Homeಕರ್ನಾಟಕದಲಿತ ಚಳವಳಿ ಹಿರಿಯ ನಾಯಕ ಲಕ್ಷ್ಮಿನಾರಾಯಣ ನಾಗವಾರ ನಿಧನ

ದಲಿತ ಚಳವಳಿ ಹಿರಿಯ ನಾಯಕ ಲಕ್ಷ್ಮಿನಾರಾಯಣ ನಾಗವಾರ ನಿಧನ

- Advertisement -
- Advertisement -

ರಾಜ್ಯದ ದಲಿತ ಚಳವಳಿಯ ಹಿರಿಯ ನಾಯಕ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾಗಿದ್ದ ಲಕ್ಷ್ಮಿನಾರಾಯಣ ನಾಗವಾರ ಅವರು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಅವರು ಕಳೆದ ಎರಡು ವರ್ಷಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಕೆಲ ದಿನಗಳಿಂದ ಅವರ ಆರೋಗ್ಯ ಕ್ಷೀಣಿಸುತ್ತಲೇ ಇತ್ತು ಎನ್ನಲಾಗಿದೆ.

2022ರ ಡಿಸೆಂಬರ್ 6ರಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ‘ದಲಿತ ಸಾಂಸ್ಕೃತಿಕ ಪ್ರತಿರೋಧ’ದಲ್ಲಿ ಸಾರ್ವಜನಿಕವಾಗಿ ಭಾಗಿಯಾಗಿದ್ದೇ ಕೊನೆ. ಆ ನಂತರದಲ್ಲಿ ಹೋರಾಟದಿಂದ ದೂರ ಉಳಿದಿದ್ದ ಅವರು, ತಮ್ಮ ಆನಾರೋಗ್ಯದ ನಡುವೆಯೂ ‘ದಲಿತ ಚಳವಳಿಗಳ ಐಕ್ಯ ಹೋರಾಟ ಸಮಿತಿ’ ಹೋರಾಟಗಳಿಗೆ ತಮ್ಮ ಕಾರ್ಯಕರ್ತರನ್ನು ತೊಡಗಿಸಿಕೊಳ್ಳುವ ಹಾಗೆ ನೋಡಿಕೊಂಡಿದ್ದರು.

ದಲಿತ ಚಳವಳಿಗೆ ಅರಗಿಸಿಕೊಳ್ಳಲಾಗದ ವಿಷಯ: ಮಾವಳ್ಳಿ ಶಂಕರ್

ವಿದ್ಯಾರ್ಥಿ ದಿನಗಳಿಂದಲೂ ಲಕ್ಷ್ಮಿನಾರಾಯಣ ನಾಗಾವರ ಅವರ ಆಪ್ತರಾಗಿರುವ ದಸಂಸ ಹಿರಿಯ ನಾಯಕ ಮಾವಳ್ಳಿ ಶಂಕರ್ ನಾನುಗೌರಿ.ಕಾಮ್ ಜೊತೆಗೆ ಮಾತನಾಡಿ, ‘ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ದುರ್ದಿನ ಬರುತ್ತಿರುವ ಈ ಕಾಲದಲ್ಲಿ, ನಾಗವಾರ ಅವರ ಅಗಲಿಗೆ ತುಂಬಲಾರದ ನಷ್ಟ. ಚಳವಳಿಗಳಿಗೆ ಅರಗಿಸಿಕೊಳ್ಳಲಾಗದ ವಿಷಯ’ ಎಂದು ಬೇಸರ ವ್ಯಕ್ತಪಡಿಸಿದರು.

“ಮೂರು ದಶಕಗಳಿಗೂ ಹೆಚ್ಚು ಕಾಲ ಚಳವಳಿಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದರು. ಸಾಕಷ್ಟು ಬದ್ಧತೆಯಿಂದ ದಲಿತ ಚಳವಳಿ ಸೇರಿದಂತೆ ಜನಪರ ಸಂಘಟನೆಗಳ ಜೊತೆಗೆ ಇರುತ್ತಿದ್ದ ಅವರು, ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಬೇಕು ಎಂಬ ದೂರದೃಷ್ಠಿ ಇಟ್ಟುಕೊಂಡಿದ್ದ ನಾಯಕರಾಗಿದ್ದರು. ವಿಶೇಷವಾಗಿ, ತಳ ಸಮುದಾಯಗಳ ಬಗ್ಗೆ ಅವರಿಗೆ ವಿಶೇಷ ಕಳಕಳಿ ಇತ್ತು; ಅವರ ಬದಲಾವಣೆ ಬಗ್ಗೆ ಅಪಾರವಾದ ನಂಬಿಕೆ ಇಟ್ಟುಕೊಂಡಿದ್ದರು. ಸೈದ್ಧಾಂತಿಕವಾಗಿಯೂ ಕೂಡ ಗಟ್ಟಿತನ ಇತ್ತು” ಎಂದರು.

“ಅವರ ಅಗಲಿಕೆಯಿಂದ ದಲಿತ ಚಳವಳಿಗೆ ಶೂನ್ಯ ಆವರಿಸಿದಂತೆ ಆಗಿದೆ. ಇವತ್ತಿನ ಕಾಲಘಟ್ಟದಲ್ಲಿ ನಾಗವಾರ ಅವರ ನಾಯಕತ್ವ ಅನಿವಾರ್ಯವಾಗಿದೆ. ಇಡೀ ರಾಜ್ಯದಲ್ಲಿ ಅವರು ಬಹಳಷ್ಟು ಸಕ್ರಿಯವಾಗಿ ಸಂಘಟನೆ ಕೆಲಸ ಮಾಡುತ್ತಿದ್ದರು. ನಮ್ಮ ಪಾಲಿಗೆ ಇದು ಕೆಟ್ಟ ಪರಿಸ್ಥಿತಿ, ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ದುರ್ದಿನ ಬರುತ್ತಿರುವ ಈ ಕಾಲದಲ್ಲಿ ಅವರ ಅಗಲಿಗೆ ತುಂಬಲಾರದ ನಷ್ಟ. ಚಳವಳಿಗಳಿಗೆ ಅರಗಿಸಿಕೊಳ್ಳಲಾಗದ ವಿಷಯ” ಎಂದು ಹೇಳಿದರು.

ಹೆಬ್ಬಾಳ ನಿವಾಸದಲ್ಲಿ ದರ್ಶನ

ಲಕ್ಷ್ಮಿನಾರಾಯಣ ಅವರ ಮೃತದೇಹವನ್ನು ಬೆಂಗಳೂರಿನ ಹೆಬ್ಬಾಳದ ಕನಕನಗರದಲ್ಲಿನ ಅವರ ನಿವಾಸದಲ್ಲಿ ಇರಿಸಲಾಗಿದೆ.

ಅವರು ಬೆಂಗಳೂರು ಉತ್ತರ ತಾಲೂಕಿನ ನಾಗವಾರ ಗ್ರಾಮದವರು. ತಮ್ಮ ವಿದ್ಯಾರ್ಥಿ ದಿನಗಳಲ್ಲೇ ದಲಿತ ಹಕ್ಕುಗಳ ಬಗ್ಗೆ ಧ್ವನಿಯನ್ನು ಎತ್ತುತ್ತಾ ಬಂದವರು. ಸಾಹಿತ್ಯ ಮಾತ್ರವಲ್ಲದೆ ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಅತ್ಯಂತ ಉತ್ಸುಕರಾಗಿ ಭಾಗವಹಿಸುತ್ತಿದ್ದರು. ಕಾಲೇಜು ಜೀವನದಲ್ಲೇ ಸಮಾಜ ವಿಜ್ಞಾನ, ಅರ್ಥಶಾಸ್ತ್ರ ವಿಷಯಗಳ ಅಧ್ಯಾಪಕರಿಗೆ ಪ್ರೀತಿಯ ವಿದ್ಯಾರ್ಥಿಯಾಗಿ ‘ದಲಿತ ವಿದ್ಯಾರ್ಥಿ ಒಕ್ಕೂಟ’ದ ಮುಖಂಡರಾಗಿದ್ದರು.

ದಲಿತ ಹಿರಿಯ ನೇತಾರ ಬಿ. ಬಸವಲಿಂಗ ಅವರು ನಡೆಸಿದ ಬೂಸಾ ಚಳವಳಿಗೆ ಇಪ್ಪತ್ತೈದು ವರ್ಷಗಳಾದ ಸಂದರ್ಭದಲ್ಲಿ ‘ಬಿ. ಬಸವಲಿಂಗಪ್ಪ ಮತ್ತು ಬೂಸಾ ಚಳವಳಿ: ಕಾಲು ಶತಮಾನ’ ಪುಸ್ತಕವನ್ನು ಸಂಪಾದಿಸಿ ದಲಿತ ಚಳವಳಿಯ ಕುರಿತು ಹಲವು ಒಳನೋಟಗಳನ್ನು ಓದುಗರಿಗೆ ಒದಗಿಸಿದ್ದರು.

ಇದನ್ನೂ ಓದಿ; ತೆಲಂಗಾಣ| ದಲಿತ ಮುಖ್ಯೋಪಾಧ್ಯಾಯರ ಮೇಲೆ ಅಯ್ಯಪ್ಪ ಭಕ್ತರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...