Homeಮುಖಪುಟಟಿವಿ ಕಾರ್ಯಕ್ರಮದಲ್ಲಿ ಮಣಿಪುರ ರಾಜಕೀಯದ ಬಗ್ಗೆ ಮಾತನಾಡಿದ್ದ ಹಿರಿಯ ಪತ್ರಕರ್ತನ ಅಪಹರಣ

ಟಿವಿ ಕಾರ್ಯಕ್ರಮದಲ್ಲಿ ಮಣಿಪುರ ರಾಜಕೀಯದ ಬಗ್ಗೆ ಮಾತನಾಡಿದ್ದ ಹಿರಿಯ ಪತ್ರಕರ್ತನ ಅಪಹರಣ

- Advertisement -
- Advertisement -

ಮಣಿಪುರದ ಇಂಫಾಲ್ ಪಶ್ಚಿಮ ಜಿಲ್ಲೆಯ ಮನೆಯಿಂದ ಮಂಗಳವಾರ (ಫೆ.11) ಬೆಳಿಗ್ಗೆ ಅಪರಿಚಿತರು ಹಿರಿಯ ಪತ್ರಕರ್ತ ಲಾಬಾ ಯಂಬೆಮ್ ಅವರನ್ನು ಬಂದೂಕು ತೋರಿಸಿ ಅಪಹರಿಸಿದ್ದರು, ಬಳಿಕ ಬಿಡುಗಡೆ ಮಾಡಿದ್ದಾರೆ.

ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಲಾಬಾ ಯಂಬೆಮ್ ಅವರನ್ನು ಬಿಡುಗಡೆ ಮಾಡಲಾಗಿದೆ. ಅವರನ್ನು ಪೊಲೀಸರು ಕುಟುಂಬದ ಜೊತೆ ಸೇರಿಸಿದ್ದಾರೆ ಎಂದು ವರದಿಯಾಗಿದೆ.

ಭಾನುವಾರ (ಫೆ.9) ಮಣಿಪುರ ಸಿಎಂ ಬಿರೇನ್ ಸಿಂಗ್ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆ ಬಳಿಕ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನ ಕುರಿತು ಪತ್ರಕರ್ತ ಯಂಬೆಮ್ ಟಿವಿ ವಾಹಿನಿಯೊಂದರಲ್ಲಿ ಮಾತನಾಡಿದ್ದರು. ಅಲ್ಲಿಂದ ಹಿಂದಿರುಗಿದ ಕೆಲವೇ ಗಂಟೆಗಳಲ್ಲಿ ಯಂಬೆಮ್ ಅವರನ್ನು ಅಪಹರಿಸಲಾಗಿದೆ ಎಂದು ಅವರ ಹಿರಿಯ ಸಹೋದರ, ನಿವೃತ್ತ ಸೇನಾ ಮೇಜರ್ ಯಂಬೆಮ್ ಅಂಗಂಬಾ ಹೇಳಿದ್ದಾರೆ.

69 ವರ್ಷದ ಲಾಬಾ ಯಂಬೆಮ್ ಅವರು ರಾಷ್ಟ್ರೀಯ ಇಂಗ್ಲಿಷ್ ದಿನಪತ್ರಿಕೆ ಸ್ಟೇಟ್ಸ್‌ಮನ್‌ನ ವಿಶೇಷ ವರದಿಗಾರರಾಗಿದ್ದು, ಬೆಳಗಿನ ಜಾವ 3:30 ರ ಸುಮಾರಿಗೆ 15 ರಿಂದ 20 ಮಂದಿ ಬಂದೂಕುಧಾರಿಗಳ ಗುಂಪೊಂದು ಅವರನ್ನು ಅಪಹರಿಸಿ ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿತ್ತು ಎಂದು ಅಂಗಂಬಾ ವಿವರಿಸಿದ್ದಾರೆ.

ಎರಡು ದಿನಗಳ ಹಿಂದೆ ಲಾಬಾ ಅವರ ಮನೆ ಮೇಲೆ ಬಂಡುಕೋರರು ಗುಂಡಿನ ದಾಳಿ ನಡೆಸಿ, ಅವರನ್ನು ಟೀಕಿಸಿ ಫೇಸ್‌ಬುಕ್‌ನಲ್ಲಿ ಹಾಕಿದ್ದ ಪೋಸ್ಟ್ ಡಿಲಿಟ್ ಮಾಡುವಂತೆ ಸೂಚಿಸಿದ್ದರು. ಅದಾಗಿ ಎರಡು ದಿನಗಳ ನಂತರ ಅವರ ಅಪಹರಣ ನಡೆದಿದೆ.

ಲಾಬಾ ಅವರು ಮಣಿಪುರ ಮಾನವ ಹಕ್ಕುಗಳ ಆಯೋಗದ ಮಾಜಿ ಸದಸ್ಯರಾಗಿದ್ದಾರೆ.

“ಬಹುಶಃ ಲಾಬಾ ಅವರನ್ನು ಅಪಹರಿಸಿದವರಿಗೆ ಅವರ ಹೇಳಿಕೆ ತೃಪ್ತಿಯಾಗದೇ ಇರಬಹುದು. ಆದರೆ, ಅವರು ಹೇಳಿದ್ದೆಲ್ಲವೂ ಪತ್ರಕರ್ತರ ನೈತಿಕತೆಗೆ ಅನುಗುಣವಾಗಿತ್ತು. ಪತ್ರಕರ್ತನಿಗೆ ಸಮಾಜ ಮತ್ತು ರಾಷ್ಟ್ರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಬರೆಯಲು ಮತ್ತು ಮಾತನಾಡಲು ಹಕ್ಕಿದೆ” ಎಂದು ಸಹೋದರ ಅಂಗಂಬಾ ಹೇಳಿದ್ದಾರೆ. ಕುಟುಂಬಸ್ಥರು ಎಫ್‌ಐಆರ್ ದಾಖಲಿಸಿದ ನಂತರ ಮಂಗಳವಾರ ಬೆಳಿಗ್ಗೆ ಪೊಲೀಸರು ಅವರ ಮನೆಗೆ ಭೇಟಿ ನೀಡಿದ್ದರು ಎಂದು ಅಂಗಂಬಾ ತಿಳಿಸಿದ್ದಾರೆ.

” ಈ ಹಿಂದೆಯೂ ಲಾಬಾ ಅವರ ಮನೆಯ ಮೇಲೆ ದಾಳಿ ನಡೆದಿತ್ತು. ಮಣಿಪುರದ ಕೆಲವು ಶಕ್ತಿಗಳು ಪತ್ರಕರ್ತರು ಮುಕ್ತವಾಗಿ ಮತ್ತು ನ್ಯಾಯಯುತವಾಗಿ ಕೆಲಸ ಮಾಡುವುದನ್ನು ಇಷ್ಟಪಡುವುದಿಲ್ಲ ಎಂದು ತೋರುತ್ತದೆ” ಎಂದು ಅಂಗಂಬಾ ಹೇಳಿದ್ದಾರೆ.

ಭಾನುವಾರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ರಾಜೀನಾಮೆ ನೀಡಿದ ನಂತರ ಮಣಿಪುರದಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿರುವ ಮಧ್ಯೆ ಈ ಘಟನೆ ನಡೆದಿದೆ. ಸಂಘರ್ಷ ಪೀಡಿತ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ತಪ್ಪಿಸಲು ಮತ್ತು ಬಿರೇನ್ ಅವರನ್ನು ಬದಲಿಸಲು ಬಿಜೆಪಿ ಒಮ್ಮತದ ಅಭ್ಯರ್ಥಿಯನ್ನು ಹುಡುಕುತ್ತಿದೆ.

ಭಿನ್ನಮತದ ವದಂತಿ ನಡುವೆ ಪಂಜಾಬ್ ಸಿಎಂ, ಶಾಸಕರೊಂದಿಗೆ ಕೇಜ್ರಿವಾಲ್ ಮಹತ್ವದ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...