Homeಚಳವಳಿದಲಿತ ಮತ್ತು ಕ್ರಾಂತಿಕಾರಿ ಕಮ್ಯುನಿಸ್ಟ್‌ ಚಳವಳಿಯ ಹಿರಿಯ ಹೋರಾಟಗಾರ ಚಂದ್ರಶೇಖರ ತೋರಣಘಟ್ಟ ನಿಧನ

ದಲಿತ ಮತ್ತು ಕ್ರಾಂತಿಕಾರಿ ಕಮ್ಯುನಿಸ್ಟ್‌ ಚಳವಳಿಯ ಹಿರಿಯ ಹೋರಾಟಗಾರ ಚಂದ್ರಶೇಖರ ತೋರಣಘಟ್ಟ ನಿಧನ

- Advertisement -
- Advertisement -

ನಾಡಿನ ಹಲವು ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಹಿರಿಯ ದಲಿತ, ಕಮ್ಯುನಿಸ್ಟ್‌ ಹೋರಾಟಗಾರ ಚಂದ್ರಶೇಖರ ತೋರಣಘಟ್ಟರವರು ಇಂದು ಚಿತ್ರದುರ್ಗದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ದಾವಣಗೆರೆ ಜಿಲ್ಲೆಯ ತೋರಣಘಟ್ಟದವರಾದ ಇವರು 80ರ ದಶಕದಲ್ಲಿ ಕರ್ನಾಟಕದಲ್ಲಿ ಕ್ರಾಂತಿಕಾರಿ ಕಮ್ಯೂನಿಸ್ಟ್ ಪಕ್ಷ ಕಟ್ಟುವ ಮೂಲಕ ದುಡಿವ ದಲಿತ ದಮನಿತರಿಗೆ ದನಿಯಾಗಿದ್ದರು. ಹಲವು ವರ್ಷಗಳಿಂದ ತೀವ್ರ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ.

ತೋರಣಘಟ್ಟರವರು ಪತ್ನಿ ಹಾಗೂ ಒರ್ವ ಪುತ್ರನನ್ನು ಅಗಲಿದ್ದು ಇಂದು ರಾತ್ರಿಯವರೆಗೂ ಅವರ ಪಾರ್ಥಿವ ಶರೀರವನ್ನು ಚಿತ್ರದುರ್ಗದಲ್ಲಿ ಇಡಲಾಗುತ್ತಿದ್ದು ನಾಳೆ ಮುಂಜಾನೆ ತೋರಣಘಟ್ಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಭದ್ರಾವತಿಯಲ್ಲಿ ಮೊದಲಿಗೆ ಹಕ್ಕಿಪಿಕ್ಕಿ ಸಮುದಾಯದವರಿಗೆ ಮನೆಗಾಗಿ ಭಾರೀ ಹೋರಾಟ ರೂಪಿಸಿದ್ದ ಅವರು ಅಲ್ಲಿನ ಗೂಂಡಾಗಳನ್ನು ಎದುರುಹಾಕಿಕೊಂಡು ದಿಟ್ಟಯುವಪಡೆಯನ್ನು ಕಟ್ಟಿ ಬೃಹತ್‌ ಹೋರಾಟದಲ್ಲಿ ಜಯಶೀಲರಾದರು. ಇವರ ಹೋರಾಟದ ಕಾರಣಕ್ಕೆ ಇಂದಿಗೂ ಭದ್ರಾವತಿಯಲ್ಲಿ ನೂರಾರು ದಲಿತ ಕುಟುಂಬಗಳಿಗೆ ನೆಲೆ ಸಿಕ್ಕಿದೆ. ಅಲ್ಲಿಂದ ನಕ್ಸಲ್‌ ಹೋರಾಟದ ಪ್ರಭಾವಕ್ಕೊಳಗಾದ ತೋರಣಘಟ್ಟರವರು ಆರ್‌ವೈಎಫ್‌ ಎಂಬ ಕ್ರಾಂತಿಕಾರಿ ಸಂಘಟನೆಯನ್ನು ಹುಟ್ಟುಹಾಕಿದ್ದರು.

ದಲಿತ ಸಂಘರ್ಷ ಸಮಿತಿಯ ಆರಂಭದಲ್ಲಿ ಒಬ್ಬರಾಗಿದ್ದ ಇವರು ಸಂಸದೀಯ ಚುನಾವಣೆಗೆ ಸಂಘಟನೆಗಳು ಭಾಗವಹಿಸುವುದನ್ನು ವಿರೋಧಿಸಿ ಡಿಎಸ್‌ಎಸ್‌ (ಸಂಯೋಜಕ) ಬಣ ಸ್ಥಾಪಿಸಿದರು. ಮುಂದೆ ಸಿಪಿಐ (ಎಂಎಲ್) ಸಂಘಟನೆಯಲ್ಲಿಯೂ ಸಕ್ರಿಯವಾಗಿ ತೊಡಿಗಿಸಿಕೊಂಡಿದ್ದರು. ಕೊಡಗಿನ ಆದಿವಾಸಿಗಳನ್ನು ಸಂಘಟನೆ ಮಾಡಲು ಮುಂದಾದಾಗ ಅಪಘಾತಕ್ಕೊಳಗಾದ ಅವರು ಕಾಲು ಪೆಟ್ಟಿನಿಂದಾಗಿ ದಾವಣಗೆರೆಯಲ್ಲಿ ನೆಲೆಸಬೇಕಾಯಿತು. ಆಗ ಪಿ.ಲಂಕೇಶ್‌ರವರ ನೇತೃತ್ವದಲ್ಲಿ ಹೊರಬರುತ್ತಿದ್ದ ಲಂಕೇಶ್‌ ಪತ್ರಿಕೆಯ ವರದಿಗಾರರಾಗಿ ಬಹಳ ಕಾಲ ಪತ್ರಕರ್ತರ ಪಾತ್ರವಹಿಸಿದ್ದಾರೆ.

ಇವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆಯ ಕಾರೇಹಳ್ಳಿ ಭೂ ಹೋರಾಟ, ರಾಯಚೂರು ಜಿಲ್ಲೆಯ ಚಿಕ್ಕಹೆಸರೂರ ತೋರಣದಿನ್ನಿ ಭೂ ಹೋರಾಟ, ಕೊಪ್ಪಳದ ಕಾರಟಗಿ ಕೆರೆ ಅಂಗಳ ಭೂ ಹೋರಾಟ, ಚಿಕ್ಕಮಗಳೂರು ಜಿಲ್ಲೆಯ ಕಬ್ಬಿನಹಳ್ಳಿ ಭೂ ಹೋರಾಟ, ಭದ್ರಾವತಿಯ ಒಸಿ ಬ್ಲಾಕ್ ಕೊಳಗೇರಿ ನಿವಾಸಿಗಳ ಹೋರಾಟ… ಹೀಗೆ ಎರಡು ದಶಕಗಳ ಕಾಲ ರಾಜ್ಯದಲ್ಲಿ ನಡೆದ ಜಮೀನ್ದಾರಿ ವಿರೋಧಿ – ಸಾಮ್ರಾಜ್ಯ ವಿರೋಧಿ ಕ್ರಾಂತಿಕಾರಿ ಚಳವಳಿಯಲ್ಲಿ ತೋರಣಗಟ್ಟರವರು ತಮ್ಮನ್ನು ಬಿಡುವಿಲ್ಲದೇ ತೊಡಗಿಸಿಕೊಂಡಿದ್ದರು.

ನಂತರ ಗ್ರಾಮೀಣ ಅಧ್ಯಯನ ಮಾಡಲು ಅವರು ಬಳ್ಳಾರಿಗೆ ಪ್ರಯಾಣಿಸುತ್ತಿದ್ದ ವೇಳೆ ಎರಡನೇ ಬಾರಿಗೆ ಅಪಘಾತಕ್ಕೊಳಗಾದಾಗ ಅವರ ಆರೋತ್ಯ ಮತ್ತಷ್ಟು ಹದಗೆಟ್ಟಿತು. ಹಾಗಾಗಿ ಅವರು ಸಕ್ರಿಯ ಚಳಿವಳಿಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ತದನಂತರ ಅಪಘಾತದಲ್ಲಿ ಅವರ ಹಿರಿಯ ಮಗನನ್ನು ಸಹ ಕಳೆದುಕೊಂಡು ತೀವ್ರ ಮಾನಸಿಕ ಒತ್ತಡಕ್ಕೊಳಗಾಗುತ್ತಾರೆ.

ಆದರೂ ಸಾಮಾಜಿಕ ಕಾಳಜಿ ಹೊಂದಿದ್ದ ಅವರು ತಮ್ಮ ಬದುಕಿನುದ್ದಕ್ಕೂ ತೀವ್ರ ಹೋರಾಟ ನಡೆಸಿಕೊಂಡೇ ಬಂದವರು. ಇದಕ್ಕೆ ಪ್ರಾಧ್ಯಾಪಕರಾಗಿರುವ ಅವರ ಪತ್ನಿ ಯಶೋಧರವರ ಸಕ್ರಿಯ ಬೆಂಬಲ ಸದಾ ಇತ್ತು. ತೋರಣಘಟ್ಟರವರು ಚಳವಳಿ, ಹೋರಾಟ ಎಂದು ಊರೂರು ತಿರುಗಿದರೆ ಮನೆಯನ್ನು ನಿಭಾಯಿಸಿ ಅವರ ಹೋರಾಟಕ್ಕೆ ಅಗತ್ಯ ಹಣಕಾಸಿನ ನೆರವನ್ನು ಸಹ ಅವರ ಪತ್ನಿ ಒದಗಿಸುತ್ತಿದ್ದರು. ಅಷ್ಟರಮಟ್ಟಿಗಿನ ಸಾಮಾಜಿಕ ಕಾಳಜಿ ಅವರಿಗೂ ಇದ್ದ ಕಾರಣದಿಂದಲೇ ಇವರು ಇಷ್ಟೆಲ್ಲಾ ಹೋರಾಟಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗಿತ್ತು.

ಕೋಮು ಸೌಹಾರ್ದ ವೇದಿಕೆ, ಕರ್ನಾಟಕ ಜನಪರ ವೇದಿಕೆಗಳಲ್ಲಿಯು ಕೆಲಸ ಮಾಡಿ ಸೌರ್ಹಾದತೆಗಾಗಿ ಶ್ರಮಿಸಿದ್ದ ತೋರಣಘಟ್ಟರವರ ಆರೋಗ್ಯ ಕಳೆದ ಐದಾರು ವರ್ಷಗಳಿಂದ ಹದಗೆಡುತ್ತಾ ಬಂದಿದ್ದು ಇಂದು ಇಹಲೋಕ ತ್ಯಜಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...