Homeಚಳವಳಿದಲಿತ ಮತ್ತು ಕ್ರಾಂತಿಕಾರಿ ಕಮ್ಯುನಿಸ್ಟ್‌ ಚಳವಳಿಯ ಹಿರಿಯ ಹೋರಾಟಗಾರ ಚಂದ್ರಶೇಖರ ತೋರಣಘಟ್ಟ ನಿಧನ

ದಲಿತ ಮತ್ತು ಕ್ರಾಂತಿಕಾರಿ ಕಮ್ಯುನಿಸ್ಟ್‌ ಚಳವಳಿಯ ಹಿರಿಯ ಹೋರಾಟಗಾರ ಚಂದ್ರಶೇಖರ ತೋರಣಘಟ್ಟ ನಿಧನ

- Advertisement -
- Advertisement -

ನಾಡಿನ ಹಲವು ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಹಿರಿಯ ದಲಿತ, ಕಮ್ಯುನಿಸ್ಟ್‌ ಹೋರಾಟಗಾರ ಚಂದ್ರಶೇಖರ ತೋರಣಘಟ್ಟರವರು ಇಂದು ಚಿತ್ರದುರ್ಗದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ದಾವಣಗೆರೆ ಜಿಲ್ಲೆಯ ತೋರಣಘಟ್ಟದವರಾದ ಇವರು 80ರ ದಶಕದಲ್ಲಿ ಕರ್ನಾಟಕದಲ್ಲಿ ಕ್ರಾಂತಿಕಾರಿ ಕಮ್ಯೂನಿಸ್ಟ್ ಪಕ್ಷ ಕಟ್ಟುವ ಮೂಲಕ ದುಡಿವ ದಲಿತ ದಮನಿತರಿಗೆ ದನಿಯಾಗಿದ್ದರು. ಹಲವು ವರ್ಷಗಳಿಂದ ತೀವ್ರ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ.

ತೋರಣಘಟ್ಟರವರು ಪತ್ನಿ ಹಾಗೂ ಒರ್ವ ಪುತ್ರನನ್ನು ಅಗಲಿದ್ದು ಇಂದು ರಾತ್ರಿಯವರೆಗೂ ಅವರ ಪಾರ್ಥಿವ ಶರೀರವನ್ನು ಚಿತ್ರದುರ್ಗದಲ್ಲಿ ಇಡಲಾಗುತ್ತಿದ್ದು ನಾಳೆ ಮುಂಜಾನೆ ತೋರಣಘಟ್ಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಭದ್ರಾವತಿಯಲ್ಲಿ ಮೊದಲಿಗೆ ಹಕ್ಕಿಪಿಕ್ಕಿ ಸಮುದಾಯದವರಿಗೆ ಮನೆಗಾಗಿ ಭಾರೀ ಹೋರಾಟ ರೂಪಿಸಿದ್ದ ಅವರು ಅಲ್ಲಿನ ಗೂಂಡಾಗಳನ್ನು ಎದುರುಹಾಕಿಕೊಂಡು ದಿಟ್ಟಯುವಪಡೆಯನ್ನು ಕಟ್ಟಿ ಬೃಹತ್‌ ಹೋರಾಟದಲ್ಲಿ ಜಯಶೀಲರಾದರು. ಇವರ ಹೋರಾಟದ ಕಾರಣಕ್ಕೆ ಇಂದಿಗೂ ಭದ್ರಾವತಿಯಲ್ಲಿ ನೂರಾರು ದಲಿತ ಕುಟುಂಬಗಳಿಗೆ ನೆಲೆ ಸಿಕ್ಕಿದೆ. ಅಲ್ಲಿಂದ ನಕ್ಸಲ್‌ ಹೋರಾಟದ ಪ್ರಭಾವಕ್ಕೊಳಗಾದ ತೋರಣಘಟ್ಟರವರು ಆರ್‌ವೈಎಫ್‌ ಎಂಬ ಕ್ರಾಂತಿಕಾರಿ ಸಂಘಟನೆಯನ್ನು ಹುಟ್ಟುಹಾಕಿದ್ದರು.

ದಲಿತ ಸಂಘರ್ಷ ಸಮಿತಿಯ ಆರಂಭದಲ್ಲಿ ಒಬ್ಬರಾಗಿದ್ದ ಇವರು ಸಂಸದೀಯ ಚುನಾವಣೆಗೆ ಸಂಘಟನೆಗಳು ಭಾಗವಹಿಸುವುದನ್ನು ವಿರೋಧಿಸಿ ಡಿಎಸ್‌ಎಸ್‌ (ಸಂಯೋಜಕ) ಬಣ ಸ್ಥಾಪಿಸಿದರು. ಮುಂದೆ ಸಿಪಿಐ (ಎಂಎಲ್) ಸಂಘಟನೆಯಲ್ಲಿಯೂ ಸಕ್ರಿಯವಾಗಿ ತೊಡಿಗಿಸಿಕೊಂಡಿದ್ದರು. ಕೊಡಗಿನ ಆದಿವಾಸಿಗಳನ್ನು ಸಂಘಟನೆ ಮಾಡಲು ಮುಂದಾದಾಗ ಅಪಘಾತಕ್ಕೊಳಗಾದ ಅವರು ಕಾಲು ಪೆಟ್ಟಿನಿಂದಾಗಿ ದಾವಣಗೆರೆಯಲ್ಲಿ ನೆಲೆಸಬೇಕಾಯಿತು. ಆಗ ಪಿ.ಲಂಕೇಶ್‌ರವರ ನೇತೃತ್ವದಲ್ಲಿ ಹೊರಬರುತ್ತಿದ್ದ ಲಂಕೇಶ್‌ ಪತ್ರಿಕೆಯ ವರದಿಗಾರರಾಗಿ ಬಹಳ ಕಾಲ ಪತ್ರಕರ್ತರ ಪಾತ್ರವಹಿಸಿದ್ದಾರೆ.

ಇವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆಯ ಕಾರೇಹಳ್ಳಿ ಭೂ ಹೋರಾಟ, ರಾಯಚೂರು ಜಿಲ್ಲೆಯ ಚಿಕ್ಕಹೆಸರೂರ ತೋರಣದಿನ್ನಿ ಭೂ ಹೋರಾಟ, ಕೊಪ್ಪಳದ ಕಾರಟಗಿ ಕೆರೆ ಅಂಗಳ ಭೂ ಹೋರಾಟ, ಚಿಕ್ಕಮಗಳೂರು ಜಿಲ್ಲೆಯ ಕಬ್ಬಿನಹಳ್ಳಿ ಭೂ ಹೋರಾಟ, ಭದ್ರಾವತಿಯ ಒಸಿ ಬ್ಲಾಕ್ ಕೊಳಗೇರಿ ನಿವಾಸಿಗಳ ಹೋರಾಟ… ಹೀಗೆ ಎರಡು ದಶಕಗಳ ಕಾಲ ರಾಜ್ಯದಲ್ಲಿ ನಡೆದ ಜಮೀನ್ದಾರಿ ವಿರೋಧಿ – ಸಾಮ್ರಾಜ್ಯ ವಿರೋಧಿ ಕ್ರಾಂತಿಕಾರಿ ಚಳವಳಿಯಲ್ಲಿ ತೋರಣಗಟ್ಟರವರು ತಮ್ಮನ್ನು ಬಿಡುವಿಲ್ಲದೇ ತೊಡಗಿಸಿಕೊಂಡಿದ್ದರು.

ನಂತರ ಗ್ರಾಮೀಣ ಅಧ್ಯಯನ ಮಾಡಲು ಅವರು ಬಳ್ಳಾರಿಗೆ ಪ್ರಯಾಣಿಸುತ್ತಿದ್ದ ವೇಳೆ ಎರಡನೇ ಬಾರಿಗೆ ಅಪಘಾತಕ್ಕೊಳಗಾದಾಗ ಅವರ ಆರೋತ್ಯ ಮತ್ತಷ್ಟು ಹದಗೆಟ್ಟಿತು. ಹಾಗಾಗಿ ಅವರು ಸಕ್ರಿಯ ಚಳಿವಳಿಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ತದನಂತರ ಅಪಘಾತದಲ್ಲಿ ಅವರ ಹಿರಿಯ ಮಗನನ್ನು ಸಹ ಕಳೆದುಕೊಂಡು ತೀವ್ರ ಮಾನಸಿಕ ಒತ್ತಡಕ್ಕೊಳಗಾಗುತ್ತಾರೆ.

ಆದರೂ ಸಾಮಾಜಿಕ ಕಾಳಜಿ ಹೊಂದಿದ್ದ ಅವರು ತಮ್ಮ ಬದುಕಿನುದ್ದಕ್ಕೂ ತೀವ್ರ ಹೋರಾಟ ನಡೆಸಿಕೊಂಡೇ ಬಂದವರು. ಇದಕ್ಕೆ ಪ್ರಾಧ್ಯಾಪಕರಾಗಿರುವ ಅವರ ಪತ್ನಿ ಯಶೋಧರವರ ಸಕ್ರಿಯ ಬೆಂಬಲ ಸದಾ ಇತ್ತು. ತೋರಣಘಟ್ಟರವರು ಚಳವಳಿ, ಹೋರಾಟ ಎಂದು ಊರೂರು ತಿರುಗಿದರೆ ಮನೆಯನ್ನು ನಿಭಾಯಿಸಿ ಅವರ ಹೋರಾಟಕ್ಕೆ ಅಗತ್ಯ ಹಣಕಾಸಿನ ನೆರವನ್ನು ಸಹ ಅವರ ಪತ್ನಿ ಒದಗಿಸುತ್ತಿದ್ದರು. ಅಷ್ಟರಮಟ್ಟಿಗಿನ ಸಾಮಾಜಿಕ ಕಾಳಜಿ ಅವರಿಗೂ ಇದ್ದ ಕಾರಣದಿಂದಲೇ ಇವರು ಇಷ್ಟೆಲ್ಲಾ ಹೋರಾಟಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗಿತ್ತು.

ಕೋಮು ಸೌಹಾರ್ದ ವೇದಿಕೆ, ಕರ್ನಾಟಕ ಜನಪರ ವೇದಿಕೆಗಳಲ್ಲಿಯು ಕೆಲಸ ಮಾಡಿ ಸೌರ್ಹಾದತೆಗಾಗಿ ಶ್ರಮಿಸಿದ್ದ ತೋರಣಘಟ್ಟರವರ ಆರೋಗ್ಯ ಕಳೆದ ಐದಾರು ವರ್ಷಗಳಿಂದ ಹದಗೆಡುತ್ತಾ ಬಂದಿದ್ದು ಇಂದು ಇಹಲೋಕ ತ್ಯಜಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...