Homeಚಳವಳಿದಲಿತ ಮತ್ತು ಕ್ರಾಂತಿಕಾರಿ ಕಮ್ಯುನಿಸ್ಟ್‌ ಚಳವಳಿಯ ಹಿರಿಯ ಹೋರಾಟಗಾರ ಚಂದ್ರಶೇಖರ ತೋರಣಘಟ್ಟ ನಿಧನ

ದಲಿತ ಮತ್ತು ಕ್ರಾಂತಿಕಾರಿ ಕಮ್ಯುನಿಸ್ಟ್‌ ಚಳವಳಿಯ ಹಿರಿಯ ಹೋರಾಟಗಾರ ಚಂದ್ರಶೇಖರ ತೋರಣಘಟ್ಟ ನಿಧನ

- Advertisement -
- Advertisement -

ನಾಡಿನ ಹಲವು ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಹಿರಿಯ ದಲಿತ, ಕಮ್ಯುನಿಸ್ಟ್‌ ಹೋರಾಟಗಾರ ಚಂದ್ರಶೇಖರ ತೋರಣಘಟ್ಟರವರು ಇಂದು ಚಿತ್ರದುರ್ಗದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ದಾವಣಗೆರೆ ಜಿಲ್ಲೆಯ ತೋರಣಘಟ್ಟದವರಾದ ಇವರು 80ರ ದಶಕದಲ್ಲಿ ಕರ್ನಾಟಕದಲ್ಲಿ ಕ್ರಾಂತಿಕಾರಿ ಕಮ್ಯೂನಿಸ್ಟ್ ಪಕ್ಷ ಕಟ್ಟುವ ಮೂಲಕ ದುಡಿವ ದಲಿತ ದಮನಿತರಿಗೆ ದನಿಯಾಗಿದ್ದರು. ಹಲವು ವರ್ಷಗಳಿಂದ ತೀವ್ರ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ.

ತೋರಣಘಟ್ಟರವರು ಪತ್ನಿ ಹಾಗೂ ಒರ್ವ ಪುತ್ರನನ್ನು ಅಗಲಿದ್ದು ಇಂದು ರಾತ್ರಿಯವರೆಗೂ ಅವರ ಪಾರ್ಥಿವ ಶರೀರವನ್ನು ಚಿತ್ರದುರ್ಗದಲ್ಲಿ ಇಡಲಾಗುತ್ತಿದ್ದು ನಾಳೆ ಮುಂಜಾನೆ ತೋರಣಘಟ್ಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಭದ್ರಾವತಿಯಲ್ಲಿ ಮೊದಲಿಗೆ ಹಕ್ಕಿಪಿಕ್ಕಿ ಸಮುದಾಯದವರಿಗೆ ಮನೆಗಾಗಿ ಭಾರೀ ಹೋರಾಟ ರೂಪಿಸಿದ್ದ ಅವರು ಅಲ್ಲಿನ ಗೂಂಡಾಗಳನ್ನು ಎದುರುಹಾಕಿಕೊಂಡು ದಿಟ್ಟಯುವಪಡೆಯನ್ನು ಕಟ್ಟಿ ಬೃಹತ್‌ ಹೋರಾಟದಲ್ಲಿ ಜಯಶೀಲರಾದರು. ಇವರ ಹೋರಾಟದ ಕಾರಣಕ್ಕೆ ಇಂದಿಗೂ ಭದ್ರಾವತಿಯಲ್ಲಿ ನೂರಾರು ದಲಿತ ಕುಟುಂಬಗಳಿಗೆ ನೆಲೆ ಸಿಕ್ಕಿದೆ. ಅಲ್ಲಿಂದ ನಕ್ಸಲ್‌ ಹೋರಾಟದ ಪ್ರಭಾವಕ್ಕೊಳಗಾದ ತೋರಣಘಟ್ಟರವರು ಆರ್‌ವೈಎಫ್‌ ಎಂಬ ಕ್ರಾಂತಿಕಾರಿ ಸಂಘಟನೆಯನ್ನು ಹುಟ್ಟುಹಾಕಿದ್ದರು.

ದಲಿತ ಸಂಘರ್ಷ ಸಮಿತಿಯ ಆರಂಭದಲ್ಲಿ ಒಬ್ಬರಾಗಿದ್ದ ಇವರು ಸಂಸದೀಯ ಚುನಾವಣೆಗೆ ಸಂಘಟನೆಗಳು ಭಾಗವಹಿಸುವುದನ್ನು ವಿರೋಧಿಸಿ ಡಿಎಸ್‌ಎಸ್‌ (ಸಂಯೋಜಕ) ಬಣ ಸ್ಥಾಪಿಸಿದರು. ಮುಂದೆ ಸಿಪಿಐ (ಎಂಎಲ್) ಸಂಘಟನೆಯಲ್ಲಿಯೂ ಸಕ್ರಿಯವಾಗಿ ತೊಡಿಗಿಸಿಕೊಂಡಿದ್ದರು. ಕೊಡಗಿನ ಆದಿವಾಸಿಗಳನ್ನು ಸಂಘಟನೆ ಮಾಡಲು ಮುಂದಾದಾಗ ಅಪಘಾತಕ್ಕೊಳಗಾದ ಅವರು ಕಾಲು ಪೆಟ್ಟಿನಿಂದಾಗಿ ದಾವಣಗೆರೆಯಲ್ಲಿ ನೆಲೆಸಬೇಕಾಯಿತು. ಆಗ ಪಿ.ಲಂಕೇಶ್‌ರವರ ನೇತೃತ್ವದಲ್ಲಿ ಹೊರಬರುತ್ತಿದ್ದ ಲಂಕೇಶ್‌ ಪತ್ರಿಕೆಯ ವರದಿಗಾರರಾಗಿ ಬಹಳ ಕಾಲ ಪತ್ರಕರ್ತರ ಪಾತ್ರವಹಿಸಿದ್ದಾರೆ.

ಇವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆಯ ಕಾರೇಹಳ್ಳಿ ಭೂ ಹೋರಾಟ, ರಾಯಚೂರು ಜಿಲ್ಲೆಯ ಚಿಕ್ಕಹೆಸರೂರ ತೋರಣದಿನ್ನಿ ಭೂ ಹೋರಾಟ, ಕೊಪ್ಪಳದ ಕಾರಟಗಿ ಕೆರೆ ಅಂಗಳ ಭೂ ಹೋರಾಟ, ಚಿಕ್ಕಮಗಳೂರು ಜಿಲ್ಲೆಯ ಕಬ್ಬಿನಹಳ್ಳಿ ಭೂ ಹೋರಾಟ, ಭದ್ರಾವತಿಯ ಒಸಿ ಬ್ಲಾಕ್ ಕೊಳಗೇರಿ ನಿವಾಸಿಗಳ ಹೋರಾಟ… ಹೀಗೆ ಎರಡು ದಶಕಗಳ ಕಾಲ ರಾಜ್ಯದಲ್ಲಿ ನಡೆದ ಜಮೀನ್ದಾರಿ ವಿರೋಧಿ – ಸಾಮ್ರಾಜ್ಯ ವಿರೋಧಿ ಕ್ರಾಂತಿಕಾರಿ ಚಳವಳಿಯಲ್ಲಿ ತೋರಣಗಟ್ಟರವರು ತಮ್ಮನ್ನು ಬಿಡುವಿಲ್ಲದೇ ತೊಡಗಿಸಿಕೊಂಡಿದ್ದರು.

ನಂತರ ಗ್ರಾಮೀಣ ಅಧ್ಯಯನ ಮಾಡಲು ಅವರು ಬಳ್ಳಾರಿಗೆ ಪ್ರಯಾಣಿಸುತ್ತಿದ್ದ ವೇಳೆ ಎರಡನೇ ಬಾರಿಗೆ ಅಪಘಾತಕ್ಕೊಳಗಾದಾಗ ಅವರ ಆರೋತ್ಯ ಮತ್ತಷ್ಟು ಹದಗೆಟ್ಟಿತು. ಹಾಗಾಗಿ ಅವರು ಸಕ್ರಿಯ ಚಳಿವಳಿಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ತದನಂತರ ಅಪಘಾತದಲ್ಲಿ ಅವರ ಹಿರಿಯ ಮಗನನ್ನು ಸಹ ಕಳೆದುಕೊಂಡು ತೀವ್ರ ಮಾನಸಿಕ ಒತ್ತಡಕ್ಕೊಳಗಾಗುತ್ತಾರೆ.

ಆದರೂ ಸಾಮಾಜಿಕ ಕಾಳಜಿ ಹೊಂದಿದ್ದ ಅವರು ತಮ್ಮ ಬದುಕಿನುದ್ದಕ್ಕೂ ತೀವ್ರ ಹೋರಾಟ ನಡೆಸಿಕೊಂಡೇ ಬಂದವರು. ಇದಕ್ಕೆ ಪ್ರಾಧ್ಯಾಪಕರಾಗಿರುವ ಅವರ ಪತ್ನಿ ಯಶೋಧರವರ ಸಕ್ರಿಯ ಬೆಂಬಲ ಸದಾ ಇತ್ತು. ತೋರಣಘಟ್ಟರವರು ಚಳವಳಿ, ಹೋರಾಟ ಎಂದು ಊರೂರು ತಿರುಗಿದರೆ ಮನೆಯನ್ನು ನಿಭಾಯಿಸಿ ಅವರ ಹೋರಾಟಕ್ಕೆ ಅಗತ್ಯ ಹಣಕಾಸಿನ ನೆರವನ್ನು ಸಹ ಅವರ ಪತ್ನಿ ಒದಗಿಸುತ್ತಿದ್ದರು. ಅಷ್ಟರಮಟ್ಟಿಗಿನ ಸಾಮಾಜಿಕ ಕಾಳಜಿ ಅವರಿಗೂ ಇದ್ದ ಕಾರಣದಿಂದಲೇ ಇವರು ಇಷ್ಟೆಲ್ಲಾ ಹೋರಾಟಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗಿತ್ತು.

ಕೋಮು ಸೌಹಾರ್ದ ವೇದಿಕೆ, ಕರ್ನಾಟಕ ಜನಪರ ವೇದಿಕೆಗಳಲ್ಲಿಯು ಕೆಲಸ ಮಾಡಿ ಸೌರ್ಹಾದತೆಗಾಗಿ ಶ್ರಮಿಸಿದ್ದ ತೋರಣಘಟ್ಟರವರ ಆರೋಗ್ಯ ಕಳೆದ ಐದಾರು ವರ್ಷಗಳಿಂದ ಹದಗೆಡುತ್ತಾ ಬಂದಿದ್ದು ಇಂದು ಇಹಲೋಕ ತ್ಯಜಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...