Homeಕರ್ನಾಟಕದಲಿತ ಚಳವಳಿ ಹಿರಿಯ ನಾಯಕ ಲಕ್ಷ್ಮಿನಾರಾಯಣ ನಾಗವಾರ ನಿಧನ

ದಲಿತ ಚಳವಳಿ ಹಿರಿಯ ನಾಯಕ ಲಕ್ಷ್ಮಿನಾರಾಯಣ ನಾಗವಾರ ನಿಧನ

- Advertisement -
- Advertisement -

ರಾಜ್ಯದ ದಲಿತ ಚಳವಳಿಯ ಹಿರಿಯ ನಾಯಕ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾಗಿದ್ದ ಲಕ್ಷ್ಮಿನಾರಾಯಣ ನಾಗವಾರ ಅವರು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಅವರು ಕಳೆದ ಎರಡು ವರ್ಷಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಕೆಲ ದಿನಗಳಿಂದ ಅವರ ಆರೋಗ್ಯ ಕ್ಷೀಣಿಸುತ್ತಲೇ ಇತ್ತು ಎನ್ನಲಾಗಿದೆ.

2022ರ ಡಿಸೆಂಬರ್ 6ರಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ‘ದಲಿತ ಸಾಂಸ್ಕೃತಿಕ ಪ್ರತಿರೋಧ’ದಲ್ಲಿ ಸಾರ್ವಜನಿಕವಾಗಿ ಭಾಗಿಯಾಗಿದ್ದೇ ಕೊನೆ. ಆ ನಂತರದಲ್ಲಿ ಹೋರಾಟದಿಂದ ದೂರ ಉಳಿದಿದ್ದ ಅವರು, ತಮ್ಮ ಆನಾರೋಗ್ಯದ ನಡುವೆಯೂ ‘ದಲಿತ ಚಳವಳಿಗಳ ಐಕ್ಯ ಹೋರಾಟ ಸಮಿತಿ’ ಹೋರಾಟಗಳಿಗೆ ತಮ್ಮ ಕಾರ್ಯಕರ್ತರನ್ನು ತೊಡಗಿಸಿಕೊಳ್ಳುವ ಹಾಗೆ ನೋಡಿಕೊಂಡಿದ್ದರು.

ದಲಿತ ಚಳವಳಿಗೆ ಅರಗಿಸಿಕೊಳ್ಳಲಾಗದ ವಿಷಯ: ಮಾವಳ್ಳಿ ಶಂಕರ್

ವಿದ್ಯಾರ್ಥಿ ದಿನಗಳಿಂದಲೂ ಲಕ್ಷ್ಮಿನಾರಾಯಣ ನಾಗಾವರ ಅವರ ಆಪ್ತರಾಗಿರುವ ದಸಂಸ ಹಿರಿಯ ನಾಯಕ ಮಾವಳ್ಳಿ ಶಂಕರ್ ನಾನುಗೌರಿ.ಕಾಮ್ ಜೊತೆಗೆ ಮಾತನಾಡಿ, ‘ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ದುರ್ದಿನ ಬರುತ್ತಿರುವ ಈ ಕಾಲದಲ್ಲಿ, ನಾಗವಾರ ಅವರ ಅಗಲಿಗೆ ತುಂಬಲಾರದ ನಷ್ಟ. ಚಳವಳಿಗಳಿಗೆ ಅರಗಿಸಿಕೊಳ್ಳಲಾಗದ ವಿಷಯ’ ಎಂದು ಬೇಸರ ವ್ಯಕ್ತಪಡಿಸಿದರು.

“ಮೂರು ದಶಕಗಳಿಗೂ ಹೆಚ್ಚು ಕಾಲ ಚಳವಳಿಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದರು. ಸಾಕಷ್ಟು ಬದ್ಧತೆಯಿಂದ ದಲಿತ ಚಳವಳಿ ಸೇರಿದಂತೆ ಜನಪರ ಸಂಘಟನೆಗಳ ಜೊತೆಗೆ ಇರುತ್ತಿದ್ದ ಅವರು, ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಬೇಕು ಎಂಬ ದೂರದೃಷ್ಠಿ ಇಟ್ಟುಕೊಂಡಿದ್ದ ನಾಯಕರಾಗಿದ್ದರು. ವಿಶೇಷವಾಗಿ, ತಳ ಸಮುದಾಯಗಳ ಬಗ್ಗೆ ಅವರಿಗೆ ವಿಶೇಷ ಕಳಕಳಿ ಇತ್ತು; ಅವರ ಬದಲಾವಣೆ ಬಗ್ಗೆ ಅಪಾರವಾದ ನಂಬಿಕೆ ಇಟ್ಟುಕೊಂಡಿದ್ದರು. ಸೈದ್ಧಾಂತಿಕವಾಗಿಯೂ ಕೂಡ ಗಟ್ಟಿತನ ಇತ್ತು” ಎಂದರು.

“ಅವರ ಅಗಲಿಕೆಯಿಂದ ದಲಿತ ಚಳವಳಿಗೆ ಶೂನ್ಯ ಆವರಿಸಿದಂತೆ ಆಗಿದೆ. ಇವತ್ತಿನ ಕಾಲಘಟ್ಟದಲ್ಲಿ ನಾಗವಾರ ಅವರ ನಾಯಕತ್ವ ಅನಿವಾರ್ಯವಾಗಿದೆ. ಇಡೀ ರಾಜ್ಯದಲ್ಲಿ ಅವರು ಬಹಳಷ್ಟು ಸಕ್ರಿಯವಾಗಿ ಸಂಘಟನೆ ಕೆಲಸ ಮಾಡುತ್ತಿದ್ದರು. ನಮ್ಮ ಪಾಲಿಗೆ ಇದು ಕೆಟ್ಟ ಪರಿಸ್ಥಿತಿ, ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ದುರ್ದಿನ ಬರುತ್ತಿರುವ ಈ ಕಾಲದಲ್ಲಿ ಅವರ ಅಗಲಿಗೆ ತುಂಬಲಾರದ ನಷ್ಟ. ಚಳವಳಿಗಳಿಗೆ ಅರಗಿಸಿಕೊಳ್ಳಲಾಗದ ವಿಷಯ” ಎಂದು ಹೇಳಿದರು.

ಹೆಬ್ಬಾಳ ನಿವಾಸದಲ್ಲಿ ದರ್ಶನ

ಲಕ್ಷ್ಮಿನಾರಾಯಣ ಅವರ ಮೃತದೇಹವನ್ನು ಬೆಂಗಳೂರಿನ ಹೆಬ್ಬಾಳದ ಕನಕನಗರದಲ್ಲಿನ ಅವರ ನಿವಾಸದಲ್ಲಿ ಇರಿಸಲಾಗಿದೆ.

ಅವರು ಬೆಂಗಳೂರು ಉತ್ತರ ತಾಲೂಕಿನ ನಾಗವಾರ ಗ್ರಾಮದವರು. ತಮ್ಮ ವಿದ್ಯಾರ್ಥಿ ದಿನಗಳಲ್ಲೇ ದಲಿತ ಹಕ್ಕುಗಳ ಬಗ್ಗೆ ಧ್ವನಿಯನ್ನು ಎತ್ತುತ್ತಾ ಬಂದವರು. ಸಾಹಿತ್ಯ ಮಾತ್ರವಲ್ಲದೆ ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಅತ್ಯಂತ ಉತ್ಸುಕರಾಗಿ ಭಾಗವಹಿಸುತ್ತಿದ್ದರು. ಕಾಲೇಜು ಜೀವನದಲ್ಲೇ ಸಮಾಜ ವಿಜ್ಞಾನ, ಅರ್ಥಶಾಸ್ತ್ರ ವಿಷಯಗಳ ಅಧ್ಯಾಪಕರಿಗೆ ಪ್ರೀತಿಯ ವಿದ್ಯಾರ್ಥಿಯಾಗಿ ‘ದಲಿತ ವಿದ್ಯಾರ್ಥಿ ಒಕ್ಕೂಟ’ದ ಮುಖಂಡರಾಗಿದ್ದರು.

ದಲಿತ ಹಿರಿಯ ನೇತಾರ ಬಿ. ಬಸವಲಿಂಗ ಅವರು ನಡೆಸಿದ ಬೂಸಾ ಚಳವಳಿಗೆ ಇಪ್ಪತ್ತೈದು ವರ್ಷಗಳಾದ ಸಂದರ್ಭದಲ್ಲಿ ‘ಬಿ. ಬಸವಲಿಂಗಪ್ಪ ಮತ್ತು ಬೂಸಾ ಚಳವಳಿ: ಕಾಲು ಶತಮಾನ’ ಪುಸ್ತಕವನ್ನು ಸಂಪಾದಿಸಿ ದಲಿತ ಚಳವಳಿಯ ಕುರಿತು ಹಲವು ಒಳನೋಟಗಳನ್ನು ಓದುಗರಿಗೆ ಒದಗಿಸಿದ್ದರು.

ಇದನ್ನೂ ಓದಿ; ತೆಲಂಗಾಣ| ದಲಿತ ಮುಖ್ಯೋಪಾಧ್ಯಾಯರ ಮೇಲೆ ಅಯ್ಯಪ್ಪ ಭಕ್ತರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...