Homeಮುಖಪುಟಬಿಜೆಪಿ ತೊರೆಯುವುದಾಗಿ ಘೋಷಿಸಿದ ಅಸ್ಸಾಂ ಶಾಸಕ ಶಿಲಾದಿತ್ಯ ದೇವ್‌

ಬಿಜೆಪಿ ತೊರೆಯುವುದಾಗಿ ಘೋಷಿಸಿದ ಅಸ್ಸಾಂ ಶಾಸಕ ಶಿಲಾದಿತ್ಯ ದೇವ್‌

ಇದು ಕ್ರಿಕೆಟ್‌ನಂತಿದ್ದು, ಚೆನ್ನಾಗಿ ಆಡುವವರೆಗೂ ನಾವು ತಂಡದಲ್ಲಿರಬೇಕು. ನಾನು ಇನ್ನೂ ಇಲ್ಲಿದ್ದರೆ ಪಕ್ಷವು ತೊಂದರೆಗೊಳಗಾಗಬಹುದು ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಅಸ್ಸಾಂ ಬಿಜೆಪಿ ಶಾಸಕ ಶಿಲಾದಿತ್ಯ ದೇವ್‌ ಪಕ್ಷ ತೊರೆಯುವುದಾಗಿ ಭಾನುವಾರ ಘೋಷಿಸಿದ್ದಾರೆ. ನಾಯಕರ ನಿರ್ಲಕ್ಷ್ಯ ಮತ್ತು ಗುಂಪುಗಾರಿಕೆಯನ್ನು ಆರೋಪಿಸಿ “ನಾನು ಹೊಗುವುದೆ ಉತ್ತಮ” ಎಂದು ಹೇಳಿರುವ ಅವರು ಬೇರೆ ಯಾವುದೇ ಪಕ್ಷಕ್ಕೆ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಾ ಸದಾ ಸುದ್ದಿಯಲ್ಲಿರುವ ಅವರು ತಮ್ಮ ಕ್ಷೇತ್ರದ ಹೊಜೈನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ, ಮುಂದಿನ ವರ್ಷ ವಿಧಾನಸಭಾ ಚುನಾವಣೆಯವರೆಗೆ ಶಾಸಕರಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸುವುದಾಗಿ ಹೇಳಿದರು.

“ನಾನು 30 ವರ್ಷಗಳಿಂದ ಬಿಜೆಪಿಯಲ್ಲಿದ್ದೇನೆ. ಆದರೆ ಈಗ ನಮ್ಮಂತಹವರಿಗೆ ಯಾವುದೇ ಬೆಲೆಯಿಲ್ಲದಾಗಿದೆ. ನನ್ನನ್ನು ಮಂತ್ರಿಯನ್ನಾಗಿ ಮಾಡಲು ಲಾಬಿ ನಡೆಸಿದ್ದೇನೆಂದು ಹೇಳಲು ಯಾರಿಂದಲೂ ಸಾಧ್ಯವಿಲ್ಲ. ನಾನು ದೆಹಲಿಯಲ್ಲಿ 17 ವರ್ಷಗಳ ಕಾಲ ಸಚಿವಾಲಯ ಸೇರಿದಂತೆ ಕೆಲಸ ಮಾಡಿದ್ದೇನೆ, ” ಎಂದು ಅವರು ಹೇಳಿದರು.

“ಆದರೆ ಇಂದು ನಾವು (ರಾಜಕೀಯವಾಗಿ) ಕೊಲ್ಲಲ್ಪಡುವಂತಹ ಪರಿಸ್ಥಿತಿಯನ್ನು ಸೃಷ್ಟಿಸಲಾಗುತ್ತಿದೆ. ಹಾಗಾಗಿ ನನ್ನ ಪ್ರತಿಷ್ಠೆಯಿಂದ ದೂರ ಹೋಗಬೇಕು. ನನ್ನ ಹಿತೈಷಿಗಳೊಡನೆ ಸಮಾಲೋಚಿಸಿದ ನಂತರ ಜುಲೈ 14 ರಂದು ಬಿಜೆಪಿಯಿಂದ ನಿವೃತ್ತಿ ಹೊಂದುತ್ತೇನೆ, ಆದರೆ ರಾಜೀನಾಮೆ ನೀಡುವುದಿಲ್ಲ,” ಎಂದು ದೇವ್ ಸುದ್ದಿಗಾರರಿಗೆ ತಿಳಿಸಿದರು.

ನಿವೃತ್ತಿಯಾಗುವುದರ ಅರ್ಥವೇನು ಎಂದು ಪತ್ರಕರ್ತರು ಪ್ರಶ್ನಿಸಿದಾಗ, ಕಾಂಗ್ರೆಸ್ ಅಥವಾ ಎಐಯುಡಿಎಫ್ ನಂತಹ ಬೇರೆ ಯಾವುದೇ ಪಕ್ಷಕ್ಕೆ ಸೇರುವುದಿಲ್ಲ, ಜನರಿಗೆ ಮಾತ್ರ ಕೆಲಸ ಮಾಡುತ್ತಾರೆ ಎಂದು ಹೇಳಿದ್ದಾರೆ.

ಶಿಲಾದಿತ್ಯ ದೇವ್ ರಾಜ್ಯ ಬಿಜೆಪಿ ಅಧ್ಯಕ್ಷ ರಂಜೀತ್ ಕುಮಾರ್ ದಾಸ್ ಅವರ ನಿರ್ಲಕ್ಷ್ಯವನ್ನು ಆರೋಪಿಸಿ, “ಕಳೆದ ರಾತ್ರಿ ಅವರು ನನ್ನ ಕರೆ ಸ್ವೀಕರಿಸಿದ್ದಾರೆ, ಶೀಘ್ರದಲ್ಲೇ ನನಗೆ ಕರೆ ಮಾಡುವುದಾಗಿ ಹೇಳಿದ್ದರು, ಆದರೆ ಇನ್ನೂ ಯಾವುದೇ ಕರೆ ಬಂದಿಲ್ಲ. ಅವರಿಗೆ ಜುಲೈ 14 ರಂದು ನಿವೃತ್ತಿ ಹೊಂದಲಿದ್ದೇನೆ ಎಂದು ಮಾಹಿತಿ ನೀಡಿದ್ದೇನೆ ಆದರೆ ಇನ್ನೂ ಯಾವುದೇ ಉತ್ತರ ಬಂದಿಲ್ಲ” ಎಂದು ಹೇಳಿದ್ದಾರೆ.

ಪಕ್ಷದಲ್ಲಿ ಹಲವಾರು ನಾಯಕರಿದ್ದರೂ ಬಿಕ್ಕಟ್ಟಿನ ಸಮಯದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಒಬ್ಬ ನಾಯಕ ಕೂಡ ಇಲ್ಲ ಎಂದು ದೇವ್ ಆರೋಪಿಸಿದ್ದಾರೆ.

“ಬಹುಶಃ ನಾನು ಇಂದು ಬಿಜೆಪಿಯಲ್ಲಿ ಅನರ್ಹನಾಗಿದ್ದೇನೆ. ಆದ್ದರಿಂದ ಜನರ ಮುಂದೆ ಮುಜುಗರಕ್ಕೊಳಗಾಗುವುದಕ್ಕಿಂತ ಪಕ್ಷವನ್ನು ತೊರೆಯುವುದು ಉತ್ತಮ. ಇದು ಕ್ರಿಕೆಟ್‌ನಂತಿದೆ. ಚೆನ್ನಾಗಿ ಆಡುವವರೆಗೂ ನಾವು ತಂಡದಲ್ಲಿರಬೇಕು. ನಾನು ಇನ್ನೂ ಇಲ್ಲಿದ್ದರೆ ಪಕ್ಷವು ತೊಂದರೆಗೊಳಗಾಗಬಹುದು, ಉಳಿದ 10 ತಿಂಗಳಲ್ಲಿ ನಾನು ಜನರಿಗೆ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

126 ಸದಸ್ಯರ ಅಸ್ಸಾಂ ವಿಧಾನಸಭೆಯಲ್ಲಿ ಬಿಜೆಪಿಯಲ್ಲಿ 60 ಸದಸ್ಯರಿದ್ದರೆ, ಅದರ ಮಿತ್ರರಾಷ್ಟ್ರಗಳಾದ ಎಜಿಪಿಯಲ್ಲಿ 14 ಶಾಸಕರು ಮತ್ತು ಬಿಪಿಎಫ್ 12 ಶಾಸಕರು ಇದ್ದಾರೆ, ಜೊತೆಗೆ ಒಕ್ಕೂಟವು ಒಬ್ಬ ಪಕ್ಷೇತರ ಶಾಸಕನ ಬೆಂಬಲವನ್ನು ಕೂಡ ಹೊಂದಿದೆ.

ಹೆಚ್ಚಾಗಿ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ದೇವ್ ಸುದ್ದಿಯಲ್ಲಿರುತ್ತಿದ್ದರು. ಅಸ್ಸಾಮೀಸ್ ಮತ್ತು ಬಂಗಾಳಿಗಳನ್ನು ವಿಭಜಿಸಲು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ 2018 ರಲ್ಲಿ ಸಿಲ್ಚಾರ್ ಪೊಲೀಸ್ ಠಾಣೆಯಲ್ಲಿ ಅವರ ಮೇಲೆ ಎಫ್ಐಆರ್ ದಾಖಲಾಗಿತ್ತು.

ಅದೇ ವರ್ಷ ನಾಗಾನ್‌ನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ರಾಜ್ಯದ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಕುರಿತು ಕೋಮುವಾದಿ ಹೇಳಿಕೆ ನೀಡಿದ್ದಕ್ಕಾಗಿ ಅವರ ಮೇಲೆ ಪ್ರಕರಣ ದಾಖಲಾಗಿತ್ತು.

ಅಂತಿಮ ಎನ್‌ಆರ್‌ಸಿಯಲ್ಲಿ ಮುಸ್ಲಿಂ-ಬಾಂಗ್ಲಾದೇಶಿಗಳ ಹೆಸರನ್ನು ಪ್ರಕಟಿಸಲಾಗಿದೆ, ಆದರೆ ಹಿಂದೂ ನಿರಾಶ್ರಿತರನ್ನು ವಿದೇಶಿಯರಂತೆ ತೋರಿಸಲಾಗುತ್ತಿದೆ ಎಂದು ದೇವ್ ಆರೋಪಿಸಿದ್ದರು.


ಓದಿ: ರಾಜಕೀಯ ವಿಶ್ಲೇಷಕ ಗರ್ಗಾ ಚಟರ್ಜಿಯನ್ನು ಬಂಧಿಸಲು ಅಸ್ಸಾಂ ಸಿಎಂ ಆದೇಶ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...