Homeಮುಖಪುಟಸಿಐಎಸ್ಎಫ್‌ನ ಮೊದಲ ಮಹಿಳಾ ಮುಖ್ಯಸ್ಥೆಯಾಗಿ ಹಿರಿಯ ಐಪಿಎಸ್‌ ಅಧಿಕಾರಿ ನೀನಾ ಸಿಂಗ್ ಆಯ್ಕೆ

ಸಿಐಎಸ್ಎಫ್‌ನ ಮೊದಲ ಮಹಿಳಾ ಮುಖ್ಯಸ್ಥೆಯಾಗಿ ಹಿರಿಯ ಐಪಿಎಸ್‌ ಅಧಿಕಾರಿ ನೀನಾ ಸಿಂಗ್ ಆಯ್ಕೆ

- Advertisement -
- Advertisement -

ದೆಹಲಿ ಮೆಟ್ರೋ ಸೇರಿದಂತೆ ದೇಶದಾದ್ಯಂತದ ವಿಮಾನ ನಿಲ್ದಾಣಗಳಿಗೆ ಭದ್ರತೆ ಒದಗಿಸುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್)ಗೆ ಮೊದಲ ಮಹಿಳಾ ಮುಖ್ಯಸ್ಥರನ್ನಾಗಿ ಹಿರಿಯ ಐಪಿಎಸ್ ಅಧಿಕಾರಿ ನೀನಾ ಸಿಂಗ್ ಅವರನ್ನು ಆಯ್ಕೆ ಮಾಡಲಾಗಿದೆ.

ಸಿಐಎಸ್ಎಫ್‌ನ ವಿಶೇಷ ಡಿಜಿಯಾಗಿ ಸೇವೆ ಸಲ್ಲಿಸುತ್ತಿದ್ದ ರಾಜಸ್ಥಾನ ಕೇಡರ್‌, 1989 ಬ್ಯಾಚ್‌ ಐಪಿಎಸ್ ಅಧಿಕಾರಿ ನೀನಾ ಸಿಂಗ್, ಕೇಂದ್ರೀಯ ಪಡೆಯಲ್ಲಿ ಡೈರೆಕ್ಟರ್ ಜನರಲ್ ಹುದ್ದೆಗೆ ಏರಿದ ಮೊದಲ ಮಹಿಳೆಯಾಗಿದ್ದಾರೆ. ಅವರು 2021 ರಿಂದ ಸಿಐಎಸ್ಎಫ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದು, ಮುಂದಿನ ವರ್ಷ ಜುಲೈ 31 ರಂದು ನಿವೃತ್ತರಾಗುವವರೆಗೆ ತಮ್ಮ ಅಧಿಕಾರ ಚಲಾಯಿಸಲಿದ್ದಾರೆ.

ಬಿಹಾರ ಮೂಲದ ನೀನಾ ಸಿಂಗ್ ಅವರು ಪಾಟ್ನಾ ಮಹಿಳಾ ಕಾಲೇಜು ಮತ್ತು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ (ಜೆಎನ್‌ಯು) ಓದಿದ್ದಾರೆ. ಅವರು ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಸಾರ್ವಜನಿಕ ಆಡಳಿತದಲ್ಲಿ ಸ್ನಾತಕೋತ್ತರ ಪದವಿಯನ್ನೂ ಪಡೆದಿದ್ದಾರೆ.

ರಾಜಸ್ಥಾನದಲ್ಲಿ ಉನ್ನತ ಪೊಲೀಸ್ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಯೂ ಅವರದ್ದಾಗಿದ್ದು, ರಾಜ್ಯ ಪೊಲೀಸ್ ಪಡೆಯಲ್ಲಿ ಆರು ಹಿರಿಯ ಅಧಿಕಾರಿಗಳು ಮಹಾ ನಿರ್ದೇಶಕರ ಶ್ರೇಣಿಯಲ್ಲಿದ್ದಾರೆ.

2000ರಲ್ಲಿ ಅವರು ರಾಜಸ್ಥಾನ ಮಹಿಳಾ ಆಯೋಗದ ಸದಸ್ಯ ಕಾರ್ಯದರ್ಶಿಯಾಗಿದ್ದರು. ಆಯೋಗದ ಸದಸ್ಯರು ಸಂಕಷ್ಟದಲ್ಲಿರುವ ಮಹಿಳೆಯರಿಗೆ ನೆರವಾಗಬೇಕು ಎಂಬ ಕಾರಣಕ್ಕೆ ನೇರವಾಗಿ ಜಿಲ್ಲಾ ಕೇಂದ್ರಗಳಿಗೆ ತೆರಳುವ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದರು.

ಅವರು ನೊಬೆಲ್ ಪ್ರಶಸ್ತಿ ವಿಜೇತರಾದ ಅಭಿಜಿತ್ ಬ್ಯಾನರ್ಜಿ ಮತ್ತು ಎಸ್ತರ್ ಡುಫ್ಲೋ ಅವರೊಂದಿಗೆ ಸೇರಿ ಎರಡು ಸಂಶೋಧನಾ ಪ್ರಬಂಧಗಳಿಗೆ ಸಹ-ಲೇಖಕರಾಗಿ ಕೆಲಸ ಮಾಡಿದ್ದಾರೆ. 2013-2018ರ ಅವಧಿಯಲ್ಲಿ ಅವರು ಸಿಬಿಐನ ಜಂಟಿ ನಿರ್ದೇಶಕರಾಗಿದ್ದಾಗ, ಶೀನಾ ಬೋರಾ ಹತ್ಯೆ ಪ್ರಕರಣ ಮತ್ತು ಜಿಯಾ ಖಾನ್ ಆತ್ಮಹತ್ಯೆ ಪ್ರಕರಣದಂತಹ ಹೈ ಪ್ರೊಫೈಲ್ ಪ್ರಕರಣಗಳನ್ನು ಮೇಲ್ವಿಚಾರಣೆ ಮಾಡಿದ್ದಾರೆ. 2020 ರಲ್ಲಿ ಅವರು ವೃತ್ತಿಪರ ಶ್ರೇಷ್ಠತೆಗಾಗಿ ‘ಅತಿ ಉತ್ಕೃಷ್ಟ ಸೇವಾ ಪದಕ’ವನ್ನು ಪಡೆದಿದ್ದಾರೆ.

ಅವರ ಪತಿ ರೋಹಿತ್ ಕುಮಾರ್ ಸಿಂಗ್ ಅವರು ಭಾರತೀಯ ಆಡಳಿತ ಸೇವಾ ಅಧಿಕಾರಿಯಾಗಿದ್ದು (ಐಎಎಸ್), ಪ್ರಸ್ತುತ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
ಸಿಐಎಸ್ಎಫ್ ದೆಹಲಿ ಮೆಟ್ರೋ, ನಾಗರಿಕ ವಿಮಾನ ನಿಲ್ದಾಣಗಳು ಮತ್ತು ಏರೋಸ್ಪೇಸ್, ನ್ಯೂಕ್ಲಿಯರ್ ಘಟಕಗಳಂತಹ ಅತಿಸೂಕ್ಷ್ಮ ಸಂಸ್ಥೆಗಳಿಗೆ ಭದ್ರತೆ ಒದಗಿಸುತ್ತಿದೆ. 1.76 ಲಕ್ಷ ಬಲಶಾಲಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯನ್ನು ಹೊಂದಿದೆ.

ಇದನ್ನೂ ಓದಿ; ಗಣರಾಜ್ಯೋತ್ಸವದಂದು ದೇಶದ 500 ಜಿಲ್ಲೆಗಳಲ್ಲಿ ರೈತರಿಂದ ಟ್ರ್ಯಾಕ್ಟರ್ ಪರೇಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...