Homeಕರ್ನಾಟಕಬಿಜೆಪಿ ಭ್ರಷ್ಟಾಚಾರಕ್ಕೆ ಬೇಸತ್ತು ಆಮ್‌ ಆದ್ಮಿ ಪಕ್ಷ ಸೇರಿದ ವಿರಾಜಪೇಟೆ ಮಾಜಿ ಶಾಸಕ ಎಚ್. ಡಿ.ಬಸವರಾಜು

ಬಿಜೆಪಿ ಭ್ರಷ್ಟಾಚಾರಕ್ಕೆ ಬೇಸತ್ತು ಆಮ್‌ ಆದ್ಮಿ ಪಕ್ಷ ಸೇರಿದ ವಿರಾಜಪೇಟೆ ಮಾಜಿ ಶಾಸಕ ಎಚ್. ಡಿ.ಬಸವರಾಜು

- Advertisement -
- Advertisement -

ಸ್ವಪಕ್ಷದಲ್ಲಿನ ಭ್ರಷ್ಟಾಚಾರ ಮತ್ತು ಗುಂಪುಗಾರಿಯಿಂದ ಬೇಸತ್ತು ವಿರಾಜ ಪೇಟೆ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಹೆಚ್.ಡಿ.ಬಸವರಾಜು ಇಂದು ಆಮ್ ಆದ್ಮಿ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ಪಕ್ಷ ಭ್ರಷ್ಟರ ಕೂಪವಾಗಿದೆ. ಪಕ್ಷದಲ್ಲಿ ಗುಂಪುಗಾರಿಕೆ, ಸ್ವಜನಪಕ್ಷಪಾತದಿಂದ ಹಿಂದುಳಿದ ಸಮುದಾಯಗಳ ನಾಯಕರನ್ನು ವ್ಯವಸ್ಥಿತವಾಗಿ ತುಳಿಯುವ ಕೆಲಸ ನಡೆಯುತ್ತಿದೆ. ಹೀಗಾಗಿ ಬಿಜೆಪಿ ತೊರೆದು ಆಮ್ ಆದ್ಮಿ ಪಕ್ಷವನ್ನು ಸೇರಿರುವುದಾಗಿ ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಬಿಜೆಪಿಯ ದುರಾಡಳಿತ, ವಿರೋಧ ಪಕ್ಷಗಳ ಅಸಮರ್ಥತೆಯಿಂದ ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.ಲಸಿಕೆ ಸೇರಿದಂತೆ ಕೊರಾನಾ ವಿರುದ್ಧ ಹೋರಾಡುವ ಬದಲು ಬಿಎಸ್‌.ಯಡಿಯೂರಪ್ಪನವರ ಸರ್ಕಾರದ ನಾಯಕರು ಮುಖ್ಯಮಂತ್ರಿ ಕುರ್ಚಿ ಹಿಡಿದು ಎಳೆದಾಡುತ್ತಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್‌ ಕಥೆ ಕೂಡ ಇದೇ. ಜನರು ಗೆಲ್ಲಿಸಿ ಆಯ್ಕೆ ಮಾಡಿ ಕಳುಹಿಸಿದ ಜನಪ್ರತಿನಿಧಿಗಳು, ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಗಳು ಅಧಿಕಾರದ ಅಮಲಿನಲ್ಲಿ ತೇಲುತ್ತಿದ್ದಾರೆ ಎಂದು ಅವರು ರಾಜ್ಯ ಹಾಗೂ ಕೇಂದ್ರದಲ್ಲಿನ ಬಿಜೆಪಿ ಸರ್ಕಾರವನ್ನು ಟೀಕಿಸಿದರು.

ಅರವಿಂದ್‌ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್‌ ಆದ್ಮಿ ಪಾರ್ಟಿ ದೆಹಲಿಯಲ್ಲಿ ಆರಂಭದ ದಿನದಿಂದಲೂ ಪ್ರಾಮಾಣಿಕತೆಯೊಂದಿಗೆ ಯಾವುದೇ ರಾಜಿ ಮಾಡಿಕೊಳ್ಳದೇ ಮುನ್ನಡೆಯುತ್ತಿದೆ. ಕಳಂಕರಹಿತ ಹಾಗೂ ಪಾರದರ್ಶಕ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡು ಸಾಮಾನ್ಯ ಜನರ ಧ್ವನಿಯಾಗಿ ದೆಹಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಆಮ್ ಆದ್ಮಿ ಪಕ್ಷದ ಸಿದ್ದಾಂತ ಮತ್ತು ಉದ್ಧೇಶಗಳಿಗನುಗುಣವಾಗಿ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಮುಂದಾಗುತ್ತೇನೆ ಎಂದು ಅವರು ಇದೇ ಸಂದರ್ಭದಲ್ಲಿ ತಮ್ಮ ಮುಂದಿನ ರಾಜಕೀಯ ನಡೆಯನ್ನು ತೆರೆದಿಟ್ಟರು.

ಇದನ್ನೂ ಓದಿ: ಕಾರ್ಕಳ: ಬಿಜೆಪಿ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್‌‌ ಕಾರ್ಯಕರ್ತನಿಗೆ ಇನ್ಸ್‌ಪೆಕ್ಟರ್‌‌‌ನಿಂದ ಹಲ್ಲೆ ಆರೋಪ

ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್‌ ಹಾಗೂ ಕರ್ನಾಟಕ ಅಹಿಂದ ಪರಿಷತ್‌ನ ಅಧ್ಯಕ್ಷರಾಗಿ ಎಚ್‌.ಡಿ.ಬಸವರಾಜು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಹಿಂದ ವರ್ಗದ, ವಿಶೇಷವಾಗಿ ಪರಿಶಿಷ್ಟ ಪಂಗಡದ ಹಿರಿಯ ನಾಯಕರಾಗಿರುವ ಡಿ.ಬಸವರಾಜು AAP ಸೇರಿರುವುದರಿಂದ ಪಕ್ಷಕ್ಕೆ ಆನೆಬಲ ಬಂದಂತಾಗಿದೆ. ಅವರನ್ನು ಆಮ್‌ ಆದ್ಮಿ ಪಾರ್ಟಿಯು ತುಂಬು ಹೃದಯದಿಂದ ಬರಮಾಡಿಕೊಳ್ಳುತ್ತಿದೆ ಎಂದು ಪಕ್ಷದ ರಾಜ್ಯ ಸಂಚಾಲಕ ಪ್ರಥ್ವಿ ರೆಡ್ಡಿ ಹರ್ಷ ವ್ಯಕ್ತಪಡಿಸಿದರು. ದೇಶಾದ್ಯಂತ ಅನೇಕ ಸಾಧಕರು, ಗಣ್ಯ ವ್ಯಕ್ತಿಗಳು ಹಾಗೂ ವಿವಿಧ ಪಕ್ಷಗಳು ಮುಖಂಡರು ನಮ್ಮ ಪಕ್ಷವನ್ನು ಸೇರಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನಮಗೆ ಬೆಂಬಲ ವ್ಯಕ್ತವಾಗಲಿದ್ದು, ಕರ್ನಾಟಕದ ಅನೇಕ ಶಾಸಕರು, ಮಾಜಿ ಶಾಸಕರು ಎಎಪಿಯನ್ನು ಸೇರಲಿದ್ದಾರೆ ಎಂದು ಪ್ರಥ್ವಿ ರೆಡ್ಡಿ ಇದೇ ಸಂದರ್ಭದಲ್ಲಿ ಹೇಳಿದರು.

ಆಮ್‌ ಆದ್ಮಿ ಪಕ್ಷದ ಕರ್ನಾಟಕ ಉಸ್ತುವಾರಿ ರೋಮಿ ಭಾಟಿ ಮಾತನಾಡಿ ಬಿ ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಭೃಷ್ಟಾಚಾರದಲ್ಲಿ ಮುಳುಗಿದೆ. ಕೊರೊನಾ ಸಂತ್ರಸ್ತರ ನೋವಿಗೆ ಸ್ಪಂದಿಸದ ಬಿಜೆಪಿಯ ದುರಾಡಳಿತದಿಂದ ದೇಶದ ಜನರು ಬೇಸತ್ತಿದ್ದಾರೆ. ಬದಲಾವಣೆ ಬಯಸಿರುವ ಜನತೆ ಮುಂದಿನ ಚುನಾವಣೆಗಳಲ್ಲಿ ಅರವಿಂದ್‌ ಕೇಜ್ರಿವಾಲ್ ನೇತೃತ್ವದ ಆಮ್‌ ಆದ್ಮಿ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಎಚ್‌.ಡಿ.ಬಸವರಾಜು 1994ರಲ್ಲಿ ಮತ್ತು 2004ರಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.  2003ರಿಂದ 2005ರ ತನಕ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆರ್ಥಿಕ ಹಾಗೂ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ, 2005ರಿಂದ 2007ರವರೆಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾವಲು ಹಾಗೂ ನಿರ್ವಹಣೆ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ರೋಮಿ ಭಾಟಿ, ಪೃಥ್ವಿ ರೆಡ್ಡಿ, ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್‌ ದಾಸರಿ, ಬೆಂಗಳೂರು ಘಟಕದ ಉಪಾಧ್ಯಕ್ಷ ಬಿಟಿ ನಾಗಣ್ಣ, ಪಕ್ಷದ ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಲಕ್ಷಿಕಾಂತ್ ಕಾಂತ್ ರಾವ್ ಹಾಗೂ ಮಾಧ್ಯಮ ಸಂಚಾಲಕ ಜಗದೀಶ್ ಸದಂ ಸೇರಿದಂತೆ ಇನ್ನೂ ಅನೇಕ ಆಮ್‌ ಆದ್ಮಿ ಪಕ್ಷದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...