Homeಕರ್ನಾಟಕದಲಿತ ಚಳವಳಿ ಹಿರಿಯ ನಾಯಕ ಲಕ್ಷ್ಮಿನಾರಾಯಣ ನಾಗವಾರ ನಿಧನ

ದಲಿತ ಚಳವಳಿ ಹಿರಿಯ ನಾಯಕ ಲಕ್ಷ್ಮಿನಾರಾಯಣ ನಾಗವಾರ ನಿಧನ

- Advertisement -
- Advertisement -

ರಾಜ್ಯದ ದಲಿತ ಚಳವಳಿಯ ಹಿರಿಯ ನಾಯಕ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾಗಿದ್ದ ಲಕ್ಷ್ಮಿನಾರಾಯಣ ನಾಗವಾರ ಅವರು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಅವರು ಕಳೆದ ಎರಡು ವರ್ಷಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಕೆಲ ದಿನಗಳಿಂದ ಅವರ ಆರೋಗ್ಯ ಕ್ಷೀಣಿಸುತ್ತಲೇ ಇತ್ತು ಎನ್ನಲಾಗಿದೆ.

2022ರ ಡಿಸೆಂಬರ್ 6ರಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ‘ದಲಿತ ಸಾಂಸ್ಕೃತಿಕ ಪ್ರತಿರೋಧ’ದಲ್ಲಿ ಸಾರ್ವಜನಿಕವಾಗಿ ಭಾಗಿಯಾಗಿದ್ದೇ ಕೊನೆ. ಆ ನಂತರದಲ್ಲಿ ಹೋರಾಟದಿಂದ ದೂರ ಉಳಿದಿದ್ದ ಅವರು, ತಮ್ಮ ಆನಾರೋಗ್ಯದ ನಡುವೆಯೂ ‘ದಲಿತ ಚಳವಳಿಗಳ ಐಕ್ಯ ಹೋರಾಟ ಸಮಿತಿ’ ಹೋರಾಟಗಳಿಗೆ ತಮ್ಮ ಕಾರ್ಯಕರ್ತರನ್ನು ತೊಡಗಿಸಿಕೊಳ್ಳುವ ಹಾಗೆ ನೋಡಿಕೊಂಡಿದ್ದರು.

ದಲಿತ ಚಳವಳಿಗೆ ಅರಗಿಸಿಕೊಳ್ಳಲಾಗದ ವಿಷಯ: ಮಾವಳ್ಳಿ ಶಂಕರ್

ವಿದ್ಯಾರ್ಥಿ ದಿನಗಳಿಂದಲೂ ಲಕ್ಷ್ಮಿನಾರಾಯಣ ನಾಗಾವರ ಅವರ ಆಪ್ತರಾಗಿರುವ ದಸಂಸ ಹಿರಿಯ ನಾಯಕ ಮಾವಳ್ಳಿ ಶಂಕರ್ ನಾನುಗೌರಿ.ಕಾಮ್ ಜೊತೆಗೆ ಮಾತನಾಡಿ, ‘ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ದುರ್ದಿನ ಬರುತ್ತಿರುವ ಈ ಕಾಲದಲ್ಲಿ, ನಾಗವಾರ ಅವರ ಅಗಲಿಗೆ ತುಂಬಲಾರದ ನಷ್ಟ. ಚಳವಳಿಗಳಿಗೆ ಅರಗಿಸಿಕೊಳ್ಳಲಾಗದ ವಿಷಯ’ ಎಂದು ಬೇಸರ ವ್ಯಕ್ತಪಡಿಸಿದರು.

“ಮೂರು ದಶಕಗಳಿಗೂ ಹೆಚ್ಚು ಕಾಲ ಚಳವಳಿಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದರು. ಸಾಕಷ್ಟು ಬದ್ಧತೆಯಿಂದ ದಲಿತ ಚಳವಳಿ ಸೇರಿದಂತೆ ಜನಪರ ಸಂಘಟನೆಗಳ ಜೊತೆಗೆ ಇರುತ್ತಿದ್ದ ಅವರು, ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಬೇಕು ಎಂಬ ದೂರದೃಷ್ಠಿ ಇಟ್ಟುಕೊಂಡಿದ್ದ ನಾಯಕರಾಗಿದ್ದರು. ವಿಶೇಷವಾಗಿ, ತಳ ಸಮುದಾಯಗಳ ಬಗ್ಗೆ ಅವರಿಗೆ ವಿಶೇಷ ಕಳಕಳಿ ಇತ್ತು; ಅವರ ಬದಲಾವಣೆ ಬಗ್ಗೆ ಅಪಾರವಾದ ನಂಬಿಕೆ ಇಟ್ಟುಕೊಂಡಿದ್ದರು. ಸೈದ್ಧಾಂತಿಕವಾಗಿಯೂ ಕೂಡ ಗಟ್ಟಿತನ ಇತ್ತು” ಎಂದರು.

“ಅವರ ಅಗಲಿಕೆಯಿಂದ ದಲಿತ ಚಳವಳಿಗೆ ಶೂನ್ಯ ಆವರಿಸಿದಂತೆ ಆಗಿದೆ. ಇವತ್ತಿನ ಕಾಲಘಟ್ಟದಲ್ಲಿ ನಾಗವಾರ ಅವರ ನಾಯಕತ್ವ ಅನಿವಾರ್ಯವಾಗಿದೆ. ಇಡೀ ರಾಜ್ಯದಲ್ಲಿ ಅವರು ಬಹಳಷ್ಟು ಸಕ್ರಿಯವಾಗಿ ಸಂಘಟನೆ ಕೆಲಸ ಮಾಡುತ್ತಿದ್ದರು. ನಮ್ಮ ಪಾಲಿಗೆ ಇದು ಕೆಟ್ಟ ಪರಿಸ್ಥಿತಿ, ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ದುರ್ದಿನ ಬರುತ್ತಿರುವ ಈ ಕಾಲದಲ್ಲಿ ಅವರ ಅಗಲಿಗೆ ತುಂಬಲಾರದ ನಷ್ಟ. ಚಳವಳಿಗಳಿಗೆ ಅರಗಿಸಿಕೊಳ್ಳಲಾಗದ ವಿಷಯ” ಎಂದು ಹೇಳಿದರು.

ಹೆಬ್ಬಾಳ ನಿವಾಸದಲ್ಲಿ ದರ್ಶನ

ಲಕ್ಷ್ಮಿನಾರಾಯಣ ಅವರ ಮೃತದೇಹವನ್ನು ಬೆಂಗಳೂರಿನ ಹೆಬ್ಬಾಳದ ಕನಕನಗರದಲ್ಲಿನ ಅವರ ನಿವಾಸದಲ್ಲಿ ಇರಿಸಲಾಗಿದೆ.

ಅವರು ಬೆಂಗಳೂರು ಉತ್ತರ ತಾಲೂಕಿನ ನಾಗವಾರ ಗ್ರಾಮದವರು. ತಮ್ಮ ವಿದ್ಯಾರ್ಥಿ ದಿನಗಳಲ್ಲೇ ದಲಿತ ಹಕ್ಕುಗಳ ಬಗ್ಗೆ ಧ್ವನಿಯನ್ನು ಎತ್ತುತ್ತಾ ಬಂದವರು. ಸಾಹಿತ್ಯ ಮಾತ್ರವಲ್ಲದೆ ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಅತ್ಯಂತ ಉತ್ಸುಕರಾಗಿ ಭಾಗವಹಿಸುತ್ತಿದ್ದರು. ಕಾಲೇಜು ಜೀವನದಲ್ಲೇ ಸಮಾಜ ವಿಜ್ಞಾನ, ಅರ್ಥಶಾಸ್ತ್ರ ವಿಷಯಗಳ ಅಧ್ಯಾಪಕರಿಗೆ ಪ್ರೀತಿಯ ವಿದ್ಯಾರ್ಥಿಯಾಗಿ ‘ದಲಿತ ವಿದ್ಯಾರ್ಥಿ ಒಕ್ಕೂಟ’ದ ಮುಖಂಡರಾಗಿದ್ದರು.

ದಲಿತ ಹಿರಿಯ ನೇತಾರ ಬಿ. ಬಸವಲಿಂಗ ಅವರು ನಡೆಸಿದ ಬೂಸಾ ಚಳವಳಿಗೆ ಇಪ್ಪತ್ತೈದು ವರ್ಷಗಳಾದ ಸಂದರ್ಭದಲ್ಲಿ ‘ಬಿ. ಬಸವಲಿಂಗಪ್ಪ ಮತ್ತು ಬೂಸಾ ಚಳವಳಿ: ಕಾಲು ಶತಮಾನ’ ಪುಸ್ತಕವನ್ನು ಸಂಪಾದಿಸಿ ದಲಿತ ಚಳವಳಿಯ ಕುರಿತು ಹಲವು ಒಳನೋಟಗಳನ್ನು ಓದುಗರಿಗೆ ಒದಗಿಸಿದ್ದರು.

ಇದನ್ನೂ ಓದಿ; ತೆಲಂಗಾಣ| ದಲಿತ ಮುಖ್ಯೋಪಾಧ್ಯಾಯರ ಮೇಲೆ ಅಯ್ಯಪ್ಪ ಭಕ್ತರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...