Homeಮುಖಪುಟಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಕರ್ನಾಟಕದಂತಹ ಕಾಂಗ್ರೆಸ್ ಆಡಳಿತದ ರಾಜ್ಯವು ಯುಪಿಯ ಅಕ್ರಮ ಹಾದಿಯಲ್ಲಿ ಸಾಗದಿರಲಿ"

- Advertisement -
- Advertisement -

“ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ” ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಶುಕ್ರವಾರ (ಡಿಸೆಂಬರ್ 12) ಈ ಕುರಿತು ಪ್ರತಿಕ್ರಿಯಿಸಿರುವ ಅವರು, “ಮಾದಕವಸ್ತು ಮಾರಾಟಗಾರರ ಮನೆಗಳನ್ನು ಕೆಡವಲು ಬುಲ್ಡೋಜರ್‌ಗಳನ್ನು ಬಳಸಬಹುದು ಎಂಬ ಕರ್ನಾಟಕದ ಗೃಹ ಸಚಿವರ ವರದಿಯ ಬಗ್ಗೆ ನನಗೆ ಆತಂಕವಾಗಿದೆ. ಈ ವರದಿ ಸುಳ್ಳಾಗಿರಲಿ ಎಂಬುದು ನನ್ನ ನಿರೀಕ್ಷೆ” ಎಂದಿದ್ದಾರೆ.

“ಕಾನೂನಿನ ಸರಿಯಾದ ಪ್ರಕ್ರಿಯೆಯಿಲ್ಲದೆ ಮನೆಗಳನ್ನು ಕೆಡವುವುದು ಕಾನೂನುಬಾಹಿರ ಮತ್ತು ಕುಟುಂಬದ ಇತರ ಸದಸ್ಯರ ಮೂಲಭೂತ ಮತ್ತು ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಲ್ಲದೆ, ಯುಪಿಯಲ್ಲಿ ಆಚರಣೆಯಲ್ಲಿರುವ ‘ಬುಲ್ಡೋಜರ್ ನ್ಯಾಯ’ ತಪ್ಪು, ಕಾನೂನುಬಾಹಿರ ಮತ್ತು ಅನ್ಯಾಯ ಎಂಬುದು ಕಾಂಗ್ರೆಸ್ ಪಕ್ಷದ ದೃಷ್ಟಿಕೋನವಾಗಿದೆ. ಕರ್ನಾಟಕದಂತಹ ಕಾಂಗ್ರೆಸ್ ಆಡಳಿತದ ರಾಜ್ಯವು ಯುಪಿಯ ಅಕ್ರಮ ಹಾದಿಯಲ್ಲಿ ಸಾಗದಿರಲಿ” ಎಂದು ಚಿದಂಬರಂ ಬರೆದುಕೊಂಡಿದ್ದಾರೆ.

ಗುರುವಾರ (ಡಿಸೆಂಬರ್ 11) ವಿಧಾನಪರಿಷತ್‌ನಲ್ಲಿ ಮಾತನಾಡಿದ್ದ ಗೃಹ ಸಚಿವ ಜಿ. ಪರಮೇಶ್ವರ್, ಆಫ್ರಿಕಾದ ಅನೇಕ ವಿದ್ಯಾರ್ಥಿಗಳು ಇಲ್ಲಿಗೆ ಡ್ರಗ್ಸ್ ದಂಧೆ ಮಾಡುತ್ತಿದ್ದಾರೆ. ಅವರನ್ನು ನಾವು ಬಂಧಿಸುತ್ತೇವೆ, ಪ್ರಕರಣ ದಾಖಲಿಸುತ್ತೇವೆ. ಬಂಧನ ಆಗಬೇಕೆಂದೇ ಅವರು ಬಯಸುತ್ತಿದ್ದಾರೆ. ಕಾರಣ ಬಂಧನ ಆದರೆ, ಅವರನ್ನು ನಾವು ಅವರ ದೇಶಕ್ಕೆ ಕಳುಹಿಸಲು ಆಗುವುದಿಲ್ಲ ಎಂದು ಹೇಳಿದ್ದರು.

ಕಳೆದ ಎರಡು ವರ್ಷಗಳಲ್ಲಿ ನಾವು ಸುಮಾರು 300 ಜನ ವಿದೇಶಿ ವಿದ್ಯಾರ್ಥಿಗಳನ್ನು ಗಡಿಪಾರು ಮಾಡಿದ್ದೇವೆ. ಗಡಿಪಾರು ಮಾಡಲೂ ಹೆಚ್ಚಿನ ಪ್ರಕ್ರಿಯೆಗಳಿವೆ. ಹಾಗಾಗಿ, ನಾವು ಪ್ರತಿನಿತ್ಯ ಈ ಡ್ರಗ್ಸ್ ದಂಧೆಯ ಬಗ್ಗೆ ನಿಗಾ ಇಟ್ಟಿದ್ದೇವೆ. ದಂಧೆಕೋರರಿಗೆ ಬಾಡಿಗೆಗೆ ಮನೆ ಕೊಟ್ಟವರ ಮೇಲೂ ಕ್ರಮ ಕೈಗೊಂಡಿದ್ದೇವೆ. ಇತ್ತೀಚೆಗೆ ಬಾಡಿಗೆ ಮನೆಯನ್ನು ಒಡೆದು ಹಾಕುವ ಹಂತಕ್ಕೂ ಹೋಗಿದ್ದೇವೆ. ಬಹಳ ಕಠಿಣ ಕ್ರಮವನ್ನು ಈ ಡ್ರಗ್ಸ್ ವಿಚಾರದಲ್ಲಿ ನಾವು ತೆಗೆದುಕೊಳ್ಳುತ್ತಿದ್ದೇವೆ ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...