Homeಮುಖಪುಟಬಿಜೆಪಿ ತೊರೆಯುವುದಾಗಿ ಘೋಷಿಸಿದ ಅಸ್ಸಾಂ ಶಾಸಕ ಶಿಲಾದಿತ್ಯ ದೇವ್‌

ಬಿಜೆಪಿ ತೊರೆಯುವುದಾಗಿ ಘೋಷಿಸಿದ ಅಸ್ಸಾಂ ಶಾಸಕ ಶಿಲಾದಿತ್ಯ ದೇವ್‌

ಇದು ಕ್ರಿಕೆಟ್‌ನಂತಿದ್ದು, ಚೆನ್ನಾಗಿ ಆಡುವವರೆಗೂ ನಾವು ತಂಡದಲ್ಲಿರಬೇಕು. ನಾನು ಇನ್ನೂ ಇಲ್ಲಿದ್ದರೆ ಪಕ್ಷವು ತೊಂದರೆಗೊಳಗಾಗಬಹುದು ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಅಸ್ಸಾಂ ಬಿಜೆಪಿ ಶಾಸಕ ಶಿಲಾದಿತ್ಯ ದೇವ್‌ ಪಕ್ಷ ತೊರೆಯುವುದಾಗಿ ಭಾನುವಾರ ಘೋಷಿಸಿದ್ದಾರೆ. ನಾಯಕರ ನಿರ್ಲಕ್ಷ್ಯ ಮತ್ತು ಗುಂಪುಗಾರಿಕೆಯನ್ನು ಆರೋಪಿಸಿ “ನಾನು ಹೊಗುವುದೆ ಉತ್ತಮ” ಎಂದು ಹೇಳಿರುವ ಅವರು ಬೇರೆ ಯಾವುದೇ ಪಕ್ಷಕ್ಕೆ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಾ ಸದಾ ಸುದ್ದಿಯಲ್ಲಿರುವ ಅವರು ತಮ್ಮ ಕ್ಷೇತ್ರದ ಹೊಜೈನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ, ಮುಂದಿನ ವರ್ಷ ವಿಧಾನಸಭಾ ಚುನಾವಣೆಯವರೆಗೆ ಶಾಸಕರಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸುವುದಾಗಿ ಹೇಳಿದರು.

“ನಾನು 30 ವರ್ಷಗಳಿಂದ ಬಿಜೆಪಿಯಲ್ಲಿದ್ದೇನೆ. ಆದರೆ ಈಗ ನಮ್ಮಂತಹವರಿಗೆ ಯಾವುದೇ ಬೆಲೆಯಿಲ್ಲದಾಗಿದೆ. ನನ್ನನ್ನು ಮಂತ್ರಿಯನ್ನಾಗಿ ಮಾಡಲು ಲಾಬಿ ನಡೆಸಿದ್ದೇನೆಂದು ಹೇಳಲು ಯಾರಿಂದಲೂ ಸಾಧ್ಯವಿಲ್ಲ. ನಾನು ದೆಹಲಿಯಲ್ಲಿ 17 ವರ್ಷಗಳ ಕಾಲ ಸಚಿವಾಲಯ ಸೇರಿದಂತೆ ಕೆಲಸ ಮಾಡಿದ್ದೇನೆ, ” ಎಂದು ಅವರು ಹೇಳಿದರು.

“ಆದರೆ ಇಂದು ನಾವು (ರಾಜಕೀಯವಾಗಿ) ಕೊಲ್ಲಲ್ಪಡುವಂತಹ ಪರಿಸ್ಥಿತಿಯನ್ನು ಸೃಷ್ಟಿಸಲಾಗುತ್ತಿದೆ. ಹಾಗಾಗಿ ನನ್ನ ಪ್ರತಿಷ್ಠೆಯಿಂದ ದೂರ ಹೋಗಬೇಕು. ನನ್ನ ಹಿತೈಷಿಗಳೊಡನೆ ಸಮಾಲೋಚಿಸಿದ ನಂತರ ಜುಲೈ 14 ರಂದು ಬಿಜೆಪಿಯಿಂದ ನಿವೃತ್ತಿ ಹೊಂದುತ್ತೇನೆ, ಆದರೆ ರಾಜೀನಾಮೆ ನೀಡುವುದಿಲ್ಲ,” ಎಂದು ದೇವ್ ಸುದ್ದಿಗಾರರಿಗೆ ತಿಳಿಸಿದರು.

ನಿವೃತ್ತಿಯಾಗುವುದರ ಅರ್ಥವೇನು ಎಂದು ಪತ್ರಕರ್ತರು ಪ್ರಶ್ನಿಸಿದಾಗ, ಕಾಂಗ್ರೆಸ್ ಅಥವಾ ಎಐಯುಡಿಎಫ್ ನಂತಹ ಬೇರೆ ಯಾವುದೇ ಪಕ್ಷಕ್ಕೆ ಸೇರುವುದಿಲ್ಲ, ಜನರಿಗೆ ಮಾತ್ರ ಕೆಲಸ ಮಾಡುತ್ತಾರೆ ಎಂದು ಹೇಳಿದ್ದಾರೆ.

ಶಿಲಾದಿತ್ಯ ದೇವ್ ರಾಜ್ಯ ಬಿಜೆಪಿ ಅಧ್ಯಕ್ಷ ರಂಜೀತ್ ಕುಮಾರ್ ದಾಸ್ ಅವರ ನಿರ್ಲಕ್ಷ್ಯವನ್ನು ಆರೋಪಿಸಿ, “ಕಳೆದ ರಾತ್ರಿ ಅವರು ನನ್ನ ಕರೆ ಸ್ವೀಕರಿಸಿದ್ದಾರೆ, ಶೀಘ್ರದಲ್ಲೇ ನನಗೆ ಕರೆ ಮಾಡುವುದಾಗಿ ಹೇಳಿದ್ದರು, ಆದರೆ ಇನ್ನೂ ಯಾವುದೇ ಕರೆ ಬಂದಿಲ್ಲ. ಅವರಿಗೆ ಜುಲೈ 14 ರಂದು ನಿವೃತ್ತಿ ಹೊಂದಲಿದ್ದೇನೆ ಎಂದು ಮಾಹಿತಿ ನೀಡಿದ್ದೇನೆ ಆದರೆ ಇನ್ನೂ ಯಾವುದೇ ಉತ್ತರ ಬಂದಿಲ್ಲ” ಎಂದು ಹೇಳಿದ್ದಾರೆ.

ಪಕ್ಷದಲ್ಲಿ ಹಲವಾರು ನಾಯಕರಿದ್ದರೂ ಬಿಕ್ಕಟ್ಟಿನ ಸಮಯದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಒಬ್ಬ ನಾಯಕ ಕೂಡ ಇಲ್ಲ ಎಂದು ದೇವ್ ಆರೋಪಿಸಿದ್ದಾರೆ.

“ಬಹುಶಃ ನಾನು ಇಂದು ಬಿಜೆಪಿಯಲ್ಲಿ ಅನರ್ಹನಾಗಿದ್ದೇನೆ. ಆದ್ದರಿಂದ ಜನರ ಮುಂದೆ ಮುಜುಗರಕ್ಕೊಳಗಾಗುವುದಕ್ಕಿಂತ ಪಕ್ಷವನ್ನು ತೊರೆಯುವುದು ಉತ್ತಮ. ಇದು ಕ್ರಿಕೆಟ್‌ನಂತಿದೆ. ಚೆನ್ನಾಗಿ ಆಡುವವರೆಗೂ ನಾವು ತಂಡದಲ್ಲಿರಬೇಕು. ನಾನು ಇನ್ನೂ ಇಲ್ಲಿದ್ದರೆ ಪಕ್ಷವು ತೊಂದರೆಗೊಳಗಾಗಬಹುದು, ಉಳಿದ 10 ತಿಂಗಳಲ್ಲಿ ನಾನು ಜನರಿಗೆ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

126 ಸದಸ್ಯರ ಅಸ್ಸಾಂ ವಿಧಾನಸಭೆಯಲ್ಲಿ ಬಿಜೆಪಿಯಲ್ಲಿ 60 ಸದಸ್ಯರಿದ್ದರೆ, ಅದರ ಮಿತ್ರರಾಷ್ಟ್ರಗಳಾದ ಎಜಿಪಿಯಲ್ಲಿ 14 ಶಾಸಕರು ಮತ್ತು ಬಿಪಿಎಫ್ 12 ಶಾಸಕರು ಇದ್ದಾರೆ, ಜೊತೆಗೆ ಒಕ್ಕೂಟವು ಒಬ್ಬ ಪಕ್ಷೇತರ ಶಾಸಕನ ಬೆಂಬಲವನ್ನು ಕೂಡ ಹೊಂದಿದೆ.

ಹೆಚ್ಚಾಗಿ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ದೇವ್ ಸುದ್ದಿಯಲ್ಲಿರುತ್ತಿದ್ದರು. ಅಸ್ಸಾಮೀಸ್ ಮತ್ತು ಬಂಗಾಳಿಗಳನ್ನು ವಿಭಜಿಸಲು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ 2018 ರಲ್ಲಿ ಸಿಲ್ಚಾರ್ ಪೊಲೀಸ್ ಠಾಣೆಯಲ್ಲಿ ಅವರ ಮೇಲೆ ಎಫ್ಐಆರ್ ದಾಖಲಾಗಿತ್ತು.

ಅದೇ ವರ್ಷ ನಾಗಾನ್‌ನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ರಾಜ್ಯದ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಕುರಿತು ಕೋಮುವಾದಿ ಹೇಳಿಕೆ ನೀಡಿದ್ದಕ್ಕಾಗಿ ಅವರ ಮೇಲೆ ಪ್ರಕರಣ ದಾಖಲಾಗಿತ್ತು.

ಅಂತಿಮ ಎನ್‌ಆರ್‌ಸಿಯಲ್ಲಿ ಮುಸ್ಲಿಂ-ಬಾಂಗ್ಲಾದೇಶಿಗಳ ಹೆಸರನ್ನು ಪ್ರಕಟಿಸಲಾಗಿದೆ, ಆದರೆ ಹಿಂದೂ ನಿರಾಶ್ರಿತರನ್ನು ವಿದೇಶಿಯರಂತೆ ತೋರಿಸಲಾಗುತ್ತಿದೆ ಎಂದು ದೇವ್ ಆರೋಪಿಸಿದ್ದರು.


ಓದಿ: ರಾಜಕೀಯ ವಿಶ್ಲೇಷಕ ಗರ್ಗಾ ಚಟರ್ಜಿಯನ್ನು ಬಂಧಿಸಲು ಅಸ್ಸಾಂ ಸಿಎಂ ಆದೇಶ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...