Homeಮುಖಪುಟಬಿಜೆಪಿ ತೊರೆಯುವುದಾಗಿ ಘೋಷಿಸಿದ ಅಸ್ಸಾಂ ಶಾಸಕ ಶಿಲಾದಿತ್ಯ ದೇವ್‌

ಬಿಜೆಪಿ ತೊರೆಯುವುದಾಗಿ ಘೋಷಿಸಿದ ಅಸ್ಸಾಂ ಶಾಸಕ ಶಿಲಾದಿತ್ಯ ದೇವ್‌

ಇದು ಕ್ರಿಕೆಟ್‌ನಂತಿದ್ದು, ಚೆನ್ನಾಗಿ ಆಡುವವರೆಗೂ ನಾವು ತಂಡದಲ್ಲಿರಬೇಕು. ನಾನು ಇನ್ನೂ ಇಲ್ಲಿದ್ದರೆ ಪಕ್ಷವು ತೊಂದರೆಗೊಳಗಾಗಬಹುದು ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಅಸ್ಸಾಂ ಬಿಜೆಪಿ ಶಾಸಕ ಶಿಲಾದಿತ್ಯ ದೇವ್‌ ಪಕ್ಷ ತೊರೆಯುವುದಾಗಿ ಭಾನುವಾರ ಘೋಷಿಸಿದ್ದಾರೆ. ನಾಯಕರ ನಿರ್ಲಕ್ಷ್ಯ ಮತ್ತು ಗುಂಪುಗಾರಿಕೆಯನ್ನು ಆರೋಪಿಸಿ “ನಾನು ಹೊಗುವುದೆ ಉತ್ತಮ” ಎಂದು ಹೇಳಿರುವ ಅವರು ಬೇರೆ ಯಾವುದೇ ಪಕ್ಷಕ್ಕೆ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಾ ಸದಾ ಸುದ್ದಿಯಲ್ಲಿರುವ ಅವರು ತಮ್ಮ ಕ್ಷೇತ್ರದ ಹೊಜೈನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ, ಮುಂದಿನ ವರ್ಷ ವಿಧಾನಸಭಾ ಚುನಾವಣೆಯವರೆಗೆ ಶಾಸಕರಾಗಿ ತಮ್ಮ ಅವಧಿಯನ್ನು ಪೂರ್ಣಗೊಳಿಸುವುದಾಗಿ ಹೇಳಿದರು.

“ನಾನು 30 ವರ್ಷಗಳಿಂದ ಬಿಜೆಪಿಯಲ್ಲಿದ್ದೇನೆ. ಆದರೆ ಈಗ ನಮ್ಮಂತಹವರಿಗೆ ಯಾವುದೇ ಬೆಲೆಯಿಲ್ಲದಾಗಿದೆ. ನನ್ನನ್ನು ಮಂತ್ರಿಯನ್ನಾಗಿ ಮಾಡಲು ಲಾಬಿ ನಡೆಸಿದ್ದೇನೆಂದು ಹೇಳಲು ಯಾರಿಂದಲೂ ಸಾಧ್ಯವಿಲ್ಲ. ನಾನು ದೆಹಲಿಯಲ್ಲಿ 17 ವರ್ಷಗಳ ಕಾಲ ಸಚಿವಾಲಯ ಸೇರಿದಂತೆ ಕೆಲಸ ಮಾಡಿದ್ದೇನೆ, ” ಎಂದು ಅವರು ಹೇಳಿದರು.

“ಆದರೆ ಇಂದು ನಾವು (ರಾಜಕೀಯವಾಗಿ) ಕೊಲ್ಲಲ್ಪಡುವಂತಹ ಪರಿಸ್ಥಿತಿಯನ್ನು ಸೃಷ್ಟಿಸಲಾಗುತ್ತಿದೆ. ಹಾಗಾಗಿ ನನ್ನ ಪ್ರತಿಷ್ಠೆಯಿಂದ ದೂರ ಹೋಗಬೇಕು. ನನ್ನ ಹಿತೈಷಿಗಳೊಡನೆ ಸಮಾಲೋಚಿಸಿದ ನಂತರ ಜುಲೈ 14 ರಂದು ಬಿಜೆಪಿಯಿಂದ ನಿವೃತ್ತಿ ಹೊಂದುತ್ತೇನೆ, ಆದರೆ ರಾಜೀನಾಮೆ ನೀಡುವುದಿಲ್ಲ,” ಎಂದು ದೇವ್ ಸುದ್ದಿಗಾರರಿಗೆ ತಿಳಿಸಿದರು.

ನಿವೃತ್ತಿಯಾಗುವುದರ ಅರ್ಥವೇನು ಎಂದು ಪತ್ರಕರ್ತರು ಪ್ರಶ್ನಿಸಿದಾಗ, ಕಾಂಗ್ರೆಸ್ ಅಥವಾ ಎಐಯುಡಿಎಫ್ ನಂತಹ ಬೇರೆ ಯಾವುದೇ ಪಕ್ಷಕ್ಕೆ ಸೇರುವುದಿಲ್ಲ, ಜನರಿಗೆ ಮಾತ್ರ ಕೆಲಸ ಮಾಡುತ್ತಾರೆ ಎಂದು ಹೇಳಿದ್ದಾರೆ.

ಶಿಲಾದಿತ್ಯ ದೇವ್ ರಾಜ್ಯ ಬಿಜೆಪಿ ಅಧ್ಯಕ್ಷ ರಂಜೀತ್ ಕುಮಾರ್ ದಾಸ್ ಅವರ ನಿರ್ಲಕ್ಷ್ಯವನ್ನು ಆರೋಪಿಸಿ, “ಕಳೆದ ರಾತ್ರಿ ಅವರು ನನ್ನ ಕರೆ ಸ್ವೀಕರಿಸಿದ್ದಾರೆ, ಶೀಘ್ರದಲ್ಲೇ ನನಗೆ ಕರೆ ಮಾಡುವುದಾಗಿ ಹೇಳಿದ್ದರು, ಆದರೆ ಇನ್ನೂ ಯಾವುದೇ ಕರೆ ಬಂದಿಲ್ಲ. ಅವರಿಗೆ ಜುಲೈ 14 ರಂದು ನಿವೃತ್ತಿ ಹೊಂದಲಿದ್ದೇನೆ ಎಂದು ಮಾಹಿತಿ ನೀಡಿದ್ದೇನೆ ಆದರೆ ಇನ್ನೂ ಯಾವುದೇ ಉತ್ತರ ಬಂದಿಲ್ಲ” ಎಂದು ಹೇಳಿದ್ದಾರೆ.

ಪಕ್ಷದಲ್ಲಿ ಹಲವಾರು ನಾಯಕರಿದ್ದರೂ ಬಿಕ್ಕಟ್ಟಿನ ಸಮಯದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಒಬ್ಬ ನಾಯಕ ಕೂಡ ಇಲ್ಲ ಎಂದು ದೇವ್ ಆರೋಪಿಸಿದ್ದಾರೆ.

“ಬಹುಶಃ ನಾನು ಇಂದು ಬಿಜೆಪಿಯಲ್ಲಿ ಅನರ್ಹನಾಗಿದ್ದೇನೆ. ಆದ್ದರಿಂದ ಜನರ ಮುಂದೆ ಮುಜುಗರಕ್ಕೊಳಗಾಗುವುದಕ್ಕಿಂತ ಪಕ್ಷವನ್ನು ತೊರೆಯುವುದು ಉತ್ತಮ. ಇದು ಕ್ರಿಕೆಟ್‌ನಂತಿದೆ. ಚೆನ್ನಾಗಿ ಆಡುವವರೆಗೂ ನಾವು ತಂಡದಲ್ಲಿರಬೇಕು. ನಾನು ಇನ್ನೂ ಇಲ್ಲಿದ್ದರೆ ಪಕ್ಷವು ತೊಂದರೆಗೊಳಗಾಗಬಹುದು, ಉಳಿದ 10 ತಿಂಗಳಲ್ಲಿ ನಾನು ಜನರಿಗೆ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

126 ಸದಸ್ಯರ ಅಸ್ಸಾಂ ವಿಧಾನಸಭೆಯಲ್ಲಿ ಬಿಜೆಪಿಯಲ್ಲಿ 60 ಸದಸ್ಯರಿದ್ದರೆ, ಅದರ ಮಿತ್ರರಾಷ್ಟ್ರಗಳಾದ ಎಜಿಪಿಯಲ್ಲಿ 14 ಶಾಸಕರು ಮತ್ತು ಬಿಪಿಎಫ್ 12 ಶಾಸಕರು ಇದ್ದಾರೆ, ಜೊತೆಗೆ ಒಕ್ಕೂಟವು ಒಬ್ಬ ಪಕ್ಷೇತರ ಶಾಸಕನ ಬೆಂಬಲವನ್ನು ಕೂಡ ಹೊಂದಿದೆ.

ಹೆಚ್ಚಾಗಿ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ದೇವ್ ಸುದ್ದಿಯಲ್ಲಿರುತ್ತಿದ್ದರು. ಅಸ್ಸಾಮೀಸ್ ಮತ್ತು ಬಂಗಾಳಿಗಳನ್ನು ವಿಭಜಿಸಲು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ 2018 ರಲ್ಲಿ ಸಿಲ್ಚಾರ್ ಪೊಲೀಸ್ ಠಾಣೆಯಲ್ಲಿ ಅವರ ಮೇಲೆ ಎಫ್ಐಆರ್ ದಾಖಲಾಗಿತ್ತು.

ಅದೇ ವರ್ಷ ನಾಗಾನ್‌ನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ರಾಜ್ಯದ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಕುರಿತು ಕೋಮುವಾದಿ ಹೇಳಿಕೆ ನೀಡಿದ್ದಕ್ಕಾಗಿ ಅವರ ಮೇಲೆ ಪ್ರಕರಣ ದಾಖಲಾಗಿತ್ತು.

ಅಂತಿಮ ಎನ್‌ಆರ್‌ಸಿಯಲ್ಲಿ ಮುಸ್ಲಿಂ-ಬಾಂಗ್ಲಾದೇಶಿಗಳ ಹೆಸರನ್ನು ಪ್ರಕಟಿಸಲಾಗಿದೆ, ಆದರೆ ಹಿಂದೂ ನಿರಾಶ್ರಿತರನ್ನು ವಿದೇಶಿಯರಂತೆ ತೋರಿಸಲಾಗುತ್ತಿದೆ ಎಂದು ದೇವ್ ಆರೋಪಿಸಿದ್ದರು.


ಓದಿ: ರಾಜಕೀಯ ವಿಶ್ಲೇಷಕ ಗರ್ಗಾ ಚಟರ್ಜಿಯನ್ನು ಬಂಧಿಸಲು ಅಸ್ಸಾಂ ಸಿಎಂ ಆದೇಶ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...