Homeಚಳವಳಿದಲಿತ ಮತ್ತು ಕ್ರಾಂತಿಕಾರಿ ಕಮ್ಯುನಿಸ್ಟ್‌ ಚಳವಳಿಯ ಹಿರಿಯ ಹೋರಾಟಗಾರ ಚಂದ್ರಶೇಖರ ತೋರಣಘಟ್ಟ ನಿಧನ

ದಲಿತ ಮತ್ತು ಕ್ರಾಂತಿಕಾರಿ ಕಮ್ಯುನಿಸ್ಟ್‌ ಚಳವಳಿಯ ಹಿರಿಯ ಹೋರಾಟಗಾರ ಚಂದ್ರಶೇಖರ ತೋರಣಘಟ್ಟ ನಿಧನ

- Advertisement -
- Advertisement -

ನಾಡಿನ ಹಲವು ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಹಿರಿಯ ದಲಿತ, ಕಮ್ಯುನಿಸ್ಟ್‌ ಹೋರಾಟಗಾರ ಚಂದ್ರಶೇಖರ ತೋರಣಘಟ್ಟರವರು ಇಂದು ಚಿತ್ರದುರ್ಗದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ದಾವಣಗೆರೆ ಜಿಲ್ಲೆಯ ತೋರಣಘಟ್ಟದವರಾದ ಇವರು 80ರ ದಶಕದಲ್ಲಿ ಕರ್ನಾಟಕದಲ್ಲಿ ಕ್ರಾಂತಿಕಾರಿ ಕಮ್ಯೂನಿಸ್ಟ್ ಪಕ್ಷ ಕಟ್ಟುವ ಮೂಲಕ ದುಡಿವ ದಲಿತ ದಮನಿತರಿಗೆ ದನಿಯಾಗಿದ್ದರು. ಹಲವು ವರ್ಷಗಳಿಂದ ತೀವ್ರ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ.

ತೋರಣಘಟ್ಟರವರು ಪತ್ನಿ ಹಾಗೂ ಒರ್ವ ಪುತ್ರನನ್ನು ಅಗಲಿದ್ದು ಇಂದು ರಾತ್ರಿಯವರೆಗೂ ಅವರ ಪಾರ್ಥಿವ ಶರೀರವನ್ನು ಚಿತ್ರದುರ್ಗದಲ್ಲಿ ಇಡಲಾಗುತ್ತಿದ್ದು ನಾಳೆ ಮುಂಜಾನೆ ತೋರಣಘಟ್ಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಭದ್ರಾವತಿಯಲ್ಲಿ ಮೊದಲಿಗೆ ಹಕ್ಕಿಪಿಕ್ಕಿ ಸಮುದಾಯದವರಿಗೆ ಮನೆಗಾಗಿ ಭಾರೀ ಹೋರಾಟ ರೂಪಿಸಿದ್ದ ಅವರು ಅಲ್ಲಿನ ಗೂಂಡಾಗಳನ್ನು ಎದುರುಹಾಕಿಕೊಂಡು ದಿಟ್ಟಯುವಪಡೆಯನ್ನು ಕಟ್ಟಿ ಬೃಹತ್‌ ಹೋರಾಟದಲ್ಲಿ ಜಯಶೀಲರಾದರು. ಇವರ ಹೋರಾಟದ ಕಾರಣಕ್ಕೆ ಇಂದಿಗೂ ಭದ್ರಾವತಿಯಲ್ಲಿ ನೂರಾರು ದಲಿತ ಕುಟುಂಬಗಳಿಗೆ ನೆಲೆ ಸಿಕ್ಕಿದೆ. ಅಲ್ಲಿಂದ ನಕ್ಸಲ್‌ ಹೋರಾಟದ ಪ್ರಭಾವಕ್ಕೊಳಗಾದ ತೋರಣಘಟ್ಟರವರು ಆರ್‌ವೈಎಫ್‌ ಎಂಬ ಕ್ರಾಂತಿಕಾರಿ ಸಂಘಟನೆಯನ್ನು ಹುಟ್ಟುಹಾಕಿದ್ದರು.

ದಲಿತ ಸಂಘರ್ಷ ಸಮಿತಿಯ ಆರಂಭದಲ್ಲಿ ಒಬ್ಬರಾಗಿದ್ದ ಇವರು ಸಂಸದೀಯ ಚುನಾವಣೆಗೆ ಸಂಘಟನೆಗಳು ಭಾಗವಹಿಸುವುದನ್ನು ವಿರೋಧಿಸಿ ಡಿಎಸ್‌ಎಸ್‌ (ಸಂಯೋಜಕ) ಬಣ ಸ್ಥಾಪಿಸಿದರು. ಮುಂದೆ ಸಿಪಿಐ (ಎಂಎಲ್) ಸಂಘಟನೆಯಲ್ಲಿಯೂ ಸಕ್ರಿಯವಾಗಿ ತೊಡಿಗಿಸಿಕೊಂಡಿದ್ದರು. ಕೊಡಗಿನ ಆದಿವಾಸಿಗಳನ್ನು ಸಂಘಟನೆ ಮಾಡಲು ಮುಂದಾದಾಗ ಅಪಘಾತಕ್ಕೊಳಗಾದ ಅವರು ಕಾಲು ಪೆಟ್ಟಿನಿಂದಾಗಿ ದಾವಣಗೆರೆಯಲ್ಲಿ ನೆಲೆಸಬೇಕಾಯಿತು. ಆಗ ಪಿ.ಲಂಕೇಶ್‌ರವರ ನೇತೃತ್ವದಲ್ಲಿ ಹೊರಬರುತ್ತಿದ್ದ ಲಂಕೇಶ್‌ ಪತ್ರಿಕೆಯ ವರದಿಗಾರರಾಗಿ ಬಹಳ ಕಾಲ ಪತ್ರಕರ್ತರ ಪಾತ್ರವಹಿಸಿದ್ದಾರೆ.

ಇವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆಯ ಕಾರೇಹಳ್ಳಿ ಭೂ ಹೋರಾಟ, ರಾಯಚೂರು ಜಿಲ್ಲೆಯ ಚಿಕ್ಕಹೆಸರೂರ ತೋರಣದಿನ್ನಿ ಭೂ ಹೋರಾಟ, ಕೊಪ್ಪಳದ ಕಾರಟಗಿ ಕೆರೆ ಅಂಗಳ ಭೂ ಹೋರಾಟ, ಚಿಕ್ಕಮಗಳೂರು ಜಿಲ್ಲೆಯ ಕಬ್ಬಿನಹಳ್ಳಿ ಭೂ ಹೋರಾಟ, ಭದ್ರಾವತಿಯ ಒಸಿ ಬ್ಲಾಕ್ ಕೊಳಗೇರಿ ನಿವಾಸಿಗಳ ಹೋರಾಟ… ಹೀಗೆ ಎರಡು ದಶಕಗಳ ಕಾಲ ರಾಜ್ಯದಲ್ಲಿ ನಡೆದ ಜಮೀನ್ದಾರಿ ವಿರೋಧಿ – ಸಾಮ್ರಾಜ್ಯ ವಿರೋಧಿ ಕ್ರಾಂತಿಕಾರಿ ಚಳವಳಿಯಲ್ಲಿ ತೋರಣಗಟ್ಟರವರು ತಮ್ಮನ್ನು ಬಿಡುವಿಲ್ಲದೇ ತೊಡಗಿಸಿಕೊಂಡಿದ್ದರು.

ನಂತರ ಗ್ರಾಮೀಣ ಅಧ್ಯಯನ ಮಾಡಲು ಅವರು ಬಳ್ಳಾರಿಗೆ ಪ್ರಯಾಣಿಸುತ್ತಿದ್ದ ವೇಳೆ ಎರಡನೇ ಬಾರಿಗೆ ಅಪಘಾತಕ್ಕೊಳಗಾದಾಗ ಅವರ ಆರೋತ್ಯ ಮತ್ತಷ್ಟು ಹದಗೆಟ್ಟಿತು. ಹಾಗಾಗಿ ಅವರು ಸಕ್ರಿಯ ಚಳಿವಳಿಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ತದನಂತರ ಅಪಘಾತದಲ್ಲಿ ಅವರ ಹಿರಿಯ ಮಗನನ್ನು ಸಹ ಕಳೆದುಕೊಂಡು ತೀವ್ರ ಮಾನಸಿಕ ಒತ್ತಡಕ್ಕೊಳಗಾಗುತ್ತಾರೆ.

ಆದರೂ ಸಾಮಾಜಿಕ ಕಾಳಜಿ ಹೊಂದಿದ್ದ ಅವರು ತಮ್ಮ ಬದುಕಿನುದ್ದಕ್ಕೂ ತೀವ್ರ ಹೋರಾಟ ನಡೆಸಿಕೊಂಡೇ ಬಂದವರು. ಇದಕ್ಕೆ ಪ್ರಾಧ್ಯಾಪಕರಾಗಿರುವ ಅವರ ಪತ್ನಿ ಯಶೋಧರವರ ಸಕ್ರಿಯ ಬೆಂಬಲ ಸದಾ ಇತ್ತು. ತೋರಣಘಟ್ಟರವರು ಚಳವಳಿ, ಹೋರಾಟ ಎಂದು ಊರೂರು ತಿರುಗಿದರೆ ಮನೆಯನ್ನು ನಿಭಾಯಿಸಿ ಅವರ ಹೋರಾಟಕ್ಕೆ ಅಗತ್ಯ ಹಣಕಾಸಿನ ನೆರವನ್ನು ಸಹ ಅವರ ಪತ್ನಿ ಒದಗಿಸುತ್ತಿದ್ದರು. ಅಷ್ಟರಮಟ್ಟಿಗಿನ ಸಾಮಾಜಿಕ ಕಾಳಜಿ ಅವರಿಗೂ ಇದ್ದ ಕಾರಣದಿಂದಲೇ ಇವರು ಇಷ್ಟೆಲ್ಲಾ ಹೋರಾಟಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗಿತ್ತು.

ಕೋಮು ಸೌಹಾರ್ದ ವೇದಿಕೆ, ಕರ್ನಾಟಕ ಜನಪರ ವೇದಿಕೆಗಳಲ್ಲಿಯು ಕೆಲಸ ಮಾಡಿ ಸೌರ್ಹಾದತೆಗಾಗಿ ಶ್ರಮಿಸಿದ್ದ ತೋರಣಘಟ್ಟರವರ ಆರೋಗ್ಯ ಕಳೆದ ಐದಾರು ವರ್ಷಗಳಿಂದ ಹದಗೆಡುತ್ತಾ ಬಂದಿದ್ದು ಇಂದು ಇಹಲೋಕ ತ್ಯಜಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...