Homeಕರ್ನಾಟಕಬಿಜೆಪಿ ಭ್ರಷ್ಟಾಚಾರಕ್ಕೆ ಬೇಸತ್ತು ಆಮ್‌ ಆದ್ಮಿ ಪಕ್ಷ ಸೇರಿದ ವಿರಾಜಪೇಟೆ ಮಾಜಿ ಶಾಸಕ ಎಚ್. ಡಿ.ಬಸವರಾಜು

ಬಿಜೆಪಿ ಭ್ರಷ್ಟಾಚಾರಕ್ಕೆ ಬೇಸತ್ತು ಆಮ್‌ ಆದ್ಮಿ ಪಕ್ಷ ಸೇರಿದ ವಿರಾಜಪೇಟೆ ಮಾಜಿ ಶಾಸಕ ಎಚ್. ಡಿ.ಬಸವರಾಜು

- Advertisement -
- Advertisement -

ಸ್ವಪಕ್ಷದಲ್ಲಿನ ಭ್ರಷ್ಟಾಚಾರ ಮತ್ತು ಗುಂಪುಗಾರಿಯಿಂದ ಬೇಸತ್ತು ವಿರಾಜ ಪೇಟೆ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಹೆಚ್.ಡಿ.ಬಸವರಾಜು ಇಂದು ಆಮ್ ಆದ್ಮಿ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ಪಕ್ಷ ಭ್ರಷ್ಟರ ಕೂಪವಾಗಿದೆ. ಪಕ್ಷದಲ್ಲಿ ಗುಂಪುಗಾರಿಕೆ, ಸ್ವಜನಪಕ್ಷಪಾತದಿಂದ ಹಿಂದುಳಿದ ಸಮುದಾಯಗಳ ನಾಯಕರನ್ನು ವ್ಯವಸ್ಥಿತವಾಗಿ ತುಳಿಯುವ ಕೆಲಸ ನಡೆಯುತ್ತಿದೆ. ಹೀಗಾಗಿ ಬಿಜೆಪಿ ತೊರೆದು ಆಮ್ ಆದ್ಮಿ ಪಕ್ಷವನ್ನು ಸೇರಿರುವುದಾಗಿ ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಬಿಜೆಪಿಯ ದುರಾಡಳಿತ, ವಿರೋಧ ಪಕ್ಷಗಳ ಅಸಮರ್ಥತೆಯಿಂದ ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.ಲಸಿಕೆ ಸೇರಿದಂತೆ ಕೊರಾನಾ ವಿರುದ್ಧ ಹೋರಾಡುವ ಬದಲು ಬಿಎಸ್‌.ಯಡಿಯೂರಪ್ಪನವರ ಸರ್ಕಾರದ ನಾಯಕರು ಮುಖ್ಯಮಂತ್ರಿ ಕುರ್ಚಿ ಹಿಡಿದು ಎಳೆದಾಡುತ್ತಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್‌ ಕಥೆ ಕೂಡ ಇದೇ. ಜನರು ಗೆಲ್ಲಿಸಿ ಆಯ್ಕೆ ಮಾಡಿ ಕಳುಹಿಸಿದ ಜನಪ್ರತಿನಿಧಿಗಳು, ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿಗಳು ಅಧಿಕಾರದ ಅಮಲಿನಲ್ಲಿ ತೇಲುತ್ತಿದ್ದಾರೆ ಎಂದು ಅವರು ರಾಜ್ಯ ಹಾಗೂ ಕೇಂದ್ರದಲ್ಲಿನ ಬಿಜೆಪಿ ಸರ್ಕಾರವನ್ನು ಟೀಕಿಸಿದರು.

ಅರವಿಂದ್‌ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್‌ ಆದ್ಮಿ ಪಾರ್ಟಿ ದೆಹಲಿಯಲ್ಲಿ ಆರಂಭದ ದಿನದಿಂದಲೂ ಪ್ರಾಮಾಣಿಕತೆಯೊಂದಿಗೆ ಯಾವುದೇ ರಾಜಿ ಮಾಡಿಕೊಳ್ಳದೇ ಮುನ್ನಡೆಯುತ್ತಿದೆ. ಕಳಂಕರಹಿತ ಹಾಗೂ ಪಾರದರ್ಶಕ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡು ಸಾಮಾನ್ಯ ಜನರ ಧ್ವನಿಯಾಗಿ ದೆಹಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಆಮ್ ಆದ್ಮಿ ಪಕ್ಷದ ಸಿದ್ದಾಂತ ಮತ್ತು ಉದ್ಧೇಶಗಳಿಗನುಗುಣವಾಗಿ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಮುಂದಾಗುತ್ತೇನೆ ಎಂದು ಅವರು ಇದೇ ಸಂದರ್ಭದಲ್ಲಿ ತಮ್ಮ ಮುಂದಿನ ರಾಜಕೀಯ ನಡೆಯನ್ನು ತೆರೆದಿಟ್ಟರು.

ಇದನ್ನೂ ಓದಿ: ಕಾರ್ಕಳ: ಬಿಜೆಪಿ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್‌‌ ಕಾರ್ಯಕರ್ತನಿಗೆ ಇನ್ಸ್‌ಪೆಕ್ಟರ್‌‌‌ನಿಂದ ಹಲ್ಲೆ ಆರೋಪ

ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್‌ ಹಾಗೂ ಕರ್ನಾಟಕ ಅಹಿಂದ ಪರಿಷತ್‌ನ ಅಧ್ಯಕ್ಷರಾಗಿ ಎಚ್‌.ಡಿ.ಬಸವರಾಜು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಹಿಂದ ವರ್ಗದ, ವಿಶೇಷವಾಗಿ ಪರಿಶಿಷ್ಟ ಪಂಗಡದ ಹಿರಿಯ ನಾಯಕರಾಗಿರುವ ಡಿ.ಬಸವರಾಜು AAP ಸೇರಿರುವುದರಿಂದ ಪಕ್ಷಕ್ಕೆ ಆನೆಬಲ ಬಂದಂತಾಗಿದೆ. ಅವರನ್ನು ಆಮ್‌ ಆದ್ಮಿ ಪಾರ್ಟಿಯು ತುಂಬು ಹೃದಯದಿಂದ ಬರಮಾಡಿಕೊಳ್ಳುತ್ತಿದೆ ಎಂದು ಪಕ್ಷದ ರಾಜ್ಯ ಸಂಚಾಲಕ ಪ್ರಥ್ವಿ ರೆಡ್ಡಿ ಹರ್ಷ ವ್ಯಕ್ತಪಡಿಸಿದರು. ದೇಶಾದ್ಯಂತ ಅನೇಕ ಸಾಧಕರು, ಗಣ್ಯ ವ್ಯಕ್ತಿಗಳು ಹಾಗೂ ವಿವಿಧ ಪಕ್ಷಗಳು ಮುಖಂಡರು ನಮ್ಮ ಪಕ್ಷವನ್ನು ಸೇರಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನಮಗೆ ಬೆಂಬಲ ವ್ಯಕ್ತವಾಗಲಿದ್ದು, ಕರ್ನಾಟಕದ ಅನೇಕ ಶಾಸಕರು, ಮಾಜಿ ಶಾಸಕರು ಎಎಪಿಯನ್ನು ಸೇರಲಿದ್ದಾರೆ ಎಂದು ಪ್ರಥ್ವಿ ರೆಡ್ಡಿ ಇದೇ ಸಂದರ್ಭದಲ್ಲಿ ಹೇಳಿದರು.

ಆಮ್‌ ಆದ್ಮಿ ಪಕ್ಷದ ಕರ್ನಾಟಕ ಉಸ್ತುವಾರಿ ರೋಮಿ ಭಾಟಿ ಮಾತನಾಡಿ ಬಿ ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಭೃಷ್ಟಾಚಾರದಲ್ಲಿ ಮುಳುಗಿದೆ. ಕೊರೊನಾ ಸಂತ್ರಸ್ತರ ನೋವಿಗೆ ಸ್ಪಂದಿಸದ ಬಿಜೆಪಿಯ ದುರಾಡಳಿತದಿಂದ ದೇಶದ ಜನರು ಬೇಸತ್ತಿದ್ದಾರೆ. ಬದಲಾವಣೆ ಬಯಸಿರುವ ಜನತೆ ಮುಂದಿನ ಚುನಾವಣೆಗಳಲ್ಲಿ ಅರವಿಂದ್‌ ಕೇಜ್ರಿವಾಲ್ ನೇತೃತ್ವದ ಆಮ್‌ ಆದ್ಮಿ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಎಚ್‌.ಡಿ.ಬಸವರಾಜು 1994ರಲ್ಲಿ ಮತ್ತು 2004ರಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.  2003ರಿಂದ 2005ರ ತನಕ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆರ್ಥಿಕ ಹಾಗೂ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ, 2005ರಿಂದ 2007ರವರೆಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾವಲು ಹಾಗೂ ನಿರ್ವಹಣೆ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ರೋಮಿ ಭಾಟಿ, ಪೃಥ್ವಿ ರೆಡ್ಡಿ, ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್‌ ದಾಸರಿ, ಬೆಂಗಳೂರು ಘಟಕದ ಉಪಾಧ್ಯಕ್ಷ ಬಿಟಿ ನಾಗಣ್ಣ, ಪಕ್ಷದ ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಲಕ್ಷಿಕಾಂತ್ ಕಾಂತ್ ರಾವ್ ಹಾಗೂ ಮಾಧ್ಯಮ ಸಂಚಾಲಕ ಜಗದೀಶ್ ಸದಂ ಸೇರಿದಂತೆ ಇನ್ನೂ ಅನೇಕ ಆಮ್‌ ಆದ್ಮಿ ಪಕ್ಷದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...