Homeಚಳವಳಿದಲಿತ ಮತ್ತು ಕ್ರಾಂತಿಕಾರಿ ಕಮ್ಯುನಿಸ್ಟ್‌ ಚಳವಳಿಯ ಹಿರಿಯ ಹೋರಾಟಗಾರ ಚಂದ್ರಶೇಖರ ತೋರಣಘಟ್ಟ ನಿಧನ

ದಲಿತ ಮತ್ತು ಕ್ರಾಂತಿಕಾರಿ ಕಮ್ಯುನಿಸ್ಟ್‌ ಚಳವಳಿಯ ಹಿರಿಯ ಹೋರಾಟಗಾರ ಚಂದ್ರಶೇಖರ ತೋರಣಘಟ್ಟ ನಿಧನ

- Advertisement -
- Advertisement -

ನಾಡಿನ ಹಲವು ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಹಿರಿಯ ದಲಿತ, ಕಮ್ಯುನಿಸ್ಟ್‌ ಹೋರಾಟಗಾರ ಚಂದ್ರಶೇಖರ ತೋರಣಘಟ್ಟರವರು ಇಂದು ಚಿತ್ರದುರ್ಗದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ದಾವಣಗೆರೆ ಜಿಲ್ಲೆಯ ತೋರಣಘಟ್ಟದವರಾದ ಇವರು 80ರ ದಶಕದಲ್ಲಿ ಕರ್ನಾಟಕದಲ್ಲಿ ಕ್ರಾಂತಿಕಾರಿ ಕಮ್ಯೂನಿಸ್ಟ್ ಪಕ್ಷ ಕಟ್ಟುವ ಮೂಲಕ ದುಡಿವ ದಲಿತ ದಮನಿತರಿಗೆ ದನಿಯಾಗಿದ್ದರು. ಹಲವು ವರ್ಷಗಳಿಂದ ತೀವ್ರ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ.

ತೋರಣಘಟ್ಟರವರು ಪತ್ನಿ ಹಾಗೂ ಒರ್ವ ಪುತ್ರನನ್ನು ಅಗಲಿದ್ದು ಇಂದು ರಾತ್ರಿಯವರೆಗೂ ಅವರ ಪಾರ್ಥಿವ ಶರೀರವನ್ನು ಚಿತ್ರದುರ್ಗದಲ್ಲಿ ಇಡಲಾಗುತ್ತಿದ್ದು ನಾಳೆ ಮುಂಜಾನೆ ತೋರಣಘಟ್ಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಭದ್ರಾವತಿಯಲ್ಲಿ ಮೊದಲಿಗೆ ಹಕ್ಕಿಪಿಕ್ಕಿ ಸಮುದಾಯದವರಿಗೆ ಮನೆಗಾಗಿ ಭಾರೀ ಹೋರಾಟ ರೂಪಿಸಿದ್ದ ಅವರು ಅಲ್ಲಿನ ಗೂಂಡಾಗಳನ್ನು ಎದುರುಹಾಕಿಕೊಂಡು ದಿಟ್ಟಯುವಪಡೆಯನ್ನು ಕಟ್ಟಿ ಬೃಹತ್‌ ಹೋರಾಟದಲ್ಲಿ ಜಯಶೀಲರಾದರು. ಇವರ ಹೋರಾಟದ ಕಾರಣಕ್ಕೆ ಇಂದಿಗೂ ಭದ್ರಾವತಿಯಲ್ಲಿ ನೂರಾರು ದಲಿತ ಕುಟುಂಬಗಳಿಗೆ ನೆಲೆ ಸಿಕ್ಕಿದೆ. ಅಲ್ಲಿಂದ ನಕ್ಸಲ್‌ ಹೋರಾಟದ ಪ್ರಭಾವಕ್ಕೊಳಗಾದ ತೋರಣಘಟ್ಟರವರು ಆರ್‌ವೈಎಫ್‌ ಎಂಬ ಕ್ರಾಂತಿಕಾರಿ ಸಂಘಟನೆಯನ್ನು ಹುಟ್ಟುಹಾಕಿದ್ದರು.

ದಲಿತ ಸಂಘರ್ಷ ಸಮಿತಿಯ ಆರಂಭದಲ್ಲಿ ಒಬ್ಬರಾಗಿದ್ದ ಇವರು ಸಂಸದೀಯ ಚುನಾವಣೆಗೆ ಸಂಘಟನೆಗಳು ಭಾಗವಹಿಸುವುದನ್ನು ವಿರೋಧಿಸಿ ಡಿಎಸ್‌ಎಸ್‌ (ಸಂಯೋಜಕ) ಬಣ ಸ್ಥಾಪಿಸಿದರು. ಮುಂದೆ ಸಿಪಿಐ (ಎಂಎಲ್) ಸಂಘಟನೆಯಲ್ಲಿಯೂ ಸಕ್ರಿಯವಾಗಿ ತೊಡಿಗಿಸಿಕೊಂಡಿದ್ದರು. ಕೊಡಗಿನ ಆದಿವಾಸಿಗಳನ್ನು ಸಂಘಟನೆ ಮಾಡಲು ಮುಂದಾದಾಗ ಅಪಘಾತಕ್ಕೊಳಗಾದ ಅವರು ಕಾಲು ಪೆಟ್ಟಿನಿಂದಾಗಿ ದಾವಣಗೆರೆಯಲ್ಲಿ ನೆಲೆಸಬೇಕಾಯಿತು. ಆಗ ಪಿ.ಲಂಕೇಶ್‌ರವರ ನೇತೃತ್ವದಲ್ಲಿ ಹೊರಬರುತ್ತಿದ್ದ ಲಂಕೇಶ್‌ ಪತ್ರಿಕೆಯ ವರದಿಗಾರರಾಗಿ ಬಹಳ ಕಾಲ ಪತ್ರಕರ್ತರ ಪಾತ್ರವಹಿಸಿದ್ದಾರೆ.

ಇವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆಯ ಕಾರೇಹಳ್ಳಿ ಭೂ ಹೋರಾಟ, ರಾಯಚೂರು ಜಿಲ್ಲೆಯ ಚಿಕ್ಕಹೆಸರೂರ ತೋರಣದಿನ್ನಿ ಭೂ ಹೋರಾಟ, ಕೊಪ್ಪಳದ ಕಾರಟಗಿ ಕೆರೆ ಅಂಗಳ ಭೂ ಹೋರಾಟ, ಚಿಕ್ಕಮಗಳೂರು ಜಿಲ್ಲೆಯ ಕಬ್ಬಿನಹಳ್ಳಿ ಭೂ ಹೋರಾಟ, ಭದ್ರಾವತಿಯ ಒಸಿ ಬ್ಲಾಕ್ ಕೊಳಗೇರಿ ನಿವಾಸಿಗಳ ಹೋರಾಟ… ಹೀಗೆ ಎರಡು ದಶಕಗಳ ಕಾಲ ರಾಜ್ಯದಲ್ಲಿ ನಡೆದ ಜಮೀನ್ದಾರಿ ವಿರೋಧಿ – ಸಾಮ್ರಾಜ್ಯ ವಿರೋಧಿ ಕ್ರಾಂತಿಕಾರಿ ಚಳವಳಿಯಲ್ಲಿ ತೋರಣಗಟ್ಟರವರು ತಮ್ಮನ್ನು ಬಿಡುವಿಲ್ಲದೇ ತೊಡಗಿಸಿಕೊಂಡಿದ್ದರು.

ನಂತರ ಗ್ರಾಮೀಣ ಅಧ್ಯಯನ ಮಾಡಲು ಅವರು ಬಳ್ಳಾರಿಗೆ ಪ್ರಯಾಣಿಸುತ್ತಿದ್ದ ವೇಳೆ ಎರಡನೇ ಬಾರಿಗೆ ಅಪಘಾತಕ್ಕೊಳಗಾದಾಗ ಅವರ ಆರೋತ್ಯ ಮತ್ತಷ್ಟು ಹದಗೆಟ್ಟಿತು. ಹಾಗಾಗಿ ಅವರು ಸಕ್ರಿಯ ಚಳಿವಳಿಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ತದನಂತರ ಅಪಘಾತದಲ್ಲಿ ಅವರ ಹಿರಿಯ ಮಗನನ್ನು ಸಹ ಕಳೆದುಕೊಂಡು ತೀವ್ರ ಮಾನಸಿಕ ಒತ್ತಡಕ್ಕೊಳಗಾಗುತ್ತಾರೆ.

ಆದರೂ ಸಾಮಾಜಿಕ ಕಾಳಜಿ ಹೊಂದಿದ್ದ ಅವರು ತಮ್ಮ ಬದುಕಿನುದ್ದಕ್ಕೂ ತೀವ್ರ ಹೋರಾಟ ನಡೆಸಿಕೊಂಡೇ ಬಂದವರು. ಇದಕ್ಕೆ ಪ್ರಾಧ್ಯಾಪಕರಾಗಿರುವ ಅವರ ಪತ್ನಿ ಯಶೋಧರವರ ಸಕ್ರಿಯ ಬೆಂಬಲ ಸದಾ ಇತ್ತು. ತೋರಣಘಟ್ಟರವರು ಚಳವಳಿ, ಹೋರಾಟ ಎಂದು ಊರೂರು ತಿರುಗಿದರೆ ಮನೆಯನ್ನು ನಿಭಾಯಿಸಿ ಅವರ ಹೋರಾಟಕ್ಕೆ ಅಗತ್ಯ ಹಣಕಾಸಿನ ನೆರವನ್ನು ಸಹ ಅವರ ಪತ್ನಿ ಒದಗಿಸುತ್ತಿದ್ದರು. ಅಷ್ಟರಮಟ್ಟಿಗಿನ ಸಾಮಾಜಿಕ ಕಾಳಜಿ ಅವರಿಗೂ ಇದ್ದ ಕಾರಣದಿಂದಲೇ ಇವರು ಇಷ್ಟೆಲ್ಲಾ ಹೋರಾಟಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗಿತ್ತು.

ಕೋಮು ಸೌಹಾರ್ದ ವೇದಿಕೆ, ಕರ್ನಾಟಕ ಜನಪರ ವೇದಿಕೆಗಳಲ್ಲಿಯು ಕೆಲಸ ಮಾಡಿ ಸೌರ್ಹಾದತೆಗಾಗಿ ಶ್ರಮಿಸಿದ್ದ ತೋರಣಘಟ್ಟರವರ ಆರೋಗ್ಯ ಕಳೆದ ಐದಾರು ವರ್ಷಗಳಿಂದ ಹದಗೆಡುತ್ತಾ ಬಂದಿದ್ದು ಇಂದು ಇಹಲೋಕ ತ್ಯಜಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...