Homeಚಳವಳಿದಲಿತ ಮತ್ತು ಕ್ರಾಂತಿಕಾರಿ ಕಮ್ಯುನಿಸ್ಟ್‌ ಚಳವಳಿಯ ಹಿರಿಯ ಹೋರಾಟಗಾರ ಚಂದ್ರಶೇಖರ ತೋರಣಘಟ್ಟ ನಿಧನ

ದಲಿತ ಮತ್ತು ಕ್ರಾಂತಿಕಾರಿ ಕಮ್ಯುನಿಸ್ಟ್‌ ಚಳವಳಿಯ ಹಿರಿಯ ಹೋರಾಟಗಾರ ಚಂದ್ರಶೇಖರ ತೋರಣಘಟ್ಟ ನಿಧನ

- Advertisement -
- Advertisement -

ನಾಡಿನ ಹಲವು ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಹಿರಿಯ ದಲಿತ, ಕಮ್ಯುನಿಸ್ಟ್‌ ಹೋರಾಟಗಾರ ಚಂದ್ರಶೇಖರ ತೋರಣಘಟ್ಟರವರು ಇಂದು ಚಿತ್ರದುರ್ಗದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ದಾವಣಗೆರೆ ಜಿಲ್ಲೆಯ ತೋರಣಘಟ್ಟದವರಾದ ಇವರು 80ರ ದಶಕದಲ್ಲಿ ಕರ್ನಾಟಕದಲ್ಲಿ ಕ್ರಾಂತಿಕಾರಿ ಕಮ್ಯೂನಿಸ್ಟ್ ಪಕ್ಷ ಕಟ್ಟುವ ಮೂಲಕ ದುಡಿವ ದಲಿತ ದಮನಿತರಿಗೆ ದನಿಯಾಗಿದ್ದರು. ಹಲವು ವರ್ಷಗಳಿಂದ ತೀವ್ರ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ.

ತೋರಣಘಟ್ಟರವರು ಪತ್ನಿ ಹಾಗೂ ಒರ್ವ ಪುತ್ರನನ್ನು ಅಗಲಿದ್ದು ಇಂದು ರಾತ್ರಿಯವರೆಗೂ ಅವರ ಪಾರ್ಥಿವ ಶರೀರವನ್ನು ಚಿತ್ರದುರ್ಗದಲ್ಲಿ ಇಡಲಾಗುತ್ತಿದ್ದು ನಾಳೆ ಮುಂಜಾನೆ ತೋರಣಘಟ್ಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಭದ್ರಾವತಿಯಲ್ಲಿ ಮೊದಲಿಗೆ ಹಕ್ಕಿಪಿಕ್ಕಿ ಸಮುದಾಯದವರಿಗೆ ಮನೆಗಾಗಿ ಭಾರೀ ಹೋರಾಟ ರೂಪಿಸಿದ್ದ ಅವರು ಅಲ್ಲಿನ ಗೂಂಡಾಗಳನ್ನು ಎದುರುಹಾಕಿಕೊಂಡು ದಿಟ್ಟಯುವಪಡೆಯನ್ನು ಕಟ್ಟಿ ಬೃಹತ್‌ ಹೋರಾಟದಲ್ಲಿ ಜಯಶೀಲರಾದರು. ಇವರ ಹೋರಾಟದ ಕಾರಣಕ್ಕೆ ಇಂದಿಗೂ ಭದ್ರಾವತಿಯಲ್ಲಿ ನೂರಾರು ದಲಿತ ಕುಟುಂಬಗಳಿಗೆ ನೆಲೆ ಸಿಕ್ಕಿದೆ. ಅಲ್ಲಿಂದ ನಕ್ಸಲ್‌ ಹೋರಾಟದ ಪ್ರಭಾವಕ್ಕೊಳಗಾದ ತೋರಣಘಟ್ಟರವರು ಆರ್‌ವೈಎಫ್‌ ಎಂಬ ಕ್ರಾಂತಿಕಾರಿ ಸಂಘಟನೆಯನ್ನು ಹುಟ್ಟುಹಾಕಿದ್ದರು.

ದಲಿತ ಸಂಘರ್ಷ ಸಮಿತಿಯ ಆರಂಭದಲ್ಲಿ ಒಬ್ಬರಾಗಿದ್ದ ಇವರು ಸಂಸದೀಯ ಚುನಾವಣೆಗೆ ಸಂಘಟನೆಗಳು ಭಾಗವಹಿಸುವುದನ್ನು ವಿರೋಧಿಸಿ ಡಿಎಸ್‌ಎಸ್‌ (ಸಂಯೋಜಕ) ಬಣ ಸ್ಥಾಪಿಸಿದರು. ಮುಂದೆ ಸಿಪಿಐ (ಎಂಎಲ್) ಸಂಘಟನೆಯಲ್ಲಿಯೂ ಸಕ್ರಿಯವಾಗಿ ತೊಡಿಗಿಸಿಕೊಂಡಿದ್ದರು. ಕೊಡಗಿನ ಆದಿವಾಸಿಗಳನ್ನು ಸಂಘಟನೆ ಮಾಡಲು ಮುಂದಾದಾಗ ಅಪಘಾತಕ್ಕೊಳಗಾದ ಅವರು ಕಾಲು ಪೆಟ್ಟಿನಿಂದಾಗಿ ದಾವಣಗೆರೆಯಲ್ಲಿ ನೆಲೆಸಬೇಕಾಯಿತು. ಆಗ ಪಿ.ಲಂಕೇಶ್‌ರವರ ನೇತೃತ್ವದಲ್ಲಿ ಹೊರಬರುತ್ತಿದ್ದ ಲಂಕೇಶ್‌ ಪತ್ರಿಕೆಯ ವರದಿಗಾರರಾಗಿ ಬಹಳ ಕಾಲ ಪತ್ರಕರ್ತರ ಪಾತ್ರವಹಿಸಿದ್ದಾರೆ.

ಇವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆಯ ಕಾರೇಹಳ್ಳಿ ಭೂ ಹೋರಾಟ, ರಾಯಚೂರು ಜಿಲ್ಲೆಯ ಚಿಕ್ಕಹೆಸರೂರ ತೋರಣದಿನ್ನಿ ಭೂ ಹೋರಾಟ, ಕೊಪ್ಪಳದ ಕಾರಟಗಿ ಕೆರೆ ಅಂಗಳ ಭೂ ಹೋರಾಟ, ಚಿಕ್ಕಮಗಳೂರು ಜಿಲ್ಲೆಯ ಕಬ್ಬಿನಹಳ್ಳಿ ಭೂ ಹೋರಾಟ, ಭದ್ರಾವತಿಯ ಒಸಿ ಬ್ಲಾಕ್ ಕೊಳಗೇರಿ ನಿವಾಸಿಗಳ ಹೋರಾಟ… ಹೀಗೆ ಎರಡು ದಶಕಗಳ ಕಾಲ ರಾಜ್ಯದಲ್ಲಿ ನಡೆದ ಜಮೀನ್ದಾರಿ ವಿರೋಧಿ – ಸಾಮ್ರಾಜ್ಯ ವಿರೋಧಿ ಕ್ರಾಂತಿಕಾರಿ ಚಳವಳಿಯಲ್ಲಿ ತೋರಣಗಟ್ಟರವರು ತಮ್ಮನ್ನು ಬಿಡುವಿಲ್ಲದೇ ತೊಡಗಿಸಿಕೊಂಡಿದ್ದರು.

ನಂತರ ಗ್ರಾಮೀಣ ಅಧ್ಯಯನ ಮಾಡಲು ಅವರು ಬಳ್ಳಾರಿಗೆ ಪ್ರಯಾಣಿಸುತ್ತಿದ್ದ ವೇಳೆ ಎರಡನೇ ಬಾರಿಗೆ ಅಪಘಾತಕ್ಕೊಳಗಾದಾಗ ಅವರ ಆರೋತ್ಯ ಮತ್ತಷ್ಟು ಹದಗೆಟ್ಟಿತು. ಹಾಗಾಗಿ ಅವರು ಸಕ್ರಿಯ ಚಳಿವಳಿಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ತದನಂತರ ಅಪಘಾತದಲ್ಲಿ ಅವರ ಹಿರಿಯ ಮಗನನ್ನು ಸಹ ಕಳೆದುಕೊಂಡು ತೀವ್ರ ಮಾನಸಿಕ ಒತ್ತಡಕ್ಕೊಳಗಾಗುತ್ತಾರೆ.

ಆದರೂ ಸಾಮಾಜಿಕ ಕಾಳಜಿ ಹೊಂದಿದ್ದ ಅವರು ತಮ್ಮ ಬದುಕಿನುದ್ದಕ್ಕೂ ತೀವ್ರ ಹೋರಾಟ ನಡೆಸಿಕೊಂಡೇ ಬಂದವರು. ಇದಕ್ಕೆ ಪ್ರಾಧ್ಯಾಪಕರಾಗಿರುವ ಅವರ ಪತ್ನಿ ಯಶೋಧರವರ ಸಕ್ರಿಯ ಬೆಂಬಲ ಸದಾ ಇತ್ತು. ತೋರಣಘಟ್ಟರವರು ಚಳವಳಿ, ಹೋರಾಟ ಎಂದು ಊರೂರು ತಿರುಗಿದರೆ ಮನೆಯನ್ನು ನಿಭಾಯಿಸಿ ಅವರ ಹೋರಾಟಕ್ಕೆ ಅಗತ್ಯ ಹಣಕಾಸಿನ ನೆರವನ್ನು ಸಹ ಅವರ ಪತ್ನಿ ಒದಗಿಸುತ್ತಿದ್ದರು. ಅಷ್ಟರಮಟ್ಟಿಗಿನ ಸಾಮಾಜಿಕ ಕಾಳಜಿ ಅವರಿಗೂ ಇದ್ದ ಕಾರಣದಿಂದಲೇ ಇವರು ಇಷ್ಟೆಲ್ಲಾ ಹೋರಾಟಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗಿತ್ತು.

ಕೋಮು ಸೌಹಾರ್ದ ವೇದಿಕೆ, ಕರ್ನಾಟಕ ಜನಪರ ವೇದಿಕೆಗಳಲ್ಲಿಯು ಕೆಲಸ ಮಾಡಿ ಸೌರ್ಹಾದತೆಗಾಗಿ ಶ್ರಮಿಸಿದ್ದ ತೋರಣಘಟ್ಟರವರ ಆರೋಗ್ಯ ಕಳೆದ ಐದಾರು ವರ್ಷಗಳಿಂದ ಹದಗೆಡುತ್ತಾ ಬಂದಿದ್ದು ಇಂದು ಇಹಲೋಕ ತ್ಯಜಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...