Homeಕರ್ನಾಟಕದಲಿತ ಚಳವಳಿ ಹಿರಿಯ ನಾಯಕ ಲಕ್ಷ್ಮಿನಾರಾಯಣ ನಾಗವಾರ ನಿಧನ

ದಲಿತ ಚಳವಳಿ ಹಿರಿಯ ನಾಯಕ ಲಕ್ಷ್ಮಿನಾರಾಯಣ ನಾಗವಾರ ನಿಧನ

- Advertisement -
- Advertisement -

ರಾಜ್ಯದ ದಲಿತ ಚಳವಳಿಯ ಹಿರಿಯ ನಾಯಕ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾಗಿದ್ದ ಲಕ್ಷ್ಮಿನಾರಾಯಣ ನಾಗವಾರ ಅವರು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಅವರು ಕಳೆದ ಎರಡು ವರ್ಷಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಕೆಲ ದಿನಗಳಿಂದ ಅವರ ಆರೋಗ್ಯ ಕ್ಷೀಣಿಸುತ್ತಲೇ ಇತ್ತು ಎನ್ನಲಾಗಿದೆ.

2022ರ ಡಿಸೆಂಬರ್ 6ರಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ‘ದಲಿತ ಸಾಂಸ್ಕೃತಿಕ ಪ್ರತಿರೋಧ’ದಲ್ಲಿ ಸಾರ್ವಜನಿಕವಾಗಿ ಭಾಗಿಯಾಗಿದ್ದೇ ಕೊನೆ. ಆ ನಂತರದಲ್ಲಿ ಹೋರಾಟದಿಂದ ದೂರ ಉಳಿದಿದ್ದ ಅವರು, ತಮ್ಮ ಆನಾರೋಗ್ಯದ ನಡುವೆಯೂ ‘ದಲಿತ ಚಳವಳಿಗಳ ಐಕ್ಯ ಹೋರಾಟ ಸಮಿತಿ’ ಹೋರಾಟಗಳಿಗೆ ತಮ್ಮ ಕಾರ್ಯಕರ್ತರನ್ನು ತೊಡಗಿಸಿಕೊಳ್ಳುವ ಹಾಗೆ ನೋಡಿಕೊಂಡಿದ್ದರು.

ದಲಿತ ಚಳವಳಿಗೆ ಅರಗಿಸಿಕೊಳ್ಳಲಾಗದ ವಿಷಯ: ಮಾವಳ್ಳಿ ಶಂಕರ್

ವಿದ್ಯಾರ್ಥಿ ದಿನಗಳಿಂದಲೂ ಲಕ್ಷ್ಮಿನಾರಾಯಣ ನಾಗಾವರ ಅವರ ಆಪ್ತರಾಗಿರುವ ದಸಂಸ ಹಿರಿಯ ನಾಯಕ ಮಾವಳ್ಳಿ ಶಂಕರ್ ನಾನುಗೌರಿ.ಕಾಮ್ ಜೊತೆಗೆ ಮಾತನಾಡಿ, ‘ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ದುರ್ದಿನ ಬರುತ್ತಿರುವ ಈ ಕಾಲದಲ್ಲಿ, ನಾಗವಾರ ಅವರ ಅಗಲಿಗೆ ತುಂಬಲಾರದ ನಷ್ಟ. ಚಳವಳಿಗಳಿಗೆ ಅರಗಿಸಿಕೊಳ್ಳಲಾಗದ ವಿಷಯ’ ಎಂದು ಬೇಸರ ವ್ಯಕ್ತಪಡಿಸಿದರು.

“ಮೂರು ದಶಕಗಳಿಗೂ ಹೆಚ್ಚು ಕಾಲ ಚಳವಳಿಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದರು. ಸಾಕಷ್ಟು ಬದ್ಧತೆಯಿಂದ ದಲಿತ ಚಳವಳಿ ಸೇರಿದಂತೆ ಜನಪರ ಸಂಘಟನೆಗಳ ಜೊತೆಗೆ ಇರುತ್ತಿದ್ದ ಅವರು, ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಬೇಕು ಎಂಬ ದೂರದೃಷ್ಠಿ ಇಟ್ಟುಕೊಂಡಿದ್ದ ನಾಯಕರಾಗಿದ್ದರು. ವಿಶೇಷವಾಗಿ, ತಳ ಸಮುದಾಯಗಳ ಬಗ್ಗೆ ಅವರಿಗೆ ವಿಶೇಷ ಕಳಕಳಿ ಇತ್ತು; ಅವರ ಬದಲಾವಣೆ ಬಗ್ಗೆ ಅಪಾರವಾದ ನಂಬಿಕೆ ಇಟ್ಟುಕೊಂಡಿದ್ದರು. ಸೈದ್ಧಾಂತಿಕವಾಗಿಯೂ ಕೂಡ ಗಟ್ಟಿತನ ಇತ್ತು” ಎಂದರು.

“ಅವರ ಅಗಲಿಕೆಯಿಂದ ದಲಿತ ಚಳವಳಿಗೆ ಶೂನ್ಯ ಆವರಿಸಿದಂತೆ ಆಗಿದೆ. ಇವತ್ತಿನ ಕಾಲಘಟ್ಟದಲ್ಲಿ ನಾಗವಾರ ಅವರ ನಾಯಕತ್ವ ಅನಿವಾರ್ಯವಾಗಿದೆ. ಇಡೀ ರಾಜ್ಯದಲ್ಲಿ ಅವರು ಬಹಳಷ್ಟು ಸಕ್ರಿಯವಾಗಿ ಸಂಘಟನೆ ಕೆಲಸ ಮಾಡುತ್ತಿದ್ದರು. ನಮ್ಮ ಪಾಲಿಗೆ ಇದು ಕೆಟ್ಟ ಪರಿಸ್ಥಿತಿ, ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ದುರ್ದಿನ ಬರುತ್ತಿರುವ ಈ ಕಾಲದಲ್ಲಿ ಅವರ ಅಗಲಿಗೆ ತುಂಬಲಾರದ ನಷ್ಟ. ಚಳವಳಿಗಳಿಗೆ ಅರಗಿಸಿಕೊಳ್ಳಲಾಗದ ವಿಷಯ” ಎಂದು ಹೇಳಿದರು.

ಹೆಬ್ಬಾಳ ನಿವಾಸದಲ್ಲಿ ದರ್ಶನ

ಲಕ್ಷ್ಮಿನಾರಾಯಣ ಅವರ ಮೃತದೇಹವನ್ನು ಬೆಂಗಳೂರಿನ ಹೆಬ್ಬಾಳದ ಕನಕನಗರದಲ್ಲಿನ ಅವರ ನಿವಾಸದಲ್ಲಿ ಇರಿಸಲಾಗಿದೆ.

ಅವರು ಬೆಂಗಳೂರು ಉತ್ತರ ತಾಲೂಕಿನ ನಾಗವಾರ ಗ್ರಾಮದವರು. ತಮ್ಮ ವಿದ್ಯಾರ್ಥಿ ದಿನಗಳಲ್ಲೇ ದಲಿತ ಹಕ್ಕುಗಳ ಬಗ್ಗೆ ಧ್ವನಿಯನ್ನು ಎತ್ತುತ್ತಾ ಬಂದವರು. ಸಾಹಿತ್ಯ ಮಾತ್ರವಲ್ಲದೆ ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಅತ್ಯಂತ ಉತ್ಸುಕರಾಗಿ ಭಾಗವಹಿಸುತ್ತಿದ್ದರು. ಕಾಲೇಜು ಜೀವನದಲ್ಲೇ ಸಮಾಜ ವಿಜ್ಞಾನ, ಅರ್ಥಶಾಸ್ತ್ರ ವಿಷಯಗಳ ಅಧ್ಯಾಪಕರಿಗೆ ಪ್ರೀತಿಯ ವಿದ್ಯಾರ್ಥಿಯಾಗಿ ‘ದಲಿತ ವಿದ್ಯಾರ್ಥಿ ಒಕ್ಕೂಟ’ದ ಮುಖಂಡರಾಗಿದ್ದರು.

ದಲಿತ ಹಿರಿಯ ನೇತಾರ ಬಿ. ಬಸವಲಿಂಗ ಅವರು ನಡೆಸಿದ ಬೂಸಾ ಚಳವಳಿಗೆ ಇಪ್ಪತ್ತೈದು ವರ್ಷಗಳಾದ ಸಂದರ್ಭದಲ್ಲಿ ‘ಬಿ. ಬಸವಲಿಂಗಪ್ಪ ಮತ್ತು ಬೂಸಾ ಚಳವಳಿ: ಕಾಲು ಶತಮಾನ’ ಪುಸ್ತಕವನ್ನು ಸಂಪಾದಿಸಿ ದಲಿತ ಚಳವಳಿಯ ಕುರಿತು ಹಲವು ಒಳನೋಟಗಳನ್ನು ಓದುಗರಿಗೆ ಒದಗಿಸಿದ್ದರು.

ಇದನ್ನೂ ಓದಿ; ತೆಲಂಗಾಣ| ದಲಿತ ಮುಖ್ಯೋಪಾಧ್ಯಾಯರ ಮೇಲೆ ಅಯ್ಯಪ್ಪ ಭಕ್ತರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...