Homeಚಳವಳಿದಲಿತ ಮತ್ತು ಕ್ರಾಂತಿಕಾರಿ ಕಮ್ಯುನಿಸ್ಟ್‌ ಚಳವಳಿಯ ಹಿರಿಯ ಹೋರಾಟಗಾರ ಚಂದ್ರಶೇಖರ ತೋರಣಘಟ್ಟ ನಿಧನ

ದಲಿತ ಮತ್ತು ಕ್ರಾಂತಿಕಾರಿ ಕಮ್ಯುನಿಸ್ಟ್‌ ಚಳವಳಿಯ ಹಿರಿಯ ಹೋರಾಟಗಾರ ಚಂದ್ರಶೇಖರ ತೋರಣಘಟ್ಟ ನಿಧನ

- Advertisement -
- Advertisement -

ನಾಡಿನ ಹಲವು ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಹಿರಿಯ ದಲಿತ, ಕಮ್ಯುನಿಸ್ಟ್‌ ಹೋರಾಟಗಾರ ಚಂದ್ರಶೇಖರ ತೋರಣಘಟ್ಟರವರು ಇಂದು ಚಿತ್ರದುರ್ಗದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ದಾವಣಗೆರೆ ಜಿಲ್ಲೆಯ ತೋರಣಘಟ್ಟದವರಾದ ಇವರು 80ರ ದಶಕದಲ್ಲಿ ಕರ್ನಾಟಕದಲ್ಲಿ ಕ್ರಾಂತಿಕಾರಿ ಕಮ್ಯೂನಿಸ್ಟ್ ಪಕ್ಷ ಕಟ್ಟುವ ಮೂಲಕ ದುಡಿವ ದಲಿತ ದಮನಿತರಿಗೆ ದನಿಯಾಗಿದ್ದರು. ಹಲವು ವರ್ಷಗಳಿಂದ ತೀವ್ರ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ.

ತೋರಣಘಟ್ಟರವರು ಪತ್ನಿ ಹಾಗೂ ಒರ್ವ ಪುತ್ರನನ್ನು ಅಗಲಿದ್ದು ಇಂದು ರಾತ್ರಿಯವರೆಗೂ ಅವರ ಪಾರ್ಥಿವ ಶರೀರವನ್ನು ಚಿತ್ರದುರ್ಗದಲ್ಲಿ ಇಡಲಾಗುತ್ತಿದ್ದು ನಾಳೆ ಮುಂಜಾನೆ ತೋರಣಘಟ್ಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಭದ್ರಾವತಿಯಲ್ಲಿ ಮೊದಲಿಗೆ ಹಕ್ಕಿಪಿಕ್ಕಿ ಸಮುದಾಯದವರಿಗೆ ಮನೆಗಾಗಿ ಭಾರೀ ಹೋರಾಟ ರೂಪಿಸಿದ್ದ ಅವರು ಅಲ್ಲಿನ ಗೂಂಡಾಗಳನ್ನು ಎದುರುಹಾಕಿಕೊಂಡು ದಿಟ್ಟಯುವಪಡೆಯನ್ನು ಕಟ್ಟಿ ಬೃಹತ್‌ ಹೋರಾಟದಲ್ಲಿ ಜಯಶೀಲರಾದರು. ಇವರ ಹೋರಾಟದ ಕಾರಣಕ್ಕೆ ಇಂದಿಗೂ ಭದ್ರಾವತಿಯಲ್ಲಿ ನೂರಾರು ದಲಿತ ಕುಟುಂಬಗಳಿಗೆ ನೆಲೆ ಸಿಕ್ಕಿದೆ. ಅಲ್ಲಿಂದ ನಕ್ಸಲ್‌ ಹೋರಾಟದ ಪ್ರಭಾವಕ್ಕೊಳಗಾದ ತೋರಣಘಟ್ಟರವರು ಆರ್‌ವೈಎಫ್‌ ಎಂಬ ಕ್ರಾಂತಿಕಾರಿ ಸಂಘಟನೆಯನ್ನು ಹುಟ್ಟುಹಾಕಿದ್ದರು.

ದಲಿತ ಸಂಘರ್ಷ ಸಮಿತಿಯ ಆರಂಭದಲ್ಲಿ ಒಬ್ಬರಾಗಿದ್ದ ಇವರು ಸಂಸದೀಯ ಚುನಾವಣೆಗೆ ಸಂಘಟನೆಗಳು ಭಾಗವಹಿಸುವುದನ್ನು ವಿರೋಧಿಸಿ ಡಿಎಸ್‌ಎಸ್‌ (ಸಂಯೋಜಕ) ಬಣ ಸ್ಥಾಪಿಸಿದರು. ಮುಂದೆ ಸಿಪಿಐ (ಎಂಎಲ್) ಸಂಘಟನೆಯಲ್ಲಿಯೂ ಸಕ್ರಿಯವಾಗಿ ತೊಡಿಗಿಸಿಕೊಂಡಿದ್ದರು. ಕೊಡಗಿನ ಆದಿವಾಸಿಗಳನ್ನು ಸಂಘಟನೆ ಮಾಡಲು ಮುಂದಾದಾಗ ಅಪಘಾತಕ್ಕೊಳಗಾದ ಅವರು ಕಾಲು ಪೆಟ್ಟಿನಿಂದಾಗಿ ದಾವಣಗೆರೆಯಲ್ಲಿ ನೆಲೆಸಬೇಕಾಯಿತು. ಆಗ ಪಿ.ಲಂಕೇಶ್‌ರವರ ನೇತೃತ್ವದಲ್ಲಿ ಹೊರಬರುತ್ತಿದ್ದ ಲಂಕೇಶ್‌ ಪತ್ರಿಕೆಯ ವರದಿಗಾರರಾಗಿ ಬಹಳ ಕಾಲ ಪತ್ರಕರ್ತರ ಪಾತ್ರವಹಿಸಿದ್ದಾರೆ.

ಇವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆಯ ಕಾರೇಹಳ್ಳಿ ಭೂ ಹೋರಾಟ, ರಾಯಚೂರು ಜಿಲ್ಲೆಯ ಚಿಕ್ಕಹೆಸರೂರ ತೋರಣದಿನ್ನಿ ಭೂ ಹೋರಾಟ, ಕೊಪ್ಪಳದ ಕಾರಟಗಿ ಕೆರೆ ಅಂಗಳ ಭೂ ಹೋರಾಟ, ಚಿಕ್ಕಮಗಳೂರು ಜಿಲ್ಲೆಯ ಕಬ್ಬಿನಹಳ್ಳಿ ಭೂ ಹೋರಾಟ, ಭದ್ರಾವತಿಯ ಒಸಿ ಬ್ಲಾಕ್ ಕೊಳಗೇರಿ ನಿವಾಸಿಗಳ ಹೋರಾಟ… ಹೀಗೆ ಎರಡು ದಶಕಗಳ ಕಾಲ ರಾಜ್ಯದಲ್ಲಿ ನಡೆದ ಜಮೀನ್ದಾರಿ ವಿರೋಧಿ – ಸಾಮ್ರಾಜ್ಯ ವಿರೋಧಿ ಕ್ರಾಂತಿಕಾರಿ ಚಳವಳಿಯಲ್ಲಿ ತೋರಣಗಟ್ಟರವರು ತಮ್ಮನ್ನು ಬಿಡುವಿಲ್ಲದೇ ತೊಡಗಿಸಿಕೊಂಡಿದ್ದರು.

ನಂತರ ಗ್ರಾಮೀಣ ಅಧ್ಯಯನ ಮಾಡಲು ಅವರು ಬಳ್ಳಾರಿಗೆ ಪ್ರಯಾಣಿಸುತ್ತಿದ್ದ ವೇಳೆ ಎರಡನೇ ಬಾರಿಗೆ ಅಪಘಾತಕ್ಕೊಳಗಾದಾಗ ಅವರ ಆರೋತ್ಯ ಮತ್ತಷ್ಟು ಹದಗೆಟ್ಟಿತು. ಹಾಗಾಗಿ ಅವರು ಸಕ್ರಿಯ ಚಳಿವಳಿಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ತದನಂತರ ಅಪಘಾತದಲ್ಲಿ ಅವರ ಹಿರಿಯ ಮಗನನ್ನು ಸಹ ಕಳೆದುಕೊಂಡು ತೀವ್ರ ಮಾನಸಿಕ ಒತ್ತಡಕ್ಕೊಳಗಾಗುತ್ತಾರೆ.

ಆದರೂ ಸಾಮಾಜಿಕ ಕಾಳಜಿ ಹೊಂದಿದ್ದ ಅವರು ತಮ್ಮ ಬದುಕಿನುದ್ದಕ್ಕೂ ತೀವ್ರ ಹೋರಾಟ ನಡೆಸಿಕೊಂಡೇ ಬಂದವರು. ಇದಕ್ಕೆ ಪ್ರಾಧ್ಯಾಪಕರಾಗಿರುವ ಅವರ ಪತ್ನಿ ಯಶೋಧರವರ ಸಕ್ರಿಯ ಬೆಂಬಲ ಸದಾ ಇತ್ತು. ತೋರಣಘಟ್ಟರವರು ಚಳವಳಿ, ಹೋರಾಟ ಎಂದು ಊರೂರು ತಿರುಗಿದರೆ ಮನೆಯನ್ನು ನಿಭಾಯಿಸಿ ಅವರ ಹೋರಾಟಕ್ಕೆ ಅಗತ್ಯ ಹಣಕಾಸಿನ ನೆರವನ್ನು ಸಹ ಅವರ ಪತ್ನಿ ಒದಗಿಸುತ್ತಿದ್ದರು. ಅಷ್ಟರಮಟ್ಟಿಗಿನ ಸಾಮಾಜಿಕ ಕಾಳಜಿ ಅವರಿಗೂ ಇದ್ದ ಕಾರಣದಿಂದಲೇ ಇವರು ಇಷ್ಟೆಲ್ಲಾ ಹೋರಾಟಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗಿತ್ತು.

ಕೋಮು ಸೌಹಾರ್ದ ವೇದಿಕೆ, ಕರ್ನಾಟಕ ಜನಪರ ವೇದಿಕೆಗಳಲ್ಲಿಯು ಕೆಲಸ ಮಾಡಿ ಸೌರ್ಹಾದತೆಗಾಗಿ ಶ್ರಮಿಸಿದ್ದ ತೋರಣಘಟ್ಟರವರ ಆರೋಗ್ಯ ಕಳೆದ ಐದಾರು ವರ್ಷಗಳಿಂದ ಹದಗೆಡುತ್ತಾ ಬಂದಿದ್ದು ಇಂದು ಇಹಲೋಕ ತ್ಯಜಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...