Homeಕರ್ನಾಟಕಬಿಜೆಪಿ ಭ್ರಷ್ಟಾಚಾರಕ್ಕೆ ಬೇಸತ್ತು ಆಮ್‌ ಆದ್ಮಿ ಪಕ್ಷ ಸೇರಿದ ವಿರಾಜಪೇಟೆ ಮಾಜಿ ಶಾಸಕ ಎಚ್. ಡಿ.ಬಸವರಾಜು

ಬಿಜೆಪಿ ಭ್ರಷ್ಟಾಚಾರಕ್ಕೆ ಬೇಸತ್ತು ಆಮ್‌ ಆದ್ಮಿ ಪಕ್ಷ ಸೇರಿದ ವಿರಾಜಪೇಟೆ ಮಾಜಿ ಶಾಸಕ ಎಚ್. ಡಿ.ಬಸವರಾಜು

- Advertisement -
- Advertisement -

ಸ್ವಪಕ್ಷದಲ್ಲಿನ ಭ್ರಷ್ಟಾಚಾರ ಮತ್ತು ಗುಂಪುಗಾರಿಯಿಂದ ಬೇಸತ್ತು ವಿರಾಜ ಪೇಟೆ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಹೆಚ್.ಡಿ.ಬಸವರಾಜು ಇಂದು ಆಮ್ ಆದ್ಮಿ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ಪಕ್ಷ ಭ್ರಷ್ಟರ ಕೂಪವಾಗಿದೆ. ಪಕ್ಷದಲ್ಲಿ ಗುಂಪುಗಾರಿಕೆ, ಸ್ವಜನಪಕ್ಷಪಾತದಿಂದ ಹಿಂದುಳಿದ ಸಮುದಾಯಗಳ ನಾಯಕರನ್ನು ವ್ಯವಸ್ಥಿತವಾಗಿ ತುಳಿಯುವ ಕೆಲಸ ನಡೆಯುತ್ತಿದೆ. ಹೀಗಾಗಿ ಬಿಜೆಪಿ ತೊರೆದು ಆಮ್ ಆದ್ಮಿ ಪಕ್ಷವನ್ನು ಸೇರಿರುವುದಾಗಿ ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಬಿಜೆಪಿಯ ದುರಾಡಳಿತ, ವಿರೋಧ ಪಕ್ಷಗಳ ಅಸಮರ್ಥತೆಯಿಂದ ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.ಲಸಿಕೆ ಸೇರಿದಂತೆ ಕೊರಾನಾ ವಿರುದ್ಧ ಹೋರಾಡುವ ಬದಲು ಬಿಎಸ್‌.ಯಡಿಯೂರಪ್ಪನವರ ಸರ್ಕಾರದ ನಾಯಕರು ಮುಖ್ಯಮಂತ್ರಿ ಕುರ್ಚಿ ಹಿಡಿದು ಎಳೆದಾಡುತ್ತಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್‌ ಕಥೆ ಕೂಡ ಇದೇ. ಜನರು ಗೆಲ್ಲಿಸಿ ಆಯ್ಕೆ ಮಾಡಿ ಕಳುಹಿಸಿದ ಜನಪ್ರತಿನಿಧಿಗಳು, ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಗಳು ಅಧಿಕಾರದ ಅಮಲಿನಲ್ಲಿ ತೇಲುತ್ತಿದ್ದಾರೆ ಎಂದು ಅವರು ರಾಜ್ಯ ಹಾಗೂ ಕೇಂದ್ರದಲ್ಲಿನ ಬಿಜೆಪಿ ಸರ್ಕಾರವನ್ನು ಟೀಕಿಸಿದರು.

ಅರವಿಂದ್‌ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್‌ ಆದ್ಮಿ ಪಾರ್ಟಿ ದೆಹಲಿಯಲ್ಲಿ ಆರಂಭದ ದಿನದಿಂದಲೂ ಪ್ರಾಮಾಣಿಕತೆಯೊಂದಿಗೆ ಯಾವುದೇ ರಾಜಿ ಮಾಡಿಕೊಳ್ಳದೇ ಮುನ್ನಡೆಯುತ್ತಿದೆ. ಕಳಂಕರಹಿತ ಹಾಗೂ ಪಾರದರ್ಶಕ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡು ಸಾಮಾನ್ಯ ಜನರ ಧ್ವನಿಯಾಗಿ ದೆಹಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಆಮ್ ಆದ್ಮಿ ಪಕ್ಷದ ಸಿದ್ದಾಂತ ಮತ್ತು ಉದ್ಧೇಶಗಳಿಗನುಗುಣವಾಗಿ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಮುಂದಾಗುತ್ತೇನೆ ಎಂದು ಅವರು ಇದೇ ಸಂದರ್ಭದಲ್ಲಿ ತಮ್ಮ ಮುಂದಿನ ರಾಜಕೀಯ ನಡೆಯನ್ನು ತೆರೆದಿಟ್ಟರು.

ಇದನ್ನೂ ಓದಿ: ಕಾರ್ಕಳ: ಬಿಜೆಪಿ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್‌‌ ಕಾರ್ಯಕರ್ತನಿಗೆ ಇನ್ಸ್‌ಪೆಕ್ಟರ್‌‌‌ನಿಂದ ಹಲ್ಲೆ ಆರೋಪ

ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್‌ ಹಾಗೂ ಕರ್ನಾಟಕ ಅಹಿಂದ ಪರಿಷತ್‌ನ ಅಧ್ಯಕ್ಷರಾಗಿ ಎಚ್‌.ಡಿ.ಬಸವರಾಜು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಹಿಂದ ವರ್ಗದ, ವಿಶೇಷವಾಗಿ ಪರಿಶಿಷ್ಟ ಪಂಗಡದ ಹಿರಿಯ ನಾಯಕರಾಗಿರುವ ಡಿ.ಬಸವರಾಜು AAP ಸೇರಿರುವುದರಿಂದ ಪಕ್ಷಕ್ಕೆ ಆನೆಬಲ ಬಂದಂತಾಗಿದೆ. ಅವರನ್ನು ಆಮ್‌ ಆದ್ಮಿ ಪಾರ್ಟಿಯು ತುಂಬು ಹೃದಯದಿಂದ ಬರಮಾಡಿಕೊಳ್ಳುತ್ತಿದೆ ಎಂದು ಪಕ್ಷದ ರಾಜ್ಯ ಸಂಚಾಲಕ ಪ್ರಥ್ವಿ ರೆಡ್ಡಿ ಹರ್ಷ ವ್ಯಕ್ತಪಡಿಸಿದರು. ದೇಶಾದ್ಯಂತ ಅನೇಕ ಸಾಧಕರು, ಗಣ್ಯ ವ್ಯಕ್ತಿಗಳು ಹಾಗೂ ವಿವಿಧ ಪಕ್ಷಗಳು ಮುಖಂಡರು ನಮ್ಮ ಪಕ್ಷವನ್ನು ಸೇರಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನಮಗೆ ಬೆಂಬಲ ವ್ಯಕ್ತವಾಗಲಿದ್ದು, ಕರ್ನಾಟಕದ ಅನೇಕ ಶಾಸಕರು, ಮಾಜಿ ಶಾಸಕರು ಎಎಪಿಯನ್ನು ಸೇರಲಿದ್ದಾರೆ ಎಂದು ಪ್ರಥ್ವಿ ರೆಡ್ಡಿ ಇದೇ ಸಂದರ್ಭದಲ್ಲಿ ಹೇಳಿದರು.

ಆಮ್‌ ಆದ್ಮಿ ಪಕ್ಷದ ಕರ್ನಾಟಕ ಉಸ್ತುವಾರಿ ರೋಮಿ ಭಾಟಿ ಮಾತನಾಡಿ ಬಿ ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಭೃಷ್ಟಾಚಾರದಲ್ಲಿ ಮುಳುಗಿದೆ. ಕೊರೊನಾ ಸಂತ್ರಸ್ತರ ನೋವಿಗೆ ಸ್ಪಂದಿಸದ ಬಿಜೆಪಿಯ ದುರಾಡಳಿತದಿಂದ ದೇಶದ ಜನರು ಬೇಸತ್ತಿದ್ದಾರೆ. ಬದಲಾವಣೆ ಬಯಸಿರುವ ಜನತೆ ಮುಂದಿನ ಚುನಾವಣೆಗಳಲ್ಲಿ ಅರವಿಂದ್‌ ಕೇಜ್ರಿವಾಲ್ ನೇತೃತ್ವದ ಆಮ್‌ ಆದ್ಮಿ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಎಚ್‌.ಡಿ.ಬಸವರಾಜು 1994ರಲ್ಲಿ ಮತ್ತು 2004ರಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.  2003ರಿಂದ 2005ರ ತನಕ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆರ್ಥಿಕ ಹಾಗೂ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ, 2005ರಿಂದ 2007ರವರೆಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾವಲು ಹಾಗೂ ನಿರ್ವಹಣೆ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ರೋಮಿ ಭಾಟಿ, ಪೃಥ್ವಿ ರೆಡ್ಡಿ, ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್‌ ದಾಸರಿ, ಬೆಂಗಳೂರು ಘಟಕದ ಉಪಾಧ್ಯಕ್ಷ ಬಿಟಿ ನಾಗಣ್ಣ, ಪಕ್ಷದ ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಲಕ್ಷಿಕಾಂತ್ ಕಾಂತ್ ರಾವ್ ಹಾಗೂ ಮಾಧ್ಯಮ ಸಂಚಾಲಕ ಜಗದೀಶ್ ಸದಂ ಸೇರಿದಂತೆ ಇನ್ನೂ ಅನೇಕ ಆಮ್‌ ಆದ್ಮಿ ಪಕ್ಷದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 294 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...