Homeಮುಖಪುಟಸಿಐಎಸ್ಎಫ್‌ನ ಮೊದಲ ಮಹಿಳಾ ಮುಖ್ಯಸ್ಥೆಯಾಗಿ ಹಿರಿಯ ಐಪಿಎಸ್‌ ಅಧಿಕಾರಿ ನೀನಾ ಸಿಂಗ್ ಆಯ್ಕೆ

ಸಿಐಎಸ್ಎಫ್‌ನ ಮೊದಲ ಮಹಿಳಾ ಮುಖ್ಯಸ್ಥೆಯಾಗಿ ಹಿರಿಯ ಐಪಿಎಸ್‌ ಅಧಿಕಾರಿ ನೀನಾ ಸಿಂಗ್ ಆಯ್ಕೆ

- Advertisement -
- Advertisement -

ದೆಹಲಿ ಮೆಟ್ರೋ ಸೇರಿದಂತೆ ದೇಶದಾದ್ಯಂತದ ವಿಮಾನ ನಿಲ್ದಾಣಗಳಿಗೆ ಭದ್ರತೆ ಒದಗಿಸುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್)ಗೆ ಮೊದಲ ಮಹಿಳಾ ಮುಖ್ಯಸ್ಥರನ್ನಾಗಿ ಹಿರಿಯ ಐಪಿಎಸ್ ಅಧಿಕಾರಿ ನೀನಾ ಸಿಂಗ್ ಅವರನ್ನು ಆಯ್ಕೆ ಮಾಡಲಾಗಿದೆ.

ಸಿಐಎಸ್ಎಫ್‌ನ ವಿಶೇಷ ಡಿಜಿಯಾಗಿ ಸೇವೆ ಸಲ್ಲಿಸುತ್ತಿದ್ದ ರಾಜಸ್ಥಾನ ಕೇಡರ್‌, 1989 ಬ್ಯಾಚ್‌ ಐಪಿಎಸ್ ಅಧಿಕಾರಿ ನೀನಾ ಸಿಂಗ್, ಕೇಂದ್ರೀಯ ಪಡೆಯಲ್ಲಿ ಡೈರೆಕ್ಟರ್ ಜನರಲ್ ಹುದ್ದೆಗೆ ಏರಿದ ಮೊದಲ ಮಹಿಳೆಯಾಗಿದ್ದಾರೆ. ಅವರು 2021 ರಿಂದ ಸಿಐಎಸ್ಎಫ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದು, ಮುಂದಿನ ವರ್ಷ ಜುಲೈ 31 ರಂದು ನಿವೃತ್ತರಾಗುವವರೆಗೆ ತಮ್ಮ ಅಧಿಕಾರ ಚಲಾಯಿಸಲಿದ್ದಾರೆ.

ಬಿಹಾರ ಮೂಲದ ನೀನಾ ಸಿಂಗ್ ಅವರು ಪಾಟ್ನಾ ಮಹಿಳಾ ಕಾಲೇಜು ಮತ್ತು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ (ಜೆಎನ್‌ಯು) ಓದಿದ್ದಾರೆ. ಅವರು ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಸಾರ್ವಜನಿಕ ಆಡಳಿತದಲ್ಲಿ ಸ್ನಾತಕೋತ್ತರ ಪದವಿಯನ್ನೂ ಪಡೆದಿದ್ದಾರೆ.

ರಾಜಸ್ಥಾನದಲ್ಲಿ ಉನ್ನತ ಪೊಲೀಸ್ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಯೂ ಅವರದ್ದಾಗಿದ್ದು, ರಾಜ್ಯ ಪೊಲೀಸ್ ಪಡೆಯಲ್ಲಿ ಆರು ಹಿರಿಯ ಅಧಿಕಾರಿಗಳು ಮಹಾ ನಿರ್ದೇಶಕರ ಶ್ರೇಣಿಯಲ್ಲಿದ್ದಾರೆ.

2000ರಲ್ಲಿ ಅವರು ರಾಜಸ್ಥಾನ ಮಹಿಳಾ ಆಯೋಗದ ಸದಸ್ಯ ಕಾರ್ಯದರ್ಶಿಯಾಗಿದ್ದರು. ಆಯೋಗದ ಸದಸ್ಯರು ಸಂಕಷ್ಟದಲ್ಲಿರುವ ಮಹಿಳೆಯರಿಗೆ ನೆರವಾಗಬೇಕು ಎಂಬ ಕಾರಣಕ್ಕೆ ನೇರವಾಗಿ ಜಿಲ್ಲಾ ಕೇಂದ್ರಗಳಿಗೆ ತೆರಳುವ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದರು.

ಅವರು ನೊಬೆಲ್ ಪ್ರಶಸ್ತಿ ವಿಜೇತರಾದ ಅಭಿಜಿತ್ ಬ್ಯಾನರ್ಜಿ ಮತ್ತು ಎಸ್ತರ್ ಡುಫ್ಲೋ ಅವರೊಂದಿಗೆ ಸೇರಿ ಎರಡು ಸಂಶೋಧನಾ ಪ್ರಬಂಧಗಳಿಗೆ ಸಹ-ಲೇಖಕರಾಗಿ ಕೆಲಸ ಮಾಡಿದ್ದಾರೆ. 2013-2018ರ ಅವಧಿಯಲ್ಲಿ ಅವರು ಸಿಬಿಐನ ಜಂಟಿ ನಿರ್ದೇಶಕರಾಗಿದ್ದಾಗ, ಶೀನಾ ಬೋರಾ ಹತ್ಯೆ ಪ್ರಕರಣ ಮತ್ತು ಜಿಯಾ ಖಾನ್ ಆತ್ಮಹತ್ಯೆ ಪ್ರಕರಣದಂತಹ ಹೈ ಪ್ರೊಫೈಲ್ ಪ್ರಕರಣಗಳನ್ನು ಮೇಲ್ವಿಚಾರಣೆ ಮಾಡಿದ್ದಾರೆ. 2020 ರಲ್ಲಿ ಅವರು ವೃತ್ತಿಪರ ಶ್ರೇಷ್ಠತೆಗಾಗಿ ‘ಅತಿ ಉತ್ಕೃಷ್ಟ ಸೇವಾ ಪದಕ’ವನ್ನು ಪಡೆದಿದ್ದಾರೆ.

ಅವರ ಪತಿ ರೋಹಿತ್ ಕುಮಾರ್ ಸಿಂಗ್ ಅವರು ಭಾರತೀಯ ಆಡಳಿತ ಸೇವಾ ಅಧಿಕಾರಿಯಾಗಿದ್ದು (ಐಎಎಸ್), ಪ್ರಸ್ತುತ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
ಸಿಐಎಸ್ಎಫ್ ದೆಹಲಿ ಮೆಟ್ರೋ, ನಾಗರಿಕ ವಿಮಾನ ನಿಲ್ದಾಣಗಳು ಮತ್ತು ಏರೋಸ್ಪೇಸ್, ನ್ಯೂಕ್ಲಿಯರ್ ಘಟಕಗಳಂತಹ ಅತಿಸೂಕ್ಷ್ಮ ಸಂಸ್ಥೆಗಳಿಗೆ ಭದ್ರತೆ ಒದಗಿಸುತ್ತಿದೆ. 1.76 ಲಕ್ಷ ಬಲಶಾಲಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯನ್ನು ಹೊಂದಿದೆ.

ಇದನ್ನೂ ಓದಿ; ಗಣರಾಜ್ಯೋತ್ಸವದಂದು ದೇಶದ 500 ಜಿಲ್ಲೆಗಳಲ್ಲಿ ರೈತರಿಂದ ಟ್ರ್ಯಾಕ್ಟರ್ ಪರೇಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...