Homeಮುಖಪುಟಹಿರಿಯ ಪತ್ರಕರ್ತ ಶ್ರೀನಿವಾಸನ್ ಜೈನ್ ಎನ್‌ಡಿಟಿವಿ ಚಾನೆಲ್‌ಗೆ ರಾಜೀನಾಮೆ

ಹಿರಿಯ ಪತ್ರಕರ್ತ ಶ್ರೀನಿವಾಸನ್ ಜೈನ್ ಎನ್‌ಡಿಟಿವಿ ಚಾನೆಲ್‌ಗೆ ರಾಜೀನಾಮೆ

- Advertisement -
- Advertisement -

ಅದಾನಿ ಗ್ರೂಪ್‌ ದೇಶದ ಖ್ಯಾತ ಮಾಧ್ಯಮ ಸಂಸ್ಥೆಯಾದ ಎನ್‌ಡಿಟಿವಿಯನ್ನು ತನ್ನ ಸ್ವಾಧೀನ ಮಾಡಿದ ನಂತರ ಅಲ್ಲಿನ ಹಿರಿಯ ಪತ್ರಕರ್ತರು ಮತ್ತು ಅಧಿಕಾರಿಗಳು ಸಂಸ್ಥೆಗೆ ರಾಜೀನಾಮೆ ನೀಡಿದ್ದರು. ಇದಾಗಿ ಕೆಲವೇ ಸಮಯದಲ್ಲಿ ಸಂಸ್ಥೆಯು ಮತ್ತೊಬ್ಬ ಹಿರಿಯ ಪತ್ರಕರ್ತನನ್ನು ಕಳೆದುಕೊಂಡಿದೆ. ಎನ್‌ಡಿಟಿವಿಯಲ್ಲಿ ಸುಮಾರು ಮೂರು ದಶಕಗಳ ಕಾಲ ಕೆಲಸ ಮಾಡಿದ್ದ ಹಿರಿಯ ಪತ್ರಕರ್ತ ಶ್ರೀನಿವಾಸನ್ ಜೈನ್ ಅವರು ಚಾನೆಲ್‌ಗೆ ರಾಜೀನಾಮೆ ನೀಡಿದ್ದಾಗಿ ಶನಿವಾರ ಘೋಷಿಸಿದ್ದಾರೆ.

ಎನ್‌ಡಿಟಿವಿ ಚಾನೆಲ್‌ನ ಗ್ರೂಪ್ ಎಡಿಟರ್ ಆಗಿದ್ದ ಅವರು ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದಾರೆ. “ಎಲ್ಲರಿಗೂ ನಮಸ್ಕಾರ. ಎನ್‌ಡಿಟಿವಿಯಲ್ಲಿನ ಅದ್ಭುತ ಮತ್ತು ಸುಮಾರು ಮೂರು ದಶಕಗಳ ಸುದೀರ್ಘ ಓಟ ಇಂದು ಕೊನೆಗೊಳ್ಳುತ್ತದೆ. ರಾಜೀನಾಮೆ ನಿರ್ಧಾರ ಸುಲಭವಲ್ಲ, ಆದರೆ……it is what it is. ಮತ್ತಷ್ಟು ನಂತರ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶ್ರೀನಿವಾಸನ್‌ ಜೈನ್ ಅವರು 1995 ರಿಂದ ಎನ್‌ಡಿಟಿವಿ ಜೊತೆಗೆ ಕೆಲಸ ಮಾಡುತ್ತಿದ್ದಾರೆ. ಅವರು ಎನ್‌ಡಿಟಿವಿ24×7 ನಲ್ಲಿ ಪ್ರತಿವಾರ ಪ್ರಸಾರವಾಗುವ ‘ಟ್ರೂತ್ ವರ್ಸಸ್ ಹೈಪ್’ ಎಂಬ ಕಾರ್ಯಕ್ರಮವನ್ನು ನಿರೂಪಿಸುತ್ತಿದ್ದರು.

2003 ರಿಂದ 2008ರ ವರೆಗೆ ಎನ್‌ಡಿಟಿವಿ ನೆಟ್‌ವರ್ಕ್‌ನ ಮುಂಬೈ ಬ್ಯೂರೋ ಮುಖ್ಯಸ್ಥರಾಗಿದ್ದರು. ಇದರ ನಂತರ ಅವರು NDTV ಯ ವ್ಯವಹಾರ ಚಾನೆಲ್ ಆದ ಪ್ರಾಫಿಟ್‌ನ ವ್ಯವಸ್ಥಾಪಕ ಸಂಪಾದಕರಾಗಿ ಕೂಡಾ ಕೆಲಸ ಮಾಡಿದ್ದರು. ಇಷ್ಟೆ ಅಲ್ಲದೆ ‘ಬಿಸಿನೆಸ್ ಸ್ಟ್ಯಾಂಡರ್ಡ್‌’ ಪತ್ರಿಕೆಗೆ ಅವರು ಅಂಕಣಗಳನ್ನು ಸಹ ಬರೆದಿದ್ದಾರೆ. ತಮ್ಮ ಮುಂದಿನ ವೃತ್ತಿಜೀವನದ ನಡೆಯ ಬಗ್ಗೆ ಅವರು ಪ್ರಕಟಿಸಿಲ್ಲ.

2022 ರ ನವೆಂಬರ್‌ನಲ್ಲಿ NDTV ಇಂಡಿಯಾದ ಹಿರಿಯ ಕಾರ್ಯನಿರ್ವಾಹಕ ಸಂಪಾದಕರಾಗಿದ್ದ ರವೀಶ್ ಕುಮಾರ್ ಅವರು ರಾಜೀನಾಮೆ ನೀಡಿದ್ದರು. ಎನ್‌ಡಿಟಿವಿ ಸಂಸ್ಥಾಪಕರಾದ ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರು ಎನ್‌ಡಿಟಿವಿಯಲ್ಲಿನ ತಮ್ಮ ಹೆಚ್ಚಿನ ಷೇರುಗಳನ್ನು ಗೌತಮ್ ಅದಾನಿ ಅವರ ಎಎಂಜಿ ಮೀಡಿಯಾ ನೆಟ್‌ವರ್ಕ್‌ಗೆ ಬಿಟ್ಟುಕೊಟ್ಟಿದ್ದಾರೆ.

ಇದನ್ನೂ ಓದಿ: ಎನ್‌ಡಿಟಿವಿ ಗ್ರೂಪ್‌‌ ಅಧ್ಯಕ್ಷೆ ಸುಪರ್ಣಾ ಸಿಂಗ್‌ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಕೂಡಾ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...