Homeಕರ್ನಾಟಕಹಿರಿಯ ನಾಯಕರಿಗೆ ಕಡಿವಾಣ ಹಾಕುವಂತೆ ರಾಹುಲ್ ಗಾಂಧಿಗೆ ಪತ್ರ ಬರೆದ ರಾಜ್ಯ ಕಾಂಗ್ರೆಸ್‌ನ ಕಿರಿಯ ನಾಯಕರು!

ಹಿರಿಯ ನಾಯಕರಿಗೆ ಕಡಿವಾಣ ಹಾಕುವಂತೆ ರಾಹುಲ್ ಗಾಂಧಿಗೆ ಪತ್ರ ಬರೆದ ರಾಜ್ಯ ಕಾಂಗ್ರೆಸ್‌ನ ಕಿರಿಯ ನಾಯಕರು!

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾಯಿಸಲು ಹಕ್ಕೊತ್ತಾಯ ಮಾಡುತ್ತಿರುವ ರಾಜ್ಯದ ಕಾಂಗ್ರೆಸ್ ಸಚಿವರಿಗೆ ಕಡಿವಾಣ ಹಾಕುವಂತೆ 15 ಕಾಂಗ್ರೆಸ್ ಶಾಸಕರು ಮತ್ತು ಮಾಜಿ ಸಚಿವರ ಗುಂಪು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದೆ ಎಂದು ವರದಿಯಾಗಿದೆ.

ಸಿದ್ದರಾಮಯ್ಯ ಅವರ ಹೆಂಡತಿಗೆ ಭೂ ಮಂಜೂರಾತಿ ಮಾಡಿರುವ ಪ್ರಕರಣದ ಕುರಿತು ತನಿಖೆಯ ಸಾಧ್ಯತೆಯನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ನಾಯಕತ್ವವು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಸಲಿದೆ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಹಲವಾರು ಕಾಂಗ್ರೆಸ್ ಸಚಿವರು ತಮ್ಮನ್ನು ತಾವು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಎಂದು ಬಿಂಬಿಸುತ್ತಿರುವ ಹಿನ್ನೆಲೆಯಲ್ಲಿ ಈ ಪತ್ರ ಬರೆಯಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಭೂ ಮಂಜೂರಾತಿ ವಿವಾದವನ್ನು ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಸೃಷ್ಟಿಸಿದೆ. ಆದರೆ, ಹಿರಿಯ ಸಚಿವರು ಸೇರಿದಂತೆ ಆರಕ್ಕೂ ಹೆಚ್ಚು ನಾಯಕರು ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಸೆಣಸುವ ಬದಲು ಮುಖ್ಯಮಂತ್ರಿ ಹುದ್ದೆಗೆ ಹಕ್ಕು ಚಲಾಯಿಸುತ್ತಿದ್ದಾರೆ.” ಎಂದು 15 ನಾಯಕರ ಗುಂಪು ಬರೆದ ಪತ್ರ ರಾಹುಲ್ ಗಾಂಧಿ ಅವರಿಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದೆ.

“ಕಾಂಗ್ರೆಸ್ ನಾಯಕತ್ವವು ಈ ನಾಯಕರು ನೀಡಿರುವ ಹೇಳಿಕೆಗಳನ್ನು ಗಮನಿಸಬೇಕು ಮತ್ತು ಅವರಿಗೆ ಎಚ್ಚರಿಕೆ ನೀಡಬೇಕು. ಜೊತೆಗೆ ಕಾಂಗ್ರೆಸ್ ಪಕ್ಷ ಮತ್ತು ಕರ್ನಾಟಕ ರಾಜ್ಯದ ಹಿತದೃಷ್ಟಿಯಿಂದ ಭವಿಷ್ಯದಲ್ಲಿ ಇಂತಹ ಹಾನಿಕಾರಕ ಹೇಳಿಕೆಗಳನ್ನು ನೀಡದಂತೆ ನಿರ್ದೇಶಿಸಬೇಕು” ಎಂದು ಪತ್ರವು ಆಗ್ರಹಿಸಿದೆ.

ಮಾಜಿ ಸಚಿವರಾದ ಬಿ ಎಲ್ ಶಂಕರ್, ಹೆಚ್ ಎಂ ರೇವಣ್ಣ, ಮಾಜಿ ಸಂಸದರಾದ ಎಲ್ ಹನುಮಂತಯ್ಯ, ವಿ ಎಸ್ ಉಗ್ರಪ್ಪ ಸೇರಿದಂತೆ ಸಿದ್ದರಾಮಯ್ಯ ಅವರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಅನೇಕ ನಾಯಕರು ಪತ್ರಕ್ಕೆ ಸಹಿ ಮಾಡಿದ್ದಾರೆ.

ಇದನ್ನೂ ಓದಿ: ವಿವಿಧ ಹಗರಣಗಳ ತನಿಖೆ ಸಮನ್ವಯಕ್ಕೆ ಗೃಹ ಸಚಿವರ ನೇತೃತ್ವದಲ್ಲಿ ಸಮಿತಿ ರಚನೆ

“ಸಿದ್ದರಾಮಯ್ಯನವರನ್ನು ಬದಲಿಸುವ ಬಗ್ಗೆ ಮಾತನಾಡುತ್ತಿರುವ ಮುಂಚೂಣಿಯಲ್ಲಿರುವ ನಾಯಕರಿಂದಾಗಿ ನಮ್ಮ ಅನೇಕ ನಾಯಕರು ಮತ್ತು ಕಾರ್ಯಕರ್ತರು ಹತಾಶರಾಗಿದ್ದಾರೆ. ಅವರು ಸರ್ಕಾರ ಮತ್ತು ಪಕ್ಷದಲ್ಲಿ ತಮ್ಮ ಭರವಸೆಯನ್ನು ಕಳೆದುಕೊಂಡಿದ್ದಾರೆ. ಅದೇ ರೀತಿ ನಮ್ಮ ನಾಯಕರ ಒಳಜಗಳ ಮತ್ತು ಅಜಾಗರೂಕ ಹೇಳಿಕೆಗಳಿಂದಾಗಿ ಕರ್ನಾಟಕದ ಜನರು ನಿಧಾನವಾಗಿ ನಮ್ಮ ಪಕ್ಷ ಮತ್ತು ಸರ್ಕಾರದ ಮೇಲಿನ ನಂಬಿಕೆ ಮತ್ತು ವಿಶ್ವಾಸವನ್ನು ಕಳೆದುಕೊಳ್ಳುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ಆಡಳಿತಕ್ಕೂ ಹೆಚ್ಚಿನ ಪ್ರಮಾಣದಲ್ಲಿ ಅಡಚಣೆಯಾಗಿದೆ” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕದ ಸ್ಥಳೀಯ ಕಾಂಗ್ರೆಸ್ ನಾಯಕರು ಹೈಕಮಾಂಡ್‌ಗೆ ಬರೆದ ಎರಡನೇ ಪತ್ರ ಇದಾಗಿದೆ. ಈ ಹಿಂದೆ ಎಂಎಲ್ಸಿಗಳಾದ ದಿನೇಶ್ ಗೂಳಿಗೌಡ ಮತ್ತು ಮಂಜುನಾಥ್ ಭಂಡಾರಿ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮಧ್ಯಸ್ಥಿಕೆಗೆ ಪತ್ರ ಬರೆದಿದ್ದರು.

2021 ರಲ್ಲಿ ಮುಖ್ಯಮಂತ್ರಿಯವರ ಪತ್ನಿಗೆ 14 ವಸತಿ ನಿವೇಶನಗಳನ್ನು ಹಂಚಿರುವ ಕುರಿತು ತನಿಖೆ ನಡೆಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಗಸ್ಟ್ 16 ರಂದು ಅನುಮತಿ ನೀಡಿದ ನಂತರ ಕಾಂಗ್ರೆಸ್‌ನಲ್ಲಿ ಅಶಾಂತಿ ಉಂಟಾಗಿದೆ.

ಇದನ್ನೂಓದಿ: ಅರುಣಾಚಲ ಪ್ರದೇಶ: ಅಂಜಾವ್‌ನಲ್ಲಿ ಭಾರತದ ಭೂಪ್ರದೇಶದೊಳಗೆ ಪ್ರವೇಶಿಸಿದ ಚೀನಾ ಸೈನಿಕರು

ರಾಜ್ಯಪಾಲರ ಮಂಜೂರಾತಿ ಆದೇಶವನ್ನು ಸಿದ್ದರಾಮಯ್ಯ ಅವರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಅಲ್ಲದೆ, ಸಿಎಂ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ತನ್ನ ಬೆಂಬಲವನ್ನು ಸೂಚಿಸಿದ್ದು, ಹಿಂದುಳಿದ ವರ್ಗವನ್ನು ಹೊರಹಾಕಲು ಪ್ರತಿಪಕ್ಷಗಳು ಸಂಘಟಿತ ಪ್ರಯತ್ನ ನಡೆಸುತ್ತಿದೆ ಎಂದು ಕಾಂಗ್ರೆಸ್ ಬಿಂಬಿಸುತ್ತಿದೆ.

ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...