇಕ ಶಾಸಕರು, ಮಾಜಿ ಶಾಸಕರು ಎಎಪಿಯನ್ನು ಸೇರಲಿದ್ದಾರೆ ಎಂದು ಪ್ರಥ್ವಿ ರೆಡ್ಡಿ ಇದೇ ಸಂದರ್ಭದಲ್ಲಿ ಹೇಳಿದರು.

ಆಮ್‌ ಆದ್ಮಿ ಪಕ್ಷದ ಕರ್ನಾಟಕ ಉಸ್ತುವಾರಿ ರೋಮಿ ಭಾಟಿ ಮಾತನಾಡಿ ಬಿ ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಭೃಷ್ಟಾಚಾರದಲ್ಲಿ ಮುಳುಗಿದೆ. ಕೊರೊನಾ ಸಂತ್ರಸ್ತರ ನೋವಿಗೆ ಸ್ಪಂದಿಸದ ಬಿಜೆಪಿಯ ದುರಾಡಳಿತದಿಂದ ದೇಶದ ಜನರು ಬೇಸತ್ತಿದ್ದಾರೆ. ಬದಲಾವಣೆ ಬಯಸಿರುವ ಜನತೆ ಮುಂದಿನ ಚುನಾವಣೆಗಳಲ್ಲಿ ಅರವಿಂದ್‌ ಕೇಜ್ರಿವಾಲ್ ನೇತೃತ್ವದ ಆಮ್‌ ಆದ್ಮಿ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಎಚ್‌.ಡಿ.ಬಸವರಾಜು 1994ರಲ್ಲಿ ಮತ್ತು 2004ರಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.  2003ರಿಂದ 2005ರ ತನಕ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆರ್ಥಿಕ ಹಾಗೂ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ, 2005ರಿಂದ 2007ರವರೆಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾವಲು ಹಾಗೂ ನಿರ್ವಹಣೆ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ರೋಮಿ ಭಾಟಿ, ಪೃಥ್ವಿ ರೆಡ್ಡಿ, ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್‌ ದಾಸರಿ, ಬೆಂಗಳೂರು ಘಟಕದ ಉಪಾಧ್ಯಕ್ಷ ಬಿಟಿ ನಾಗಣ್ಣ, ಪಕ್ಷದ ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಲಕ್ಷಿಕಾಂತ್ ಕಾಂತ್ ರಾವ್ ಹಾಗೂ ಮಾಧ್ಯಮ ಸಂಚಾಲಕ ಜಗದೀಶ್ ಸದಂ ಸೇರಿದಂತೆ ಇನ್ನೂ ಅನೇಕ ಆಮ್‌ ಆದ್ಮಿ ಪಕ್ಷದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...