Homeಕರ್ನಾಟಕದಲಿತ ಚಳವಳಿ ಹಿರಿಯ ನಾಯಕ ಲಕ್ಷ್ಮಿನಾರಾಯಣ ನಾಗವಾರ ನಿಧನ

ದಲಿತ ಚಳವಳಿ ಹಿರಿಯ ನಾಯಕ ಲಕ್ಷ್ಮಿನಾರಾಯಣ ನಾಗವಾರ ನಿಧನ

- Advertisement -
- Advertisement -

ರಾಜ್ಯದ ದಲಿತ ಚಳವಳಿಯ ಹಿರಿಯ ನಾಯಕ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾಗಿದ್ದ ಲಕ್ಷ್ಮಿನಾರಾಯಣ ನಾಗವಾರ ಅವರು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಅವರು ಕಳೆದ ಎರಡು ವರ್ಷಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಕೆಲ ದಿನಗಳಿಂದ ಅವರ ಆರೋಗ್ಯ ಕ್ಷೀಣಿಸುತ್ತಲೇ ಇತ್ತು ಎನ್ನಲಾಗಿದೆ.

2022ರ ಡಿಸೆಂಬರ್ 6ರಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ‘ದಲಿತ ಸಾಂಸ್ಕೃತಿಕ ಪ್ರತಿರೋಧ’ದಲ್ಲಿ ಸಾರ್ವಜನಿಕವಾಗಿ ಭಾಗಿಯಾಗಿದ್ದೇ ಕೊನೆ. ಆ ನಂತರದಲ್ಲಿ ಹೋರಾಟದಿಂದ ದೂರ ಉಳಿದಿದ್ದ ಅವರು, ತಮ್ಮ ಆನಾರೋಗ್ಯದ ನಡುವೆಯೂ ‘ದಲಿತ ಚಳವಳಿಗಳ ಐಕ್ಯ ಹೋರಾಟ ಸಮಿತಿ’ ಹೋರಾಟಗಳಿಗೆ ತಮ್ಮ ಕಾರ್ಯಕರ್ತರನ್ನು ತೊಡಗಿಸಿಕೊಳ್ಳುವ ಹಾಗೆ ನೋಡಿಕೊಂಡಿದ್ದರು.

ದಲಿತ ಚಳವಳಿಗೆ ಅರಗಿಸಿಕೊಳ್ಳಲಾಗದ ವಿಷಯ: ಮಾವಳ್ಳಿ ಶಂಕರ್

ವಿದ್ಯಾರ್ಥಿ ದಿನಗಳಿಂದಲೂ ಲಕ್ಷ್ಮಿನಾರಾಯಣ ನಾಗಾವರ ಅವರ ಆಪ್ತರಾಗಿರುವ ದಸಂಸ ಹಿರಿಯ ನಾಯಕ ಮಾವಳ್ಳಿ ಶಂಕರ್ ನಾನುಗೌರಿ.ಕಾಮ್ ಜೊತೆಗೆ ಮಾತನಾಡಿ, ‘ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ದುರ್ದಿನ ಬರುತ್ತಿರುವ ಈ ಕಾಲದಲ್ಲಿ, ನಾಗವಾರ ಅವರ ಅಗಲಿಗೆ ತುಂಬಲಾರದ ನಷ್ಟ. ಚಳವಳಿಗಳಿಗೆ ಅರಗಿಸಿಕೊಳ್ಳಲಾಗದ ವಿಷಯ’ ಎಂದು ಬೇಸರ ವ್ಯಕ್ತಪಡಿಸಿದರು.

“ಮೂರು ದಶಕಗಳಿಗೂ ಹೆಚ್ಚು ಕಾಲ ಚಳವಳಿಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದರು. ಸಾಕಷ್ಟು ಬದ್ಧತೆಯಿಂದ ದಲಿತ ಚಳವಳಿ ಸೇರಿದಂತೆ ಜನಪರ ಸಂಘಟನೆಗಳ ಜೊತೆಗೆ ಇರುತ್ತಿದ್ದ ಅವರು, ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಬೇಕು ಎಂಬ ದೂರದೃಷ್ಠಿ ಇಟ್ಟುಕೊಂಡಿದ್ದ ನಾಯಕರಾಗಿದ್ದರು. ವಿಶೇಷವಾಗಿ, ತಳ ಸಮುದಾಯಗಳ ಬಗ್ಗೆ ಅವರಿಗೆ ವಿಶೇಷ ಕಳಕಳಿ ಇತ್ತು; ಅವರ ಬದಲಾವಣೆ ಬಗ್ಗೆ ಅಪಾರವಾದ ನಂಬಿಕೆ ಇಟ್ಟುಕೊಂಡಿದ್ದರು. ಸೈದ್ಧಾಂತಿಕವಾಗಿಯೂ ಕೂಡ ಗಟ್ಟಿತನ ಇತ್ತು” ಎಂದರು.

“ಅವರ ಅಗಲಿಕೆಯಿಂದ ದಲಿತ ಚಳವಳಿಗೆ ಶೂನ್ಯ ಆವರಿಸಿದಂತೆ ಆಗಿದೆ. ಇವತ್ತಿನ ಕಾಲಘಟ್ಟದಲ್ಲಿ ನಾಗವಾರ ಅವರ ನಾಯಕತ್ವ ಅನಿವಾರ್ಯವಾಗಿದೆ. ಇಡೀ ರಾಜ್ಯದಲ್ಲಿ ಅವರು ಬಹಳಷ್ಟು ಸಕ್ರಿಯವಾಗಿ ಸಂಘಟನೆ ಕೆಲಸ ಮಾಡುತ್ತಿದ್ದರು. ನಮ್ಮ ಪಾಲಿಗೆ ಇದು ಕೆಟ್ಟ ಪರಿಸ್ಥಿತಿ, ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ದುರ್ದಿನ ಬರುತ್ತಿರುವ ಈ ಕಾಲದಲ್ಲಿ ಅವರ ಅಗಲಿಗೆ ತುಂಬಲಾರದ ನಷ್ಟ. ಚಳವಳಿಗಳಿಗೆ ಅರಗಿಸಿಕೊಳ್ಳಲಾಗದ ವಿಷಯ” ಎಂದು ಹೇಳಿದರು.

ಹೆಬ್ಬಾಳ ನಿವಾಸದಲ್ಲಿ ದರ್ಶನ

ಲಕ್ಷ್ಮಿನಾರಾಯಣ ಅವರ ಮೃತದೇಹವನ್ನು ಬೆಂಗಳೂರಿನ ಹೆಬ್ಬಾಳದ ಕನಕನಗರದಲ್ಲಿನ ಅವರ ನಿವಾಸದಲ್ಲಿ ಇರಿಸಲಾಗಿದೆ.

ಅವರು ಬೆಂಗಳೂರು ಉತ್ತರ ತಾಲೂಕಿನ ನಾಗವಾರ ಗ್ರಾಮದವರು. ತಮ್ಮ ವಿದ್ಯಾರ್ಥಿ ದಿನಗಳಲ್ಲೇ ದಲಿತ ಹಕ್ಕುಗಳ ಬಗ್ಗೆ ಧ್ವನಿಯನ್ನು ಎತ್ತುತ್ತಾ ಬಂದವರು. ಸಾಹಿತ್ಯ ಮಾತ್ರವಲ್ಲದೆ ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಅತ್ಯಂತ ಉತ್ಸುಕರಾಗಿ ಭಾಗವಹಿಸುತ್ತಿದ್ದರು. ಕಾಲೇಜು ಜೀವನದಲ್ಲೇ ಸಮಾಜ ವಿಜ್ಞಾನ, ಅರ್ಥಶಾಸ್ತ್ರ ವಿಷಯಗಳ ಅಧ್ಯಾಪಕರಿಗೆ ಪ್ರೀತಿಯ ವಿದ್ಯಾರ್ಥಿಯಾಗಿ ‘ದಲಿತ ವಿದ್ಯಾರ್ಥಿ ಒಕ್ಕೂಟ’ದ ಮುಖಂಡರಾಗಿದ್ದರು.

ದಲಿತ ಹಿರಿಯ ನೇತಾರ ಬಿ. ಬಸವಲಿಂಗ ಅವರು ನಡೆಸಿದ ಬೂಸಾ ಚಳವಳಿಗೆ ಇಪ್ಪತ್ತೈದು ವರ್ಷಗಳಾದ ಸಂದರ್ಭದಲ್ಲಿ ‘ಬಿ. ಬಸವಲಿಂಗಪ್ಪ ಮತ್ತು ಬೂಸಾ ಚಳವಳಿ: ಕಾಲು ಶತಮಾನ’ ಪುಸ್ತಕವನ್ನು ಸಂಪಾದಿಸಿ ದಲಿತ ಚಳವಳಿಯ ಕುರಿತು ಹಲವು ಒಳನೋಟಗಳನ್ನು ಓದುಗರಿಗೆ ಒದಗಿಸಿದ್ದರು.

ಇದನ್ನೂ ಓದಿ; ತೆಲಂಗಾಣ| ದಲಿತ ಮುಖ್ಯೋಪಾಧ್ಯಾಯರ ಮೇಲೆ ಅಯ್ಯಪ್ಪ ಭಕ್ತರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...