Homeಚಳವಳಿದಲಿತ ಮತ್ತು ಕ್ರಾಂತಿಕಾರಿ ಕಮ್ಯುನಿಸ್ಟ್‌ ಚಳವಳಿಯ ಹಿರಿಯ ಹೋರಾಟಗಾರ ಚಂದ್ರಶೇಖರ ತೋರಣಘಟ್ಟ ನಿಧನ

ದಲಿತ ಮತ್ತು ಕ್ರಾಂತಿಕಾರಿ ಕಮ್ಯುನಿಸ್ಟ್‌ ಚಳವಳಿಯ ಹಿರಿಯ ಹೋರಾಟಗಾರ ಚಂದ್ರಶೇಖರ ತೋರಣಘಟ್ಟ ನಿಧನ

- Advertisement -
- Advertisement -

ನಾಡಿನ ಹಲವು ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಹಿರಿಯ ದಲಿತ, ಕಮ್ಯುನಿಸ್ಟ್‌ ಹೋರಾಟಗಾರ ಚಂದ್ರಶೇಖರ ತೋರಣಘಟ್ಟರವರು ಇಂದು ಚಿತ್ರದುರ್ಗದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ದಾವಣಗೆರೆ ಜಿಲ್ಲೆಯ ತೋರಣಘಟ್ಟದವರಾದ ಇವರು 80ರ ದಶಕದಲ್ಲಿ ಕರ್ನಾಟಕದಲ್ಲಿ ಕ್ರಾಂತಿಕಾರಿ ಕಮ್ಯೂನಿಸ್ಟ್ ಪಕ್ಷ ಕಟ್ಟುವ ಮೂಲಕ ದುಡಿವ ದಲಿತ ದಮನಿತರಿಗೆ ದನಿಯಾಗಿದ್ದರು. ಹಲವು ವರ್ಷಗಳಿಂದ ತೀವ್ರ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ.

ತೋರಣಘಟ್ಟರವರು ಪತ್ನಿ ಹಾಗೂ ಒರ್ವ ಪುತ್ರನನ್ನು ಅಗಲಿದ್ದು ಇಂದು ರಾತ್ರಿಯವರೆಗೂ ಅವರ ಪಾರ್ಥಿವ ಶರೀರವನ್ನು ಚಿತ್ರದುರ್ಗದಲ್ಲಿ ಇಡಲಾಗುತ್ತಿದ್ದು ನಾಳೆ ಮುಂಜಾನೆ ತೋರಣಘಟ್ಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಭದ್ರಾವತಿಯಲ್ಲಿ ಮೊದಲಿಗೆ ಹಕ್ಕಿಪಿಕ್ಕಿ ಸಮುದಾಯದವರಿಗೆ ಮನೆಗಾಗಿ ಭಾರೀ ಹೋರಾಟ ರೂಪಿಸಿದ್ದ ಅವರು ಅಲ್ಲಿನ ಗೂಂಡಾಗಳನ್ನು ಎದುರುಹಾಕಿಕೊಂಡು ದಿಟ್ಟಯುವಪಡೆಯನ್ನು ಕಟ್ಟಿ ಬೃಹತ್‌ ಹೋರಾಟದಲ್ಲಿ ಜಯಶೀಲರಾದರು. ಇವರ ಹೋರಾಟದ ಕಾರಣಕ್ಕೆ ಇಂದಿಗೂ ಭದ್ರಾವತಿಯಲ್ಲಿ ನೂರಾರು ದಲಿತ ಕುಟುಂಬಗಳಿಗೆ ನೆಲೆ ಸಿಕ್ಕಿದೆ. ಅಲ್ಲಿಂದ ನಕ್ಸಲ್‌ ಹೋರಾಟದ ಪ್ರಭಾವಕ್ಕೊಳಗಾದ ತೋರಣಘಟ್ಟರವರು ಆರ್‌ವೈಎಫ್‌ ಎಂಬ ಕ್ರಾಂತಿಕಾರಿ ಸಂಘಟನೆಯನ್ನು ಹುಟ್ಟುಹಾಕಿದ್ದರು.

ದಲಿತ ಸಂಘರ್ಷ ಸಮಿತಿಯ ಆರಂಭದಲ್ಲಿ ಒಬ್ಬರಾಗಿದ್ದ ಇವರು ಸಂಸದೀಯ ಚುನಾವಣೆಗೆ ಸಂಘಟನೆಗಳು ಭಾಗವಹಿಸುವುದನ್ನು ವಿರೋಧಿಸಿ ಡಿಎಸ್‌ಎಸ್‌ (ಸಂಯೋಜಕ) ಬಣ ಸ್ಥಾಪಿಸಿದರು. ಮುಂದೆ ಸಿಪಿಐ (ಎಂಎಲ್) ಸಂಘಟನೆಯಲ್ಲಿಯೂ ಸಕ್ರಿಯವಾಗಿ ತೊಡಿಗಿಸಿಕೊಂಡಿದ್ದರು. ಕೊಡಗಿನ ಆದಿವಾಸಿಗಳನ್ನು ಸಂಘಟನೆ ಮಾಡಲು ಮುಂದಾದಾಗ ಅಪಘಾತಕ್ಕೊಳಗಾದ ಅವರು ಕಾಲು ಪೆಟ್ಟಿನಿಂದಾಗಿ ದಾವಣಗೆರೆಯಲ್ಲಿ ನೆಲೆಸಬೇಕಾಯಿತು. ಆಗ ಪಿ.ಲಂಕೇಶ್‌ರವರ ನೇತೃತ್ವದಲ್ಲಿ ಹೊರಬರುತ್ತಿದ್ದ ಲಂಕೇಶ್‌ ಪತ್ರಿಕೆಯ ವರದಿಗಾರರಾಗಿ ಬಹಳ ಕಾಲ ಪತ್ರಕರ್ತರ ಪಾತ್ರವಹಿಸಿದ್ದಾರೆ.

ಇವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆಯ ಕಾರೇಹಳ್ಳಿ ಭೂ ಹೋರಾಟ, ರಾಯಚೂರು ಜಿಲ್ಲೆಯ ಚಿಕ್ಕಹೆಸರೂರ ತೋರಣದಿನ್ನಿ ಭೂ ಹೋರಾಟ, ಕೊಪ್ಪಳದ ಕಾರಟಗಿ ಕೆರೆ ಅಂಗಳ ಭೂ ಹೋರಾಟ, ಚಿಕ್ಕಮಗಳೂರು ಜಿಲ್ಲೆಯ ಕಬ್ಬಿನಹಳ್ಳಿ ಭೂ ಹೋರಾಟ, ಭದ್ರಾವತಿಯ ಒಸಿ ಬ್ಲಾಕ್ ಕೊಳಗೇರಿ ನಿವಾಸಿಗಳ ಹೋರಾಟ… ಹೀಗೆ ಎರಡು ದಶಕಗಳ ಕಾಲ ರಾಜ್ಯದಲ್ಲಿ ನಡೆದ ಜಮೀನ್ದಾರಿ ವಿರೋಧಿ – ಸಾಮ್ರಾಜ್ಯ ವಿರೋಧಿ ಕ್ರಾಂತಿಕಾರಿ ಚಳವಳಿಯಲ್ಲಿ ತೋರಣಗಟ್ಟರವರು ತಮ್ಮನ್ನು ಬಿಡುವಿಲ್ಲದೇ ತೊಡಗಿಸಿಕೊಂಡಿದ್ದರು.

ನಂತರ ಗ್ರಾಮೀಣ ಅಧ್ಯಯನ ಮಾಡಲು ಅವರು ಬಳ್ಳಾರಿಗೆ ಪ್ರಯಾಣಿಸುತ್ತಿದ್ದ ವೇಳೆ ಎರಡನೇ ಬಾರಿಗೆ ಅಪಘಾತಕ್ಕೊಳಗಾದಾಗ ಅವರ ಆರೋತ್ಯ ಮತ್ತಷ್ಟು ಹದಗೆಟ್ಟಿತು. ಹಾಗಾಗಿ ಅವರು ಸಕ್ರಿಯ ಚಳಿವಳಿಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ತದನಂತರ ಅಪಘಾತದಲ್ಲಿ ಅವರ ಹಿರಿಯ ಮಗನನ್ನು ಸಹ ಕಳೆದುಕೊಂಡು ತೀವ್ರ ಮಾನಸಿಕ ಒತ್ತಡಕ್ಕೊಳಗಾಗುತ್ತಾರೆ.

ಆದರೂ ಸಾಮಾಜಿಕ ಕಾಳಜಿ ಹೊಂದಿದ್ದ ಅವರು ತಮ್ಮ ಬದುಕಿನುದ್ದಕ್ಕೂ ತೀವ್ರ ಹೋರಾಟ ನಡೆಸಿಕೊಂಡೇ ಬಂದವರು. ಇದಕ್ಕೆ ಪ್ರಾಧ್ಯಾಪಕರಾಗಿರುವ ಅವರ ಪತ್ನಿ ಯಶೋಧರವರ ಸಕ್ರಿಯ ಬೆಂಬಲ ಸದಾ ಇತ್ತು. ತೋರಣಘಟ್ಟರವರು ಚಳವಳಿ, ಹೋರಾಟ ಎಂದು ಊರೂರು ತಿರುಗಿದರೆ ಮನೆಯನ್ನು ನಿಭಾಯಿಸಿ ಅವರ ಹೋರಾಟಕ್ಕೆ ಅಗತ್ಯ ಹಣಕಾಸಿನ ನೆರವನ್ನು ಸಹ ಅವರ ಪತ್ನಿ ಒದಗಿಸುತ್ತಿದ್ದರು. ಅಷ್ಟರಮಟ್ಟಿಗಿನ ಸಾಮಾಜಿಕ ಕಾಳಜಿ ಅವರಿಗೂ ಇದ್ದ ಕಾರಣದಿಂದಲೇ ಇವರು ಇಷ್ಟೆಲ್ಲಾ ಹೋರಾಟಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗಿತ್ತು.

ಕೋಮು ಸೌಹಾರ್ದ ವೇದಿಕೆ, ಕರ್ನಾಟಕ ಜನಪರ ವೇದಿಕೆಗಳಲ್ಲಿಯು ಕೆಲಸ ಮಾಡಿ ಸೌರ್ಹಾದತೆಗಾಗಿ ಶ್ರಮಿಸಿದ್ದ ತೋರಣಘಟ್ಟರವರ ಆರೋಗ್ಯ ಕಳೆದ ಐದಾರು ವರ್ಷಗಳಿಂದ ಹದಗೆಡುತ್ತಾ ಬಂದಿದ್ದು ಇಂದು ಇಹಲೋಕ ತ್ಯಜಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...