HomeಅಂಕಣಗಳುKarnataka against SIRಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

- Advertisement -
- Advertisement -

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ದುಂಡುಮೇಜಿನ ಸಭೆಯಲ್ಲಿ ಭಾಗವಹಿಸಿ, ‘SIR’ ವಿರೋಧಿ ಜನಜಾಗೃತಿ ಜಾಥಾವನ್ನು ಸ್ವಾಗತಿಸಿ ಅವರು ಮಾತನಾಡಿದರು.

ಮತದಾರರ ಜಾಗೃತಿ ಅಗತ್ಯ: ಶ್ರೀಪಾಲ್

“ಪ್ರಸ್ತುತ ಚುನಾವಣಾ ಆಯೋಗದ ಕೆಲವು ನಿರ್ಧಾರಗಳು ಪ್ರಜಾಪ್ರಭುತ್ವದ ಆಶಯಗಳಿಗೆ ಧಕ್ಕೆ ತರುವ ಆತಂಕ ಮೂಡಿಸುತ್ತಿವೆ. ದೇಶದ ಬಹುಸಂಖ್ಯಾತ ಜನಸಾಮಾನ್ಯರನ್ನು ಮುಖ್ಯವಾಹಿನಿಯಿಂದ ದೂರವಿಡುವಂತಹ ಪ್ರಕ್ರಿಯೆಗಳು ವ್ಯವಸ್ಥಿತವಾಗಿ ನಡೆಯುತ್ತಿವೆ. ಈ ವ್ಯವಸ್ಥೆಯ ಸಾಧಕ-ಬಾಧಕಗಳ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವುದು ಇಂದಿನ ತುರ್ತು ಅಗತ್ಯವಾಗಿದೆ,” ಎಂದು ವಕೀಲ ಶ್ರೀಪಾಲ್ ಅಭಿಪ್ರಾಯಪಟ್ಟರು.

ವಾರ್ಡ್ ಮಟ್ಟದಲ್ಲಿ ಜಾಗೃತಿ ಮೂಡಿಸಲು ಸಲಹೆ

ಮುಖಂಡರಾದ ಕೆ. ರಾಘವೇಂದ್ರ ಮಾತನಾಡಿ, “ಆರಂಭದಲ್ಲಿ ನಮಗೆ ಈ ವಿಷಯದ ತೀವ್ರತೆಯ ಬಗ್ಗೆ ಸಂಪೂರ್ಣ ಮಾಹಿತಿ ಇರಲಿಲ್ಲ. ಆದರೆ ಈ ಜಾಗೃತಿ ಜಾಥಾ ಆರಂಭವಾದ ಬಳಿಕ ವಿಷಯದ ಗಂಭೀರತೆ ಅರ್ಥವಾಗಿದೆ. ಪ್ರತಿಯೊಬ್ಬ ನಾಗರಿಕನಿಗೂ ಇದರ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಸಭೆ ಅತ್ಯಂತ ಮಹತ್ವದ್ದಾಗಿದೆ,” ಎಂದರು.

ಮತ್ತೊಬ್ಬ ವಕೀಲರಾದ ಷಹರಾಜ್ ಮುಜಾಹಿದ್ ಸಿದ್ದಿಕಿ ಮಾತನಾಡಿ, “ವಿಶೇಷವಾಗಿ ಅಲ್ಪಸಂಖ್ಯಾತ ಸಮುದಾಯದವರ ಹೆಸರುಗಳಲ್ಲಿ ತಾಂತ್ರಿಕವಾಗಿ ಹಲವು ವ್ಯತ್ಯಾಸಗಳಿರುತ್ತವೆ. ಇದರಿಂದಾಗಿ ಅವರ ಮತದಾನದ ಹಕ್ಕು ಕೈತಪ್ಪುವ ಆತಂಕವಿದೆ. ಈ ಗೊಂದಲಗಳನ್ನು ನಿವಾರಿಸಲು ವಾರ್ಡ್ ಮಟ್ಟದಲ್ಲಿ ಸಭೆಗಳನ್ನು ನಡೆಸಿ ಸಾರ್ವಜನಿಕರಿಗೆ ಸೂಕ್ತ ಮಾಹಿತಿ ನೀಡಬೇಕಿದೆ,” ಎಂದು ಸಲಹೆ ನೀಡಿದರು.

ಮುಖಂಡರಾದ ಅಫ್ತಬ್ ಫರ್ವೇಜ್ ಮಾತನಾಡಿ, ರಾಜಕೀಯ ಪಕ್ಷಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸದ ಹಿನ್ನೆಲೆಯಲ್ಲಿ, ಪ್ರಗತಿಪರ ಸಂಘಟನೆಗಳು ಮತ್ತು ನಾಗರಿಕ ಸಮಾಜವೇ ಮುಂಚೂಣಿಗೆ ಬಂದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಜವಾಬ್ದಾರಿ ಹೊರಬೇಕಾಗಿದೆ ಎಂದು ತಿಳಿಸಿದರು.

ಈ ಜನಜಾಗೃತಿ ಜಾಥಾವು ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ತರೀಕೆರೆ ಹಾಗೂ ಭದ್ರಾವತಿಯಲ್ಲಿ ಸಭೆಗಳನ್ನು ಯಶಸ್ವಿಯಾಗಿ ಮುಗಿಸಿ ಶಿವಮೊಗ್ಗ ನಗರಕ್ಕೆ ಆಗಮಿಸಿತು. ತದನಂತರ ನಗರದ ಪತ್ರಿಕಾ ಭವನದಲ್ಲಿ ದುಂಡುಮೇಜಿನ ಸಭೆ ನಡೆಸಲಾಯಿತು.

ಈ ಸಭೆಯಲ್ಲಿ ಪ್ರಮುಖ ಮುಖಂಡರಾದ ಕೆ. ರಂಗನಾಥ್, ಯೂತ್ ಕಾಂಗ್ರೆಸ್ ನಗರ ಅಧ್ಯಕ್ಷರಾದ ಗಿರೀಶ್ ಮತ್ತಿತರರು ಉಪಸ್ಥಿತರಿದ್ದರು. ಜಾಥಾದ ನೇತೃತ್ವವನ್ನು ಸುರೇಶ್ ನಾಯ್ಕ್, ಮುನ್ನ ಕಡೂರು ಹಾಗೂ ಸುಮಂತ್ ರಾಜೀತ್ ವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...